AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs PAK: ಯುಎಇನಲ್ಲಿ ಭಾರತಕ್ಕಿಂತ ಪಾಕ್ ತಂಡವೇ ಬಲಿಷ್ಠ..!

India vs Pakistan: ಟಿ20 ವಿಶ್ವಕಪ್​ನ ಹೀನಾಯ ಸೋಲಿನ ಸೇಡನ್ನು ತೀರಿಸಿಕೊಳ್ಳುವ ತವಕದಲ್ಲಿರುವ ಟೀಮ್ ಇಂಡಿಯಾ ಕಡೆಯಿಂದ ಆಗಸ್ಟ್ 28 ರಂದು ರೋಚಕ ಪೈಪೋಟಿಯನ್ನು ನಿರೀಕ್ಷಿಸಬಹುದು.

IND vs PAK: ಯುಎಇನಲ್ಲಿ ಭಾರತಕ್ಕಿಂತ ಪಾಕ್ ತಂಡವೇ ಬಲಿಷ್ಠ..!
India vs Pakistan
TV9 Web
| Updated By: ಝಾಹಿರ್ ಯೂಸುಫ್|

Updated on: Aug 23, 2022 | 3:55 PM

Share

ಏಷ್ಯಾಕಪ್ 2022 ಕ್ಕೆ (Asia Cup 2022) ಯುಎಇನಲ್ಲಿ ವೇದಿಕೆ ಸಜ್ಜಾಗಿದೆ. ಆಗಸ್ಟ್ 27 ರಿಂದ ಶುರುವಾಗಲಿರುವ ಏಷ್ಯಾ ರಾಷ್ಟ್ರಗಳ ಈ ಕ್ರಿಕೆಟ್ ಕದನದ ಫೈನಲ್ ಪಂದ್ಯವು ಸೆಪ್ಟೆಂಬರ್ 11 ರಂದು ನಡೆಯಲಿದೆ. ವಿಶೇಷ ಎಂದರೆ ಭಾರತ ತಂಡವು ಮೊದಲ ಪಂದ್ಯವನ್ನು ಆಗಸ್ಟ್ 28 ರಂದು ಆಡಲಿದೆ. ಅದು ಕೂಡ ಸಾಂಪ್ರದಾಯಿಕ ಎದುರಾಳಿ ಪಾಕಿಸ್ತಾನ್ (India vs Pakistan) ವಿರುದ್ದ ಎಂಬುದು ವಿಶೇಷ. ಪಾಕಿಸ್ತಾನ್ ಹೊರತಾಗಿ ಭಾರತ ತಂಡವಿರುವ ಗ್ರೂಪ್​ನಲ್ಲಿ ಮತ್ತೊಂದು ಕೂಡ ಅರ್ಹತಾ ಸುತ್ತಿನಿಂದ ಸೇರ್ಪಡೆಯಾಗಲಿದೆ.

ಇಲ್ಲಿ ಗಮನಿಸಬೇಕಾದ ಪ್ರಮುಖ ಅಂಶವೆಂದರೆ ಟೀಮ್ ಇಂಡಿಯಾ ಯುಎಇಯಲ್ಲಿ ಪಾಕಿಸ್ತಾನ್ ವಿರುದ್ದ ಏಕೈಕ ಟಿ20 ಅಂತಾರಾಷ್ಟ್ರೀಯ ಪಂದ್ಯವನ್ನು ಆಡಿದೆ. 2021 ರ ಟಿ20 ವಿಶ್ವಕಪ್​ನಲ್ಲಿ ಆಡಲಾದ ಈ ಪಂದ್ಯದಲ್ಲಿ ಭಾರತ ತಂಡವು ಹೀನಾಯವಾಗಿ ಸೋಲನುಭವಿಸಿದೆ. ಆದರೆ ಯುಎಇ ಪಾಕಿಸ್ತಾನ್​ ತಂಡದ ಎರಡನೇ ಹೋಮ್​ ಗ್ರೌಂಡ್ ಎಂಬುದೇ ಇಲ್ಲಿ ವಿಶೇಷ​.

ಏಕೆಂದರೆ ಪಾಕಿಸ್ತಾನ್ ತಂಡ ಯುಎಇನಲ್ಲಿ 42 ಪಂದ್ಯಗಳನ್ನು ಆಡಿದೆ. ಇದರಲ್ಲಿ 26 ಪಂದ್ಯಗಳನ್ನು ಪಾಕ್ ಗೆದ್ದುಕೊಂಡಿದೆ. ಅಂದರೆ ಶೇ. 65 ರಷ್ಟು ಗೆಲುವಿನ ಸರಾಸರಿ ಹೊಂದಿದೆ. ಇನ್ನು ಭಾರತ-ಪಾಕ್ ನಡುವಣ ಮೊದಲ ಪಂದ್ಯವು ದುಬೈನಲ್ಲಿ ನಡೆಯಲಿದೆ. ಈ ಮೈದಾನದಲ್ಲಿ ಪಾಕಿಸ್ತಾನ್ ಇದುವರೆಗೆ 28 ಟಿ20 ಪಂದ್ಯಗಳನ್ನು ಆಡಿದೆ. ಇದರಲ್ಲಿ 17 ಪಂದ್ಯಗಳಲ್ಲಿ ಗೆದ್ದರೆ, 11 ರಲ್ಲಿ ಸೋತಿದೆ. ಇನ್ನು ದುಬೈ ಪಿಚ್​ನಲ್ಲಿ ಅತಿಹೆಚ್ಚು ಅಂತಾರಾಷ್ಟ್ರೀಯ ಟಿ20 ಗಳನ್ನು ಆಡಿದ ತಂಡವೆಂದರೆ ಅದು ಪಾಕಿಸ್ತಾನ್. ಇದೇ ಕಾರಣದಿಂದ ಈ ಹಿಂದೆ ಪಾಕ್ ತಂಡದ ನಾಯಕ ಬಾಬರ್ ಆಜಂ ಯುಎಇ ನಮಗೆ ಎರಡನೇ ತವರು ಇದ್ದಂತೆ ಎಂಬ ಹೇಳಿಕೆ ನೀಡಿದ್ದರು.

ಇದನ್ನೂ ಓದಿ
Image
RCB ತಂಡದ ಮೊದಲ ಪ್ಲೇಯಿಂಗ್ ಇಲೆವೆನ್​ನಲ್ಲಿ ಯಾರೆಲ್ಲಾ ಇದ್ದರು ಗೊತ್ತಾ?
Image
Team India: ಟೀಮ್ ಇಂಡಿಯಾದ ಸರ್ವಶ್ರೇಷ್ಠ ಆರಂಭಿಕ ಆಟಗಾರ ಯಾರು ಗೊತ್ತಾ?
Image
Sanju Samson: ಧೋನಿ, ದ್ರಾವಿಡ್​ಗೂ ಸಾಧ್ಯವಾಗದ ದಾಖಲೆ ನಿರ್ಮಿಸಿದ ಸಂಜು ಸ್ಯಾಮ್ಸನ್
Image
T20 World Cup 2022: ಟಿ20 ವಿಶ್ವಕಪ್​ನಲ್ಲಿ ಕಣಕ್ಕಿಳಿಯುವ 16 ತಂಡಗಳು ಫೈನಲ್

ಇಲ್ಲಿ ಮತ್ತೊಂದು ವಿಶೇಷತೆ ಅಂದರೆ ಭಾರತ-ಪಾಕ್ ಈ ಬಾರಿ ಕೂಡ ಮುಖಾಮುಖಿಯಾಗುತ್ತಿರುವುದು ದುಬೈ ಇಂಟರ್​ನ್ಯಾಷನಲ್​ ಮೈದಾನದಲ್ಲಿ ಎಂಬುದು. ಅಂದರೆ ಟಿ20 ವಿಶ್ವಕಪ್​ನಲ್ಲಿ ಭಾರತ ತಂಡವನ್ನು ಪಾಕ್ 10 ವಿಕೆಟ್​ಗಳಿಂದ ಹೀನಾಯವಾಗಿ ಸೋಲಿಸಿತ್ತು. ಇದೇ ಆತ್ಮ ವಿಶ್ವಾಸದಲ್ಲಿ ಪಾಕ್​ ತಂಡ ಈ ಬಾರಿ ಕೂಡ ಟೀಮ್ ಇಂಡಿಯಾ ವಿರುದ್ದ ಕಣಕ್ಕಿಳಿಯಲಿದೆ.

ಮತ್ತೊಂದೆಡೆ ಭಾರತ ತಂಡವು ದುಬೈ ಪಿಚ್​ನಲ್ಲಿ ಇದುವರೆಗೆ 4 ಪಂದ್ಯಗಳನ್ನು ಆಡಿದೆ. ಈ ವೇಳೆ ಎರಡು ಪಂದ್ಯದಲ್ಲಿ ಗೆದ್ದರೆ, 2 ಪಂದ್ಯದಲ್ಲಿ ಸೋತಿದೆ. ಆದರೆ ಇಲ್ಲಿ ಗೆದ್ದಿರುವುದು ನಮೀಬಿಯಾ ಹಾಗೂ ಸ್ಕಾಟ್ಲೆಂಡ್ ವಿರುದ್ಧ ಎಂಬುದು ಉಲ್ಲೇಖಾರ್ಹ. ಹಾಗೆಯೇ ಸೋತಿರುವುದು ಪಾಕಿಸ್ತಾನ್ ಹಾಗೂ ನ್ಯೂಜಿಲೆಂಡ್ ತಂಡಗಳ ವಿರುದ್ದ. ಅಂದರೆ ಬಲಿಷ್ಠ ಎರಡು ತಂಡಗಳ ವಿರುದ್ದ ಟೀಮ್ ಇಂಡಿಯಾ ದುಬೈ ಪಿಚ್​ನಲ್ಲಿ ಸೋಲನುಭವಿಸಿದೆ.

ಇದಾಗ್ಯೂ ಟಿ20 ವಿಶ್ವಕಪ್​ನ ಹೀನಾಯ ಸೋಲಿನ ಸೇಡನ್ನು ತೀರಿಸಿಕೊಳ್ಳುವ ತವಕದಲ್ಲಿರುವ ಟೀಮ್ ಇಂಡಿಯಾ ಕಡೆಯಿಂದ ಆಗಸ್ಟ್ 28 ರಂದು ರೋಚಕ ಪೈಪೋಟಿಯನ್ನು ನಿರೀಕ್ಷಿಸಬಹುದು. ಈ ಮೂಲಕ ಪಾಕ್ ತಂಡವನ್ನು ಬಗ್ಗು ಬಡಿದು ಹಳೆಯ ಲೆಕ್ಕ ಚುಕ್ತಾ ಮಾಡಲಿದೆಯಾ ಕಾದು ನೋಡಬೇಕಿದೆ.

ಏಷ್ಯಾಕಪ್​ಗಾಗಿ ಉಭಯ ತಂಡಗಳು ಹೀಗಿವೆ:

ಪಾಕಿಸ್ತಾನ್ ತಂಡ ಹೀಗಿದೆ: ಬಾಬರ್ ಆಜಂ (ನಾಯಕ), ಶಾದಾಬ್ ಖಾನ್ (ಉಪನಾಯಕ), ಆಸಿಫ್ ಅಲಿ, ಫಖರ್ ಜಮಾನ್, ಹೈದರ್ ಅಲಿ, ಹಾರಿಸ್ ರೌಫ್, ಇಫ್ತಿಕರ್ ಅಹ್ಮದ್, ಖುಷ್ದಿಲ್ ಶಾ, ಮೊಹಮ್ಮದ್ ನವಾಜ್, ಮೊಹಮ್ಮದ್ ರಿಜ್ವಾನ್, ಮೊಹಮ್ಮದ್, ವಾಸಿಮ್ ಜೂನಿಯರ್, ನಸೀಮ್ ಶಾ, ಶಾನವಾಜ್ ದಹಾನಿ, ಉಸ್ಮಾನ್ ಖಾದಿರ್, ಮೊಹಮ್ಮದ್ ಹಸ್ನೈನ್

ಟೀಮ್ ಇಂಡಿಯಾ ಹೀಗಿದೆ: ರೋಹಿತ್ ಶರ್ಮಾ (ನಾಯಕ), ಕೆಎಲ್ ರಾಹುಲ್ (ಉಪನಾಯಕ), ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್, ದೀಪಕ್ ಹೂಡಾ, ರಿಷಭ್ ಪಂತ್ (ವಿಕೆಟ್ ಕೀಪರ್), ದಿನೇಶ್ ಕಾರ್ತಿಕ್ (ವಿಕೆಟ್ ಕೀಪರ್), ಹಾರ್ದಿಕ್ ಪಾಂಡ್ಯ, ರವೀಂದ್ರ ಜಡೇಜಾ, ಆರ್ ಅಶ್ವಿನ್, ಯುಜುವೇಂದ್ರ ಚಾಹಲ್, ರವಿ ಬಿಷ್ಣೋಯ್, ಭುವನೇಶ್ವರ್ ಕುಮಾರ್, ಅರ್ಷದೀಪ್ ಸಿಂಗ್, ಅವೇಶ್ ಖಾನ್.

ಮೀಸಲು ಆಟಗಾರರು: ಅಕ್ಷರ್ ಪಟೇಲ್, ಶ್ರೇಯಸ್ ಅಯ್ಯರ್ ಹಾಗೂ ದೀಪಕ್ ಚಹರ್.

ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ