AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Team India: 2 ಪಂದ್ಯ ಗೆದ್ದರೂ ಸಂಕಷ್ಟಕ್ಕೆ ಸಿಲುಕಿದ ಟೀಮ್ ಇಂಡಿಯಾ

Asia cup 2022: ಸೂಪರ್-4 ಹಂತದ ಪಂದ್ಯಗಳು ರೌಂಡ್ ರಾಬಿನ್ ಫಾರ್ಮಾಟ್​ನಲ್ಲಿ ನಡೆಯಲಿದೆ. ಇಲ್ಲಿ ಯಾವ ತಂಡ ಹೆಚ್ಚು ಪಾಯಿಂಟ್ ಗಳಿಸಲಿದೆಯೋ ಆ ತಂಡಗಳು ಫೈನಲ್​ಗೆ ಪ್ರವೇಶಿಸಲಿದೆ.

Team India: 2 ಪಂದ್ಯ ಗೆದ್ದರೂ ಸಂಕಷ್ಟಕ್ಕೆ ಸಿಲುಕಿದ ಟೀಮ್ ಇಂಡಿಯಾ
Team India
TV9 Web
| Edited By: |

Updated on:Sep 01, 2022 | 1:35 PM

Share

Asia Cup 2022: ಈ ಬಾರಿಯ ಏಷ್ಯಾಕಪ್​ನಲ್ಲಿ ಸತತ ಎರಡು ಪಂದ್ಯಗಳನ್ನು ಗೆಲ್ಲುವ ಮೂಲಕ ಟೀಮ್ ಇಂಡಿಯಾ (Team India) ಸೂಪರ್​-4 ಗೆ ಎಂಟ್ರಿ ಕೊಟ್ಟಿದೆ. ಆದರೆ ಈ ಎರಡೂ ಪಂದ್ಯಗಳಲ್ಲಿ ಟೀಮ್ ಇಂಡಿಯಾ ಹೇಳಿಕೊಳ್ಳುವಂತಹ ಪ್ರದರ್ಶನ ನೀಡಿಲ್ಲ ಎಂಬುದೇ ಸತ್ಯ. ಅಂದರೆ ಪಾಕಿಸ್ತಾನ್ ವಿರುದ್ದ ರೋಚಕ ಜಯ ಸಾಧಿಸಿದರೆ, ಹಾಂಗ್ ಕಾಂಗ್ ವಿರುದ್ದ ಟೀಮ್ ಇಂಡಿಯಾ ಬೌಲರ್​ಗಳು ಕಳಪೆ ಪ್ರದರ್ಶನ ನೀಡಿದ್ದರು. ಇನ್ನು ಬ್ಯಾಟಿಂಗ್ ವಿಭಾಗದಲ್ಲಿರುವ ಲೋಪಗಳು ಕೂಡ ಅನಾವರಣವಾಗಿದೆ. ಅದರಲ್ಲೂ ಟೀಮ್ ಇಂಡಿಯಾದ ನಾಲ್ಕು ದೊಡ್ಡ ನ್ಯೂನತೆಗಳು ಬೆಳಕಿಗೆ ಬಂದಿದ್ದು, ಇದನ್ನು ಸರಿಪಡಿಸದಿದ್ದರೆ ಸೂಪರ್​-4 ಹಂತದಲ್ಲಿ ಗೆಲ್ಲುವುದು ಸುಲಭವಲ್ಲ ಎಂದೇ ಹೇಳಬಹುದು. ಹಾಗಿದ್ರೆ ಆ ನ್ಯೂನತೆಗಳೇನು ನೋಡೋಣ…

  1. ಆರಂಭಿಕ ಸಮಸ್ಯೆ: ಟೀಮ್ ಇಂಡಿಯಾ 2 ಪಂದ್ಯಗಳಲ್ಲೂ ಉತ್ತಮ ಆರಂಭ ಪಡೆದಿರಲಿಲ್ಲ. ಅದರಲ್ಲೂ ಹಾಂಗ್ ಕಾಂಗ್ ವಿರುದ್ದ ಕೂಡ ಸ್ಪೋಟಕ ಆರಂಭ ಒದಗಿಸುವಲ್ಲಿ ರೋಹಿತ್ ಶರ್ಮಾ ಹಾಗೂ ಕೆಎಲ್ ರಾಹುಲ್ ಜೋಡಿ ವಿಫಲರಾಗಿದ್ದರು. ಅಂದರೆ ಈ ಜೋಡಿಯಿಂದ ನಿರೀಕ್ಷಿತ ಆರಂಭ ಸಿಗುತ್ತಿಲ್ಲ. ಅದರಲ್ಲೂ ಇಬ್ಬರು ಆರಂಭಿಕರಲ್ಲಿ ಒಬ್ಬರೂ ಕೂಡ ಕ್ಲಿಕ್ ಆಗದಿರುವುದು ಇದೀಗ ಟೀಮ್ ಇಂಡಿಯಾಗೆ ಚಿಂತೆಯಾಗಿದೆ.
  2. ನಿಧಾನಗತಿಯ ಬ್ಯಾಟಿಂಗ್: ಆರಂಭಿಕರ ನಿಧಾನಗತಿಯ ಬ್ಯಾಟಿಂಗ್ ಬಳಿಕ ಕೂಡ ಟೀಮ್ ಇಂಡಿಯಾದ ರನ್​ ಗತಿ ವೇಗ ಪಡೆಯುತ್ತಿಲ್ಲ. ಮೂರನೇ ಕ್ರಮಾಂಕದಲ್ಲಿ ಆಡುತ್ತಿರುವ ವಿರಾಟ್ ಕೊಹ್ಲಿ ಹೆಚ್ಚಿನ ಬಾಲ್​ಗಳನ್ನು ಎದುರಿಸುತ್ತಿದ್ದಾರೆ. ಕಳೆದ ಪಂದ್ಯದಲ್ಲಿ ಕೊಹ್ಲಿ ಅರ್ಧಶತಕ ಬಾರಿಸಿದ್ದರೂ ಅವರು 44 ಬಾಲ್​ಗಳನ್ನು ಎದುರಿಸಿದ್ದರು. ಹಾಗೆಯೇ ಹಾಂಗ್ ಕಾಂಗ್ ವಿರುದ್ದ ವಿರಾಟ್ ಕೊಹ್ಲಿ- ಕೆಎಲ್ ರಾಹುಲ್ ಜೊತೆಗೂಡಿ 49 ಎಸೆತಗಳಲ್ಲಿ ಕಲೆಹಾಕಿದ್ದು ಕೇವಲ 56 ರನ್​ ಮಾತ್ರ. ಅಂದರೆ ಟಾಪ್-3 ಬ್ಯಾಟ್ಸ್​ಮನ್​ಗಳೇ ಹೆಚ್ಚಿನ ಎಸೆತಗಳನ್ನು ಆಡುತ್ತಿರುವುದರಿಂದ ಮಧ್ಯಮ ಕ್ರಮಾಂಕದ ಬ್ಯಾಟ್ಸ್​ಮನ್​ಗಳು ಒತ್ತಡದಲ್ಲಿ ಬ್ಯಾಟಿಂಗ್ ಮಾಡಬೇಕಾದ ಅನಿವಾರ್ಯತೆ ಉಂಟಾಗುತ್ತಿದೆ.
  3. ಮೂರನೇ ವೇಗಿಯ ಸಮಸ್ಯೆ: ಟೀಮ್ ಇಂಡಿಯಾ ಮೂರನೇ ವೇಗಿಯ ಕೊರತೆಯನ್ನು ಎದುರಿಸುತ್ತಿದೆ. ತಂಡದಲ್ಲಿರುವ ಅವೇಶ್ ಖಾನ್ ಮೊದಲೆರಡು ಪಂದ್ಯಗಳಲ್ಲಿ ಕಣಕ್ಕಿಳಿದರೂ ಉತ್ತಮ ಪ್ರದರ್ಶನ ನೀಡಿಲ್ಲ. ಅದರಲ್ಲೂ ಹಾಂಗ್ ಕಾಂಗ್ ವಿರುದ್ದ ಕೇವಲ 4 ಓವರ್​ಗಳಲ್ಲಿ ಬರೋಬ್ಬರಿ 53 ರನ್ ನೀಡಿದ್ದಾರೆ. ಇತ್ತ ಟೀಮ್ ಇಂಡಿಯಾದಲ್ಲಿ ಮೂರನೇ ಬೌಲರ್ ಇಲ್ಲದಿರುವುದರಿಂದ ಬದಲಾವಣೆಯ ಸಮಸ್ಯೆಯನ್ನು ಎದುರಿಸುತ್ತಿದೆ.
  4. ಲಯ ತಪ್ಪಿದ ಬೌಲರ್​ಗಳು: ಹಾಂಗ್ ಕಾಂಗ್ ವಿರುದ್ದದ ಪಂದ್ಯದಲ್ಲಿ ಟೀಮ್ ಇಂಡಿಯಾದ ವೇಗಿಗಳು ಲಯ ತಪ್ಪಿರುವುದು ಸ್ಪಷ್ಟ. ಅದರಲ್ಲೂ ಅವೇಶ್ ಖಾನ್ 4 ಓವರ್​ಗಳಲ್ಲಿ 53 ರನ್ ನೀಡಿದರೆ, ಅರ್ಷದೀಪ್ ಸಿಂಗ್ 4 ಓವರ್​ನಲ್ಲಿ 44 ರನ್ ಬಿಟ್ಟು ಕೊಟ್ಟಿದ್ದರು. ಆದರೆ ಸೂಪರ್- 4 ನಲ್ಲಿ ಟೀಮ್ ಇಂಡಿಯಾ ಮತ್ತೆ ಪಾಕಿಸ್ತಾನ್ ತಂಡವನ್ನು ಎದುರಿಸುವ ಸಾಧ್ಯತೆಯಿದೆ. ಇತ್ತ ಹಾಂಗ್ ಕಾಂಗ್ ವಿರುದ್ದವೇ ಟೀಮ್ ಇಂಡಿಯಾ ಬೌಲರ್​ಗಳು 10ರ ಎಕಾನಮಿ ರೇಟ್​ನಲ್ಲಿ ರನ್ ನೀಡಿರುವುದು ಟೀಮ್ ಇಂಡಿಯಾದ ಚಿಂತೆಯನ್ನು ಹೆಚ್ಚಿಸಿದೆ.

ಇನ್ನು ಸೂಪರ್-4 ಹಂತದ ಪಂದ್ಯಗಳು ರೌಂಡ್ ರಾಬಿನ್ ಫಾರ್ಮಾಟ್​ನಲ್ಲಿ ನಡೆಯಲಿದೆ. ಇಲ್ಲಿ ಯಾವ ತಂಡ ಹೆಚ್ಚು ಪಾಯಿಂಟ್ ಗಳಿಸಲಿದೆಯೋ ಆ ತಂಡಗಳು ಫೈನಲ್​ಗೆ ಪ್ರವೇಶಿಸಲಿದೆ. ಕೊನೆಯ ಸುತ್ತಿನಲ್ಲಿ ಮಾಡುವ ಸಣ್ಣ ಪುಟ್ಟ ತಪ್ಪುಗಳು ಕೂಡ ಟೀಮ್ ಇಂಡಿಯಾದ ಫಲಿತಾಂಶಗಳ ಮೇಲೆ ಪರಿಣಾಮ ಬೀರಬಹುದು. ಹೀಗಾಗಿ ಫೈನಲ್​ಗೆ ಪ್ರವೇಶಿಸಬೇಕಿದ್ದರೆ ಟೀಮ್ ಇಂಡಿಯಾ ಈ ಎಲ್ಲಾ ನ್ಯೂನತೆಗಳನ್ನು ಸರಿಪಡಿಸಲೇಬೇಕು.

ಇದನ್ನೂ ಓದಿ
Image
RCB ತಂಡದ ಮೊದಲ ಪ್ಲೇಯಿಂಗ್ ಇಲೆವೆನ್​ನಲ್ಲಿ ಯಾರೆಲ್ಲಾ ಇದ್ದರು ಗೊತ್ತಾ?
Image
Team India: ಟೀಮ್ ಇಂಡಿಯಾದ ಸರ್ವಶ್ರೇಷ್ಠ ಆರಂಭಿಕ ಆಟಗಾರ ಯಾರು ಗೊತ್ತಾ?
Image
Sanju Samson: ಧೋನಿ, ದ್ರಾವಿಡ್​ಗೂ ಸಾಧ್ಯವಾಗದ ದಾಖಲೆ ನಿರ್ಮಿಸಿದ ಸಂಜು ಸ್ಯಾಮ್ಸನ್
Image
T20 World Cup 2022: ಟಿ20 ವಿಶ್ವಕಪ್​ನಲ್ಲಿ ಕಣಕ್ಕಿಳಿಯುವ 16 ತಂಡಗಳು ಫೈನಲ್

Published On - 1:35 pm, Thu, 1 September 22

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ