AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Asia Cup 2022: ಏಷ್ಯಾಕಪ್​ ಬಹಿಷ್ಕರಿಸಿದ್ದ ಟೀಮ್ ಇಂಡಿಯಾ..!

Asia Cup 2022: ಈ ಬಾರಿ ಭಾರತ ತಂಡವು ಪಾಕಿಸ್ತಾನ್ ವಿರುದ್ದದ ಪಂದ್ಯದೊಂದಿಗೆ ಏಷ್ಯಾಕಪ್ ಅಭಿಯಾನ ಆರಂಭಿಸುತ್ತಿದೆ. ಉಭಯ ತಂಡಗಳು ಒಂದೇ ಗ್ರೂಪ್​ನಲ್ಲಿದ್ದು, ಎರಡೂ ತಂಡಗಳು ಮುಂದಿನ ಹಂತಕ್ಕೇರಿದರೆ ಮತ್ತೆ ಮುಖಾಮುಖಿಯಾಗಲಿದೆ.

Asia Cup 2022: ಏಷ್ಯಾಕಪ್​ ಬಹಿಷ್ಕರಿಸಿದ್ದ ಟೀಮ್ ಇಂಡಿಯಾ..!
India
TV9 Web
| Edited By: |

Updated on: Aug 25, 2022 | 12:00 PM

Share

Asia Cup 2022: 15ನೇ ಸೀಸನ್ ಏಷ್ಯಾಕಪ್​ಗಾಗಿ ಯುಎಇನ ದುಬೈ ಇಂಟರ್​ನ್ಯಾಷನಲ್ ಕ್ರಿಕೆಟ್ ಸ್ಟೇಡಿಯಂ ಹಾಗೂ ಶಾರ್ಜಾ ಕ್ರಿಕೆಟ್ ಮೈದಾನ ಸಜ್ಜಾಗಿ ನಿಂತಿದೆ. ಈಗಾಗಲೇ ಈ ಟೂರ್ನಿಗಾಗಿ ಭಾರತ, ಪಾಕಿಸ್ತಾನ್, ಹಾಂಕಾಂಗ್, ಶ್ರೀಲಂಕಾ, ಬಾಂಗ್ಲಾದೇಶ್ ಹಾಗೂ ಅಫ್ಘಾನಿಸ್ತಾನ್ ತಂಡಗಳು ಯುಎಇಗೆ ಬಂದಿಳಿದಿದ್ದಾರೆ. ಈ ಆರು ತಂಡಗಳಲ್ಲಿ ಈ ಬಾರಿ ಕೂಡ ಏಷ್ಯಾಕಪ್ ಗೆಲ್ಲುವ ಫೇವರೇಟ್ ತಂಡಗಳಲ್ಲಿ ಪೈಕಿ ಟೀಮ್ ಇಂಡಿಯಾ (Team India) ಮುಂಚೂಣಿಯಲ್ಲಿದೆ. ಏಕೆಂದರೆ ಏಷ್ಯಾಕಪ್​ನಲ್ಲಿ ಪ್ರಬಲ ತಂಡವಾಗಿ ಗುರುತಿಸಿಕೊಂಡಿರುವ ಟೀಮ್ ಇಂಡಿಯಾ ಇದುವರೆಗೆ 7 ಬಾರಿ ಚಾಂಪಿಯನ್ ಪಟ್ಟ ಅಲಂಕರಿಸಿದೆ. ಇನ್ನು ಶ್ರೀಲಂಕಾ 5 ಬಾರಿ ಹಾಗೂ ಪಾಕಿಸ್ತಾನ್ 2 ಬಾರಿ ಪ್ರಶಸ್ತಿ ಗೆದ್ದುಕೊಂಡಿದೆ.

ವಿಶೇಷ ಎಂದರೆ ಏಷ್ಯಾಕಪ್​ 14 ಸೀಸನ್​ ಕಳೆದಿದ್ದರೂ ಟೀಮ್ ಇಂಡಿಯಾ 13 ಬಾರಿ ಮಾತ್ರ ಕಾಣಿಸಿಕೊಂಡಿದೆ. ಅಂದರೆ ಒಂದು ಏಷ್ಯಾಕಪ್​ನಿಂದ ಭಾರತ ತಂಡ ಹಿಂದೆ ಸರಿದಿದಿತ್ತು. ಹಾಗಿದ್ರೆ ಏಷ್ಯಾಕಪ್​ನ ಇತಿಹಾಸವೇನು? ಭಾರತ ಯಾವಾಗ ಚಾಂಪಿಯನ್ ಆಯಿತು ಎಂಬುದರ ಕಂಪ್ಲೀಟ್ ಡಿಟೇಲ್ಸ್ ಇಲ್ಲಿದೆ.

ಆರಂಭಿಕ ವರ್ಷಗಳು:

ಏಷ್ಯಾಕಪ್​ ಪಂದ್ಯಾವಳಿಯನ್ನು 1984 ರಲ್ಲಿ ಯುಎಇನಲ್ಲಿ ಆರಂಭಿಸಲಾಯಿತು. ಆಗಸ್ಟ್ 1983ರ ವಿಶ್ವಕಪ್ ಗೆದ್ದು ಬೀಗಿದ್ದ ಟೀಮ್ ಇಂಡಿಯಾ ಏಷ್ಯಾಕಪ್​ನಲ್ಲೂ ಪ್ರಾಬಲ್ಯ ಮೆರೆಯಿತು. ಆದರೆ ಅಂದು ಏಷ್ಯಾಕಪ್​ ಆಡಿದ್ದು ಕೇವಲ 3 ದೇಶಗಳು ಮಾತ್ರ. ಭಾರತ, ಶ್ರೀಲಂಕಾ ಮತ್ತು ಪಾಕಿಸ್ತಾನ ಭಾಗವಹಿಸಿದ್ದ ಈ ಟೂರ್ನಿಯಲ್ಲಿ ಭಾರತವು ಚಾಂಪಿಯನ್ ಪಟ್ಟ ಅಲಂಕರಿಸಿತ್ತು.

ಬಹಿಷ್ಕಾರ:

ಮೊದಲ ಏಷ್ಯಾಕಪ್ ಚಾಂಪಿಯನ್ ಆಗಿದ್ದ ಭಾರತವು 2ನೇ ಏಷ್ಯಾಕಪ್ ಆಡಿರಲಿಲ್ಲ. 1986 ರಲ್ಲಿ ಶ್ರೀಲಂಕಾದ ನಡೆದಿದ್ದ ಈ ಟೂರ್ನಿಯಿಂದ ಟೀಮ್ ಇಂಡಿಯಾ ಹಿಂದೆ ಸರಿಯಿತು. ಭಾರತ ಮತ್ತು ಶ್ರೀಲಂಕಾ ನಡುವಿನ ರಾಜತಾಂತ್ರಿಕ ಸಂಬಂಧಗಳು ಹದಗೆಟ್ಟಿದ್ದ ಪರಿಣಾಮ ಭಾರತ ತಂಡವು 1986ರ ಏಷ್ಯಾಕಪ್​ನಲ್ಲಿ ಭಾಗವಹಿಸಿರಲಿಲ್ಲ.

ರೌಂಡ್ ರಾಬಿನ್ ಸ್ವರೂಪ:

1988 ರಲ್ಲಿ ಬಾಂಗ್ಲಾದೇಶದಲ್ಲಿ ನಡೆದ ಏಷ್ಯಾಕಪ್​ ಅನ್ನು ರೌಂಡ್ ರಾಬಿನ್ ಸ್ವರೂಪದಲ್ಲಿ ಆಡಲಾಯಿತು. ಟೇಬಲ್ ಟಾಪರ್ಸ್​ ಆಗಿ ಕಾಣಿಸಿಕೊಂಡ ಭಾರತವು ಫೈನಲ್​ನಲ್ಲಿ ಶ್ರೀಲಂಕಾವನ್ನು ಸೋಲಿಸಿ ಟೀಮ್ ಇಂಡಿಯಾ ಪ್ರಶಸ್ತಿ ಗೆದ್ದುಕೊಂಡಿತು.

ಬಹಿಷ್ಕಾರ-2:

ಏಷ್ಯಾಕಪ್​ನಲ್ಲಿ 1991 ರಲ್ಲಿ ಮತ್ತೆ ಬಹಿಷ್ಕಾರದ ಧ್ವನಿ ಪ್ರತಿಧ್ವನಿಸಿತು. ಭಾರತ ಮತ್ತು ಪಾಕಿಸ್ತಾನದ ನಡುವಿನ ರಾಜತಾಂತ್ರಿಕ ಸಂಬಂಧಗಳು ಹದಗೆಟ್ಟಿದ್ದರಿಂದ ಪಾಕ್ ತಂಡವು ಪಂದ್ಯಾವಳಿಯಿಂದ ಹಿಂದೆ ಸರಿಯಿತು. ಇನ್ನು ಈ ಟೂರ್ನಿಯಲ್ಲಿ ಬಾಂಗ್ಲಾದೇಶವನ್ನು ಮಣಿಸಿ ಭಾರತ ಮೂರನೇ ಬಾರಿ ಏಷ್ಯಾಕಪ್ ಗೆದ್ದುಕೊಂಡಿತು.

ಪ್ರಶಸ್ತಿ ಬರ: 1984, 1988, 1991, 1995 ರಲ್ಲಿ ಏಷ್ಯಾಕಪ್ ಗೆದ್ದ ಭಾರತ 1997 ರಿಂದ 2008 ರವರೆಗೆ ಮತ್ತೆ ಪ್ರಶಸ್ತಿ ಗೆದ್ದಿರಲಿಲ್ಲ ಎಂಬುದೇ ಅಚ್ಚರಿ. ಈ ವೇಳೆ ಮೂರು ಬಾರಿ ಫೈನಲ್​ ಪ್ರವೇಶಿಸಿದ್ದ ಭಾರತ ಪರಾಜಯಗೊಂಡಿತ್ತು. ವಿಶೇಷ ಎಂದರೆ ಭಾರತವನ್ನು ಮಣಿಸಿ ಮೂರು ಬಾರಿ ಕೂಡ ಶ್ರೀಲಂಕಾ ತಂಡವೇ ಚಾಂಪಿಯನ್ ಪಟ್ಟ ಅಲಂಕರಿಸಿತ್ತು.

ಟೀಮ್ ಇಂಡಿಯಾ ಮತ್ತೆ ಚಾಂಪಿಯನ್​:

ಸುದೀರ್ಘ 10 ವರ್ಷಗಳ ಬಳಿಕ ಟೀಮ್ ಇಂಡಿಯಾ 2010 ರಲ್ಲಿ ಧೋನಿ ನಾಯಕತ್ವದಲ್ಲಿ ಮತ್ತೆ ಚಾಂಪಿಯನ್ ಪಟ್ಟ ಅಲಂಕರಿಸಿತು. ಅದು ಕೂಡ ಶ್ರೀಲಂಕಾವನ್ನು ಮಣಿಸಿ ಎಂಬುದು ವಿಶೇಷ. ಇದಾದ ಬಳಿಕ ಭಾರತ 2016 ಮತ್ತು 2018 ರಲ್ಲಿ ಚಾಂಪಿಯನ್ ಪಟ್ಟ ಅಲಂಕರಿಸಿದೆ. ಈ ಮೂಲಕ 7 ಬಾರಿ ಏಷ್ಯಾಕಪ್ ಗೆದ್ದ ತಂಡ ಎಂಬ ದಾಖಲೆಯನ್ನು ಟೀಮ್ ಇಂಡಿಯಾ ಬರೆದಿದೆ.

ಈ ಬಾರಿ ಭಾರತ ತಂಡವು ಪಾಕಿಸ್ತಾನ್ ವಿರುದ್ದದ ಪಂದ್ಯದೊಂದಿಗೆ ಏಷ್ಯಾಕಪ್ ಅಭಿಯಾನ ಆರಂಭಿಸುತ್ತಿದೆ. ಉಭಯ ತಂಡಗಳು ಒಂದೇ ಗ್ರೂಪ್​ನಲ್ಲಿದ್ದು, ಎರಡೂ ತಂಡಗಳು ಮುಂದಿನ ಹಂತಕ್ಕೇರಿದರೆ ಮತ್ತೆ ಮುಖಾಮುಖಿಯಾಗಲಿದೆ. ಹಾಗೆಯೇ ಫೈನಲ್ ಪ್ರವೇಶಿಸಿದರೆ ಭಾರತ-ಪಾಕ್ ನಡುವಣ 3 ಪಂದ್ಯವನ್ನು ವೀಕ್ಷಿಸುವ ಅವಕಾಶ ಈ ಬಾರಿ ಕ್ರಿಕೆಟ್ ಪ್ರೇಮಿಗಳಿಗೆ ಸಿಗಲಿದೆ.

Follow Us
Web contact
Web contact

TV9 Kannada

Read More
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?