AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಹಿಂದೂಸ್ತಾನ್ ಮುರ್ದಾಬಾದ್ ಎಂದವರಿಗೆ ಬೆರಳು ತೋರಿಸಿದೆ’; ಸ್ಪಷ್ಟನೆ ನೀಡಿದ ಗೌತಮ್ ಗಂಭೀರ್

Gautam Gambhir: ಈ ಬಗ್ಗೆ ಮಾತನಾಡಿರುವ ಗಂಭೀರ್, ‘ಸೋಶಿಯಲ್ ಮೀಡಿಯಾದಲ್ಲಿ ಇಡೀ ಸತ್ಯವನ್ನು ತೋರಿಸುವುದಿಲ್ಲ. ಅಲ್ಲಿ ಹಿಂದೂಸ್ತಾನ್ ಮುರ್ದಾಬಾದ್ ಮತ್ತು ಕಾಶ್ಮೀರ ವಿಚಾರವಾಗಿ ಘೋಷಣೆಗಳು ಕೇಳಿಬರುತ್ತಿದ್ದವು. ಆ ವಿಚಾರವಾಗಿ ನಾನು ಆ ರೀತಿಯ ಪ್ರತಿಕ್ರಿಯೆ ನೀಡಿದೆ ಎಂದಿದ್ದಾರೆ.

‘ಹಿಂದೂಸ್ತಾನ್ ಮುರ್ದಾಬಾದ್ ಎಂದವರಿಗೆ ಬೆರಳು ತೋರಿಸಿದೆ’; ಸ್ಪಷ್ಟನೆ ನೀಡಿದ ಗೌತಮ್ ಗಂಭೀರ್
ಗೌತಮ್ ಗಂಭೀರ್
ಪೃಥ್ವಿಶಂಕರ
|

Updated on: Sep 06, 2023 | 9:02 AM

Share

ಪ್ರಸ್ತುತ ನಡೆಯುತ್ತಿರುವ ಏಷ್ಯಾಕಪ್​ನಲ್ಲಿ (Asia Cup 2023) ಕಾಮೆಂಟೇಟರ್ ಆಗಿ ಕಾರ್ಯನಿರ್ವಹಿಸುತ್ತಿರುವ ಭಾರತದ ಮಾಜಿ ಆರಂಭಿಕ ಆಟಗಾರ ಗೌತಮ್ ಗಂಭೀರ್ (Gautam Gambhir) ಹೊಸ ವಿವಾದವೊಂದಕ್ಕೆ ಸಿಲುಕಿಕೊಂಡಿದ್ದಾರೆ. ಭಾರತ ಹಾಗೂ ನೇಪಾಳ (India vs Nepal) ಪಂದ್ಯದ ನಡುವೆ ನಡೆದ ಅದೊಂದು ಘಟನೆಯ ವಿಡಿಯೋ ಇದೀಗ ಸೋಶಿಯಲ್ ಮೀಡಿಯಾದಲ್ಲಿ ಸಾಕಷ್ಟು ವೈರಲ್ ಆಗುತ್ತಿದ್ದು, ಗೌತಮ್ ಗಂಭೀರ್ ನಡೆಗೆ ಎಲ್ಲೆಡೆ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದೆ. ವಾಸ್ತವವಾಗಿ ವಿಡಿಯೋದಲ್ಲಿ ಸೆರೆಯಾಗಿರುವ ಪ್ರಕಾರ ಪಂದ್ಯ ನಡೆಯುವ ವೇಳೆ ಮೈದಾನದಿಂದ ಹೊರಹೊಗುತ್ತಿದ್ದ ಗಂಭೀರ್​ ಅವರನ್ನು ನೋಡಿದ ಕೇವಲ ಪ್ರೇಕ್ಷಕರು ಕೊಹ್ಲಿ-ಕೊಹ್ಲಿ (Virat Kohli) ಎಂದು ಕೂಗಲಾರಂಭಿಸಿದ್ದಾರೆ. ಇದರಿಂದ ಕೋಪಗೊಂಡ ಗಂಭೀರ್, ಆ ಪ್ರೇಕ್ಷಕರಿಗೆ ತಮ್ಮ ಕೈಬೆರಳಿನಿಂದ ಅಶ್ಲೀಲ ಸನ್ನೆಯನ್ನು ಮಾಡಿದ್ದರು. ಆ ಬಳಿಕ ಗಂಭೀರ್ ಹೀಗೆ ಮಾಡಿದರೆ ಬಗ್ಗೆ ಸೋಶಿಯಲ್ ಮೀಡಿಯಾದಲ್ಲಿ ಭಾರಿ ಚರ್ಚೆ ನಡೆದಿತ್ತು. ಇದೀಗ ಈ ಬಗ್ಗೆ ಗಂಭೀರ್ ಸ್ಪಷ್ಟನೆ ನೀಡಿದ್ದಾರೆ.

ಈ ಬಗ್ಗೆ ಗಂಭೀರ್ ಹೇಳಿದ್ದೇನು?

ಈ ಬಗ್ಗೆ ಮಾತನಾಡಿರುವ ಗಂಭೀರ್, ‘ಸೋಶಿಯಲ್ ಮೀಡಿಯಾದಲ್ಲಿ ಇಡೀ ಸತ್ಯವನ್ನು ತೋರಿಸುವುದಿಲ್ಲ. ಅಲ್ಲಿ ಹಿಂದೂಸ್ತಾನ್ ಮುರ್ದಾಬಾದ್ ಮತ್ತು ಕಾಶ್ಮೀರ ವಿಚಾರವಾಗಿ ಘೋಷಣೆಗಳು ಕೇಳಿಬರುತ್ತಿದ್ದವು. ಆ ವಿಚಾರವಾಗಿ ನಾನು ಆ ರೀತಿಯ ಪ್ರತಿಕ್ರಿಯೆ ನೀಡಿದೆ. ಸಾಮಾಜಿಕ ಜಾಲತಾಣಗಳಲ್ಲಿ ತೋರಿಸಿರುವುದು ನಿಜವಲ್ಲ. ಏಕೆಂದರೆ ಜನರು ತಮ್ಮ ಇಚ್ಛೆಯಂತೆ ವಿಷಯಗಳನ್ನು ತೋರಿಸುತ್ತಾರೆ.

ಅಲ್ಲಿ ಭಾರತದ ವಿರುದ್ಧ ಘೋಷಣೆಗಳನ್ನು ಕೂಗಲಾಗುತ್ತಿತ್ತು ಮತ್ತು ಕಾಶ್ಮೀರದ ಬಗ್ಗೆ ಅನೇಕ ಜನರು ಮಾತನಾಡುತ್ತಿದ್ದರು. ಎರಡು-ಮೂರು ಪಾಕಿಸ್ತಾನಿ ಜನರು ಭಾರತದ ವಿರುದ್ಧ ಮಾತನಾಡುತ್ತಿದ್ದರು. ಅಲ್ಲದೆ ಹಿಂದೂಸ್ತಾನ್ ಮುರ್ದಾಬಾದ್ ಎಂಬ ಘೋಷಣೆಗಳನ್ನು ಕೂಗುತ್ತಿದ್ದರು. ನನ್ನ ದೇಶದ ಬಗ್ಗೆ ಈ ರೀತಿಯ ಮಾತುಗಳನ್ನು ಕೇಳಲು ನನಗೆ ಸಾಧ್ಯವಿಲ್ಲ. ಅಂತಹ ವಿಷಯಗಳಿಗೆ ನಗುವ ವ್ಯಕ್ತಿ ನಾನಲ್ಲ’. ಹೀಗಾಗಿ ನಾನು ಆ ರೀತಿಯ ಪ್ರತಿಕ್ರಿಯೆ ನೀಡಿದೆ ಎಂದು ಗಂಭೀರ್ ಹೇಳಿದ್ದಾರೆ.

ಸಲಹೆ ನೀಡಿದ ಗಂಭೀರ್

ಅಂತಹವರಿಗೆ ಏನು ಹೇಳಲು ಬಯಸುತ್ತೀರಿ ಎಂಬ ಪ್ರಶ್ನೆಗೆ ಉತ್ತರಿಸಿದ ಗಂಭೀರ್, ‘ಜನರು ಪಂದ್ಯ ವೀಕ್ಷಿಸಲು ಬಂದಾಗ ತಮ್ಮ ತಂಡವನ್ನು ಬೆಂಬಲಿಸಬೇಕೆ ಹೊರತು, ಇಂತಹ ಪರಿಸ್ಥಿತಿಯಲ್ಲಿ ರಾಜಕೀಯ ಮಾಡುವ ಅಗತ್ಯವಿಲ್ಲ’ ಎಂಬ ಸಲಹೆಯನ್ನು ಕ್ರಿಕೆಟ್ ಅಭಿಮಾನಿಗಳಿಗೆ ನೀಡಿದ್ದಾರೆ.

ಇನ್ನಷ್ಟು ಕ್ರೀಡಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಸೊಸೆಗೆ ನೌಕರಿ ಕೊಟ್ಟಿಲ್ಲವೆಂದು ಅಂಗನವಾಡಿಗೆ ಬೀಗ ಜಡಿದ ಮಾಲೀಕ!
ಸೊಸೆಗೆ ನೌಕರಿ ಕೊಟ್ಟಿಲ್ಲವೆಂದು ಅಂಗನವಾಡಿಗೆ ಬೀಗ ಜಡಿದ ಮಾಲೀಕ!
ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು