ಯಾರನ್ನು ಆಡಿಸ್ಬೇಕು, ಯಾರನ್ನ ಕೈ ಬಿಡಬೇಕು? ಎಂದು ತಿಳಿಸಿದ ಅಶ್ವಿನ್

India vs Ireland 2nd T20: ಭಾರತ ಮತ್ತು ಐರ್ಲೆಂಡ್ ನಡುವಣ 2ನೇ ಟಿ20 ಪಂದ್ಯವು ಇಂದು (ಜೂ.28) ನಡೆಯಲಿದೆ. ಬೆಲ್​ಫಾಸ್ಟ್​ನಲ್ಲಿ ಜರುಗಲಿರುವ ಈ ಪಂದ್ಯದ ಮೂಲಕ ವೈಭವ್ ಸೂರ್ಯವಂಶಿ ಟೀಮ್ ಇಂಡಿಯಾ ಪರ ಪಾದಾರ್ಪಣೆ ಮಾಡಲಿದ್ದಾರಾ ಎಂಬುದೇ ಈಗ ಕುತೂಹಲ. ಈ ಕುತೂಹಲದ ನಡುವೆ ರವಿಚಂದ್ರನ್ ಅಶ್ವಿನ್ ಟೀಮ್ ಇಂಡಿಯಾ ಮ್ಯಾನೇಜ್ಮೆಂಟ್​ಗೆ ಕೆಲ ಸಲಹೆಗಳನ್ನು ನೀಡಿದ್ದಾರೆ.

ಯಾರನ್ನು ಆಡಿಸ್ಬೇಕು, ಯಾರನ್ನ ಕೈ ಬಿಡಬೇಕು? ಎಂದು ತಿಳಿಸಿದ ಅಶ್ವಿನ್
Team India
Image Credit source: insidesports
Edited By:

Updated on: Jun 28, 2026 | 12:45 PM

ಟೀಮ್ ಇಂಡಿಯಾದ ಮಾಜಿ ಆಟಗಾರ ರವಿಚಂದ್ರನ್ ಅಶ್ವಿನ್ ಅವರು ಯುವ ಬ್ಯಾಟಿಂಗ್ ಸೆನ್ಸೇಷನ್, 15 ವರ್ಷದ ವೈಭವ್ ಸೂರ್ಯವಂಶಿ ಅವರ ಅಂತಾರಾಷ್ಟ್ರೀಯ ಪಾದಾರ್ಪಣೆ ಕುರಿತು ಮಹತ್ವದ ಹೇಳಿಕೆ ನೀಡಿದ್ದಾರೆ. ಸದ್ಯದ ಪರಿಸ್ಥಿತಿಯಲ್ಲಿ ಆರಂಭಿಕರಾಗಿ ಕಣಕ್ಕಿಳಿಯುತ್ತಿರುವ ಸಂಜು ಸಾಮ್ಸನ್ ಮತ್ತು ಅಭಿಷೇಕ್ ಶರ್ಮಾ ಯಾವುದೇ ತಪ್ಪು ಮಾಡಿಲ್ಲ. ಹಾಗಾಗಿ ಸೂರ್ಯವಂಶಿ ಭಾರತ ತಂಡಕ್ಕೆ ಪ್ರವೇಶಿಸಲು ಇನ್ನು ಕೆಲವು ದಿನ ಕಾಯಲೇಬೇಕು ಎಂದು ಅಶ್ವಿನ್ ಅಭಿಪ್ರಾಯಪಟ್ಟಿದ್ದಾರೆ.

ತಮ್ಮ ಯೂಟ್ಯೂಬ್ ಚಾನೆಲ್‌ನಲ್ಲಿ ಮಾತನಾಡಿರುವ ಅಶ್ವಿನ್, ಯುವ ಆಟಗಾರರನ್ನು ತಂಡಕ್ಕೆ ಸೇರಿಸಿಕೊಳ್ಳುವ ಅವಸರದಲ್ಲಿ ಸ್ಥಿರ ಪ್ರದರ್ಶನ ನೀಡುತ್ತಿರುವ ಹಿರಿಯ ಆಟಗಾರರನ್ನು ಕೈಬಿಡುವುದು ಸರಿಯಲ್ಲ, ಹೀಗಾಗಿ ಸಂಜು ಸಾಮ್ಸನ್ ಮತ್ತು ಅಭಿಷೇಕ್ ಶರ್ಮಾ  ಅವರನ್ನು ಪ್ಲೇಯಿಂಗ್ ಇಲೆವೆನ್​ನಲ್ಲಿ ಮುಂದುವರೆಸಬೇಕೆಂದು ಅಶ್ವಿನ್ ಆಗ್ರಹಿಸಿದ್ದಾರೆ.

ಅಶ್ವಿನ್ ಮುಂದಿಟ್ಟಿರುವ ವಾದ ಹೀಗಿದೆ:

  • ಸಂಜು ಸಾಮ್ಸನ್ ಮತ್ತು ಅಭಿಷೇಕ್ ಶರ್ಮಾ ವಿಶ್ವಕಪ್ ಗೆದ್ದ ಅನುಭವಿ ಜೋಡಿಯಾಗಿದ್ದಾರೆ. ಒಂದೆರಡು ಪಂದ್ಯಗಳಲ್ಲಿ ವೈಫಲ್ಯ ಅನುಭವಿಸಿದ ತಕ್ಷಣ ಅವರನ್ನು ತಂಡದಿಂದ ಕೈಬಿಡುವುದು ತಪ್ಪು ನಿರ್ಧಾರವಾಗುತ್ತದೆ.
  • ಸಣ್ಣ ಪುಟ್ಟ ಕಾರಣಗಳಿಗಾಗಿ ಪದೇ ಪದೇ ತಂಡವನ್ನು ಬದಲಾಯಿಸುವುದರಿಂದ ಡ್ರೆಸ್ಸಿಂಗ್ ರೂಮ್ ವಾತಾವರಣದ ಮೇಲೆ ನೆಗೆಟಿವ್ ಪ್ರಭಾವ ಬೀರುತ್ತದೆ. ತಂಡದಲ್ಲಿ ‘ಸೂಪರ್‌ಸ್ಟಾರ್ ಸಂಸ್ಕೃತಿ’ ಇರಬಾರದು ಎಂದು ಅವರು ಎಚ್ಚರಿಸಿದ್ದಾರೆ.
  • ಯುವ ಆಟಗಾರರು ಆರಂಭದಲ್ಲೇ ಪಂದ್ಯ ಆಡದಿದ್ದರೂ, ಹಿರಿಯ ಆಟಗಾರರೊಂದಿಗೆ ಸಮಯ ಕಳೆಯುವುದು ಮತ್ತು ಬೆಂಚ್ ಮೇಲೆ ಕುಳಿತು ಪಂದ್ಯವನ್ನು ವೀಕ್ಷಿಸುವುದರಿಂದ ಸಾಕಷ್ಟು ಕಲಿಯಬಹುದು.
  • ವೈಭವ್ ಸೂರ್ಯವಂಶಿ ಅವರಿಗೆ ದೀರ್ಘಾವಧಿಯ ಭವಿಷ್ಯವಿದೆ. ಸದ್ಯಕ್ಕೆ ಮಾಧ್ಯಮಗಳ ಅತಿಯಾದ ಪ್ರಚಾರ ಮತ್ತು ಒತ್ತಡದಿಂದ ಅವರನ್ನು ದೂರವಿಟ್ಟು, ಸಹಜವಾಗಿ ಬೆಳೆಯಲು ಬಿಡಬೇಕು ಎಂದು ಅಶ್ವಿನ್ ತಿಳಿಸಿದ್ದಾರೆ.

ಸೂರ್ಯವಂಶಿಗಾಗಿ ಅಶ್ವಿನ್ ಪ್ಲ್ಯಾನ್:

ಐಪಿಎಲ್‌ನಲ್ಲಿ ಆರೆಂಜ್ ಕ್ಯಾಪ್ ಗೆದ್ದು ಇತಿಹಾಸ ಸೃಷ್ಟಿಸಿರುವ ವೈಭವ್ ಸೂರ್ಯವಂಶಿಯನ್ನು ನೇರವಾಗಿ ಐರ್ಲೆಂಡ್ ಅಥವಾ ಇಂಗ್ಲೆಂಡ್​ನಂತಹ ಕಠಿಣ ಸರಣಿಗಳಲ್ಲಿ ಕಣಕ್ಕಿಳಿಸಬಾರದು ಎಂದು ಅಶ್ವಿನ್ ಹೇಳಿದ್ದಾರೆ.

ಇದನ್ನೂ ಓದಿ: ಯಾರಿಂದಲೂ ಸಾಧ್ಯವಾಗದ ವಿಶ್ವ ದಾಖಲೆ ನಿರ್ಮಿಸಿದ ಮೆಸ್ಸಿ

ಬದಲಿಗೆ, ಮುಂಬರುವ ಝಿಂಬಾಬ್ವೆ ಪ್ರವಾಸ ಅಥವಾ ಏಷ್ಯನ್ ಗೇಮ್ಸ್‌ನಂತಹ ಪಂದ್ಯಗಳಲ್ಲಿ ಅವರಿಗೆ ಮೊದಲ ಅವಕಾಶ ನೀಡಬೇಕು. ಇದರಿಂದ ಅವರು ಅಂತಾರಾಷ್ಟ್ರೀಯ ಕ್ರಿಕೆಟ್‌ನ ಒತ್ತಡವನ್ನು ಸುಲಭವಾಗಿ ನಿಭಾಯಿಸಲು ಸಾಧ್ಯವಾಗುತ್ತದೆ ಎಂದು ಅಶ್ವಿನ್ ಸಲಹೆ ನೀಡಿದ್ದಾರೆ.

 

Follow Us