AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಏಷ್ಯಾಕಪ್​ಗೆ ಬಿಸಿಸಿಐ ಟೀಮ್ ಇಂಡಿಯಾವನ್ನು ಯಾಕಿನ್ನೂ ಪ್ರಕಟಿಸಿಲ್ಲ ಗೊತ್ತೇ?: ಕಾರಣ ಬಹಿರಂಗ

India Squad for Asia Cup: ಬಹುನಿರೀಕ್ಷಿತ ಏಷ್ಯಾಕಪ್ ಟೂರ್ನಿ ಆಗಸ್ಟ್ 30 ರಂದು ಆರಂಭವಾಗಲಿದೆ. ಈ ಟೂರ್ನಿಗೆ ಬಹುತೇಕ ಎಲ್ಲ ತಂಡಗಳು ಪ್ರಕಟವಾಗಿದೆ. ಆದರೆ, ಬಿಸಿಸಿಐ ಟೀಮ್ ಇಂಡಿಯಾವನ್ನು ಮಾತ್ರ ಇನ್ನೂ ಹೆಸರಿಸಿಲ್ಲ. ಇದೀಗ ಬಿಸಿಸಿಐ ಭಾರತ ತಂಡವನ್ನು ಹೆಸರಿಸಲು ತಡಮಾಡುತ್ತಿರುವುದು ಏಕೆ ಎಂಬ ವಿಚಾರ ಬೆಳಕಿಗೆ ಬಂದಿದೆ.

ಏಷ್ಯಾಕಪ್​ಗೆ ಬಿಸಿಸಿಐ ಟೀಮ್ ಇಂಡಿಯಾವನ್ನು ಯಾಕಿನ್ನೂ ಪ್ರಕಟಿಸಿಲ್ಲ ಗೊತ್ತೇ?: ಕಾರಣ ಬಹಿರಂಗ
Team India and BCCI
Vinay Bhat
|

Updated on: Aug 17, 2023 | 6:42 AM

Share

ಬಹುನಿರೀಕ್ಷಿತ ಏಷ್ಯಾಕಪ್ 2023 (Asia Cup 2023) ಟೂರ್ನಿಗೆ ದಿನಗಣನೆ ಶುರುವಾಗಿದೆ. ಆಗಸ್ಟ್ 30 ರಂದು ಈ ಮಹತ್ವದ ಟೂರ್ನಿಗೆ ಚಾಲನೆ ಸಿಗಲಿದೆ. ಆದರೆ, ಏಷ್ಯಾಕಪ್​ಗೆ ಭಾರತ ತಂಡ ಮಾತ್ರ ಇನ್ನೂ ಪ್ರಕಟವಾಗಿಲ್ಲ. ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ ಟೀಮ್ ಇಂಡಿಯಾ ಪ್ಲೇಯರ್ಸ್ ಅನ್ನು ಹೆಸರಿಸಿಲ್ಲ. ಅಭಿಮಾನಿಗಳಂತು ಇದಕ್ಕಾಗಿ ಕಾದುಕುಳಿತಿದ್ದಾರೆ. ಆದರೀಗ ಭಾರತ ತಂಡದ ಆಯ್ಕೆಗೆ ಬಿಸಿಸಿಐ ಯಾಕಿಷ್ಟು ತಡ ಮಾಡುತ್ತಿದೆ ಎಂಬ ಸುದ್ದಿ ಹೊರಬಿದ್ದಿದೆ.

ಈ ವಾರದ ಆರಂಭದಲ್ಲಿ ಭಾರತ ತಂಡದ ಘೋಷಣೆಗೆ ಬಿಸಿಸಿಐ ಸಭೆ ನಡೆಸಲು ನಿರ್ಧರ ಮಾಡಲಾಗಿತ್ತು. ಆದರೆ ಇದೀಗ ಪ್ರಮುಖ ಕಾರಣದಿಂದ ಆಯ್ಕೆ ಸಭೆಯನ್ನು ಮುಂದೂಡಲಾಗಿದೆ ಎಂದು ಪಿಟಿಐ ವರದಿ ಮಾಡಿದೆ. ಅಜಿತ್ ಅಗರ್ಕರ್ ನೇತೃತ್ವದ ಆಯ್ಕೆ ಸಮಿತಿ ಕೆಲ ದಿನ ಕಾದು ಈ ವಾರದ ಅಂತ್ಯದಲ್ಲಿ ಸಭೆ ನಡೆಸಿ ತಂಡವನ್ನು ಪ್ರಕಟ ಮಾಡಲಿದೆಯಂತೆ. ಇಷ್ಟಕ್ಕೂ ಆಯ್ಕೆ ಸಮಿತಿ ಕಾಯುತ್ತಿರುವುದು ಕೆಎಲ್ ರಾಹುಲ್ ಮತ್ತು ಶ್ರೇಯಸ್ ಅಯ್ಯರ್ ಫಿಟ್ನೆಸ್​ಗಾಗಿ.

ಈ ಇಬ್ಬರೂ ಬ್ಯಾಟ್ಸ್‌ಮನ್‌ಗಳು ರಾಷ್ಟ್ರೀಯ ಕ್ರಿಕೆಟ್ ಅಕಾಡೆಮಿಯಲ್ಲಿ (ಎನ್‌ಸಿಎ) ಅಭ್ಯಾಸ ಪಂದ್ಯಗಳನ್ನು ಆಡಲು ಪ್ರಾರಂಭಿಸಿದ್ದಾರೆ. ಸಂಪೂರ್ಣ ಚೇತರಿಕೆಯತ್ತ ಮುಖಮಾಡಿದ್ದಾರೆ. ಶೇ. 100 ರಷ್ಟು ಫಿಟ್ ಆಗಿದ್ದರೆ, ಇಬ್ಬರೂ ಆಟಗಾರರು ಏಷ್ಯಾಕಪ್​ಗೆ ಆಯ್ಕೆಯಾಗುತ್ತಾರೆ. ಹೀಗಾಗಿ ಇವರಿಬ್ಬರ ಫಿಟ್ನೆಸ್ ಟೆಸ್ಟ್ ನಡೆಸಬೇಕಿದೆ. ಬಳಿಕ ಸಭೆ ನಡೆಸಿ ಬಿಸಿಸಿಐ ಆಯ್ಕೆ ಸಮಿತಿ ಅಂತಿಮ ನಿರ್ಧಾರ ತೆಗೆದುಕೊಳ್ಳಲಿದೆ.

ಇದನ್ನೂ ಓದಿ
Image
VIDEO: ಅಭ್ಯಾಸ ಪಂದ್ಯದಲ್ಲಿ ರಿಷಭ್ ಪಂತ್ ಭರ್ಜರಿ ಬ್ಯಾಟಿಂಗ್
Image
ಏಕದಿನ ವಿಶ್ವಕಪ್​ಗೆ ಆಸ್ಟ್ರೇಲಿಯಾ, ಇಂಗ್ಲೆಂಡ್ ಸಂಭಾವ್ಯ ತಂಡಗಳು ಪ್ರಕಟ
Image
ಜಸ್​ಪ್ರೀತ್ ಬುಮ್ರಾ ಟಿ20 ತಂಡದ 11ನೇ ನಾಯಕ: ಉಳಿದ 10 ಕ್ಯಾಪ್ಟನ್​ಗಳ ಪಟ್ಟಿ ಇಲ್ಲಿದೆ
Image
ವರ್ಷಕ್ಕೆ 1,248 ಕೋಟಿ ರೂ: ಅಲ್​ ಹಿಲಾಲ್ ಕ್ಲಬ್​ ಜೊತೆ ನೇಮರ್ ಒಪ್ಪಂದ

ಒನ್​ ಡೇ ಕಪ್ ಟೂರ್ನಿಯಿಂದ ಪೃಥ್ವಿ ಶಾ ಔಟ್

ರಾಹುಲ್ ಅವರು ಏಕದಿನ ಕ್ರಿಕೆಟ್​ನಲ್ಲಿ ಭಾರತದ ಪ್ರಮುಖ ವಿಕೆಟ್‌ಕೀಪರ್ ಆಗಿದ್ದು, ವಿಶ್ವಕಪ್‌ನಲ್ಲಿ ಕಣಕ್ಕಿಳಿಯಬೇಕಿದೆ. 4ನೇ ಕ್ರಮಾಂಕದಲ್ಲಿ ತೊಂದರೆ ಅನುಭವಿಸುತ್ತಿರುವ ಟೀಮ್ ಇಂಡಿಯಾಕ್ಕೆ ಅಯ್ಯರ್‌ ಅಗತ್ಯತೆ ತುಂಬಾ ಇದೆ. ಹೀಗಾಗಿ ಇವರಿಬ್ಬರು ಫಿಟ್ ಆಗಿ ತಂಡಕ್ಕೆ ಮರಳುವುದು ಮುಖ್ಯವಾಗಿದೆ.

ಐಪಿಎಲ್ 2023 ರ ಸಂದರ್ಭದಲ್ಲಿ ಫೀಲ್ಡಿಂಗ್ ಮಾಡುವಾಗ ರಾಹುಲ್ ಮಂಡಿರಜ್ಜು ಗಾಯಕ್ಕೆ ತುತ್ತಾಗಿದ್ದರು. ಇದರಿಂದಾಗಿ ಕೆಎಲ್ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ಫೈನಲ್‌ನಿಂದ ಹೊರನಡೆಯಬೇಕಾಯಿತು. ಅತ್ತ ಅಯ್ಯರ್ ಅವರು ಬಾರ್ಡರ್-ಗವಾಸ್ಕರ್ ಟ್ರೋಫಿಯ ಸಮಯದಲ್ಲಿ ಬೆನ್ನುನೋವಿಗೆ ತುತ್ತಾಗಿದ್ದರು. ಬಳಿಕ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದರೂ ಐಪಿಎಲ್ 2023 ರಿಂದ ಹೊರನಡೆಯಬೇಕಾಯಿತು.

ಏಷ್ಯಾಕಪ್ 2023 ರಲ್ಲಿ ಭಾರತ ತಂಡವನ್ನು ರೋಹಿತ್ ಶರ್ಮಾ ನಾಯಕನಾಗಿ ಮುನ್ನಡೆಸಲಿದ್ದಾರೆ. ಹಾರ್ದಿಕ್ ಪಾಂಡ್ಯ ಉಪ ನಾಯಕನಾಗಿದ್ದಾರೆ. ಆಗಸ್ಟ್ 30 ರಂದು ಏಷ್ಯಾಕಪ್​ಗೆ ಚಾಲನೆ ಸಿಗಲಿದೆ. ಸೆಪ್ಟೆಂಬರ್ 2 ರಂದು ಪಾಕಿಸ್ತಾನದ ವಿರುದ್ಧ ಆಡುವ ಮೂಲಕ ಭಾರತ ತನ್ನ ಅಭಿಯಾನ ಆರಂಭಿಸಲಿದೆ. ಏಷ್ಯಾಕಪ್ ಬಳಿಕ ಬಹುನಿರೀಕ್ಷಿತ ಐಸಿಸಿ ಏಕದಿನ ವಿಶ್ವಕಪ್ ನಡೆಯಲಿದೆ.

ಇನ್ನಷ್ಟು ಕ್ರೀಡಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
Vinay Bhat
Vinay Bhat

Tv9 ಕನ್ನಡ ಡಿಜಿಟಲ್‌ನಲ್ಲಿ 2021ರ ಜುಲೈನಿಂದ ಕ್ರೀಡಾ ಹಾಗೂ ತಂತ್ರಜ್ಞಾನ ಪತ್ರಕರ್ತನಾಗಿ ಕೆಲಸ ಮಾಡುತ್ತಿದ್ದೇನೆ. ಡಿಜಿಟಲ್ ವಿಭಾಗದಲ್ಲಿ 6 ವರ್ಷ ಅನುಭವ. ಮೂಲತಃ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನವ. ಕ್ರೀಡಾ ಸುದ್ದಿ, ಕ್ರೀಡಾ ಲೇಖನ, ಟೆಕ್ನಾಲಜಿ, ಸಿನಿಮಾ ಸುದ್ದಿ ಬರೆಯುವುದು ನನ್ನ ಆಸಕ್ತದಾಯಕ ವಿಷಯಗಳು.

Read More
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​