AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

India vs New zealand 2nd Test: ಕ್ಲೀನ್ ಬೌಲ್ಡ್​ಗೆ ರಿವ್ಯೂ ಕೇಳಿ ನಗೆಪಾಟಲಿಗೀಡಾದ ಅಶ್ವಿನ್

India vs New zealand 2nd Test: ಈ ಪಂದ್ಯದಲ್ಲಿ ಮೊದಲ ಬ್ಯಾಟ್ ಮಾಡಿದ ಟೀಮ್ ಇಂಡಿಯಾ ಮೊದಲ ಇನಿಂಗ್ಸ್​ನಲ್ಲಿ 325 ರನ್​ಗಳನ್ನು ಕಲೆಹಾಕಿದೆ. ಅಷ್ಟೇ ಅಲ್ಲದೆ ನ್ಯೂಜಿಲೆಂಡ್ ತಂಡವನ್ನು ಮೊದಲ ಇನಿಂಗ್ಸ್​ನಲ್ಲಿ ಕೇವಲ 62 ರನ್​ಗಳಿಗೆ ಆಲೌಟ್ ಮಾಡಿ ಎರಡನೇ ಇನಿಂಗ್ಸ್ ಆರಂಭಿಸಿದೆ.

India vs New zealand 2nd Test: ಕ್ಲೀನ್ ಬೌಲ್ಡ್​ಗೆ ರಿವ್ಯೂ ಕೇಳಿ ನಗೆಪಾಟಲಿಗೀಡಾದ ಅಶ್ವಿನ್
Ashwin
TV9 Web
| Edited By: |

Updated on: Dec 04, 2021 | 10:06 PM

Share

ಮುಂಬೈನಲ್ಲಿ ನಡೆಯುತ್ತಿರುವ ಭಾರತ-ನ್ಯೂಜಿಲೆಂಡ್ ನಡುವಣ 2ನೇ ಟೆಸ್ಟ್ ಪಂದ್ಯವು ಹಲವು ರೋಚಕತೆಗಳಿಗೆ ಸಾಕ್ಷಿಯಾಗಿತ್ತು. ಮೊದಲ ಇನಿಂಗ್ಸ್​ನಲ್ಲಿ ಟೀಮ್ ಇಂಡಿಯಾವನ್ನು 325 ರನ್​ಗೆ ಆಲೌಟ್ ಮಾಡಿದ ಎಜಾಝ್ ಪಟೇಲ್ 10 ವಿಕೆಟ್ ಉರುಳಿಸಿ ವಿಶ್ವ ದಾಖಲೆ ನಿರ್ಮಿಸಿದರು. ಇದರ ಬೆನ್ನಲ್ಲೇ ಟೀಮ್ ಇಂಡಿಯಾ ಕೇವಲ 62 ರನ್​ಗಳಿಗೆ ನ್ಯೂಜಿಲೆಂಡ್ ಅನ್ನು ಆಲೌಟ್ ಮಾಡಿ ದಾಖಲೆ ಬರೆದರು. ಇನ್ನು ಈ ಪಂದ್ಯದಲ್ಲಿ ಕೈಲ್ ಜೇಮಿಸನ್ ಅವರ ಅದ್ಭುತ ಕ್ಯಾಚ್ ಹಿಡಿಯುವ ಮೂಲಕ ಶ್ರೇಯಸ್ ಅಯ್ಯರ್ ಗಮನ ಸೆಳೆದರು. ಇನ್ನೊಂದೆಡೆ ಮೊದಲ ಇನಿಂಗ್ಸ್​ನಲ್ಲಿ ರಿವ್ಯೂ ಪಡೆದು ರವಿಚಂದ್ರನ್ ಅಶ್ವಿನ್ ನಗೆಪಾಟಲಿಗೀಡಾದರು.

ಎಜಾಝ್ ಪಟೇಲ್ ಎಸೆತದ 72ನೇ ಓವರ್​ನಲ್ಲಿ ಅಶ್ವಿನ್ ಕ್ಲೀನ್ ಬೌಲ್ಡ್ ಆಗಿದ್ದರು. ಆದರೆ ಇತ್ತ ಅಶ್ವಿನ್ ಬೇಲ್ಸ್ ಬಿದ್ದಿರುವುದು ಗಮನಿಸದೇ ನೇರವಾಗಿ ಅಂಪೈರ್​​ಗೆ ರಿವ್ಯೂ ಮನವಿ ಸಲ್ಲಿಸಿದರು. ಅತ್ತ ನ್ಯೂಜಿಲೆಂಡ್ ಕ್ರಿಕೆಟಿಗರಿಗೂ ಶಾಕ್. ಏಕೆಂದರೆ ಬೌಲ್ಡ್ ಆದರೆ ಮೂರನೇ ಅಂಪೈರ್​ಗೆ ಮನವಿ ಸಲ್ಲಿಸುವಂತಿಲ್ಲ. ಅಷ್ಟರಲ್ಲಾಗಲೇ ನಾನ್ ಸ್ಟ್ರೈಕ್​ನಲ್ಲಿದ್ದ ಮಯಾಂಕ್ ಅಗರ್ವಾಲ್ ಅಶ್ವಿನ್​ಗೆ ಕ್ಲೀನ್ ಬೌಲ್ಡ್ ಆಗಿದ್ದೀರಿ ಎಂಬುದನ್ನು ತಿಳಿಸಿದರು. ಆ ಬಳಿಕವಷ್ಟೇ ಅಶ್ವಿನ್​ಗೆ ತಾನು ಬೌಲ್ಡ್ ಆಗಿರುವುದು ಗೊತ್ತಾಗಿದ್ದದು. ಇದೀಗ ಅಶ್ವಿನ್ ಅವರ ರಿವ್ಯೂ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ಸಿಕ್ಕಾಪಟ್ಟೆ ವೈರಲ್ ಆಗಿದೆ.

ಇನ್ನು ಈ ಪಂದ್ಯದಲ್ಲಿ ಮೊದಲ ಬ್ಯಾಟ್ ಮಾಡಿದ ಟೀಮ್ ಇಂಡಿಯಾ ಮೊದಲ ಇನಿಂಗ್ಸ್​ನಲ್ಲಿ 325 ರನ್​ಗಳನ್ನು ಕಲೆಹಾಕಿದೆ. ಅಷ್ಟೇ ಅಲ್ಲದೆ ನ್ಯೂಜಿಲೆಂಡ್ ತಂಡವನ್ನು ಮೊದಲ ಇನಿಂಗ್ಸ್​ನಲ್ಲಿ ಕೇವಲ 62 ರನ್​ಗಳಿಗೆ ಆಲೌಟ್ ಮಾಡಿ ಎರಡನೇ ಇನಿಂಗ್ಸ್ ಆರಂಭಿಸಿದೆ. 2ನೇ ದಿನದಾಟದ ಮುಕ್ತಾಯದ ವೇಳೆಗೆ ಟೀಮ್ ಇಂಡಿಯಾ ಯಾವುದೇ ವಿಕೆಟ್ ನಷ್ಟವಿಲ್ಲದೆ 69 ರನ್​ಗಳಿಸಿದೆ. ಕ್ರೀಸ್​ನಲ್ಲಿ 332 ರನ್​ಗಳ ಮುನ್ನಡೆಯೊಂದಿಗೆ ಮಯಾಂಕ್ ಅರ್ಗವಾಲ್ ಹಾಗೂ ಚೇತೇಶ್ವರ ಪೂಜಾರಾ ಬ್ಯಾಟಿಂಗ್ ಮಾಡುತ್ತಿದ್ದಾರೆ.

ಇದನ್ನೂ ಓದಿ: IPL 2022: ದುಡ್ಡಿಗಿಂತ RCB ತಂಡವೇ ಮುಖ್ಯ: ವಿರಾಟ್ ಕೊಹ್ಲಿಗೆ ಅಭಿಮಾನಿಗಳಿಂದ ಬಹುಪರಾಕ್

ಇದನ್ನೂ ಓದಿ: 8 ಫ್ರಾಂಚೈಸಿ ಉಳಿಸಿಕೊಂಡ ಆಟಗಾರರ ಪಟ್ಟಿ ಹೀಗಿದೆ

ಇದನ್ನೂ ಓದಿ: IPL 20222: ಇವರೇ RCB ತಂಡದ ಮುಂದಿನ ಕ್ಯಾಪ್ಟನ್ ಎಂದ ಮಾಜಿ ಆರ್​ಸಿಬಿ ನಾಯಕ

(Ashwin comically reviews after being bowled)

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ