AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

MS Dhoni: ಮತ್ತೆ ಟೀಮ್ ಇಂಡಿಯಾ ಜೊತೆ ಕೈ ಜೋಡಿಸ್ತಾರಾ ಎಂಎಸ್ ಧೋನಿ..?

Asia Cup 2022: ದ್ರಾವಿಡ್ ಅನುಪಸ್ಥಿತಿಯಲ್ಲಿ ಲಕ್ಷ್ಮಣ್ ಟೀಮ್ ಇಂಡಿಯಾ ಕೋಚ್ ಆಗಿ ಕಾಣಿಸಿಕೊಂಡಿದ್ದಾರೆ. ಆದರೆ ಈ ಬಾರಿ ನಡೆಯುತ್ತಿರುವುದು ಪ್ರಮುಖ ಟೂರ್ನಿಯಾಗಿದೆ.

MS Dhoni: ಮತ್ತೆ ಟೀಮ್ ಇಂಡಿಯಾ ಜೊತೆ ಕೈ ಜೋಡಿಸ್ತಾರಾ ಎಂಎಸ್ ಧೋನಿ..?
Ms Dhoni
TV9 Web
| Updated By: ಝಾಹಿರ್ ಯೂಸುಫ್|

Updated on: Aug 23, 2022 | 11:56 AM

Share

ಏಷ್ಯಾಕಪ್ ಆರಂಭಕ್ಕೆ ದಿನಗಳು ಮಾತ್ರ ಉಳಿದಿವೆ. ಆದರೆ ಅದಕ್ಕೂ ಮುನ್ನ ಭಾರತ ತಂಡದ ಮುಖ್ಯ ಕೋಚ್ ರಾಹುಲ್ ದ್ರಾವಿಡ್ ಕೊರೋನಾ ಸೋಂಕಿಗೆ ಒಳಗಾಗಿದ್ದಾರೆ ಎಂಬ ಸುದ್ದಿಯೊಂದು ಹೊರಬಿದ್ದಿದೆ. ಹೀಗಾಗಿ ಏಷ್ಯಾಕಪ್​ಗೆ ದ್ರಾವಿಡ್ ಅಲಭ್ಯರಾಗುವ ಸಾಧ್ಯತೆಯಿದೆ. ಇದರ ಬೆನ್ನಲ್ಲೇ ಟೀಮ್ ಇಂಡಿಯಾ ತರಬೇತುದಾರ ಯಾರಾಗಲಿದ್ದಾರೆ ಎಂಬ ಪ್ರಶ್ನೆಯೊಂದು ಹುಟ್ಟಿಕೊಂಡಿದೆ. ಈ ಪ್ರಶ್ನೆಗಳಿಗೆ ಸದ್ಯ 2 ಉತ್ತರಗಳು ಸಿಗುತ್ತಿರುವುದು ವಿಶೇಷ.

ಒಂದು ವೇಳೆ ರಾಹುಲ್ ದ್ರಾವಿಡ್ ಸಂಪೂರ್ಣವಾಗಿ ಏಷ್ಯಾಕಪ್​ನಿಂದ ಹೊರಗುಳಿದರೆ, ಟೀಮ್ ಇಂಡಿಯಾ ಬದಲಿ ಕೋಚ್ ಅನ್ನು ಆಯ್ಕೆ ಮಾಡಲಿದೆ. ಇಲ್ಲಿ ಕೇಳಿ ಬರುತ್ತಿರುವ ಮೊದಲ ಹೆಸರೆಂದರೆ ವಿವಿಎಸ್​ ಲಕ್ಷ್ಮಣ್. ಈ ಹಿಂದೆ ಕೂಡ ದ್ರಾವಿಡ್ ಅನುಪಸ್ಥಿತಿಯಲ್ಲಿ ಲಕ್ಷ್ಮಣ್ ಟೀಮ್ ಇಂಡಿಯಾ ಕೋಚ್ ಆಗಿ ಕಾಣಿಸಿಕೊಂಡಿದ್ದಾರೆ. ಆದರೆ ಈ ಬಾರಿ ನಡೆಯುತ್ತಿರುವುದು ಪ್ರಮುಖ ಟೂರ್ನಿಯಾಗಿದೆ. ಹೀಗಾಗಿಯೇ ಬಿಸಿಸಿಐ ಲಕ್ಷ್ಮಣ್ ಅವರಿಗೆ ಸಂಪೂರ್ಣ ಜವಾಬ್ದಾರಿವಹಿಸುವುದು ಕೂಡ ಅನುಮಾನ ಎನ್ನಲಾಗುತ್ತಿದೆ.

ಹೀಗಾಗಿ ಟೀಮ್ ಇಂಡಿಯಾ ಜೊತೆ ಮಹೇಂದ್ರ ಸಿಂಗ್ ಧೋನಿ ಅವರನ್ನು ಯುಎಇಗೆ ಕಳುಹಿಸಿಕೊಡುವ ಸಾಧ್ಯತೆಯಿದೆ. ಈ ಹಿಂದೆ ಟಿ20 ವಿಶ್ವಕಪ್​ನಲ್ಲಿ ಧೋನಿ ಭಾರತ ತಂಡದ ಮೆಂಟರ್ ಆಗಿ ಕಾರ್ಯ ನಿರ್ವಹಿಸಿದ್ದರು. ಇದೀಗ ಮತ್ತೊಮ್ಮೆ ಮಾರ್ಗದರ್ಶಕರಾಗಿ ಭಾರತ ತಂಡದ ಜೊತೆ ಪ್ರಯಾಣಿಸುವ ಸಾಧ್ಯತೆಯನ್ನು ತಳ್ಳಿಹಾಕುವಂತಿಲ್ಲ.

ಇದನ್ನೂ ಓದಿ
Image
RCB ತಂಡದ ಮೊದಲ ಪ್ಲೇಯಿಂಗ್ ಇಲೆವೆನ್​ನಲ್ಲಿ ಯಾರೆಲ್ಲಾ ಇದ್ದರು ಗೊತ್ತಾ?
Image
Team India: ಟೀಮ್ ಇಂಡಿಯಾದ ಸರ್ವಶ್ರೇಷ್ಠ ಆರಂಭಿಕ ಆಟಗಾರ ಯಾರು ಗೊತ್ತಾ?
Image
Sanju Samson: ಧೋನಿ, ದ್ರಾವಿಡ್​ಗೂ ಸಾಧ್ಯವಾಗದ ದಾಖಲೆ ನಿರ್ಮಿಸಿದ ಸಂಜು ಸ್ಯಾಮ್ಸನ್
Image
T20 World Cup 2022: ಟಿ20 ವಿಶ್ವಕಪ್​ನಲ್ಲಿ ಕಣಕ್ಕಿಳಿಯುವ 16 ತಂಡಗಳು ಫೈನಲ್

ಏಕೆಂದರೆ ಇದು ಬಹುರಾಷ್ಟ್ರೀಯ ಪಂದ್ಯಾವಳಿಯಾಗಿರುವುದರಿಂದ ವಿವಿಎಸ್​ ಲಕ್ಷ್ಮಣ್ ಜೊತೆ ಧೋನಿಯನ್ನು ಕೂಡ ತಂಡದ ಜೊತೆ ಕಳುಹಿಸಿಕೊಡಬಹುದು. ಇದರಿಂದ ಲಕ್ಷ್ಮಣ್ ಅವರ ಕೆಲಸ ಸುಲಭವಾಗುತ್ತದೆ. ಹಾಗೆಯೇ ಧೋನಿಯ ನಾಯಕತ್ವದಲ್ಲಿ ಪದಾರ್ಪಣೆ ಮಾಡಿದ ಆಟಗಾರರು ಪ್ರಸ್ತುತ ತಂಡದಲ್ಲಿದ್ದಾರೆ.

ಹಾಗೆಯೇ ಧೋನಿ ಏಷ್ಯಾಕಪ್‌ನಲ್ಲಿ ಆಡಿದ ಅನುಭವವನ್ನು ಹೊಂದಿದ್ದಾರೆ. ಜೊತೆಗೆ ಪಾಕಿಸ್ತಾನ, ಬಾಂಗ್ಲಾದೇಶ, ಶ್ರೀಲಂಕಾ, ಅಫ್ಘಾನಿಸ್ತಾನ ತಂಡಗಳ ಸಾಮರ್ಥ್ಯ ಮತ್ತು ಚಾಣಾಕ್ಷ ನಡೆಗಳ ಬಗ್ಗೆ ಹೆಚ್ಚಿನ ತಿಳುವಳಿಕೆ ಹೊಂದಿದ್ದಾರೆ. ಇದು ಟೀಮ್ ಇಂಡಿಯಾಗೆ ಪ್ರಯೋಜನವಾಗಲಿದೆ. ಹೀಗಾಗಿಯೇ ರಾಹುಲ್ ದ್ರಾವಿಡ್ ಏಷ್ಯಾಕಪ್​ನಿಂದ ಹೊರಗುಳಿದರೆ, ಮಹೇಂದ್ರ ಸಿಂಗ್ ಧೋನಿ ಟೀಮ್ ಇಂಡಿಯಾ ಜೊತೆ ಕಾಣಿಸಿಕೊಳ್ಳಲಿದ್ದಾರೆ ಎನ್ನಲಾಗುತ್ತಿದೆ.

ಪ್ರೋಮೊನಲ್ಲೇ ಶಾಕ್ ಕೊಟ್ಟ ಬಿಗ್​​ಬಾಸ್: ಮನೆಯಿಂದ ಇಬ್ಬರು ಹೊರಕ್ಕೆ
ಪ್ರೋಮೊನಲ್ಲೇ ಶಾಕ್ ಕೊಟ್ಟ ಬಿಗ್​​ಬಾಸ್: ಮನೆಯಿಂದ ಇಬ್ಬರು ಹೊರಕ್ಕೆ
ದುರಹಂಕಾರದಿಂದ ಬಿಗ್ ಬಾಸ್ ನಿರೂಪಣೆ ಬೇಡ ಅಂತ ನಾನು ಹೇಳಲಿಲ್ಲ: ಸುದೀಪ್
ದುರಹಂಕಾರದಿಂದ ಬಿಗ್ ಬಾಸ್ ನಿರೂಪಣೆ ಬೇಡ ಅಂತ ನಾನು ಹೇಳಲಿಲ್ಲ: ಸುದೀಪ್
ಯಶಸ್ವಿ ಜೈಸ್ವಾಲ್ ಸ್ಫೋಟಕ ಸೆಂಚುರಿ: ಮುಂಬೈ ದಾಖಲೆಯ ರನ್ ಚೇಸ್​
ಯಶಸ್ವಿ ಜೈಸ್ವಾಲ್ ಸ್ಫೋಟಕ ಸೆಂಚುರಿ: ಮುಂಬೈ ದಾಖಲೆಯ ರನ್ ಚೇಸ್​
ಮೊಟ್ಟೆಗಳಲ್ಲಿ ಕ್ಯಾನ್ಸರ್ ಕಾರಕ ಅಂಶ ಪತ್ತೆ?: ಭಾರಿ ಚರ್ಚೆ
ಮೊಟ್ಟೆಗಳಲ್ಲಿ ಕ್ಯಾನ್ಸರ್ ಕಾರಕ ಅಂಶ ಪತ್ತೆ?: ಭಾರಿ ಚರ್ಚೆ
‘ಮಾರ್ಕ್’ ಸಿನಿಮಾದಲ್ಲಿ ಹೀರೋಯಿನ್ ಇಲ್ಲ ಯಾಕೆ? ಉತ್ತರಿಸಿದ ಕಿಚ್ಚ ಸುದೀಪ್
‘ಮಾರ್ಕ್’ ಸಿನಿಮಾದಲ್ಲಿ ಹೀರೋಯಿನ್ ಇಲ್ಲ ಯಾಕೆ? ಉತ್ತರಿಸಿದ ಕಿಚ್ಚ ಸುದೀಪ್
ಚುನಾವಣೆಯಲ್ಲಿ ಸೋತಿದ್ದಕ್ಕೆ ಮೀಸೆ ಬೋಳಿಸಿಕೊಂಡ ಎಲ್‌ಡಿಎಫ್ ಕಾರ್ಯಕರ್ತ
ಚುನಾವಣೆಯಲ್ಲಿ ಸೋತಿದ್ದಕ್ಕೆ ಮೀಸೆ ಬೋಳಿಸಿಕೊಂಡ ಎಲ್‌ಡಿಎಫ್ ಕಾರ್ಯಕರ್ತ
ಶಾಲೆಯ ಬಳಿ ಸೆಕ್ಯುರಿಟಿಯ ಭುಜಕ್ಕೆ ಕಚ್ಚಿದ ಬೀದಿ ನಾಯಿ
ಶಾಲೆಯ ಬಳಿ ಸೆಕ್ಯುರಿಟಿಯ ಭುಜಕ್ಕೆ ಕಚ್ಚಿದ ಬೀದಿ ನಾಯಿ
ರೈಲಿನಲ್ಲಿ ಟಾಯ್ಲೆಟ್​ನಿಂದ ಹೊರಬರಲಾರದೆ ಪೊಲೀಸರಿಗೆ ಕರೆ ಮಾಡಿದ ಮಹಿಳೆ
ರೈಲಿನಲ್ಲಿ ಟಾಯ್ಲೆಟ್​ನಿಂದ ಹೊರಬರಲಾರದೆ ಪೊಲೀಸರಿಗೆ ಕರೆ ಮಾಡಿದ ಮಹಿಳೆ
ನಕಲಿ ಪೊಲೀಸರಿಗೆ ಅಸಲಿ ಖಾಕಿ ಶಾಕ್​​: ದರೋಡೆಗಿಳಿದಿದ್ದ ಗ್ಯಾಂಗ್​​ ಅರೆಸ್ಟ್
ನಕಲಿ ಪೊಲೀಸರಿಗೆ ಅಸಲಿ ಖಾಕಿ ಶಾಕ್​​: ದರೋಡೆಗಿಳಿದಿದ್ದ ಗ್ಯಾಂಗ್​​ ಅರೆಸ್ಟ್
ರಜತ್ ಪಾಪದ ಕೊಡ ತುಂಬಿದೆ, ಮನೆಯಿಂದ ಹೊರಗೆ ಕಳಿಸ್ತೀನಿ: ಗಿಲ್ಲಿ ಚಾಲೆಂಜ್
ರಜತ್ ಪಾಪದ ಕೊಡ ತುಂಬಿದೆ, ಮನೆಯಿಂದ ಹೊರಗೆ ಕಳಿಸ್ತೀನಿ: ಗಿಲ್ಲಿ ಚಾಲೆಂಜ್