AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಿಂಗ್ ಕೊಹ್ಲಿ-ಹಿಟ್​ಮ್ಯಾನ್ ಜೊತೆ ಫೋಟೋ ಕ್ಲಿಕ್ಕಿಸಿಕೊಂಡ ಈ ವಿಶೇಷ ವ್ಯಕ್ತಿ ಯಾರು ಗೊತ್ತಾ?

Asia Cup 2022: ಈ ಬಾರಿಯ ಏಷ್ಯಾಕಪ್​ನಲ್ಲಿ ಭಾರತ ತಂಡವು ಗೆಲುವಿನೊಂದಿಗೆ ಶುಭಾರಂಭ ಮಾಡಿದರೆ, ಶ್ರೀಲಂಕಾ ತಂಡವು ಅಫ್ಘಾನಿಸ್ತಾನ್ ವಿರುದ್ದ ಹೀನಾಯವಾಗಿ ಸೋತಿದೆ.

ಕಿಂಗ್ ಕೊಹ್ಲಿ-ಹಿಟ್​ಮ್ಯಾನ್ ಜೊತೆ ಫೋಟೋ ಕ್ಲಿಕ್ಕಿಸಿಕೊಂಡ ಈ ವಿಶೇಷ ವ್ಯಕ್ತಿ ಯಾರು ಗೊತ್ತಾ?
Kohli-Gayan-Rohit
TV9 Web
| Updated By: ಝಾಹಿರ್ ಯೂಸುಫ್|

Updated on: Aug 30, 2022 | 11:56 AM

Share

Asia Cup 2022: ಭಾನುವಾರ ದುಬೈನಲ್ಲಿ ನಡೆದ ಏಷ್ಯಾ ಕಪ್ 2022 ರ ತಮ್ಮ ಆರಂಭಿಕ ಪಂದ್ಯದಲ್ಲಿ ಪಾಕಿಸ್ತಾನವನ್ನು ಐದು ವಿಕೆಟ್‌ಗಳಿಂದ ಸೋಲಿಸಿ ಟೀಮ್ ಇಂಡಿಯಾ ಭರ್ಜರಿ ಶುಭಾರಂಭ ಮಾಡಿದೆ. ಈ ವಿಶೇಷ ಪಂದ್ಯವನ್ನು ಭಾರತ-ಪಾಕಿಸ್ತಾನ್ ಅಭಿಮಾನಿಗಳಲ್ಲದೇ ಶ್ರೀಲಂಕಾ ಫ್ಯಾನ್ಸ್ ಕೂಡ ಕಣ್ತುಂಬಿಕೊಂಡಿದ್ದರು. ಅದರಲ್ಲೂ ಭಾರತೀಯ ಕ್ರಿಕೆಟಿಗರನ್ನು ಇಷ್ಟಪಡುವ ಶ್ರೀಲಂಕಾದ ಅಭಿಮಾನಿ ಗಯಾನ್ ಸೇನಾನಾಯಕ ಇಂಡೋ-ಪಾಕ್ ಪಂದ್ಯವನ್ನು ವೀಕ್ಷಿಸಿದ್ದರು. ಅಷ್ಟೇ ಅಲ್ಲದೆ ಟೀಮ್ ಇಂಡಿಯಾದ ಇಬ್ಬರು ದಿಗ್ಗಜರನ್ನು ಭೇಟಿ ಮಾಡುವ ಅವಕಾಶವನ್ನೂ ಸಹ ಪಡೆದರು.

ವಿಕಲಚೇತನರಾಗಿರುವ ಗಯಾನ್ ಸೇನಾನಾಯಕ ಅಪ್ಪಟ ಕ್ರಿಕೆಟ್ ಅಭಿಮಾನಿ. ಶ್ರೀಲಂಕಾ ಪಂದ್ಯಗಳ ವೇಳೆ ಸಾಮಾನ್ಯವಾಗಿ ಕಾಣಿಸಿಕೊಳ್ಳುವ ಗಯಾನ್ ಇದೀಗ ಏಷ್ಯಾಕಪ್​ ವೀಕ್ಷಿಸಲು ದುಬೈಗೆ ಬಂದಿದ್ದಾರೆ. ಇದೇ ವೇಳೆ ಟೀಮ್ ಇಂಡಿಯಾದ ತಮ್ಮ ನೆಚ್ಚಿನ ಇಬ್ಬರು ಆಟಗಾರರನ್ನು ಜೊತೆಯಾಗಿ ಭೇಟಿ ಮಾಡುವ ಅವಕಾಶ ಪಡೆದರು.

ಇದನ್ನೂ ಓದಿ
Image
RCB ತಂಡದ ಮೊದಲ ಪ್ಲೇಯಿಂಗ್ ಇಲೆವೆನ್​ನಲ್ಲಿ ಯಾರೆಲ್ಲಾ ಇದ್ದರು ಗೊತ್ತಾ?
Image
Team India: ಟೀಮ್ ಇಂಡಿಯಾದ ಸರ್ವಶ್ರೇಷ್ಠ ಆರಂಭಿಕ ಆಟಗಾರ ಯಾರು ಗೊತ್ತಾ?
Image
Sanju Samson: ಧೋನಿ, ದ್ರಾವಿಡ್​ಗೂ ಸಾಧ್ಯವಾಗದ ದಾಖಲೆ ನಿರ್ಮಿಸಿದ ಸಂಜು ಸ್ಯಾಮ್ಸನ್
Image
T20 World Cup 2022: ಟಿ20 ವಿಶ್ವಕಪ್​ನಲ್ಲಿ ಕಣಕ್ಕಿಳಿಯುವ 16 ತಂಡಗಳು ಫೈನಲ್

ಈ ವೇಳೆ ಕ್ಲಿಕ್ಕಿಸಿಕೊಂಡ ಫೋಟೋವನ್ನು ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಳ್ಳುವ ಮೂಲಕ ಸೇನಾನಾಯಕ ತಮ್ಮ ಖುಷಿಯನ್ನು ವ್ಯಕ್ತಪಡಿಸಿದ್ದಾರೆ. ಅಪರೂಪದ ಫೋಟೋ ಎನಿಸಿಕೊಂಡಿರುವ ಈ ಚಿತ್ರದಲ್ಲಿ ಸೇನಾನಾಯಕನ ಎರಡು ಬದಿಯಲ್ಲಿ ವಿರಾಟ್ ಕೊಹ್ಲಿ ಹಾಗೂ ರೋಹಿತ್ ಶರ್ಮಾ ಕೂತು ಪೋಸ್ ನೀಡಿದ್ದಾರೆ. ಇದೀಗ ಈ ಫೋಟೋ ಸಿಕ್ಕಾಪಟ್ಟೆ ವೈರಲ್ ಆಗಿದ್ದು, ಕಿಂಗ್ ಕೊಹ್ಲಿ-ಹಿಟ್​ಮ್ಯಾನ್ ಅಭಿಮಾನಿಗಳಿಂದ ಭಾರೀ ಮೆಚ್ಚುಗೆಗಳು ವ್ಯಕ್ತವಾಗುತ್ತಿದೆ.

ವಿಶೇಷ ಎಂದರೆ ವಿರಾಟ್ ಕೊಹ್ಲಿಯ ಅಪ್ಪಟ ಅಭಿಮಾನಿಯಾಗಿರುವ ಸೇನಾನಾಯಕ ಅವರ ಫೋಟೋ ಈ ಹಿಂದೊಮ್ಮೆ ಕೂಡ ವೈರಲ್ ಆಗಿತ್ತು. 2017 ರಲ್ಲಿ ಮುಂಬೈನಲ್ಲಿ ವಿರಾಟ್ ಮತ್ತು ಅವರ ಪತ್ನಿ ಅನುಷ್ಕಾ ಶರ್ಮಾ ಅವರ ವಿವಾಹ ಆರತಕ್ಷತೆಯಲ್ಲಿ ಸೇನಾನಾಯಕ ಭಾಗವಹಿಸಿದ್ದರು. ಆ ಫೋಟೋ ಮೂಲಕ ಭಾರತೀಯ ಕ್ರಿಕೆಟ್​ ಪ್ರೇಮಿಗಳಿಗೆ ಗಯಾನ್ ಸೇನಾನಾಯಕ ಪರಿಚಿತರಾಗಿದ್ದರು.

ಇದೀಗ ಟೀಮ್ ಇಂಡಿಯಾದ ಇಬ್ಬರು ದಿಗ್ಗಜರೊಂದಿಗೆ ಕೂತು ಫೋಟೋ ಕ್ಲಿಕ್ಕಿಸಿಕೊಳ್ಳುವ ಮೂಲಕ ಮತ್ತೊಮ್ಮೆ ಸೋಷಿಯಲ್ ಮೀಡಿಯಾದಲ್ಲಿ ಗಯಾನ್ ಸೇನಾನಾಯಕ ಹೊಸ ಅಲೆ ಎಬ್ಬಿಸಿದ್ದಾರೆ.

ಇನ್ನು ಈ ಬಾರಿಯ ಏಷ್ಯಾಕಪ್​ನಲ್ಲಿ ಭಾರತ ತಂಡವು ಗೆಲುವಿನೊಂದಿಗೆ ಶುಭಾರಂಭ ಮಾಡಿದರೆ, ಶ್ರೀಲಂಕಾ ತಂಡವು ಅಫ್ಘಾನಿಸ್ತಾನ್ ವಿರುದ್ದ ಹೀನಾಯವಾಗಿ ಸೋತಿದೆ. ಇನ್ನು ಮುಂದಿನ ಪಂದ್ಯದಲ್ಲಿ ಲಂಕಾ ಬಾಂಗ್ಲಾದೇಶ್ ವಿರುದ್ದ ಗೆದ್ದರೆ ಮಾತ್ರ ಮುಂದಿನ ಹಂತಕ್ಕೇರುವ ಅವಕಾಶ ಪಡೆಯಲಿದೆ. ಅಂದರೆ ಗಯಾನ್ ಸೇನಾನಾಯಕ ಅವರ ನಿರೀಕ್ಷೆಯಂತೆ ಭಾರತ-ಶ್ರೀಲಂಕಾ ಮುಖಾಮುಖಿಯಾಗಬೇಕಿದ್ದರೆ, ಸೂಪರ್- 4 ಹಂತಕ್ಕೆ ಲಂಕಾ ತಂಡ ಪ್ರವೇಶಿಸಬೇಕು. ಹೀಗಾಗಿ ಶ್ರೀಲಂಕಾ ತಂಡಕ್ಕೆ ಮುಂದಿನ ಪಂದ್ಯವು ಮಾಡು ಇಲ್ಲವೇ ಮಡಿ ಪಂದ್ಯವಾಗಿದೆ.

ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು
ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು
ಪರಪ್ಪನ ಅಗ್ರಹಾರ ಮಹಿಳಾ ಪೊಲೀಸ್ ಸಿಬ್ಬಂದಿಗೆ ಠಾಣೆಯಲ್ಲಿ ಸೀಮಂತ
ಪರಪ್ಪನ ಅಗ್ರಹಾರ ಮಹಿಳಾ ಪೊಲೀಸ್ ಸಿಬ್ಬಂದಿಗೆ ಠಾಣೆಯಲ್ಲಿ ಸೀಮಂತ
ಪ್ರೋಮೊನಲ್ಲೇ ಶಾಕ್ ಕೊಟ್ಟ ಬಿಗ್​​ಬಾಸ್: ಮನೆಯಿಂದ ಇಬ್ಬರು ಹೊರಕ್ಕೆ
ಪ್ರೋಮೊನಲ್ಲೇ ಶಾಕ್ ಕೊಟ್ಟ ಬಿಗ್​​ಬಾಸ್: ಮನೆಯಿಂದ ಇಬ್ಬರು ಹೊರಕ್ಕೆ
ದುರಹಂಕಾರದಿಂದ ಬಿಗ್ ಬಾಸ್ ನಿರೂಪಣೆ ಬೇಡ ಅಂತ ನಾನು ಹೇಳಲಿಲ್ಲ: ಸುದೀಪ್
ದುರಹಂಕಾರದಿಂದ ಬಿಗ್ ಬಾಸ್ ನಿರೂಪಣೆ ಬೇಡ ಅಂತ ನಾನು ಹೇಳಲಿಲ್ಲ: ಸುದೀಪ್
ಮೊಟ್ಟೆಗಳಲ್ಲಿ ಕ್ಯಾನ್ಸರ್ ಕಾರಕ ಅಂಶ ಪತ್ತೆ?: ಭಾರಿ ಚರ್ಚೆ
ಮೊಟ್ಟೆಗಳಲ್ಲಿ ಕ್ಯಾನ್ಸರ್ ಕಾರಕ ಅಂಶ ಪತ್ತೆ?: ಭಾರಿ ಚರ್ಚೆ
‘ಮಾರ್ಕ್’ ಸಿನಿಮಾದಲ್ಲಿ ಹೀರೋಯಿನ್ ಇಲ್ಲ ಯಾಕೆ? ಉತ್ತರಿಸಿದ ಕಿಚ್ಚ ಸುದೀಪ್
‘ಮಾರ್ಕ್’ ಸಿನಿಮಾದಲ್ಲಿ ಹೀರೋಯಿನ್ ಇಲ್ಲ ಯಾಕೆ? ಉತ್ತರಿಸಿದ ಕಿಚ್ಚ ಸುದೀಪ್
ಚುನಾವಣೆಯಲ್ಲಿ ಸೋತಿದ್ದಕ್ಕೆ ಮೀಸೆ ಬೋಳಿಸಿಕೊಂಡ ಎಲ್‌ಡಿಎಫ್ ಕಾರ್ಯಕರ್ತ
ಚುನಾವಣೆಯಲ್ಲಿ ಸೋತಿದ್ದಕ್ಕೆ ಮೀಸೆ ಬೋಳಿಸಿಕೊಂಡ ಎಲ್‌ಡಿಎಫ್ ಕಾರ್ಯಕರ್ತ