AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

India vs Pakistan: ಗೆದ್ದ ಭಾರತ ತಂಡಕ್ಕೆ, ಸೋತ ಪಾಕ್​ಗೆ ದಂಡದ ಬರೆ..!

Asia Cup 2022: ನಿಗದಿತ ಸಮಯದಲ್ಲಿ ಓವರ್ ಮುಗಿಸದಿದ್ದರೆ ಕೇವಲ 4 ಫೀಲ್ಡರ್‌ಗಳು ಮಾತ್ರ ವೃತ್ತದ ಹೊರಗೆ ನಿಲ್ಲಲು ಅವಕಾಶ ಇರಲಿದೆ. ಅದರಂತೆ ಭಾರತ-ಪಾಕಿಸ್ತಾನ್ ತಂಡಗಳು ಕೊನೆಯ ಓವರ್​ಗಳ ವೇಳೆ ಬೌಂಡರಿ ಲೈನ್​ನಿಂದ ಒಬ್ಬ ಫೀಲ್ಡರ್​ನನ್ನು ಕಡಿತಗೊಳಿಸಿತ್ತು.

India vs Pakistan: ಗೆದ್ದ ಭಾರತ ತಂಡಕ್ಕೆ, ಸೋತ ಪಾಕ್​ಗೆ ದಂಡದ ಬರೆ..!
IND vs PAK
TV9 Web
| Edited By: |

Updated on:Aug 31, 2022 | 5:23 PM

Share

Asia Cup 2022: ಭಾನುವಾರ ನಡೆದ ಭಾರತ ಮತ್ತು ಪಾಕಿಸ್ತಾನ (India vs Pakistan) ನಡುವಣ ಪಂದ್ಯದಲ್ಲಿ ಉಭಯ ತಂಡಗಳು ಮಾಡಿದ ತಪ್ಪಿಗಾಗಿ  ಐಸಿಸಿ ದಂಡ ವಿಧಿಸಿದೆ. ಎರಡೂ ತಂಡಗಳು ನಿಗದಿತ ಸಮಯದೊಳಗೆ ಓವರ್​ಗಳನ್ನು ಪೂರ್ಣಗೊಳಿಸ ಕಾರಣ ಇದೀಗ ಸ್ಲೋ ಓವರ್​ ರೇಟ್ ಶಿಕ್ಷೆಯಾಗಿ ಪಂದ್ಯ ಶುಲ್ಕದ ಶೇ.40 ರಷ್ಟು ದಂಡ ವಿಧಿಸಲಾಗಿದೆ. ಇದಕ್ಕೂ ಮುನ್ನ ಉಭಯ ತಂಡಗಳು ಸ್ಲೋ ಓವರ್ ರೇಟ್ ಕಾರಣದಿಂದಾಗಿ ಫೀಲ್ಡಿಂಗ್​ನಲ್ಲಿ ಬದಲಾವಣೆ ಮಾಡಿಕೊಳ್ಳಬೇಕಾಯಿತು. ಐಸಿಸಿ ಹೊಸ ನಿಯಮದ ಪ್ರಕಾರ, ಒಂದು ತಂಡವು ತನ್ನ ನಿಗದಿತ ಸಮಯದೊಳಗೆ 20 ಓವರ್​ಗಳನ್ನು ಪೂರ್ಣಗೊಳಿಸಲು ಸಾಧ್ಯವಾಗದಿದ್ದರೆ, ಉಳಿದ ಓವರ್​ಗಳ ವೇಳೆ ಓರ್ವ ಫೀಲ್ಡರ್​ನನ್ನು 30 ಯಾರ್ಡ್​ ಸರ್ಕಲ್​ನಲ್ಲಿ ನಿಲ್ಲಿಸಬೇಕಾಗುತ್ತದೆ.

ಅಂದರೆ ನಿಗದಿತ ಸಮಯದಲ್ಲಿ 20 ಓವರ್​ ಪೂರ್ಣಗೊಳಿಸದಿದ್ದರೆ, ಬೌಂಡರಿ ಲೈನ್​ನಲ್ಲಿರುವ ಒಬ್ಬ ಫೀಲ್ಡರ್ ಅನ್ನು 30 ಯಾರ್ಡ್​ ಸರ್ಕಲ್​ನಲ್ಲಿ​ (ಫ್ರಂಟ್ ಫೀಲ್ಡರ್​)​ ಫೀಲ್ಡಿಂಗ್ ನಿಲ್ಲಿಸಬೇಕು. ಪವರ್‌ಪ್ಲೇ (ಮೊದಲ 6 ಓವರ್‌ಗಳು) ನಂತರ 30-ಯಾರ್ಡ್ ಸರ್ಕಲ್​ ಹೊರಗೆ 5 ಫೀಲ್ಡರ್‌ಗಳನ್ನು ನಿಲ್ಲಿಸಬಹುದು. ಆದರೆ ಹೊಸ ನಿಯಮಗಳ ಬಳಿಕ, ನಿಗದಿತ ಸಮಯದಲ್ಲಿ ಓವರ್ ಮುಗಿಸದಿದ್ದರೆ ಕೇವಲ 4 ಫೀಲ್ಡರ್‌ಗಳು ಮಾತ್ರ ವೃತ್ತದ ಹೊರಗೆ ನಿಲ್ಲಲು ಅವಕಾಶ ಇರಲಿದೆ. ಅದರಂತೆ ಭಾರತ-ಪಾಕಿಸ್ತಾನ್ ತಂಡಗಳು ಕೊನೆಯ ಓವರ್​ಗಳ ವೇಳೆ ಬೌಂಡರಿ ಲೈನ್​ನಿಂದ ಒಬ್ಬ ಫೀಲ್ಡರ್​ನನ್ನು ಕಡಿತಗೊಳಿಸಿತ್ತು.

ಉಭಯ ತಂಡಗಳು ಮಾಡಿದ ಸ್ಲೋ ಓವರ್ ರೇಟ್  ತಪ್ಪಿಗಾಗಿ ಐಸಿಸಿ  ಪ್ರತಿ ಓವರ್​ನಂತೆ ದಂಡ ವಿಧಿಸಿದೆ. ಅಂದರೆ ನಿಗದಿತ ಸಮಯದಲ್ಲಿ ಓವರ್​ ಪೂರ್ಣಗೊಳ್ಳದಿದ್ದರೆ, ಎಷ್ಟು ಓವರ್​ಗಳು ಬಾಕಿ ಇರುತ್ತವೆಯೋ ಅಷ್ಟು ದಂಡ ಪಾವತಿಸಬೇಕಾಗುತ್ತದೆ. ಇಲ್ಲಿ ಪ್ರತಿ ಓವರ್​ಗೆ ಪಂದ್ಯ ಶುಲ್ಕದ ಶೇ. 20 ರಷ್ಟು ದಂಡ ವಿಧಿಸಲಾಗುತ್ತದೆ. ಅದರಂತೆ ಭಾರತ ಹಾಗೂ ಪಾಕಿಸ್ತಾನ್ ತಂಡವು ನಿಗದಿತ ಸಮಯದಲ್ಲಿ 18 ಓವರ್​ಗಳನ್ನು ಮಾತ್ರ ಪೂರ್ಣಗೊಳಿಸಿತ್ತು. ಈ ತಪ್ಪನ್ನು ಇಬ್ಬರೂ ನಾಯಕರು ಒಪ್ಪಿಕೊಂಡಿದ್ದು, ಹೀಗಾಗಿ ಐಸಿಸಿಐ ಈ ಪ್ರಕರಣದ ಔಪಚಾರಿಕ ವಿಚಾರಣೆ ನಡೆಸಿಲ್ಲ.

ಇದನ್ನೂ ಓದಿ
Image
RCB ತಂಡದ ಮೊದಲ ಪ್ಲೇಯಿಂಗ್ ಇಲೆವೆನ್​ನಲ್ಲಿ ಯಾರೆಲ್ಲಾ ಇದ್ದರು ಗೊತ್ತಾ?
Image
Team India: ಟೀಮ್ ಇಂಡಿಯಾದ ಸರ್ವಶ್ರೇಷ್ಠ ಆರಂಭಿಕ ಆಟಗಾರ ಯಾರು ಗೊತ್ತಾ?
Image
Sanju Samson: ಧೋನಿ, ದ್ರಾವಿಡ್​ಗೂ ಸಾಧ್ಯವಾಗದ ದಾಖಲೆ ನಿರ್ಮಿಸಿದ ಸಂಜು ಸ್ಯಾಮ್ಸನ್
Image
T20 World Cup 2022: ಟಿ20 ವಿಶ್ವಕಪ್​ನಲ್ಲಿ ಕಣಕ್ಕಿಳಿಯುವ 16 ತಂಡಗಳು ಫೈನಲ್

ಅಲ್ಲದೆ ನಿಗದಿತ ಸಮಯದೊಳಗೆ ಓವರ್​ ಪೂರ್ಣಗೊಳಿಸದೇ 2 ಓವರ್ ಬಾಕಿ ಉಳಿಸಿದ್ದ ಟೀಮ್ ಇಂಡಿಯಾಗೆ 20+20 ಯಂತೆ ಪಂದ್ಯದ ಶುಲ್ಕದ ಶೇ. 40 ರಷ್ಟು ದಂಡ ವಿಧಿಸಲಾಗಿದೆ. ಹಾಗೆಯೇ 2 ಓವರ್ ಬಾಕಿಯಿಟ್ಟಿದ್ದ ಪಾಕಿಸ್ತಾನ ತಂಡಕ್ಕೂ ಶೇ. 40ರಷ್ಟು ದಂಡ ವಿಧಿಸಿದೆ.

ಇನ್ನು ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಪಾಕಿಸ್ತಾನ್ ತಂಡವು ನಿಗದಿತ 20 ಓವರ್​ಗಳಲ್ಲಿ 147 ರನ್ ಕಲೆಹಾಕಿತ್ತು. ಈ ಸುಲಭ ಸವಾಲನ್ನು ಬೆನ್ನತ್ತಿದ ಟೀಮ್ ಇಂಡಿಯಾ 19.4 ಓವರ್​ಗಳಲ್ಲಿ 5 ವಿಕೆಟ್ ನಷ್ಟಕ್ಕೆ 148 ರನ್​ಗಳನ್ನು ಬಾರಿಸಿ ರೋಚಕ ಜಯ ಸಾಧಿಸಿತ್ತು. ಇಂದು (ಆಗಸ್ಟ್ 31) ಭಾರತ ತಂಡವು ಹಾಂಗ್ ಕಾಂಗ್ ವಿರುದ್ಧ ಆಡಲಿದ್ದು, ಈ ಪಂದ್ಯದಲ್ಲಿ ಟೀಮ್ ಇಂಡಿಯಾ ಗೆದ್ದರೆ ಸೂಪರ್- 4 ಹಂತಕ್ಕೇರಲಿದೆ.

Published On - 5:21 pm, Wed, 31 August 22

ಸ್ಫೋಟಕ ಬ್ಯಾಟರ್​ಗಳನ್ನು ಪೆವಿಲಿಯನ್​ಗಟ್ಟಿದ ಶ್ರೇಯಾಂಕ
ಸ್ಫೋಟಕ ಬ್ಯಾಟರ್​ಗಳನ್ನು ಪೆವಿಲಿಯನ್​ಗಟ್ಟಿದ ಶ್ರೇಯಾಂಕ
ಪೊಲೀಸ್ ಠಾಣೆಗೆ ಬೆಂಕಿ ಹಚ್ಚುತ್ತೇನೆ; ಬಜರಂಗದಳದ ವ್ಯಕ್ತಿಯಿಂದ ಬೆದರಿಕೆ
ಪೊಲೀಸ್ ಠಾಣೆಗೆ ಬೆಂಕಿ ಹಚ್ಚುತ್ತೇನೆ; ಬಜರಂಗದಳದ ವ್ಯಕ್ತಿಯಿಂದ ಬೆದರಿಕೆ
ಬಸ್​​ನಲ್ಲಿ 240 ಗ್ರಾಂ ಚಿನ್ನ ಕದ್ದಾಕೆ ಸಿಕ್ಕಿಬಿದ್ದಿದ್ಹೇಗೆ ಗೊತ್ತಾ?
ಬಸ್​​ನಲ್ಲಿ 240 ಗ್ರಾಂ ಚಿನ್ನ ಕದ್ದಾಕೆ ಸಿಕ್ಕಿಬಿದ್ದಿದ್ಹೇಗೆ ಗೊತ್ತಾ?
ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ
ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?