AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Asia Cup 2022: ಭಾರತ-ಪಾಕಿಸ್ತಾನ್: ಅಂಕಿ ಅಂಶಗಳ ಪ್ರಕಾರ ಯಾರು ಬಲಿಷ್ಠ?

India vs Pakistan: ಟಿ20 ಮಾದರಿಯಲ್ಲಿ ಭಾರತ ಮತ್ತು ಪಾಕಿಸ್ತಾನ ತಂಡಗಳು ಅತ್ಯಂತ ಬಲಿಷ್ಠವಾಗಿವೆ. ಟೀಮ್ ಇಂಡಿಯಾದಲ್ಲಿ ರೋಹಿತ್ ಶರ್ಮಾ, ಕೆಎಲ್ ರಾಹುಲ್, ವಿರಾಟ್ ಕೊಹ್ಲಿ, ರಿಷಭ್ ಪಂತ್ ಮತ್ತು ಸೂರ್ಯಕುಮಾರ್ ಅವರಂತಹ ಬ್ಯಾಟ್ಸ್‌ಮನ್‌ಗಳಿದ್ದಾರೆ.

Asia Cup 2022: ಭಾರತ-ಪಾಕಿಸ್ತಾನ್: ಅಂಕಿ ಅಂಶಗಳ ಪ್ರಕಾರ ಯಾರು ಬಲಿಷ್ಠ?
IND vs PAK
TV9 Web
| Edited By: |

Updated on: Aug 24, 2022 | 1:24 PM

Share

Asia Cup 2022: ಏಷ್ಯಾಕಪ್​ ಇದೇ ಶನಿವಾರದಿಂದ (ಆಗಸ್ಟ್ 27) ಶುರುವಾಗಲಿದೆ. ಉದ್ಘಾಟನಾ ಪಂದ್ಯದಲ್ಲಿ ಶ್ರೀಲಂಕಾ ತಂಡ ಅಫ್ಘಾನಿಸ್ತಾನವನ್ನು ಎದುರಿಸಲಿದೆ. ಇನ್ನು ಭಾರತ ತಂಡ ಪಾಕ್ (India vs Pakistan)​ ವಿರುದ್ದದ ಪಂದ್ಯದ ಮೂಲಕ ಭಾನುವಾರ ಏಷ್ಯಾಕಪ್ ಅಭಿಯಾನ ಆರಂಭಿಸಲಿದೆ. ಈ ಪಂದ್ಯದ ಮೇಲೆ ಇದೀಗ ಇಡೀ ವಿಶ್ವ ಕ್ರಿಕೆಟ್ ಪ್ರೇಮಿಗಳ ಕಣ್ಣು ನೆಟ್ಟಿದೆ. ಏಕೆಂದರೆ ಕಳೆದ ಬಾರಿಯ ಟಿ20 ವಿಶ್ವಕಪ್​ನಲ್ಲಿ ಟೀಮ್ ಇಂಡಿಯಾಗೆ ಪಾಕಿಸ್ತಾನ್ ಸೋಲುಣಿಸಿತ್ತು. ಇದೀಗ ಈ ಸೋಲಿನ ಸೇಡನ್ನು ತೀರಿಸಿಕೊಳ್ಳುವ ತವಕದಲ್ಲಿದೆ ಟೀಮ್ ಇಂಡಿಯಾ. ಹೀಗಾಗಿ ರೋಚಕ ಪೈಪೋಟಿಯನ್ನು ನಿರೀಕ್ಷಿಸಬಹುದು.

ಇಲ್ಲಿ ಮೇಲ್ನೋಟಕ್ಕೆ ಉಭಯ ತಂಡಗಳು ಬಲಿಷ್ಠವಾಗಿದ್ದರೂ ಏಷ್ಯಾಕಪ್​ನಲ್ಲಿ ಭಾರತ ತಂಡವೇ ಮೇಲುಗೈ ಸಾಧಿಸುತ್ತಾ ಬಂದಿದೆ. ಅಂದರೆ ಏಷ್ಯಾಕಪ್​ನಲ್ಲಿ ಭಾರತ-ಪಾಕಿಸ್ತಾನ್ 14 ಬಾರಿ ಮುಖಾಮುಖಿಯಾಗಿದೆ. ಈ ವೇಳೆ ಭಾರತ ಪಾಕ್ ತಂಡಕ್ಕೆ 8 ಬಾರಿ ಸೋಲುಣಿಸಿದೆ. ಇನ್ನು ಪಾಕಿಸ್ತಾನ್ ಟೀಮ್ ಇಂಡಿಯಾ ವಿರುದ್ದ ಗೆದ್ದಿದ್ದು ಕೇವಲ 5 ಬಾರಿ ಮಾತ್ರ. ಹಾಗೆಯೇ 1997ರಲ್ಲಿ ಉಭಯ ತಂಡಗಳ ನಡುವಿನ 1 ಪಂದ್ಯ ರದ್ದಾಗಿತ್ತು. ಈ ಅಂಕಿ ಅಂಶಗಳ ಪ್ರಕಾರ ಭಾರತ ತಂಡವೇ ಮೇಲುಗೈ ಹೊಂದಿದ್ದು, ಅತ್ತ ಇದುವೇ ಪಾಕ್ ತಂಡದ ದೊಡ್ಡ ಚಿಂತೆಗೆ ಕಾರಣವಾಗಿದೆ.

ಇದಾಗ್ಯೂ ಕಳೆದ ವರ್ಷದ ಟಿ20 ವಿಶ್ವಕಪ್​ನಲ್ಲಿ ಭಾರತದ ವಿರುದ್ದ ಪಾಕಿಸ್ತಾನ್ ಜಯ ಸಾಧಿಸಿತ್ತು. ಇದೇ ಕಾರಣದಿಂದಾಗಿ ಈ ಪಂದ್ಯದ ಮೇಲೆ ಕುತೂಹಲ ಇಮ್ಮಡಿಯಾಗಿದೆ. ಆದರೆ ಈ ಬಾರಿ ಉಭಯ ತಂಡಗಳಲ್ಲೂ ಪ್ರಮುಖ ಆಟಗಾರರು ಕಣಕ್ಕಿಳಿಯುತ್ತಿಲ್ಲ ಎಂಬುದು ವಿಶೇಷ.

ಇದನ್ನೂ ಓದಿ
Image
RCB ತಂಡದ ಮೊದಲ ಪ್ಲೇಯಿಂಗ್ ಇಲೆವೆನ್​ನಲ್ಲಿ ಯಾರೆಲ್ಲಾ ಇದ್ದರು ಗೊತ್ತಾ?
Image
Team India: ಟೀಮ್ ಇಂಡಿಯಾದ ಸರ್ವಶ್ರೇಷ್ಠ ಆರಂಭಿಕ ಆಟಗಾರ ಯಾರು ಗೊತ್ತಾ?
Image
Sanju Samson: ಧೋನಿ, ದ್ರಾವಿಡ್​ಗೂ ಸಾಧ್ಯವಾಗದ ದಾಖಲೆ ನಿರ್ಮಿಸಿದ ಸಂಜು ಸ್ಯಾಮ್ಸನ್
Image
T20 World Cup 2022: ಟಿ20 ವಿಶ್ವಕಪ್​ನಲ್ಲಿ ಕಣಕ್ಕಿಳಿಯುವ 16 ತಂಡಗಳು ಫೈನಲ್

ಉಭಯ ತಂಡಗಳಿಗೂ ಹಿನ್ನಡೆ:

ಟಿ20 ಮಾದರಿಯಲ್ಲಿ ಭಾರತ ಮತ್ತು ಪಾಕಿಸ್ತಾನ ತಂಡಗಳು ಅತ್ಯಂತ ಬಲಿಷ್ಠವಾಗಿವೆ. ಟೀಮ್ ಇಂಡಿಯಾದಲ್ಲಿ ರೋಹಿತ್ ಶರ್ಮಾ, ಕೆಎಲ್ ರಾಹುಲ್, ವಿರಾಟ್ ಕೊಹ್ಲಿ, ರಿಷಭ್ ಪಂತ್ ಮತ್ತು ಸೂರ್ಯಕುಮಾರ್ ಅವರಂತಹ ಬ್ಯಾಟ್ಸ್‌ಮನ್‌ಗಳಿದ್ದಾರೆ. ಅತ್ತ ಪಾಕ್ ತಂಡದಲ್ಲಿ ಬಾಬರ್ ಅಜಮ್, ಫಕರ್ ಜಮಾನ್ ಮತ್ತು ಮೊಹಮ್ಮದ್ ರಿಜ್ವಾನ್​ನಂತಹ ಆಟಗಾರರಿದ್ದಾರೆ. ಬಾಬರ್ ಮತ್ತು ರಿಜ್ವಾನ್ ಪ್ರಸ್ತುತ ಟಿ20 ಕ್ರಿಕೆಟ್‌ನ ಅತ್ಯುತ್ತಮ ಆರಂಭಿಕ ಜೋಡಿಗಳಲ್ಲಿ ಒಂದು ಎಂಬುದು ವಿಶೇಷ.

ಆದರೆ ಏಷ್ಯಾಕಪ್‌ನಲ್ಲಿ ಉಭಯ ತಂಡಗಳು ತಮ್ಮ ಪ್ರಮುಖ ವೇಗದ ಬೌಲರ್ ಇಲ್ಲದೆ ಕಣಕ್ಕಿಳಿಯಲಿದೆ. ಅಂದರೆ ಬೆನ್ನು ನೋವಿನ ಸಮಸ್ಯೆಯಿಂದಾಗಿ ಜಸ್ಪ್ರೀತ್ ಬುಮ್ರಾ ಏಷ್ಯಾಕಪ್‌ನಿಂದ ಹೊರಗುಳಿದಿದ್ದಾರೆ. ಮತ್ತೊಂದೆಡೆ, ಶಾಹೀನ್ ಶಾ ಆಫ್ರಿದಿ ಮೊಣಕಾಲಿನ ಗಾಯದ ಆಡುತ್ತಿಲ್ಲ. ಹೀಗಾಗಿ ಹಿನ್ನಡೆ ವಿಷಯದಲ್ಲೂ ಉಭಯ ತಂಡಗಳ ಸಮಬಲವಾಗಿದೆ ಎನ್ನಬಹುದು.

ಜಾಗಕ್ಕಾಗಿ ಹಠ ಹಿಡಿದಿರುವುದು ಯಾಕೆ? ಅಸಲಿ ಕಾರಣ ತಿಳಿಸಿದ ಯಶ್ ತಾಯಿ ಪುಷ್ಪಾ
ಜಾಗಕ್ಕಾಗಿ ಹಠ ಹಿಡಿದಿರುವುದು ಯಾಕೆ? ಅಸಲಿ ಕಾರಣ ತಿಳಿಸಿದ ಯಶ್ ತಾಯಿ ಪುಷ್ಪಾ
ಬೈಕ್ ಶೋರೂಂನೊಳಗೆ ನುಗ್ಗಿದ ಕಾಡುಕೋಣ; ಶಾಕಿಂಗ್ ವಿಡಿಯೋ ವೈರಲ್
ಬೈಕ್ ಶೋರೂಂನೊಳಗೆ ನುಗ್ಗಿದ ಕಾಡುಕೋಣ; ಶಾಕಿಂಗ್ ವಿಡಿಯೋ ವೈರಲ್
ಚಾರ್ಮಾಡಿ ಅರಣ್ಯದಲ್ಲಿ ಬೆಂಕಿ: ಹೊತ್ತಿ ಉರಿದ ವನ್ಯಸಂಪತ್ತು
ಚಾರ್ಮಾಡಿ ಅರಣ್ಯದಲ್ಲಿ ಬೆಂಕಿ: ಹೊತ್ತಿ ಉರಿದ ವನ್ಯಸಂಪತ್ತು
ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್
ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!