AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಯಾರಿಗೆ ಯಾವ ಪ್ರಶಸ್ತಿ? ಭಾರತ ತಂಡಕ್ಕೆ ಸಿಕ್ಕ ಪ್ರಶಸ್ತಿ ಮೊತ್ತ ಎಷ್ಟು? ಇಲ್ಲಿದೆ ಮಾಹಿತಿ

Asia Cup 2023 Award List: ಈ ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟ್ ಮಾಡಿದ ಶ್ರೀಲಂಕಾ ತಂಡವು ನಿರೀಕ್ಷಿತ ಆರಂಭ ಪಡೆದಿರಲಿಲ್ಲ. ಮೊದಲ ಓವರ್​ನಲ್ಲೇ ಜಸ್​ಪ್ರೀತ್ ಬುಮ್ರಾ ಒಂದು ವಿಕೆಟ್ ಪಡೆದರು. ಇನ್ನು ಮೊಹಮ್ಮದ್ ಸಿರಾಜ್ 4ನೇ ಓವರ್​ನಲ್ಲಿ 4 ವಿಕೆಟ್ ಕಬಳಿಸಿದರು.

ಯಾರಿಗೆ ಯಾವ ಪ್ರಶಸ್ತಿ? ಭಾರತ ತಂಡಕ್ಕೆ ಸಿಕ್ಕ ಪ್ರಶಸ್ತಿ ಮೊತ್ತ ಎಷ್ಟು? ಇಲ್ಲಿದೆ ಮಾಹಿತಿ
Team India
TV9 Web
| Edited By: |

Updated on: Sep 17, 2023 | 9:22 PM

Share

ಏಷ್ಯಾಕಪ್ 2023 ಕ್ಕೆ ತೆರೆ ಬಿದ್ದಿದೆ. ಕೊಲಂಬೊದ ಆರ್​. ಪ್ರೇಮದಾಸ ಮೈದಾನದಲ್ಲಿ ನಡೆದ ಫೈನಲ್ ಪಂದ್ಯದಲ್ಲಿ ಶ್ರೀಲಂಕಾ ತಂಡವನ್ನು ಮಣಿಸಿ ಭಾರತ ತಂಡವು ಚಾಂಪಿಯನ್ ಪಟ್ಟ ಅಲಂಕರಿಸಿದೆ. ಇದರೊಂದಿಗೆ ಏಷ್ಯಾಕಪ್ ಇತಿಹಾಸದಲ್ಲೇ 8ನೇ ಬಾರಿ ಕಿರೀಟ ಮುಡಿಗೇರಿಸಿಕೊಂಡ ವಿಶೇಷ ಹಿರಿಮೆ ಟೀಮ್ ಇಂಡಿಯಾ ಪಾಲಾಯಿತು.

ಈ ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟ್ ಮಾಡಿದ ಶ್ರೀಲಂಕಾ ತಂಡವು ನಿರೀಕ್ಷಿತ ಆರಂಭ ಪಡೆದಿರಲಿಲ್ಲ. ಮೊದಲ ಓವರ್​ನಲ್ಲೇ ಜಸ್​ಪ್ರೀತ್ ಬುಮ್ರಾ ಒಂದು ವಿಕೆಟ್ ಪಡೆದರು. ಇನ್ನು ಮೊಹಮ್ಮದ್ ಸಿರಾಜ್ 4ನೇ ಓವರ್​ನಲ್ಲಿ 4 ವಿಕೆಟ್ ಕಬಳಿಸಿದರು.

ಇನ್ನು 7 ಓವರ್​ಗಳನ್ನು ಎಸೆದ ಸಿರಾಜ್ 21 ರನ್ ನೀಡಿ 6 ವಿಕೆಟ್ ಪಡೆದರೆ, ಮತ್ತೊಂದೆಡೆ ಹಾರ್ದಿಕ್ ಪಾಂಡ್ಯ 2.2 ಓವರ್​ಗಳಲ್ಲಿ 3 ರನ್ ನೀಡಿ 3 ವಿಕೆಟ್ ಉರುಳಿಸಿದರು. ಇದರೊಂದಿಗೆ ಶ್ರೀಲಂಕಾ ತಂಡವು 50 ರನ್​ಗಳಿಗೆ ಸರ್ವಪತನ ಕಂಡಿತು.

51 ರನ್​ಗಳ ಸುಲಭ ಗುರಿಯನ್ನು ಬೆನ್ನತ್ತಿದ ಟೀಮ್ ಇಂಡಿಯಾ 6.1 ಓವರ್​ಗಳಲ್ಲಿ ಚೇಸ್ ಮಾಡಿ 10 ವಿಕೆಟ್​ಗಳ ಅಮೋಘ ಗೆಲುವು ದಾಖಲಿಸಿತು. ಇದಾದ ಬಳಿಕ ನಡೆದ ಪ್ರಶಸ್ತಿ ಸಮಾರಂಭದಲ್ಲಿ ಟೀಮ್ ಇಂಡಿಯಾ ಟ್ರೋಫಿಯನ್ನು ಮುಡಿಗೇರಿಸಿಕೊಂಡರೆ ಕೆಲ ಆಟಗಾರರು ವಿಶೇಷ ಪ್ರಶಸ್ತಿಗಳನ್ನು ಪಡೆದರು. ಹೀಗೆ ಪ್ರಶಸ್ತಿ ಪಡೆದ ಆಟಗಾರರ ಪಟ್ಟಿ ಈ ಕೆಳಗಿನಂತಿದೆ…

  • ಅತ್ಯುತ್ತಮ ಕ್ಯಾಚ್ ಪ್ರಶಸ್ತಿ: ರವೀಂದ್ರ ಜಡೇಜಾ (ಭಾರತ) – 3000 ಯುಎಸ್​ ಡಾಲರ್ ನಗದು ಬಹುಮಾನ ( ಭಾರತೀಯ ಮೌಲ್ಯ ಸುಮಾರು 2.4 ಲಕ್ಷ ರೂ.)
  • ಪಂದ್ಯ ಶ್ರೇಷ್ಠ ಪ್ರಶಸ್ತಿ: ಮೊಹಮ್ಮದ್ ಸಿರಾಜ್ (ಭಾರತ) – 5000 ಯುಎಸ್​ ಡಾಲರ್ ನಗದು ಬಹುಮಾನ (ಭಾರತೀಯ ಮೌಲ್ಯ ಸುಮಾರು 4 ಲಕ್ಷ ರೂ.)
  • ಸರಣಿ ಶ್ರೇಷ್ಠ ಪ್ರಶಸ್ತಿ: ಕುಲ್ದೀಪ್ ಯಾದವ್ (ಭಾರತ)- 15000 ಯುಎಸ್ ಡಾಲರ್ ನಗದು ಬಹುಮಾನ (ಭಾರತೀಯ ಮೌಲ್ಯ ಸುಮಾರು 12 ಲಕ್ಷ ರೂ.)
  • ರನ್ನರ್ಸ್ ಅಪ್ ತಂಡ: ಶ್ರೀಲಂಕಾ- 75,000 ಯುಎಸ್ ಡಾಲರ್ ನಗದು ಬಹುಮಾನ (ಭಾರತೀಯ ಮೌಲ್ಯ ಸುಮಾರು 62 ಲಕ್ಷ ರೂ.)
  • ವಿನ್ನರ್ಸ್​ ತಂಡ: ಭಾರತ- 150,000 ಯುಎಸ್ ಡಾಲರ್ ನಗದು ಬಹುಮಾನ (ಭಾರತೀಯ ಮೌಲ್ಯ ಸುಮಾರು 1.25 ಕೋಟಿ ರೂ.)
  • ವಿಶೇಷ ಪ್ರಶಸ್ತಿ ಮೊತ್ತ: ಮೈದಾನದ ಸಿಬ್ಬಂದಿಗಳಿಗೆ 50,000 ಯುಎಸ್ ಡಾಲರ್ ನಗದು (ಭಾರತೀಯ ಮೌಲ್ಯ ಸುಮಾರು 41 ಲಕ್ಷ ರೂ.)
ಬಯಲು ಪ್ರಾಚ್ಯವಸ್ತು ಸಂಗ್ರಹಾಲಯ ಅಭಿವೃದ್ಧಿಗೆ ಫೌಂಡೇಶನ್ ಸಜ್ಜು
ಬಯಲು ಪ್ರಾಚ್ಯವಸ್ತು ಸಂಗ್ರಹಾಲಯ ಅಭಿವೃದ್ಧಿಗೆ ಫೌಂಡೇಶನ್ ಸಜ್ಜು
ಜಲಮಂಡಳಿ ನಿರ್ಲಕ್ಷ್ಯಕ್ಕೆ 14 ವರ್ಷದ ಬಾಲಕ ಬಲಿ
ಜಲಮಂಡಳಿ ನಿರ್ಲಕ್ಷ್ಯಕ್ಕೆ 14 ವರ್ಷದ ಬಾಲಕ ಬಲಿ
ವಿಜಯ್​​ ರಾಘವೇಂದ್ರಗೆ ‘ಥ್ಯಾಂಕ್​​ ಯೂ ಮಾವ’ ಎಂದ ಪಲ್ಲವಿ ಪಾಂಚಾಲ್
ವಿಜಯ್​​ ರಾಘವೇಂದ್ರಗೆ ‘ಥ್ಯಾಂಕ್​​ ಯೂ ಮಾವ’ ಎಂದ ಪಲ್ಲವಿ ಪಾಂಚಾಲ್
ಅಕ್ರಮ ಗಣಿಗಾರಿಕೆ ನಿಲ್ಲಿಸದ್ದಕ್ಕೆ ರಣಚಂಡಿಯಾದ ಮಹಿಳಾ ಅಧಿಕಾರಿ
ಅಕ್ರಮ ಗಣಿಗಾರಿಕೆ ನಿಲ್ಲಿಸದ್ದಕ್ಕೆ ರಣಚಂಡಿಯಾದ ಮಹಿಳಾ ಅಧಿಕಾರಿ
ಅಕ್ರಮ ಸಂಬಂಧ ಬಯಲಿಗೆಳೆದಿದ್ದಕ್ಕೆ, ಮಾವನಿಗೆ ಬೆಂಕಿ ಹಚ್ಚಿದ ಸೊಸೆ
ಅಕ್ರಮ ಸಂಬಂಧ ಬಯಲಿಗೆಳೆದಿದ್ದಕ್ಕೆ, ಮಾವನಿಗೆ ಬೆಂಕಿ ಹಚ್ಚಿದ ಸೊಸೆ
ಪಾರ್ಶ್ವವಾಯು ಪೀಡಿತ ಮಹಿಳೆಯನ್ನು ಏರ್​​ಲಿಫ್ಟ್​ ಮಾಡಿದ ವಾಯುಪಡೆ
ಪಾರ್ಶ್ವವಾಯು ಪೀಡಿತ ಮಹಿಳೆಯನ್ನು ಏರ್​​ಲಿಫ್ಟ್​ ಮಾಡಿದ ವಾಯುಪಡೆ
‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!