AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Ashes 2023: ‘5 ವರ್ಷದ ಹಳೆಯ ಬಾಲ್ ಬಳಸಿ ಟೆಸ್ಟ್ ಗೆದ್ದಿದ್ದಾರೆ’; ಆಸೀಸ್ ಮಾಧ್ಯಮಗಳ ಆರೋಪ

Ashes 2023: ಐದು ವರ್ಷಗಳ ಹಳೆಯ ಡ್ಯೂಕ್ ಬಾಲ್ ಬಳಸಿ, ಇಂಗ್ಲೆಂಡ್ ತಂಡ ಕೊನೆಯ ಟೆಸ್ಟ್ ಪಂದ್ಯವನ್ನು ಗೆದ್ದುಕೊಂಡಿದೆ ಎಂದು ಆಸೀಸ್ ಮೀಡಿಯಾಗಳು ವರದಿ ಮಾಡಿವೆ.

Ashes 2023: ‘5 ವರ್ಷದ ಹಳೆಯ ಬಾಲ್ ಬಳಸಿ ಟೆಸ್ಟ್ ಗೆದ್ದಿದ್ದಾರೆ’; ಆಸೀಸ್ ಮಾಧ್ಯಮಗಳ ಆರೋಪ
ಆ್ಯಶಸ್ ಟೆಸ್ಟ್ ಸರಣಿ ವಿವಾದ
ಪೃಥ್ವಿಶಂಕರ
|

Updated on:Aug 06, 2023 | 8:04 AM

Share

ಇಂಗ್ಲೆಂಡ್ ಮತ್ತು ಆಸ್ಟ್ರೇಲಿಯ (England vs Australia) ನಡುವೆ ನಡೆದ ಐದು ಪಂದ್ಯಗಳ ಆ್ಯಶಸ್ ಟೆಸ್ಟ್ (Ashes 2023) ಸರಣಿ 2-2 ರ ಸಮಬಲದೊಂದಿಗೆ ಡ್ರಾದಲ್ಲಿ ಅಂತ್ಯಗೊಂಡಿದೆ. ಕಳೆದ ಆವೃತ್ತಿಯಲ್ಲಿ ಆಸ್ಟ್ರೇಲಿಯಾ ಆ್ಯಶಸ್ ಗೆದ್ದಿದ್ದರಿಂದ ಈ ಬಾರಿಯೂ ಆ್ಯಶಸ್ ಟ್ರೋಫಿ ಆಸೀಸ್ ಬಳಿಯೇ ಉಳಿದುಕೊಂಡಿದೆ. ಪ್ರತಿ ಆ್ಯಶಸ್ ಟೆಸ್ಟ್ ಸರಣಿ ನಡೆದಾಗಲೂ ಒಂದೊಲ್ಲೊಂದು ಒಂದು ಹೊಸ ವಿವಾದಗಳು ಏಳುವುದು ನಾವು ಈ ಹಿಂದೆಯೂ ಸಾಕಷ್ಟು ಬಾರಿ ನೋಡಿದ್ದೇವೆ. ಇದೀಗ ಈ ಬಾರಿ ನಡೆದ ಆ್ಯಶಸ್ ಸರಣಿಯಲ್ಲಿ ಸಾಕಷ್ಟು ವಿವಾದಗಳು ಎದ್ದಿದ್ದವು. ಬೈರ್​ಸ್ಟೋ ರನೌಟ್​ನಿಂದ ಹಿಡಿದು, ಸ್ಮಿತ್​ರನ್ನು ಹೀಯ್ಯಾಳಿಸಿದ ಪ್ರೇಕ್ಷಕರವರೆಗೆ ಈ ಸರಣಿಯಲ್ಲೂ ಸಾಕಷ್ಟು ವಿವಾದಗಳು ಸೃಷ್ಟಿಯಾಗಿದ್ದವು. ಇದೀಗ ಟೆಸ್ಟ್ ಸರಣಿ ಮುಗಿದ ಬಳಿಕ ಹೊಸ ವಿವಾದ ಹುಟ್ಟಿಕೊಂಡಿದ್ದು, ಐದು ವರ್ಷಗಳ ಹಳೆಯ ಡ್ಯೂಕ್ ಬಾಲ್ ಬಳಸಿ, ಇಂಗ್ಲೆಂಡ್ ತಂಡ ಕೊನೆಯ ಟೆಸ್ಟ್ ಪಂದ್ಯವನ್ನು ಗೆದ್ದುಕೊಂಡಿದೆ ಎಂದು ಆಸೀಸ್ ಮೀಡಿಯಾಗಳು ಆರೋಪಿಸಿ ವರದಿ ಮಾಡಿವೆ.

ವಾಸ್ತವವಾಗಿ ಓವಲ್ ಮೈದಾನದಲ್ಲಿ ನಡೆದ ಕೊನೆಯ ಟೆಸ್ಟ್ ಪಂದ್ಯದ ಕೊನೆಯ ಇನ್ನಿಂಗ್ಸ್​ನಲ್ಲಿ ಚೆಂಡನ್ನು ಬದಲಾಯಿಸಿದ ವಿಚಾರವಾಗಿ ಈ ವಿವಾದ ಹುಟ್ಟಿಕೊಂಡಿದೆ. ಆಸ್ಟ್ರೇಲಿಯಾ ಇನ್ನಿಂಗ್ಸ್​ನ 37ನೇ ಓವರ್‌ ಬೌಲ್ ಮಾಡಿದ ಇಂಗ್ಲೆಂಡ್ ವೇಗಿ ಮಾರ್ಕ್​ವುಡ್ ಅವರ ಚೆಂಡು ಉಸ್ಮಾನ್ ಖವಾಜಾ ಅವರ ಹೆಲ್ಮೆಟ್​ಗೆ ಬಡಿದಿತ್ತು. ಚೆಂಡು ಎಷ್ಟು ವೇಗವಾಗಿ ಹೆಲ್ಮೆಟ್​ಗೆ ಬಡಿದಿತ್ತೆಂದರೆ, ಚೆಂಡಿನ ಆಕಾರವೇ ಬದಲಾಗಿತ್ತು. ಈ ಕಾರಣಕ್ಕಾಗಿ ಅಂಪೈರ್‌ಗಳು ಚೆಂಡನ್ನು ಬದಲಾಯಿಸಲು ನಿರ್ಧರಿಸಿದರು. ಕಾಕತಾಳೀಯವೆಂಬಂತೆ ಚೆಂಡು ಬದಲಾದ ಬಳಿಕ ಆಸೀಸ್ ಪಾಳಯದ ಪೆವಿಲಿಯನ್ ಪರೇಡ್ ಆರಂಭವಾಗಿತ್ತು. ಅಂತಿಮವಾಗಿ ಸ್ಟೋಕ್ಸ್ ಪಡೆ, ಕಾಂಗರೂಗಳನ್ನು 49 ರನ್​ಗಳಿಂದ ಮಣಿಸಿ, ಕೊನೆಯ ಟೆಸ್ಟ್ ಪಂದ್ಯವನ್ನು ಗೆದ್ದು ಬೀಗಿತ್ತು.

Ashes 2023: ಒಂದೊಳ್ಳೆ ಉದ್ದೇಶಕ್ಕೆ ಪರಸ್ಪರ ಜೆರ್ಸಿ ಬದಲಿಸಿಕೊಂಡ ಇಂಗ್ಲೆಂಡ್ ಆಟಗಾರರು

ಐದು ವರ್ಷಗಳ ಹಳೆಯ ಚೆಂಡು; ಆಸೀಸ್ ಮಾಧ್ಯಮಗಳು

ಆ ಬಳಿಕ ಚೆಂಡು ಬದಲಾಯಿಸಿದ ಬಗ್ಗೆ ಆಸ್ಟ್ರೇಲಿಯಾ ಮಾಧ್ಯಮಗಳಲ್ಲಿ ತರಹೇವಾರಿ ವರದಿಗಳು ಪ್ರಕಟಗೊಳ್ಳಲಾರಂಭಿಸಿದವು. ಆಸೀಸ್ ಮಾಧ್ಯಮಗಳಲ್ಲಿ ಪ್ರಕಟವಾದ ವರದಿಗಳ ಪ್ರಕಾರ, ಅಂಪೈರ್‌ಗಳು ಬದಲಿಸಿದ ಚೆಂಡು ಐದು ವರ್ಷದ ಹಳೆಯ ಡ್ಯೂಕ್ಸ್ ಬಾಲ್ ಆಗಿದೆ. ಈ ಚೆಂಡನ್ನು 2018 ಅಥವಾ 2019 ರಲ್ಲಿ ತಯಾರಿಸಲಾಗಿದೆ. ಹೀಗಾಗಿ ಚೆಂಡು ಎಷ್ಟು ಸ್ವಿಂಗ್ ಆಗಬೇಕಿತ್ತೋ ಅದಕ್ಕಿಂತ ಹೆಚ್ಚು ಸ್ವಿಂಗ್ ಆಗುತ್ತಿತ್ತು. ಹೀಗಾಗಿ ಆಸೀಸ್ ತಂಡ ಕೊನೆಯ ಟೆಸ್ಟ್ ಪಂದ್ಯ ಸೋತಿತು ಎಂದು ವರದಿಯಾಗಿತ್ತು. ಆ ಬಳಿಕ ಎಲ್ಲರೂ ಇದರ ಬಗ್ಗೆ ತನಿಖೆಗೆ ಆಗ್ರಹಿಸಿದ್ದರು.

ಚೆಂಡಿನ ಮೇಲೆ ದಿನಾಂಕದ ಮುದ್ರೆ ಇರುತ್ತದೆ

ಇನ್ನು ಡ್ಯೂಕ್ ಚೆಂಡಿನ ಬಗ್ಗೆ ಹುಟ್ಟಿಕೊಂಡಿರುವ ಹೊಸ ವಿವಾದ ಕುರಿತು ಪ್ರತಿಕ್ರಿಯೆ ನೀಡಿರುವ ಡ್ಯೂಕ್ ಚೆಂಡು ತಯಾರಿಕ ಕಂಪನಿಯ ಮಾಲೀಕ ದಿಲೀಪ್ ಜಜೋಡಿಯಾ, ಈ ಪಂದ್ಯದಲ್ಲಿ ಐದು ವರ್ಷದ ಚೆಂಡನ್ನು ನೀಡುವ ಸಾಧ್ಯತೆ ಕಡಿಮೆ ಎಂದು ಹೇಳಿದ್ದಾರೆ. ಅಂಪೈರ್​​ಗಳು ಬದಲಿಸುವ ಪ್ರತಿಯೊಂದು ಚೆಂಡಿನ ಮೇಲೆ ದಿನಾಂಕದ ಮುದ್ರೆ ಇರುತ್ತದೆ. ಹೀಗಾಗಿ ಐದು ವರ್ಷ ಹಳೆಯ ಚೆಂಡನ್ನು ಈ ಪಂದ್ಯದಲ್ಲಿ ಬಳಸಿರುವ ಸಾಧ್ಯತೆ ಕಡಿಮೆ ಇದೆ. ಇದರಿಂದ ತಮ್ಮ ಹೆಸರಿಗೆ ಧಕ್ಕೆಯಾಗುತ್ತಿದ್ದು, ಈ ಬಗ್ಗೆ ಪರಿಶೀಲಿಸುವುದಾಗಿ ಹೇಳಿದ್ದಾರೆ.

ಐಸಿಸಿ ನೀಡಿದ ಸ್ಪಷ್ಟನೆ ಏನು?

ಈ ವಿವಾದ ವೇಗ ಪಡೆದುಕೊಂಡ ನಂತರ ಅಂಪೈರ್‌ಗಳ ಮೇಲೆ ಪ್ರಶ್ನೆಗಳು ಎದ್ದಿವೆ. ಈ ಬಗ್ಗೆ ಐಸಿಸಿ ಕೂಡ ಸ್ಪಷ್ಟನೆ ನೀಡಿದೆ. ಪಂದ್ಯದ ಮೊದಲು ಚೆಂಡನ್ನು ಆಯ್ಕೆ ಮಾಡಲಾಗುತ್ತದೆ ಮತ್ತು ಅವರು ಯಾವ ಚೆಂಡನ್ನು ಆಯ್ಕೆ ಮಾಡುತ್ತಾರೆ ಎಂಬುದು ಅಂಪೈರ್‌ಗಳ ನಿರ್ಧಾರ ಎಂದು ಐಸಿಸಿ ವಕ್ತಾರರು ಹೇಳಿದ್ದಾರೆ. ಅಂತಹ ಪರಿಸ್ಥಿತಿಯಲ್ಲಿ (ಪಂದ್ಯದ ಮಧ್ಯದಲ್ಲಿ ಚೆಂಡನ್ನು ಬದಲಾಯಿಸಬೇಕಾದಾಗ), ಅಂಪೈರ್ ಹಿಂದಿನ ಚೆಂಡಿನಂತೆಯೇ ಇರುವ ಚೆಂಡನ್ನು ಆಯ್ಕೆ ಮಾಡುತ್ತಾರೆ. ಅಂಪೈರ್‌ಗಳು ತೆಗೆದುಕೊಂಡ ನಿರ್ಧಾರದ ಬಗ್ಗೆ ಯಾವುದೇ ಪ್ರತಿಕ್ರಿಯೆ ನೀಡುವುದಿಲ್ಲ ಎಂದು ಐಸಿಸಿ ಸ್ಪಷ್ಟಪಡಿಸಿದೆ.

ಇನ್ನಷ್ಟು ಕ್ರೀಡಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 8:02 am, Sun, 6 August 23

Follow Us
pruthvi Shankar
pruthvi Shankar

ಹುಟ್ಟೂರು ಹಾಸನದ ಕೊಣನೂರು ಸಮೀಪದ ಲಕ್ಷ್ಮೀಪುರ, ಕಳೆದ 8 ವರ್ಷಗಳಿಂದ ಪತ್ರಿಕಾರಂಗದಲ್ಲಿ ನೆಲೆ. ಟಿವಿ9 ಕನ್ನಡದಲ್ಲೇ ವೃತ್ತಿ ಜೀವನ ಆರಂಭಿಸಿದ ನಾನು, ಮೊದಲ 3 ವರ್ಷ ವಿಡಿಯೋ ಎಡಿಟರ್ ಆಗಿ ಕೆಲಸ ಮಾಡಿದ ಬಳಿಕ ನನ್ನ ಆಸಕ್ತಿಯ ವಿಷಯವಾದ ಕ್ರೀಡೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ನನ್ನ ವೃತ್ತಿ ಬದುಕಿನ ಎರಡನೇ ಇನ್ನಿಂಗ್ಸ್ ಆರಂಭಿಸಿದ್ದೇನೆ.

Read More
ಅಲ್ಲೆಲ್ಲೋ ಯುದ್ಧ ನಡೀತಿದ್ರೆ ಇಲ್ಯಾಕೆ ಚಿನ್ನ ಖರೀದಿ ಮಾಡಬಾರದು?
ಅಲ್ಲೆಲ್ಲೋ ಯುದ್ಧ ನಡೀತಿದ್ರೆ ಇಲ್ಯಾಕೆ ಚಿನ್ನ ಖರೀದಿ ಮಾಡಬಾರದು?
ಸಾರ್ವಜನಿಕರೇ ಬೆಂಗಳೂರಿನ ಈ ರಸ್ತೆಗಳಲ್ಲಿ ಓಡಾಡುವಾಗ ಹುಷಾರ್!
ಸಾರ್ವಜನಿಕರೇ ಬೆಂಗಳೂರಿನ ಈ ರಸ್ತೆಗಳಲ್ಲಿ ಓಡಾಡುವಾಗ ಹುಷಾರ್!
ಲವ್ ವಿಚಾರಕ್ಕೆ 17ರ ಮಗಳನ್ನೇ ಕೊಂದ ಅಪ್ಪ: ತಂದೆಯ ಅಸಲಿ ಮುಖ ಬಯಲು
ಲವ್ ವಿಚಾರಕ್ಕೆ 17ರ ಮಗಳನ್ನೇ ಕೊಂದ ಅಪ್ಪ: ತಂದೆಯ ಅಸಲಿ ಮುಖ ಬಯಲು
ಶತಕದ ಪಂದ್ಯದಲ್ಲಿ ಒಂದೇ ರನ್​ಗೆ ಸುಸ್ತಾದ ಶ್ರೇಯಸ್ ಅಯ್ಯರ್
ಶತಕದ ಪಂದ್ಯದಲ್ಲಿ ಒಂದೇ ರನ್​ಗೆ ಸುಸ್ತಾದ ಶ್ರೇಯಸ್ ಅಯ್ಯರ್
ಅರಬ್ಬಿ ಸಮುದ್ರದಲ್ಲಿ ಹೆಚ್ಚಿದ ಗಾಳಿಯ ವೇಗ: ಲಂಗರು ಹಾಕಿದ ನೂರಾರು ಬೋಟ್​​​​
ಅರಬ್ಬಿ ಸಮುದ್ರದಲ್ಲಿ ಹೆಚ್ಚಿದ ಗಾಳಿಯ ವೇಗ: ಲಂಗರು ಹಾಕಿದ ನೂರಾರು ಬೋಟ್​​​​
ನಿಯಂತ್ರಣ ತಪ್ಪಿ ಏಕಾಏಕಿ ರೆಸ್ಟೋರೆಂಟ್ ಒಳಗೆ ನುಗ್ಗಿದ ಕಾರು
ನಿಯಂತ್ರಣ ತಪ್ಪಿ ಏಕಾಏಕಿ ರೆಸ್ಟೋರೆಂಟ್ ಒಳಗೆ ನುಗ್ಗಿದ ಕಾರು
ಜಿಟಿ ದೇವೇಗೌಡಗೆ ಶಾಕ್: ಸ್ವಪಕ್ಷದ ಶಾಸಕರನ್ನ ದೂರವಿಟ್ಟು​ ಸಮಾವೇಶ
ಜಿಟಿ ದೇವೇಗೌಡಗೆ ಶಾಕ್: ಸ್ವಪಕ್ಷದ ಶಾಸಕರನ್ನ ದೂರವಿಟ್ಟು​ ಸಮಾವೇಶ
ಕಲಬುರಗಿಯಲ್ಲಿ ಮಾಜಿ ಸೈನಿಕನ ಬರ್ಬರ ಹತ್ಯೆ: ಆಗಿದ್ದೇನು?
ಕಲಬುರಗಿಯಲ್ಲಿ ಮಾಜಿ ಸೈನಿಕನ ಬರ್ಬರ ಹತ್ಯೆ: ಆಗಿದ್ದೇನು?
ನಿರಾಶ್ರಿತರ ಕೇಂದ್ರದಲ್ಲಿದ್ದ ವಿದೇಶಿ ಅಕ್ರಮ ವಲಸಿಗರು ಪರಾರಿ!
ನಿರಾಶ್ರಿತರ ಕೇಂದ್ರದಲ್ಲಿದ್ದ ವಿದೇಶಿ ಅಕ್ರಮ ವಲಸಿಗರು ಪರಾರಿ!
ಶನಿ ಅಮಾವಾಸ್ಯೆ, ವೀಕೆಂಡ್ ಹಿನ್ನೆಲೆ ಮಲೆ ಮಹದೇಶ್ವರ ಬೆಟ್ಟದಲ್ಲಿ ಭಕ್ತಸಾಗರ
ಶನಿ ಅಮಾವಾಸ್ಯೆ, ವೀಕೆಂಡ್ ಹಿನ್ನೆಲೆ ಮಲೆ ಮಹದೇಶ್ವರ ಬೆಟ್ಟದಲ್ಲಿ ಭಕ್ತಸಾಗರ