AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

AUS vs ENG: ಏನಿದು ಪಿಂಕ್ ಟೆಸ್ಟ್​?

Ashes 2026, Australia vs England: ಇಂಗ್ಲೆಂಡ್ ವಿರುದ್ಧದ ಐದು ಪಂದ್ಯಗಳ ಸರಣಿಯನ್ನು ಈಗಾಗಲೇ ಆಸ್ಟ್ರೇಲಿಯಾ ತಂಡವು 3-1 ಅಂತರದಿಂದ ವಶಪಡಿಸಿಕೊಂಡಿದೆ. ಮೊದಲೆರಡು ಪಂದ್ಯಗಳಲ್ಲಿ 8 ವಿಕೆಟ್​ಗಳ ಜಯ ಸಾಧಿಸಿದ್ದ ಆಸ್ಟ್ರೇಲಿಯಾ ಮೂರನೇ ಪಂದ್ಯದಲ್ಲಿ 82 ರನ್​ಗಳ ಗೆಲುವು ದಾಖಲಿಸಿದೆ. ಇನ್ನು ನಾಲ್ಕನೇ ಪಂದ್ಯದಲ್ಲಿ ಇಂಗ್ಲೆಂಡ್ ತಂಡ 4 ವಿಕೆಟ್​ಗಳ ಜಯ ಸಾಧಿಸಿದೆ.

AUS vs ENG: ಏನಿದು ಪಿಂಕ್ ಟೆಸ್ಟ್​?
Australia
ಝಾಹಿರ್ ಯೂಸುಫ್
|

Updated on: Jan 03, 2026 | 9:09 AM

Share

ಆಸ್ಟ್ರೇಲಿಯಾ ಮತ್ತು ಇಂಗ್ಲೆಂಡ್ (Australia vs England) ನಡುವಣ 5ನೇ ಟೆಸ್ಟ್ ಪಂದ್ಯಕ್ಕೆ ಆತಿಥ್ಯವಹಿಸಲು ಸಿಡ್ನಿ ಕ್ರಿಕೆಟ್ ಸ್ಟೇಡಿಯಂ ಸಜ್ಜಾಗಿದೆ. ಈ ಪಂದ್ಯವನ್ನು ಪಿಂಕ್ ಟೆಸ್ಟ್ (Pink Test) ಎಂದು ಕರೆಯಲಾಗುತ್ತದೆ. ಆದರೆ ಇದು ಪಿಂಕ್ ಬಾಲ್ ಟೆಸ್ಟ್ ಅಲ್ಲ. ಬದಲಿಗೆ ಈ ಪಂದ್ಯದಲ್ಲಿ ಉಭಯ ತಂಡಗಳ ಆಟಗಾರರು ಪಿಂಕ್ ಕ್ಯಾಪ್ ಧರಿಸಿ ಕಣಕ್ಕಿಳಿಯಲಿದ್ದಾರೆ.

ಏನಿದು ಪಿಂಕ್ ಟೆಸ್ಟ್?

ಪ್ರತಿ ವರ್ಷ ಸಿಡ್ನಿಯಲ್ಲಿ ಆಡಲಾಗುವ ಮೊದಲ ಟೆಸ್ಟ್ ಅನ್ನು ಪಿಂಕ್ ಟೆಸ್ಟ್ ಎಂದು ಕರೆಯಲಾಗುತ್ತದೆ. ಇದಕ್ಕೆ ಮುಖ್ಯ ಕಾರಣ ಈ ಪಂದ್ಯದಲ್ಲಿ ಆಟಗಾರರು ಪಿಂಕ್ ಕ್ಯಾಪ್ ಧರಿಸುವುದು. ಇದರ ಉದ್ದೇಶ ಸ್ತನ ಕ್ಯಾನ್ಸರ್ ವಿರುದ್ಧ ಜಾಗೃತಿ ಮೂಡಿಸುವುದು ಹಾಗೂ ಅದರ ವಿರುದ್ಧ ಹೋರಾಡುತ್ತಿರುವವರಿಗೆ ಧೈರ್ಯ ತುಂಬುವುದಾಗಿದೆ.

ಇಂತಹದೊಂದು ಅಭಿಯಾನಕ್ಕೆ ನಾಂದಿಯಾಡಿದ್ದು ಆಸ್ಟ್ರೇಲಿಯಾ ತಂಡದ ಮಾಜಿ ಕ್ರಿಕೆಟಿಗ ಗ್ಲೆನ್ ಮೆಕ್​ಗ್ರಾಥ್ ಎಂಬುದು ವಿಶೇಷ. ಮೆಕ್​ಗ್ರಾಥ್ ಅವರ ಪತ್ನಿ ಜೇನ್ ಮೆಕ್‌ಗ್ರಾತ್ ಅವರು ಸ್ತನ ಕ್ಯಾನ್ಸರ್​ನಿಂದ ಮೃತಪಟ್ಟಿದ್ದರು. ಆ ಬಳಿಕ ಮೆಕ್‌ಗ್ರಾತ್ ಫೌಂಡೇಶನ್ ಸ್ಥಾಪಿಸಿದ ಗ್ಲೆನ್ ಮೆಕ್​ಗ್ರಾಥ್ ಸ್ತನ ಕ್ಯಾನ್ಸರ್ ಜಾಗೃತಿ ಹಾಗೂ ಈ ಕ್ಯಾನ್ಸರ್‌ನಿಂದ ಬಳಲುತ್ತಿರುವವರ ಚಿಕಿತ್ಸೆಗೆ ನೆರವು ನೀಡುತ್ತಾ ಬರುತ್ತಿದೆ.

ಈ ಅಭಿಯಾನಕ್ಕೆ ಸಿಡ್ನಿ ಕ್ರಿಕೆಟ್ ಕೂಡ ಸಾಥ್ ನೀಡಿದ್ದು, ಈ ಮೂಲಕ ಪ್ರತಿ ವರ್ಷ ಪಿಂಕ್ ಟೆಸ್ಟ್ ಪಂದ್ಯವನ್ನು ಆಯೋಜಿಸುತ್ತಿದೆ. ಈ ಮೂಲಕ ಸ್ಟೇಡಿಯಂನ ಗ್ಯಾಲರಿಗಳನ್ನು ಪಿಂಕ್ ಬಣ್ಣಗಳಿಂದ ಅಲಂಕೃತಗೊಳಿಸಲಾಗುತ್ತದೆ. ಹಾಗೆಯೇ ಸಿಡ್ನಿ ಟೆಸ್ಟ್ ಪಂದ್ಯದ ಮೂರನೇ ದಿನದಂದು ಲೇಡೀಸ್ ಸ್ಟ್ಯಾಂಡ್ ಅನ್ನು ತಾತ್ಕಾಲಿಕವಾಗಿ ಜೇನ್ ಮೆಕ್‌ಗ್ರಾತ್ ಸ್ಟ್ಯಾಂಡ್ ಎಂದು ಮರುನಾಮಕರಣ ಮಾಡಲಾಗುತ್ತದೆ. ಇನ್ನು ಈ ಪಂದ್ಯದಲ್ಲಿ ಆಟಗಾರರು ಧರಿಸಿದ ಪಿಂಕ್ ಕ್ಯಾಪ್​ ಅನ್ನು ಕೂಡ ಹರಾಜಾಗಿಡಲಾಗುತ್ತದೆ. ಇದರಿಂದ ಬಂದ ಹಣವನ್ನು ಸ್ತನ ಕ್ಯಾನ್ಸರ್ ಚಿಕಿತ್ಸೆಗೆ ಬಳಸಲಾಗುತ್ತದೆ.

ಸರಣಿ ಗೆದ್ದಿರುವ ಆಸ್ಟ್ರೇಲಿಯಾ:

ಇಂಗ್ಲೆಂಡ್ ವಿರುದ್ಧದ ಐದು ಪಂದ್ಯಗಳ ಸರಣಿಯನ್ನು ಈಗಾಗಲೇ ಆಸ್ಟ್ರೇಲಿಯಾ ತಂಡವು 3-1 ಅಂತರದಿಂದ ವಶಪಡಿಸಿಕೊಂಡಿದೆ. ಆ್ಯಶಸ್ ಸರಣಿಯಲ್ಲಿ ಇನ್ನು ಉಳಿದಿರುವುದು ಒಂದು ಟೆಸ್ಟ್ ಮಾತ್ರ. ನಾಳೆಯಿಂದ (ಜ.4) ಶುರುವಾಗಲಿರುವ ಈ ಸರಣಿಯಲ್ಲಿ ಗೆಲ್ಲುವ ಮೂಲಕ ಇಂಗ್ಲೆಂಡ್ ತಂಡವು ತನ್ನ ಸೋಲಿನ ಅಂತರವನ್ನು ಕುಗ್ಗಿಸುವ ಇರಾದೆಯಲ್ಲಿದೆ. ಅತ್ತ ಆಸ್ಟ್ರೇಲಿಯಾ ತಂಡವು ಹೊಸ ವರ್ಷದಲ್ಲಿ ಶುಭಾರಂಭ ಮಾಡುವ ಯೋಜನೆಯೊಂದಿಗೆ ಕಣಕ್ಕಿಳಿಯಲಿದೆ. ಹೀಗಾಗಿ ಈ ಪಂದ್ಯದಲ್ಲೂ ಉಭಯ ತಂಡಗಳಿಂದ ರೋಚಕ ಪೈಪೋಟಿ ನಿರೀಕ್ಷಿಸಬಹುದು.

ಆಸ್ಟ್ರೇಲಿಯಾ ಟೆಸ್ಟ್​ ತಂಡ: ಸ್ಟೀವ್ ಸ್ಮಿತ್ (ನಾಯಕ), ಸ್ಕಾಟ್ ಬೋಲ್ಯಾಂಡ್, ಅಲೆಕ್ಸ್ ಕ್ಯಾರಿ , ಬ್ರೆಂಡನ್ ಡಾಗೆಟ್, ಕ್ಯಾಮರೋನ್ ಗ್ರೀನ್, ಟ್ರಾವಿಸ್ ಹೆಡ್, ಜೋಶ್ ಇಂಗ್ಲಿಸ್, ಉಸ್ಮಾನ್ ಖ್ವಾಜಾ , ಮಾರ್ನಸ್ ಲ್ಯಾಬುಶೇನ್, ಟಾಡ್ ಮರ್ಫಿ, ಮೈಕೆಲ್ ನೇಸರ್, ಜ್ಯೆ ರಿಚರ್ಡ್ಸನ್, ಮಿಚೆಲ್ ಸ್ಟಾರ್ಕ್, ಜೇಕ್ ವೆದರಾಲ್ಡ್, ಬ್ಯೂ ವೆಬ್‌ಸ್ಟರ್.

ಇದನ್ನೂ ಓದಿ: ಟಿ20 ವಿಶ್ವಕಪ್​ಗೆ 7 ತಂಡಗಳು ಪ್ರಕಟ

ಇಂಗ್ಲೆಂಡ್ ಟೆಸ್ಟ್​ ತಂಡ: ಬೆನ್ ಸ್ಟೋಕ್ಸ್ (ನಾಯಕ), ಹ್ಯಾರಿ ಬ್ರೂಕ್ (ಉಪನಾಯಕ), ಗಸ್ ಅಟ್ಕಿನ್ಸನ್, ಶೋಯೆಬ್ ಬಶೀರ್, ಜೇಕಬ್ ಬೆಥೆಲ್, ಬ್ರೈಡನ್ ಕಾರ್ಸ್​, ಝಾಕ್ ಕ್ರಾಲಿ, ಬೆನ್ ಡಕೆಟ್, ವಿಲ್ ಜ್ಯಾಕ್ಸ್, ಓಲಿ ಪೋಪ್, ಮ್ಯಾಥ್ಯೂ ಪಾಟ್ಸ್, ಜೋ ರೂಟ್, ಜೇಮಿ ಸ್ಮಿತ್, ಜೋಶ್ ಟಂಗ್, ಮಾರ್ಕ್ ವುಡ್.

Follow Us
'ಪೆಲೆಟ್ ಗನ್ ದಾಳಿ ನಡೆದೇ ಇಲ್ಲ'; ರಾಹುಲ್ ಗಾಂಧಿಗೆ ಬಿಜೆಪಿ ಸಂಸದ ತಿರುಗೇಟು
'ಪೆಲೆಟ್ ಗನ್ ದಾಳಿ ನಡೆದೇ ಇಲ್ಲ'; ರಾಹುಲ್ ಗಾಂಧಿಗೆ ಬಿಜೆಪಿ ಸಂಸದ ತಿರುಗೇಟು
ಕರ್ನಾಟಕ ಸಂಪುಟ ವಿಸ್ತರಣೆ ಬಗ್ಗೆ ಕೈ ಹೈಕಮಾಂಡ್ ನಾಯಕರು ಹೇಳಿದ್ದಿಷ್ಟು!
ಕರ್ನಾಟಕ ಸಂಪುಟ ವಿಸ್ತರಣೆ ಬಗ್ಗೆ ಕೈ ಹೈಕಮಾಂಡ್ ನಾಯಕರು ಹೇಳಿದ್ದಿಷ್ಟು!
ರಾಹುಲ್ ಸಭೆ ಅಂತ್ಯ, ಬೆಂಗಳುರಿನತ್ತ ಡಿಕೆಶಿ: ಸಂಪುಟ ವಿಸ್ತರಣೆ ಕಥೆ ಏನಾಯ್ತು
ರಾಹುಲ್ ಸಭೆ ಅಂತ್ಯ, ಬೆಂಗಳುರಿನತ್ತ ಡಿಕೆಶಿ: ಸಂಪುಟ ವಿಸ್ತರಣೆ ಕಥೆ ಏನಾಯ್ತು
ತಾಯಿ ನೆನಪಿಗಾಗಿ ಹೊಸ ವಾಚ್ ರೆಡಿ ಮಾಡಿಸಿದ ಪುತ್ರ ಕುಮಾರಸ್ವಾಮಿ
ತಾಯಿ ನೆನಪಿಗಾಗಿ ಹೊಸ ವಾಚ್ ರೆಡಿ ಮಾಡಿಸಿದ ಪುತ್ರ ಕುಮಾರಸ್ವಾಮಿ
ಅತ್ತೆ ಚೆನ್ನಮ್ಮರ ಜೊತೆಗಿನ ನೆನೆಪು ಹಂಚಿಕೊಂಡ ಸೊಸೆ ಭವಾನಿ ರೇವಣ್ಣ
ಅತ್ತೆ ಚೆನ್ನಮ್ಮರ ಜೊತೆಗಿನ ನೆನೆಪು ಹಂಚಿಕೊಂಡ ಸೊಸೆ ಭವಾನಿ ರೇವಣ್ಣ
ಕಾವೇರಿ ಹೋರಾಟ: ಚಿತ್ರರಂಗದ ಒಗ್ಗಟ್ಟು ಪ್ರಶ್ನಿಸಿದ್ದಕ್ಕೆ ರಾಕ್​ಲೈನ್ ಗರಂ
ಕಾವೇರಿ ಹೋರಾಟ: ಚಿತ್ರರಂಗದ ಒಗ್ಗಟ್ಟು ಪ್ರಶ್ನಿಸಿದ್ದಕ್ಕೆ ರಾಕ್​ಲೈನ್ ಗರಂ
ರೈತರ ಪರ ಚಿತ್ರರಂಗ ಇದ್ದೇ ಇರುತ್ತೆ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ
ರೈತರ ಪರ ಚಿತ್ರರಂಗ ಇದ್ದೇ ಇರುತ್ತೆ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ
ರಾಜ್ಯದ ಮೇಲ್ಮನವಿ ತಿರಸ್ಕರಿಸಿದ CWMA, ಕರ್ನಾಟಕ ಬಂದ್ ಎಚ್ಚರಿಕೆ
ರಾಜ್ಯದ ಮೇಲ್ಮನವಿ ತಿರಸ್ಕರಿಸಿದ CWMA, ಕರ್ನಾಟಕ ಬಂದ್ ಎಚ್ಚರಿಕೆ
ವಿಜಯ್ ಅವರೇ ಬಲವಂತವಾಗಿ ನೀರು ಪಡೆಯಬೇಡಿ: ಪ್ರಥಮ್
ವಿಜಯ್ ಅವರೇ ಬಲವಂತವಾಗಿ ನೀರು ಪಡೆಯಬೇಡಿ: ಪ್ರಥಮ್
Cauvery Dispute: ಕಾವೇರಿ ನೀರು ವಿವಾದ; ವಾಣಿಜ್ಯ ಮಂಡಳಿಯಲ್ಲಿ ಮಹತ್ವದ ಸಭೆ
Cauvery Dispute: ಕಾವೇರಿ ನೀರು ವಿವಾದ; ವಾಣಿಜ್ಯ ಮಂಡಳಿಯಲ್ಲಿ ಮಹತ್ವದ ಸಭೆ