AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Asia Cup Final: ಇಂದು ಏಷ್ಯಾಕಪ್ 2022 ಫೈನಲ್: ಪ್ರಶಸ್ತಿಗಾಗಿ ಶ್ರೀಲಂಕಾ-ಪಾಕಿಸ್ತಾನ ಸೆಣೆಸಾಟ

Sri Lanka vs Pakistan, Final: ಇಂದು ದುಬೈಯ ದುಬೈ ಅಂತರರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂನಲ್ಲಿ ಫೈನಲ್ ಪಂದ್ಯ ನಡೆಯಲಿದ್ದು ದಸುನ್ ಶನಕ ನಾಯಕತ್ವದ ಶ್ರೀಲಂಕಾ ಹಾಗೂ ಬಾಬರ್ ಅಜಮ್ ನೇತೃತ್ವದ ಪಾಕಿಸ್ತಾನ ತಂಡಗಳು ಮುಖಾಮುಖಿ ಆಗಲಿದೆ.

Asia Cup Final: ಇಂದು ಏಷ್ಯಾಕಪ್ 2022 ಫೈನಲ್: ಪ್ರಶಸ್ತಿಗಾಗಿ ಶ್ರೀಲಂಕಾ-ಪಾಕಿಸ್ತಾನ ಸೆಣೆಸಾಟ
SL vs PAK Asia Cup Final
TV9 Web
| Edited By: |

Updated on:Sep 11, 2022 | 8:36 AM

Share

ಹದಿನೈದನೆ ಆವೃತ್ತಿಯ ಏಷ್ಯಾಕಪ್ (Asia Cup) ಅಂತಿಮ ಘಟ್ಟಕ್ಕೆ ಬಂದುನಿಂತಿದೆ. ಇಂದು ದುಬೈಯ ದುಬೈ ಅಂತರರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂನಲ್ಲಿ ಫೈನಲ್ ಪಂದ್ಯ ನಡೆಯಲಿದ್ದು ದಸುನ್ ಶನಕ ನಾಯಕತ್ವದ ಶ್ರೀಲಂಕಾ ಹಾಗೂ ಬಾಬರ್ ಅಜಮ್ (Babar Azam) ನೇತೃತ್ವದ ಪಾಕಿಸ್ತಾನ (Sri Lanka vs Pakistan) ತಂಡಗಳು ಮುಖಾಮುಖಿ ಆಗಲಿದೆ. ಉಭಯ ತಂಡಗಳು ಸಾಕಷ್ಟು ಬಲಿಷ್ಠವಾಗಿದ್ದು ಹೈವೋಲ್ಟೇಜ್ ಮ್ಯಾಚ್ ಆಗುವುದರಲ್ಲಿ ಅನುಮಾನವಿಲ್ಲ. ಒಂದು ದಿನದ ಹಿಂದೆಯಷ್ಟೆ ಸೂಪರ್ 4 ಹಂತದ ಕೊನೆಯ ಪಂದ್ಯದಲ್ಲಿ ಲಂಕಾಪಾಕ್ ಎದುರಾಗಿತ್ತು. ಇದರಲ್ಲಿ ಲಂಕಾ 5 ವಿಕೆಟ್​ಗಳ ಭರ್ಜರಿ ಗೆಲುವು ಸಾಧಿಸಿತ್ತು. ಹೀಗಾಗಿ ಲಂಕಾ ಈ ಗೆಲುವಿನ ಆತ್ಮವಿಶ್ವಾಸದೊಂದಿಗೆ ಕಣಕ್ಕಿಳಿಯಲಿದೆ. ಇತ್ತ ಪಾಕಿಸ್ತಾನಕ್ಕೆ ಪ್ರಶಸ್ತಿ ಮುಖ್ಯವಾಗಿದೆ.

ಸೋಲಿನೊಂದಿಗೆ ಏಷ್ಯಾಕಪ್ 2022 ಟೂರ್ನಿ ಆರಂಭಿಸಿದ್ದ ಲಂಕಾ ನಿಧಾನವಾಗಿ ಲಯ ಕಂಡುಕೊಂಡಿತು. ಈಗ ಬ್ಯಾಟಿಂಗ್ಬೌಲಿಂಗ್​ನಲ್ಲಿ ಬಲಿಷ್ಠವಾಗಿ ಹೊರಹೊಮ್ಮಿದೆ. ಲಂಕಾಕ್ಕೆ ಕೂಡ ಈ ಪ್ರಶಸ್ತಿ ತುಂಬಾನೆ ಮುಖ್ಯ. ಯಾಕೆಂದರೆ ಕಳೆದ ಕೆಲ ಸಮಯಗಳಿಂದ ರಾಜಕೀಯ ಬಿಕ್ಕಟ್ಟು ಮತ್ತು ಆರ್ಥಿಕ ಸಂಕಷ್ಟದಿಂದ ಸಿಂಹಳೀಯರ ದೇಶ ನಲುಗಿದೆ. ಏಷ್ಯಾ ಕಪ್‌ ಗೆದ್ದು ತನ್ನ ದೇಶದ ಜನರ ನೋವನ್ನು ಅಲ್ಪ ಮರೆಸುವ ಅವಕಾಶ ಶನಕ ಬಳಗಕ್ಕೆ ದೊರೆತಿದೆ.

ಲಂಕಾ ಪರ ಕುಸಾಲ್‌ ಮೆಂಡಿಸ್‌ ಮತ್ತು ಪಥುಮ್‌ ನಿಸಾಂಕ ಉತ್ತಮ ಆರಂಭ ನೀಡುತ್ತಿರುವುದು ತಂಡಕ್ಕೆ ದೊಡ್ಡ ಪ್ಲಸ್ ಪಾಯಿಂಟ್. ಮಧ್ಯಮ ಕ್ರಮಾಂಕದಲ್ಲಿ ಧನುಷ್ಕಾ ಗುಣತಿಲಕ, ಭನುಕಾ ರಾಜಪಕ್ಷ ಮತ್ತು ದಸುನ್‌ ಶನಕ ಆಧಾರವಾಗುತ್ತಿದ್ದಾರೆ. ವನಿಂದು ಹಸರಂಗ ಸ್ಪಿನ್ ಜಾದು ಕೆಲಸ ಮಾಡುತ್ತಿದ್ದು ಇವರಿಗೆ ಮಹೀಶ್ ತೀಕ್ಷಣ ಉತ್ತಮ ಸಾಥ್ ನೀಡುತ್ತಿದ್ದಾರೆ. ದಿಲ್ಶಾನ್ ಮಧುಶಂಕ ಹಾಗೂ ಪ್ರಮೋದ್ ಮಧುಶನ್ ಮಾರಕ ದಾಳಿ ಸಂಘಟಿಸಬೇಕಿದೆ.

ಇದನ್ನೂ ಓದಿ
Image
ENG vs SA: 36 ರನ್​ಗಳಿಗೆ 6 ವಿಕೆಟ್ ಪತನ; ಇಂಗ್ಲೆಂಡ್ ಮಾರಕ ಬೌಲಿಂಗ್, 118 ರನ್​ಗಳಿಗೆ ಆಫ್ರಿಕಾ ಆಲೌಟ್
Image
Asia Cup 2022: ಏಷ್ಯಾಕಪ್ ಫೈನಲ್​ನಲ್ಲಿ ಕೊಹ್ಲಿ- ರಿಜ್ವಾನ್, ಭುವಿ- ನವಾಜ್ ನಡುವೆ ಜಿದ್ದಾಜಿದ್ದಿನ ಹೋರಾಟ..!
Image
ENG vs SA: ರಾಷ್ಟ್ರಗೀತೆಯಲ್ಲಿ ಬದಲಾವಣೆ; ಒಂದು ನಿಮಿಷದ ಮೌನಾಚರಣೆ ಬಳಿಕ 3 ದಿನಗಳ ಟೆಸ್ಟ್ ಆರಂಭ
Image
Duleep Trophy: 28 ಬೌಂಡರಿ, 2 ಸಿಕ್ಸರ್, 193 ರನ್! 4 ಪಂದ್ಯಗಳಲ್ಲಿ 4 ಶತಕ ಚಚ್ಚಿದ 19 ವರ್ಷದ ಬ್ಯಾಟರ್

ಇತ್ತ ಪಾಕಿಸ್ತಾನಕ್ಕೆ ನಾಯಕ ಬಾಬರ್ ಅಜಮ್ ಫಾರ್ಮ್ ದೊಡ್ಡ ಚಿಂತೆಯಾಗಿದೆ. ಈ ಬಾರಿಯ ಏಷ್ಯಾಕಪ್​ನಲ್ಲಿ ಬಾಬರ್ ಹೇಳಿಕೊಳ್ಳುವಂತಹ ಪ್ರದರ್ಶನ ನೀಡಿಲ್ಲ. ಇಂದು ಫೈನಲ್ ಕದನ ಆಗಿರುವುದರಿಂದ ಇವರ ಮೇಲೆ ಸಾಕಷ್ಟು ಒತ್ತಡವಿದೆ. ಮೊಹಮ್ಮದ್ ರಿಜ್ವಾನ್ ಕೂಡ ಎಚ್ಚರಿಕೆಯಿಂದ ಬ್ಯಾಟ್ ಬೀಸಬೇಕಿದೆ. ಫಖರ್ ಜಮನ್, ಇಫ್ತಿಖರ್ ಅಹ್ನದ್, ಕುಶ್ದಿಲ್ ಹಾಗೂ ನವಾಜ್ ಬ್ಯಾಟಿಂಗ್​ನಲ್ಲಿ ಇನ್ನಷ್ಟು ಕೊಡುಗೆ ನೀಡಬೇಕು. ಪಾಕ್‌ ತಂಡದ ಬಲ ಬೌಲಿಂಗ್‌ ವಿಭಾಗ. ನಸೀಮ್‌ ಶಾ, ಹ್ಯಾರಿಸ್‌ ರೌಫ್ ಮತ್ತು ಮೊಹಮ್ಮದ್‌ ಹಸ್ನೈನ್ ವೇಗಿಗಳಾದರೆ, ಶಾದಾಬ್‌ ಖಾನ್‌ ಮತ್ತು ಮೊಹಮ್ಮದ್‌ ನವಾಜ್‌ ಸ್ಪಿನ್ ವಿಭಾಗದಲ್ಲಿ ಮಿಂಚುತ್ತಿದ್ದಾರೆ.

ದುಬೈ ಕ್ರಿಕೆಟ್ ಸ್ಟೇಡಿಯಮ್‌ನಲ್ಲಿ ಸಾಮಾನ್ಯವಾಗಿ 160-170ರಷ್ಟು ರನ್‌ಗಳಿಸಿದರೆ ಸ್ಪರ್ಧಾತ್ಮಕ ಸ್ಕೋರ್ ಗಳಿಸಿದಂತಾಗುತ್ತದೆ. ಆದರೆ ಪಾಕಿಸ್ತಾನದ ವಿರುದ್ಧದ ಪಂದ್ಯದಲ್ಲಿ ಭಾರತ 182 ರನ್‌ಗಳ ಗುರಿ ನೀಡಿಯೂ ಅದನ್ನು ರಕ್ಷಿಸಲು ವಿಫಲವಾಗಿರುವುದು ತಂಡಕ್ಕೆ ದೊಡ್ಡ ಹಿನ್ನಡೆಯಾಗಿದೆ. ಇನ್ನು ನೇರ ಬೌಂಡರಿಗಳು ಚಿಕ್ಕದಾಗಿದ್ದು ಅದರ ಲಾಭವನ್ನು ಬ್ಯಾಟರ್‌ಗಳು ಪಡೆದುಕೊಳ್ಳಬಹುದು. ಸೀಮ್ ಹಾಗೂ ಬೌನ್ಸ್‌ಗೆ ಅನುಕೂಲವಾಗಲಿದ್ದು ಸ್ಪಿನ್ನರ್‌ಗಳಿಗೆ ಕಡಿಮೆ ನೆರವು ದೊರೆಯಲಿದೆ. ಪಂದ್ಯದ ಸಮಯದಲ್ಲಿ ಮಳೆಯಾಗುವ ಯಾವುದೇ ಸಂಭವವಿಲ್ಲ.

ಸಂಭಾವ್ಯ ಪ್ಲೇಯಿಂಗ್ XI:

ಶ್ರೀಲಂಕಾ: ದನುಷ್ಕ ಗುಣತಿಲಕ, ಪಥುಮ್‌ ನಿಸಾಂಕ, ಕುಸಲ್ ಮೆಂಡಿಸ್ (ವಿಕೆಟ್ ಕೀಪರ್), ಚರಿತ್ ಅಸಲಂಕಾ, ಭನುಕಾ ರಾಜಪಕ್ಷ, ದಸುನ್‌ ಶನಕ (ನಾಯಕ), ವನಿಂದು ಹಸರಂಗ, ಚಾಮಿಕ ಕರುಣಾರತ್ನೆ, ಮಹೀಶ ತೀಕ್ಷಣ, ದಿಲ್ಶನ್ ಮಧುಶಂಕ, ಮತೀಶ ಪತಿರಣ.

ಬಾಬರ್ ಅಜಮ್ (ನಾಯಕ), ಮೊಹಮ್ಮದ್ ರಿಜ್ವಾನ್ (ವಿಕೆಟ್‌ಕೀಪರ್), ಫಖರ್ ಜಮಾನ್, ಇಫ್ತಿಕಾರ್ ಅಹ್ಮದ್, ಶದಾಬ್ ಖಾನ್, ಮೊಹಮ್ಮದ್ ನವಾಜ್, ಆಸಿಫ್ ಅಲಿ, ಕುಶ್ದಿಲ್ ಶಾ, ಹ್ಯಾರಿಸ್ ರೌಫ್, ನಸೀಮ್ ಶಾ, ಮೊಹಮ್ಮದ್ ಹಸ್ನೈನ್.

ಪಂದ್ಯ ಆರಂಭ: ಸಂಜೆ 7.30

ನೇರ ಪ್ರಸಾರ: ಸ್ಟಾರ್‌ ಸ್ಪರ್ಟ್ಸ್ ನೆಟ್‌ವರ್ಕ್‌, ಡಿಸ್ನಿ ಪ್ಲಸ್‌ ಹಾಟ್‌.

Published On - 8:36 am, Sun, 11 September 22

ದೆಹಲಿಗೆ ಹೊರಟ ಪ್ರಧಾನಿ ಮೋದಿಗೆ ಓಮನ್​​​ನಲ್ಲಿ ಆತ್ಮೀಯ ವಿದಾಯ
ದೆಹಲಿಗೆ ಹೊರಟ ಪ್ರಧಾನಿ ಮೋದಿಗೆ ಓಮನ್​​​ನಲ್ಲಿ ಆತ್ಮೀಯ ವಿದಾಯ
ಓಮನ್​​ನಲ್ಲೂ ನಮೋ ಕ್ರೇಜ್; ಕಿಕ್ಕಿರಿದ ಭಾರತೀಯರಿಂದ ಮೋದಿ ಮೋದಿ ಘೋಷಣೆ
ಓಮನ್​​ನಲ್ಲೂ ನಮೋ ಕ್ರೇಜ್; ಕಿಕ್ಕಿರಿದ ಭಾರತೀಯರಿಂದ ಮೋದಿ ಮೋದಿ ಘೋಷಣೆ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್