AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಿಂಗ್ ಕೊಹ್ಲಿ-ಹಿಟ್​ಮ್ಯಾನ್ ಜೊತೆ ಫೋಟೋ ಕ್ಲಿಕ್ಕಿಸಿಕೊಂಡ ಈ ವಿಶೇಷ ವ್ಯಕ್ತಿ ಯಾರು ಗೊತ್ತಾ?

Asia Cup 2022: ಈ ಬಾರಿಯ ಏಷ್ಯಾಕಪ್​ನಲ್ಲಿ ಭಾರತ ತಂಡವು ಗೆಲುವಿನೊಂದಿಗೆ ಶುಭಾರಂಭ ಮಾಡಿದರೆ, ಶ್ರೀಲಂಕಾ ತಂಡವು ಅಫ್ಘಾನಿಸ್ತಾನ್ ವಿರುದ್ದ ಹೀನಾಯವಾಗಿ ಸೋತಿದೆ.

ಕಿಂಗ್ ಕೊಹ್ಲಿ-ಹಿಟ್​ಮ್ಯಾನ್ ಜೊತೆ ಫೋಟೋ ಕ್ಲಿಕ್ಕಿಸಿಕೊಂಡ ಈ ವಿಶೇಷ ವ್ಯಕ್ತಿ ಯಾರು ಗೊತ್ತಾ?
Kohli-Gayan-Rohit
TV9 Web
| Edited By: |

Updated on: Aug 30, 2022 | 11:56 AM

Share

Asia Cup 2022: ಭಾನುವಾರ ದುಬೈನಲ್ಲಿ ನಡೆದ ಏಷ್ಯಾ ಕಪ್ 2022 ರ ತಮ್ಮ ಆರಂಭಿಕ ಪಂದ್ಯದಲ್ಲಿ ಪಾಕಿಸ್ತಾನವನ್ನು ಐದು ವಿಕೆಟ್‌ಗಳಿಂದ ಸೋಲಿಸಿ ಟೀಮ್ ಇಂಡಿಯಾ ಭರ್ಜರಿ ಶುಭಾರಂಭ ಮಾಡಿದೆ. ಈ ವಿಶೇಷ ಪಂದ್ಯವನ್ನು ಭಾರತ-ಪಾಕಿಸ್ತಾನ್ ಅಭಿಮಾನಿಗಳಲ್ಲದೇ ಶ್ರೀಲಂಕಾ ಫ್ಯಾನ್ಸ್ ಕೂಡ ಕಣ್ತುಂಬಿಕೊಂಡಿದ್ದರು. ಅದರಲ್ಲೂ ಭಾರತೀಯ ಕ್ರಿಕೆಟಿಗರನ್ನು ಇಷ್ಟಪಡುವ ಶ್ರೀಲಂಕಾದ ಅಭಿಮಾನಿ ಗಯಾನ್ ಸೇನಾನಾಯಕ ಇಂಡೋ-ಪಾಕ್ ಪಂದ್ಯವನ್ನು ವೀಕ್ಷಿಸಿದ್ದರು. ಅಷ್ಟೇ ಅಲ್ಲದೆ ಟೀಮ್ ಇಂಡಿಯಾದ ಇಬ್ಬರು ದಿಗ್ಗಜರನ್ನು ಭೇಟಿ ಮಾಡುವ ಅವಕಾಶವನ್ನೂ ಸಹ ಪಡೆದರು.

ವಿಕಲಚೇತನರಾಗಿರುವ ಗಯಾನ್ ಸೇನಾನಾಯಕ ಅಪ್ಪಟ ಕ್ರಿಕೆಟ್ ಅಭಿಮಾನಿ. ಶ್ರೀಲಂಕಾ ಪಂದ್ಯಗಳ ವೇಳೆ ಸಾಮಾನ್ಯವಾಗಿ ಕಾಣಿಸಿಕೊಳ್ಳುವ ಗಯಾನ್ ಇದೀಗ ಏಷ್ಯಾಕಪ್​ ವೀಕ್ಷಿಸಲು ದುಬೈಗೆ ಬಂದಿದ್ದಾರೆ. ಇದೇ ವೇಳೆ ಟೀಮ್ ಇಂಡಿಯಾದ ತಮ್ಮ ನೆಚ್ಚಿನ ಇಬ್ಬರು ಆಟಗಾರರನ್ನು ಜೊತೆಯಾಗಿ ಭೇಟಿ ಮಾಡುವ ಅವಕಾಶ ಪಡೆದರು.

ಇದನ್ನೂ ಓದಿ
Image
RCB ತಂಡದ ಮೊದಲ ಪ್ಲೇಯಿಂಗ್ ಇಲೆವೆನ್​ನಲ್ಲಿ ಯಾರೆಲ್ಲಾ ಇದ್ದರು ಗೊತ್ತಾ?
Image
Team India: ಟೀಮ್ ಇಂಡಿಯಾದ ಸರ್ವಶ್ರೇಷ್ಠ ಆರಂಭಿಕ ಆಟಗಾರ ಯಾರು ಗೊತ್ತಾ?
Image
Sanju Samson: ಧೋನಿ, ದ್ರಾವಿಡ್​ಗೂ ಸಾಧ್ಯವಾಗದ ದಾಖಲೆ ನಿರ್ಮಿಸಿದ ಸಂಜು ಸ್ಯಾಮ್ಸನ್
Image
T20 World Cup 2022: ಟಿ20 ವಿಶ್ವಕಪ್​ನಲ್ಲಿ ಕಣಕ್ಕಿಳಿಯುವ 16 ತಂಡಗಳು ಫೈನಲ್

ಈ ವೇಳೆ ಕ್ಲಿಕ್ಕಿಸಿಕೊಂಡ ಫೋಟೋವನ್ನು ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಳ್ಳುವ ಮೂಲಕ ಸೇನಾನಾಯಕ ತಮ್ಮ ಖುಷಿಯನ್ನು ವ್ಯಕ್ತಪಡಿಸಿದ್ದಾರೆ. ಅಪರೂಪದ ಫೋಟೋ ಎನಿಸಿಕೊಂಡಿರುವ ಈ ಚಿತ್ರದಲ್ಲಿ ಸೇನಾನಾಯಕನ ಎರಡು ಬದಿಯಲ್ಲಿ ವಿರಾಟ್ ಕೊಹ್ಲಿ ಹಾಗೂ ರೋಹಿತ್ ಶರ್ಮಾ ಕೂತು ಪೋಸ್ ನೀಡಿದ್ದಾರೆ. ಇದೀಗ ಈ ಫೋಟೋ ಸಿಕ್ಕಾಪಟ್ಟೆ ವೈರಲ್ ಆಗಿದ್ದು, ಕಿಂಗ್ ಕೊಹ್ಲಿ-ಹಿಟ್​ಮ್ಯಾನ್ ಅಭಿಮಾನಿಗಳಿಂದ ಭಾರೀ ಮೆಚ್ಚುಗೆಗಳು ವ್ಯಕ್ತವಾಗುತ್ತಿದೆ.

ವಿಶೇಷ ಎಂದರೆ ವಿರಾಟ್ ಕೊಹ್ಲಿಯ ಅಪ್ಪಟ ಅಭಿಮಾನಿಯಾಗಿರುವ ಸೇನಾನಾಯಕ ಅವರ ಫೋಟೋ ಈ ಹಿಂದೊಮ್ಮೆ ಕೂಡ ವೈರಲ್ ಆಗಿತ್ತು. 2017 ರಲ್ಲಿ ಮುಂಬೈನಲ್ಲಿ ವಿರಾಟ್ ಮತ್ತು ಅವರ ಪತ್ನಿ ಅನುಷ್ಕಾ ಶರ್ಮಾ ಅವರ ವಿವಾಹ ಆರತಕ್ಷತೆಯಲ್ಲಿ ಸೇನಾನಾಯಕ ಭಾಗವಹಿಸಿದ್ದರು. ಆ ಫೋಟೋ ಮೂಲಕ ಭಾರತೀಯ ಕ್ರಿಕೆಟ್​ ಪ್ರೇಮಿಗಳಿಗೆ ಗಯಾನ್ ಸೇನಾನಾಯಕ ಪರಿಚಿತರಾಗಿದ್ದರು.

ಇದೀಗ ಟೀಮ್ ಇಂಡಿಯಾದ ಇಬ್ಬರು ದಿಗ್ಗಜರೊಂದಿಗೆ ಕೂತು ಫೋಟೋ ಕ್ಲಿಕ್ಕಿಸಿಕೊಳ್ಳುವ ಮೂಲಕ ಮತ್ತೊಮ್ಮೆ ಸೋಷಿಯಲ್ ಮೀಡಿಯಾದಲ್ಲಿ ಗಯಾನ್ ಸೇನಾನಾಯಕ ಹೊಸ ಅಲೆ ಎಬ್ಬಿಸಿದ್ದಾರೆ.

ಇನ್ನು ಈ ಬಾರಿಯ ಏಷ್ಯಾಕಪ್​ನಲ್ಲಿ ಭಾರತ ತಂಡವು ಗೆಲುವಿನೊಂದಿಗೆ ಶುಭಾರಂಭ ಮಾಡಿದರೆ, ಶ್ರೀಲಂಕಾ ತಂಡವು ಅಫ್ಘಾನಿಸ್ತಾನ್ ವಿರುದ್ದ ಹೀನಾಯವಾಗಿ ಸೋತಿದೆ. ಇನ್ನು ಮುಂದಿನ ಪಂದ್ಯದಲ್ಲಿ ಲಂಕಾ ಬಾಂಗ್ಲಾದೇಶ್ ವಿರುದ್ದ ಗೆದ್ದರೆ ಮಾತ್ರ ಮುಂದಿನ ಹಂತಕ್ಕೇರುವ ಅವಕಾಶ ಪಡೆಯಲಿದೆ. ಅಂದರೆ ಗಯಾನ್ ಸೇನಾನಾಯಕ ಅವರ ನಿರೀಕ್ಷೆಯಂತೆ ಭಾರತ-ಶ್ರೀಲಂಕಾ ಮುಖಾಮುಖಿಯಾಗಬೇಕಿದ್ದರೆ, ಸೂಪರ್- 4 ಹಂತಕ್ಕೆ ಲಂಕಾ ತಂಡ ಪ್ರವೇಶಿಸಬೇಕು. ಹೀಗಾಗಿ ಶ್ರೀಲಂಕಾ ತಂಡಕ್ಕೆ ಮುಂದಿನ ಪಂದ್ಯವು ಮಾಡು ಇಲ್ಲವೇ ಮಡಿ ಪಂದ್ಯವಾಗಿದೆ.

ರಾಜಶೇಖರ್​​ ಕುಟುಂಬಕ್ಕೆ 25 ಲಕ್ಷ ರೂ ಪರಿಹಾರ: ಸಚಿವ ಜಮೀರ್ ವಿರುದ್ಧ ದೂರು
ರಾಜಶೇಖರ್​​ ಕುಟುಂಬಕ್ಕೆ 25 ಲಕ್ಷ ರೂ ಪರಿಹಾರ: ಸಚಿವ ಜಮೀರ್ ವಿರುದ್ಧ ದೂರು
ಸ್ಪಂದನಾ ಫ್ಯಾಮಿಲಿಗೆ ಗಿಲ್ಲಿ ಇಷ್ಟ ಆಗಿದ್ದೇ ಈ ಕಾರಣಕ್ಕೆ; ವಿವರಿಸಿದ ನಟಿ
ಸ್ಪಂದನಾ ಫ್ಯಾಮಿಲಿಗೆ ಗಿಲ್ಲಿ ಇಷ್ಟ ಆಗಿದ್ದೇ ಈ ಕಾರಣಕ್ಕೆ; ವಿವರಿಸಿದ ನಟಿ
ಪ್ರಸಿದ್ಧ ಆಭರಣ ಮಳಿಗೆಯಲ್ಲಿ 14 ಲಕ್ಷದ ಜ್ಯುವೆಲರಿ ಕದ್ದ ಮಹಿಳೆಯರು
ಪ್ರಸಿದ್ಧ ಆಭರಣ ಮಳಿಗೆಯಲ್ಲಿ 14 ಲಕ್ಷದ ಜ್ಯುವೆಲರಿ ಕದ್ದ ಮಹಿಳೆಯರು
ಗುಡ್ ಲಕ್; ಸಿದ್ದರಾಮಯ್ಯಗೆ ಡಿಸಿಎಂ ಡಿಕೆ ಶಿವಕುಮಾರ್ ಅಭಿನಂದನೆ
ಗುಡ್ ಲಕ್; ಸಿದ್ದರಾಮಯ್ಯಗೆ ಡಿಸಿಎಂ ಡಿಕೆ ಶಿವಕುಮಾರ್ ಅಭಿನಂದನೆ
ಸಾಕ್ಷಿ ನಾಶ ಹಿನ್ನೆಲೆ ರಾಜಶೇಖರ್​ ಶವ ಸುಟ್ಟು ಹಾಕಿದ್ದಾರೆ ಎಂದ ಶ್ರೀರಾಮುಲು
ಸಾಕ್ಷಿ ನಾಶ ಹಿನ್ನೆಲೆ ರಾಜಶೇಖರ್​ ಶವ ಸುಟ್ಟು ಹಾಕಿದ್ದಾರೆ ಎಂದ ಶ್ರೀರಾಮುಲು
ಕೊಡಗು ಜಿಲ್ಲೆಯ ನಂಬರ್ ಒನ್ ಟ್ಯಾಕ್ಸ್ ಪೇಯರ್ ರಶ್ಮಿಕಾ ಮಂದಣ್ಣ
ಕೊಡಗು ಜಿಲ್ಲೆಯ ನಂಬರ್ ಒನ್ ಟ್ಯಾಕ್ಸ್ ಪೇಯರ್ ರಶ್ಮಿಕಾ ಮಂದಣ್ಣ
ರಕ್ಷಿತಾ ಬೆಂಬಲಕ್ಕೆ ಬಂದ ಗಿಲ್ಲಿ, ರಾಶಿಕಾ ಜೊತೆ ಜಗಳ: ವಿಡಿಯೋ
ರಕ್ಷಿತಾ ಬೆಂಬಲಕ್ಕೆ ಬಂದ ಗಿಲ್ಲಿ, ರಾಶಿಕಾ ಜೊತೆ ಜಗಳ: ವಿಡಿಯೋ
ಸಿದ್ದರಾಮಯ್ಯ ಇಲ್ಲ ಅಂದ್ರೆ ಕಾಂಗ್ರೆಸ್ ಪಕ್ಷ ಇಲ್ಲ: ರಾಜಣ್ಣ ಖಡಕ್​​ ಮಾತು
ಸಿದ್ದರಾಮಯ್ಯ ಇಲ್ಲ ಅಂದ್ರೆ ಕಾಂಗ್ರೆಸ್ ಪಕ್ಷ ಇಲ್ಲ: ರಾಜಣ್ಣ ಖಡಕ್​​ ಮಾತು
ರಾಜಶೇಖರ್​ ತಾಯಿಗೆ ಡಿಕೆ ಶಿವಕುಮಾರ್​ ಸಾಂತ್ವನ: ಸರ್ಕಾರದಿಂದ ನೆರವು ಭರವಸೆ
ರಾಜಶೇಖರ್​ ತಾಯಿಗೆ ಡಿಕೆ ಶಿವಕುಮಾರ್​ ಸಾಂತ್ವನ: ಸರ್ಕಾರದಿಂದ ನೆರವು ಭರವಸೆ
ಸನ್​ರೂಫ್ ಬಳಿ ನಿಂತು ಕೈ ಬೀಸುತ್ತಿದ್ದಾಗ ಬ್ರೇಕ್ ಹಾಕಿದ ಕಾರು
ಸನ್​ರೂಫ್ ಬಳಿ ನಿಂತು ಕೈ ಬೀಸುತ್ತಿದ್ದಾಗ ಬ್ರೇಕ್ ಹಾಕಿದ ಕಾರು