AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Asia Cup 2022: ಬಾಂಗ್ಲಾ ತಂಡವನ್ನು ಬಗ್ಗು ಬಡಿದು ಸೂಪರ್-4 ಗೆ ಎಂಟ್ರಿ ಕೊಟ್ಟ ಅಫ್ಘಾನಿಸ್ತಾನ್

Afghanistan vs Bangladesh: ಸದ್ಯ ಮೊದಲ ಸುತ್ತಿನ ಪಂದ್ಯಗಳು ನಡೆಯುತ್ತಿದ್ದು, ಈ ಸುತ್ತಿನ ಎರಡು ಗ್ರೂಪ್​ಗಳಿಂದ ಮೊದಲೆರಡು ಸ್ಥಾನ ಪಡೆಯುವ ನಾಲ್ಕು ತಂಡಗಳು ಸೂಪರ್-4 ಹಂತದಲ್ಲಿ ಆಡಲಿದೆ.

Asia Cup 2022: ಬಾಂಗ್ಲಾ ತಂಡವನ್ನು ಬಗ್ಗು ಬಡಿದು ಸೂಪರ್-4 ಗೆ ಎಂಟ್ರಿ ಕೊಟ್ಟ ಅಫ್ಘಾನಿಸ್ತಾನ್
AFG vs BAN
TV9 Web
| Edited By: |

Updated on: Aug 31, 2022 | 10:25 AM

Share

Asia Cup 2022: ಏಷ್ಯಾಕಪ್​ನ 3ನೇ ಪಂದ್ಯದಲ್ಲಿ ಬಾಂಗ್ಲಾದೇಶ್ ತಂಡವನ್ನು ಬಗ್ಗು ಬಡಿಯುವ ಮೂಲಕ ಅಫ್ಘಾನಿಸ್ತಾನ್ ತಂಡ ಸೂಪರ್-4 ಹಂತಕ್ಕೇರಿದೆ. ಬುಧವಾರ ಶಾರ್ಜಾ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆದ ಈ ಪಂದ್ಯದಲ್ಲಿ ಟಾಸ್ ಗೆದ್ದ ಬಾಂಗ್ಲಾ ತಂಡದ ನಾಯಕ ಶಕೀಬ್ ಅಲ್ ಹಸನ್ ಬ್ಯಾಟಿಂಗ್ ಆಯ್ದುಕೊಂಡಿದ್ದರು. ಆದರೆ ಪವರ್​ಪ್ಲೇನಲ್ಲೇ ಮೊದಲ ಮೂರು ವಿಕೆಟ್​ಗಳನ್ನು ಉರುಳಿಸುವ ಮೂಲಕ ಅಫ್ಘಾನಿಸ್ತಾನ್ ತಂಡಕ್ಕೆ ಮುಜೀಬ್ ಉರ್ ರಹಮಾನ್ ಆರಂಭಿಕ ಯಶಸ್ಸು ತಂದುಕೊಟ್ಟರು. ಕೇವಲ 23 ರನ್​ಗಳಿಗೆ 3 ವಿಕೆಟ್ ಕಳೆದುಕೊಂಡಿದ್ದ ಬಾಂಗ್ಲಾ ತಂಡಕ್ಕೆ ಆ ಬಳಿಕ ರಶೀದ್ ಖಾನ್ ಸಹ ಶಾಕ್ ನೀಡಿದರು.

7ನೇ ಓವರ್​ನಲ್ಲಿ ಮುಷ್ಫಿಕುರ್​ ರಹೀಮ್​ರನ್ನು ಎಲ್​ಬಿ ಬಲೆಗೆ ಬೀಳಿಸಿದ ರಶೀದ್ ಖಾನ್ ಆ ಬಳಿಕ ಆಸೀಫ್ ಹುಸೇನ್​ಗೂ ಪೆವಿಲಿಯನ್ ಹಾದಿ ತೋರಿಸಿದರು. ಈ ಮೂಲಕ ಅಫ್ಘಾನಿಸ್ತಾನ್ ಸ್ಪಿನ್ನರ್​ಗಳು ಕೇವಲ 53 ರನ್​ ನೀಡಿ 5 ಪ್ರಮುಖ ವಿಕೆಟ್​ಗಳನ್ನು ಕಬಳಿಸಿದ್ದರು. ಈ ಹಂತದಲ್ಲಿ ಜೊತೆಗೂಡಿದ ಮೊಹಮ್ಮದುಲ್ಲಾ ಹಾಗೂ ಮೊಸದೆಕ್ ಹುಸೇನ್ ತಂಡಕ್ಕೆ ಆಸರೆಯಾದರು. 36 ರನ್​ಗಳ ಜೊತೆಯಾಟವಾಡಿದ ಈ ಜೋಡಿಯನ್ನು ಬೇರ್ಪಡಿಸುವಲ್ಲಿ ಕೊನೆಗೂ ರಶೀದ್ ಖಾನ್ ಯಶಸ್ವಿಯಾದರು.

ಪಂದ್ಯದ 16ನೇ ಓವರ್​ನಲ್ಲಿ ದಾಳಿಗಿಳಿದ ರಶೀದ್ ಖಾನ್ ಮೊಹಮ್ಮದುಲ್ಲಾ (25) ವಿಕೆಟ್ ಪಡೆಯುವ ಮೂಲಕ ತಂಡಕ್ಕೆ 6ನೇ ಯಶಸ್ಸು ತಂದುಕೊಟ್ಟರು. ಇದಾಗ್ಯೂ ಅಂತಿಮ ಓವರ್​ಗಳ ವೇಳೆ 31 ಎಸೆತಗಳಲ್ಲಿ 4 ಫೋರ್ ಹಾಗೂ 1 ಸಿಕ್ಸ್​ನೊಂದಿಗೆ 48 ರನ್​ ಬಾರಿಸುವ ಮೂಲಕ ಮೊಸದೆಕ್ ಹುಸೇನ್ ಭರ್ಜರಿ ಬ್ಯಾಟಿಂಗ್ ಪ್ರದರ್ಶಿಸಿದರು. ಪರಿಣಾಮ ನಿಗದಿತ 20 ಓವರ್​ಗಳಲ್ಲಿ ಬಾಂಗ್ಲಾದೇಶ್ ತಂಡವು 7 ವಿಕೆಟ್ ಕಳೆದುಕೊಂಡು 127 ರನ್ ಕಲೆಹಾಕಿತು.

ಇದನ್ನೂ ಓದಿ
Image
RCB ತಂಡದ ಮೊದಲ ಪ್ಲೇಯಿಂಗ್ ಇಲೆವೆನ್​ನಲ್ಲಿ ಯಾರೆಲ್ಲಾ ಇದ್ದರು ಗೊತ್ತಾ?
Image
Team India: ಟೀಮ್ ಇಂಡಿಯಾದ ಸರ್ವಶ್ರೇಷ್ಠ ಆರಂಭಿಕ ಆಟಗಾರ ಯಾರು ಗೊತ್ತಾ?
Image
Sanju Samson: ಧೋನಿ, ದ್ರಾವಿಡ್​ಗೂ ಸಾಧ್ಯವಾಗದ ದಾಖಲೆ ನಿರ್ಮಿಸಿದ ಸಂಜು ಸ್ಯಾಮ್ಸನ್
Image
T20 World Cup 2022: ಟಿ20 ವಿಶ್ವಕಪ್​ನಲ್ಲಿ ಕಣಕ್ಕಿಳಿಯುವ 16 ತಂಡಗಳು ಫೈನಲ್

ಸಾಧಾರಣ ಗುರಿ ಪಡೆದ ಅಫ್ಘಾನಿಸ್ತಾನ್ ತಂಡ ಕೂಡ ಉತ್ತಮ ಆರಂಭ ಪಡೆದಿರಲಿಲ್ಲ. ಆರಂಭಿಕ ಆಟಗಾರ ಗುರ್ಬಾಜ್ 5ನೇ ಓವರ್​ನಲ್ಲಿ ಸ್ಟಂಪ್ ಔಟ್ ಆಗುವ ಮೂಲಕ ಹೊರನಡೆದರು. ಅಷ್ಟೇ ಅಲ್ಲದೆ ಮೊದಲ ಹತ್ತು ಓವರ್​ಗಳಲ್ಲಿ ಸಂಪೂರ್ಣ ಹಿಡಿತ ಸಾಧಿಸಿದ ಬಾಂಗ್ಲಾ ಬೌಲರ್​ಗಳು ನೀಡಿದ್ದು ಕೇವಲ 45 ರನ್​ಗಳು ಮಾತ್ರ.

ಅಷ್ಟೇ ಅಲ್ಲದೆ 10ನೇ ಓವರ್​ನಲ್ಲಿ ಮೊಸದೆಕ್ ಹುಸೇನ್ ಎಸೆತದಲ್ಲಿ ಝಝೈ (23) ಕೂಡ ವಿಕೆಟ್ ಒಪ್ಪಿಸಿದ್ದರು. ಇನ್ನು ನಾಯಕ ಮೊಹಮ್ಮದ್ ನಬಿ 8 ರನ್​ಗಳಿಸಿ ಸೈಫುದ್ದೀನ್​ ಎಸೆತಕ್ಕೆ ಎಲ್​ಬಿಡಬ್ಲ್ಯೂ ಆದರು. ಈ ವೇಳೆ 13 ಓವರ್​ಗಳಲ್ಲಿ ಅಫ್ಘಾನಿಸ್ತಾನ್ ತಂಡ ಕಲೆಹಾಕಿದ್ದು ಕೇವಲ 62 ರನ್ ಮಾತ್ರ.

ಆದರೆ ಕೊನೆಯ 7 ಓವರ್​ಗಳಲ್ಲಿ ಇಡೀ ಪಂದ್ಯದ ಚಿತ್ರಣ ಬದಲಿಸಿದ್ದು ನಜೀಬುಲ್ಲಾ ಝರ್ದಾನ್. ಕ್ರೀಸ್​ಗೆ ಆಗಸುತ್ತಿದ್ದಂತೆ ಸಿಡಿಲಬ್ಬರದ ಬ್ಯಾಟಿಂಗ್ ಪ್ರದರ್ಶಿಸಿದ ಝರ್ದಾನ್ ಬಾಂಗ್ಲಾ ಬೌಲರ್​ಗಳ ಬೆಂಡೆತ್ತಿದ್ದರು. ಸಿಕ್ಸ್​-ಫೋರ್​ಗಳನ್ನು ಸಿಡಿಸುವ ಮೂಲಕ ಸೋಲಿನ ಸುಳಿಯಲ್ಲಿ ಸಿಲುಕಿದ್ದ ಅಫ್ಘಾನ್ ತಂಡವನ್ನು ಮೇಲೆತ್ತಿದರು.

ಇತ್ತ ಝರ್ದಾನ್ ಅಬ್ಬರಕ್ಕೆ ಬಾಂಗ್ಲಾ ಬೌಲರ್​ಗಳು ಲಯ ತಪ್ಪಿದರು. ಇದರ ಸಂಪೂರ್ಣ ಲಾಭ ಪಡೆದ ಎಡಗೈ ದಾಂಡಿಗ ಝರ್ದಾನ್ 6 ಸಿಕ್ಸ್​ ಹಾಗೂ 1 ಫೋರ್​ನೊಂದಿಗೆ ಕೇವಲ 17 ಎಸೆತಗಳಲ್ಲಿ ಅಜೇಯ 43 ರನ್​ ಚಚ್ಚಿದರು. ಪರಿಣಾಮ 18.3 ಓವರ್​ಗಳಲ್ಲಿ 3 ವಿಕೆಟ್ ಕಳೆದುಕೊಂಡು ಅಫ್ಘಾನಿಸ್ತಾನ್ ತಂಡವು 131 ರನ್​ಗಳಿಸಿ 7 ವಿಕೆಟ್​ಗಳ ಭರ್ಜರಿ ಜಯ ಸಾಧಿಸಿತು. ಈ ಗೆಲುವಿನೊಂದಿಗೆ ಅಫ್ಘಾನಿಸ್ತಾನ್ ತಂಡವು ಗ್ರೂಪ್-ಬಿ ನಿಂದ ಸೂಪರ್- 4 ಹಂತಕ್ಕೇರಿದೆ.

ಇನ್ನು ಇಂದಿನ ಪಂದ್ಯದಲ್ಲಿ ಹಾಂಗ್ ಕಾಂಗ್ ವಿರುದ್ದ ಟೀಮ್ ಇಂಡಿಯಾ ಗೆಲುವು ದಾಖಲಿಸಿದರೆ ಗ್ರೂಪ್-ಎ ನಿಂದ ಸೂಪರ್-4 ಹಂತಕ್ಕೇರಬಹುದು. ಸದ್ಯ ಮೊದಲ ಸುತ್ತಿನ ಪಂದ್ಯಗಳು ನಡೆಯುತ್ತಿದ್ದು, ಈ ಸುತ್ತಿನ ಎರಡು ಗ್ರೂಪ್​ಗಳಿಂದ ಮೊದಲೆರಡು ಸ್ಥಾನ ಪಡೆಯುವ ನಾಲ್ಕು ತಂಡಗಳು ಸೂಪರ್-4 ಹಂತದಲ್ಲಿ ಆಡಲಿದೆ. ಅದರಂತೆ ಮುಂದಿನ ಹಂತದಲ್ಲಿ ನಾಲ್ಕು ತಂಡಗಳ ನಡುವೆ ರೌಂಡ್ ರಾಬಿನ್ ಸ್ವರೂಪದಲ್ಲಿ ಪಂದ್ಯಗಳು ನಡೆಯಲಿದೆ. ಸೂಪರ್-4 ಹಂತದ ಪಾಯಿಂಟ್ ಟೇಬಲ್​ನಲ್ಲಿ ಮೊದಲೆರಡು ಸ್ಥಾನ ಪಡೆಯುವ ತಂಡಗಳು ಫೈನಲ್ ಆಡಲಿವೆ.

ಪೊಲೀಸ್ ಠಾಣೆಗೆ ಬೆಂಕಿ ಹಚ್ಚುತ್ತೇನೆ; ಬಜರಂಗದಳದ ವ್ಯಕ್ತಿಯಿಂದ ಬೆದರಿಕೆ
ಪೊಲೀಸ್ ಠಾಣೆಗೆ ಬೆಂಕಿ ಹಚ್ಚುತ್ತೇನೆ; ಬಜರಂಗದಳದ ವ್ಯಕ್ತಿಯಿಂದ ಬೆದರಿಕೆ
ಬಸ್​​ನಲ್ಲಿ 240 ಗ್ರಾಂ ಚಿನ್ನ ಕದ್ದಾಕೆ ಸಿಕ್ಕಿಬಿದ್ದಿದ್ಹೇಗೆ ಗೊತ್ತಾ?
ಬಸ್​​ನಲ್ಲಿ 240 ಗ್ರಾಂ ಚಿನ್ನ ಕದ್ದಾಕೆ ಸಿಕ್ಕಿಬಿದ್ದಿದ್ಹೇಗೆ ಗೊತ್ತಾ?
ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ
ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?
ಹಿಮಾಚಲದ ಕಟ್ಟಡದಲ್ಲಿ ಬೆಂಕಿ ಅವಘಡ; 8 ವರ್ಷದ ಮಗು ಸಾವು, ಹಲವರಿಗೆ ಗಾಯ
ಹಿಮಾಚಲದ ಕಟ್ಟಡದಲ್ಲಿ ಬೆಂಕಿ ಅವಘಡ; 8 ವರ್ಷದ ಮಗು ಸಾವು, ಹಲವರಿಗೆ ಗಾಯ