AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Breaking News: ಟೀಂ ಇಂಡಿಯಾಕ್ಕೆ ಆಘಾತ; ಏಷ್ಯಾಕಪ್‌ನಿಂದ ರವೀಂದ್ರ ಜಡೇಜಾ ಔಟ್..!

Asia Cup 2022: ಟೀಂ ಇಂಡಿಯಾದ ಸ್ಟಾರ್ ಆಲ್ ರೌಂಡರ್ ರವೀಂದ್ರ ಜಡೇಜಾ ಏಷ್ಯಾಕಪ್​ನಿಂದ ಹೊರಬಿದ್ದಿದ್ದಾರೆ. ಗಾಯದ ಕಾರಣದಿಂದ ಜಡೇಜಾ ಉಳಿದ ಏಷ್ಯಾಕಪ್ ಪಂದ್ಯಗಳಿಗೆ ಅಲಭ್ಯರಾಗಲಿದ್ದಾರೆ ಎಂದು ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ ಶುಕ್ರವಾರ ಹೇಳಿಕೆ ನೀಡಿದೆ.

Breaking News: ಟೀಂ ಇಂಡಿಯಾಕ್ಕೆ ಆಘಾತ; ಏಷ್ಯಾಕಪ್‌ನಿಂದ ರವೀಂದ್ರ ಜಡೇಜಾ ಔಟ್..!
ಜಡೇಜಾ ಪ್ರಾತಿನಿಧಿಕ ಚಿತ್ರ
TV9 Web
| Edited By: |

Updated on:Sep 02, 2022 | 6:29 PM

Share

ಟೀಂ ಇಂಡಿಯಾದ ಸ್ಟಾರ್ ಆಲ್​ರೌಂಡರ್ ರವೀಂದ್ರ ಜಡೇಜಾ (Ravindra Jadeja) ಏಷ್ಯಾಕಪ್​ನಿಂದ ಹೊರಬಿದ್ದಿದ್ದಾರೆ. ಗಾಯದ ಕಾರಣದಿಂದ ಜಡೇಜಾ ಉಳಿದ ಏಷ್ಯಾಕಪ್ (Asia Cup 202) ಪಂದ್ಯಗಳಿಗೆ ಅಲಭ್ಯರಾಗಲಿದ್ದಾರೆ ಎಂದು ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (BCCI) ಶುಕ್ರವಾರ ಹೇಳಿಕೆ ನೀಡಿದೆ. ಜಡೇಜಾ ಬದಲಿಗೆ ಎಡಗೈ ಸ್ಪಿನ್ ಆಲ್ ರೌಂಡರ್ ಅಕ್ಷರ್ ಪಟೇಲ್ ಅವರನ್ನು ತಂಡಕ್ಕೆ ಸೇರಿಸಿಕೊಳ್ಳಲಾಗಿದೆ ಎಂದು ಮಂಡಳಿ ತಿಳಿಸಿದೆ. ಪಾಕಿಸ್ತಾನ ಮತ್ತು ಹಾಂಕಾಂಗ್ ವಿರುದ್ಧ ಟೀಂ ಇಂಡಿಯಾ ಗೆಲುವಿನಲ್ಲಿ ಜಡೇಜಾ ಪ್ರಮುಖ ಪಾತ್ರ ವಹಿಸಿದ್ದರು. ಜಡೇಜಾ ಅವರ ಬಲ ಮೊಣಕಾಲಿಗೆ ಗಾಯವಾಗಿದ್ದು, ಇತ್ತೀಚಿನ ದಿನಗಳಲ್ಲಿ ಇದು ಅವರನ್ನು ಕಾಡುತ್ತಿದೆ. ಹೀಗಿರುವಾಗ ಜಡೇಜಾ ಅವರನ್ನು ಟಿ20 ವಿಶ್ವಕಪ್ ತಂಡಕ್ಕೆ ಬಿಸಿಸಿಐ ಆಯ್ಕೆ ಮಾಡುವುದರ ಬಗ್ಗೆ ಅನುಮಾನ ಹುಟ್ಟಿಕೊಂಡಿದೆ.

ಬಿಸಿಸಿಐ ತನ್ನ ಹೇಳಿಕೆಯಲ್ಲಿ, ಜಡೇಜಾ ಅವರ ಬಲ ಮೊಣಕಾಲಿಗೆ ಗಾಯವಾಗಿದ್ದು, ಇತ್ತೀಚಿನ ದಿನಗಳಲ್ಲಿ ಈ ಸಮಸ್ಯೆ ಅವರನ್ನು ಇನ್ನಿಲ್ಲದಂತೆ ಕಾಡುತ್ತಿದೆ. ಹೀಗಾಗಿ “ಅಖಿಲ ಭಾರತ ಹಿರಿಯ ಆಯ್ಕೆ ಸಮಿತಿಯು ಏಷ್ಯಾಕಪ್‌ನಲ್ಲಿ ರವೀಂದ್ರ ಜಡೇಜಾ ಬದಲಿಗೆ ಅಕ್ಷರ್ ಪಟೇಲ್ ಅವರನ್ನು ತಂಡಕ್ಕೆ ಆಯ್ಕೆ ಮಾಡಿದೆ. ಸದ್ಯ ಅವರು ಬಿಸಿಸಿಐ ವೈದ್ಯಕೀಯ ತಂಡದ ಮೇಲ್ವಿಚಾರಣೆಯಲ್ಲಿದ್ದಾರೆ ಎಂದು ತಿಳಿಸಿದೆ.

ಸೂಪರ್- 4 ಮೊದಲು ಆಘಾತ

ಏಷ್ಯಾಕಪ್‌ನ ಸೂಪರ್ ಫೋರ್ ಹಂತಕ್ಕೂ ಮುನ್ನ ಟೀಂ ಇಂಡಿಯಾಗೆ ಈ ದುರಂತ ಸಂಭವಿಸಿದೆ. ಪಂದ್ಯಾವಳಿಯ ಎರಡನೇ ಸುತ್ತಿನಲ್ಲಿ ಭಾರತದ ಮೊದಲ ಪಂದ್ಯವು ಭಾನುವಾರ, ಸೆಪ್ಟೆಂಬರ್ 4 ರಂದು ನಡೆಯಲಿದೆ. ತಂಡವನ್ನು ಸೂಪರ್ ಫೋರ್‌ಗೆ ಕೊಂಡೊಯ್ಯುವಲ್ಲಿ ಜಡೇಜಾ ಕೂಡ ವಿಶೇಷ ಕೊಡುಗೆ ನೀಡಿದ್ದಾರೆ. ಪಾಕಿಸ್ತಾನದ ವಿರುದ್ಧದ ಮೊದಲ ಪಂದ್ಯದಲ್ಲಿ ಜಡೇಜಾ ಕಠಿಣ ಪರಿಸ್ಥಿತಿಯಲ್ಲಿ 35 ರನ್‌ಗಳ ಪ್ರಮುಖ ಇನ್ನಿಂಗ್ಸ್ ಆಡಿದರು. ನಂತರ ಹಾಂಕಾಂಗ್ ವಿರುದ್ಧ ಕೇವಲ 15 ರನ್‌ಗಳಿಗೆ ದೊಡ್ಡ ವಿಕೆಟ್ ಪಡೆದರು.

ಅಕ್ಷರ್ ಪಟೇಲ್​ಗೆ ಅವಕಾಶ

ಇತ್ತೀಚಿನ ದಿನಗಳಲ್ಲಿ, ಜಡೇಜಾ ಬದಲಿಗೆ ಬೌಲಿಂಗ್ ಮತ್ತು ಬ್ಯಾಟಿಂಗ್‌ನಲ್ಲಿ ಉತ್ತಮ ಫಾರ್ಮ್‌ನಲ್ಲಿರುವ ಎಡಗೈ ಸ್ಪಿನ್-ಆಲ್ ರೌಂಡರ್ ಅಕ್ಷರ್ ಪಟೇಲ್ ಅವರನ್ನು ತಂಡಕ್ಕೆ ಸೇರಿಸಿಕೊಳ್ಳಲಾಗಿದೆ. ಅಕ್ಷರ್ ಅವರನ್ನು ಈಗಾಗಲೇ ಆಯ್ಕೆದಾರರು ಸ್ಟ್ಯಾಂಡ್‌ಬೈ ಆಗಿ ತಂಡಕ್ಕೆ ಆಯ್ಕೆ ಮಾಡಿದ್ದಾರೆ. ಹೀಗಾಗಿ ಅವರು ಈಗಾಗಲೇ ಯುಎಇಯಲ್ಲಿದ್ದು, ತಂಡದ ಅಭ್ಯಾಸ ಅವಧಿಯ ಭಾಗವಾಗಿದ್ದಾರೆ.

Published On - 5:19 pm, Fri, 2 September 22

Follow Us
Web contact
Web contact

TV9 Kannada

Read More
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ