AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಏಷ್ಯಾಕಪ್ 2023 ರಲ್ಲಿ ಇಂದು-ನಾಳೆ ಯಾವುದೇ ಪಂದ್ಯವಿಲ್ಲ: ಯಾಕೆ ಗೊತ್ತೇ?

Asia Cup 2023 Todays's Match: ಏಷ್ಯಾಕಪ್​ನಲ್ಲಿ ಇಂದು ಮತ್ತು ನಾಳೆ ಪಂದ್ಯವನ್ನು ಆಯೋಜಿಸಲಾಗಿಲ್ಲ. ಯಾವುದೇ ಪಂದ್ಯ ಏಷ್ಯಾಕಪ್​ನಲ್ಲಿ ಎರಡು ದಿನ ನಡೆಯುತ್ತಿಲ್ಲ. ಸೆಪ್ಟೆಂಬರ್ 9ಕ್ಕೆ ಶ್ರೀಲಂಕಾ-ಬಾಂಗ್ಲಾದೇಶ ಮುಖಾಮುಖಿ ಆಗಲಿದೆ. ಕೊಲಂಬೊದ ಆರ್. ಪ್ರೇಮದಾಸ ಸ್ಟೇಡಿಯಂನಲ್ಲಿ ಈ ಪಂದ್ಯವನ್ನು ಆಯೋಜಿಸಲಾಗಿದೆ. ಆದರೆ, ಎರಡು ದಿನಗಳ ಕಾಲ ಪಂದ್ಯ ನಡೆಯದಿರಲಿ ಕಾರಣವಿದೆ.

ಏಷ್ಯಾಕಪ್ 2023 ರಲ್ಲಿ ಇಂದು-ನಾಳೆ ಯಾವುದೇ ಪಂದ್ಯವಿಲ್ಲ: ಯಾಕೆ ಗೊತ್ತೇ?
Asia Cup 2023
Vinay Bhat
|

Updated on: Sep 07, 2023 | 7:16 AM

Share

ಏಷ್ಯಾಕಪ್ 2023 (Asia Cup 2023) ಟೂರ್ನಿಯಲ್ಲಿ ಸೂಪರ್-4 ಹಂತದ ಪಂದ್ಯಗಳಿಗೆ ಈಗಾಗಲೇ ಚಾಲನೆ ಸಿಕ್ಕಾಗಿದೆ. ಸೆಪ್ಟೆಂಬರ್ 6 ರಂದು ನಡೆದ ಸೂಪರ್-4 ಸ್ಟೇಜ್​ನ ಮೊದಲ ಪಂದ್ಯದಲ್ಲಿ ಬಾಂಗ್ಲಾದೇಶ ವಿರುದ್ಧ ಪಾಕಿಸ್ತಾನ ಭರ್ಜರಿ ಗೆಲುವು ಕಾಣುವ ತನ್ನ ಫಾರ್ಮ್ ಮುಂದುವರೆಸಿತು. ಲಾಹೊರ್​ನ ಗಡಾಫಿ ಸ್ಟೇಡಿಯಂನಲ್ಲಿ ನಡೆದ ಪಂದ್ಯದಲ್ಲಿ ಮಾರಕ ಬೌಲಿಂಗ್ ದಾಳಿ ಸಂಘಟಿಸಿದ ಬಾಬರ್ ಪಡೆ 7 ವಿಕೆಟ್​ಗಳ ಜಯ ಸಾಧಿಸಿತು. ಆದರೆ, ಏಷ್ಯಾಕಪ್​ನಲ್ಲಿ ಇಂದು ಮತ್ತು ನಾಳೆ ಪಂದ್ಯವನ್ನು ಆಯೋಜಿಸಲಾಗಿಲ್ಲ. ಯಾವುದೇ ಪಂದ್ಯ ಏಷ್ಯಾಕಪ್​ನಲ್ಲಿ ಎರಡು ದಿನ ನಡೆಯುತ್ತಿಲ್ಲ. ಇದಕ್ಕೆ ಕಾರಣವಿದೆ.

ಏಷ್ಯಾಕಪ್‌ನ ಸೂಪರ್-4 ಹಂತದಲ್ಲಿ ಒಟ್ಟು ನಾಲ್ಕು ತಂಡಗಳು ಭಾಗವಹಿಸುತ್ತಿವೆ. ಶ್ರೀಲಂಕಾ, ಪಾಕಿಸ್ತಾನ, ಭಾರತ ಹಾಗೂ ಬಾಂಗ್ಲಾದೇಶ. ಇದರಲ್ಲಿ ಬುಧವಾರ ನಡೆದ ಮೊದಲ ಪಂದ್ಯವನ್ನು ಪಾಕಿಸ್ತಾನದಲ್ಲಿ ಆಯೋಜಿಸಲಾಗಿತ್ತು. ಆದರೆ, ವೇಳಾಪಟ್ಟಿಯ ಪ್ರಕಾರ ಮುಂದಿನ ಪಂದ್ಯದಲ್ಲಿ ಶ್ರೀಲಂಕಾ ಹಾಗೂ ಬಾಂಗ್ಲಾದೇಶ ಮುಖಾಮುಖಿ ಆಗಲಿದೆ. ಈ ಮ್ಯಾಚ್ ಇರುವುದು ಶ್ರೀಲಂಕಾದಲ್ಲಿ. ಬಾಂಗ್ಲಾ ತಂಡ ಪಾಕ್​ನಿಂದ ಲಂಕಾಕಕ್ಕೆ ತೆರಳಲು ಸಮಯ ಬೇಕಿದೆ. ಹೀಗಾಗಿ ಒಂದು ದಿನ ಪ್ರಯಾಣಕ್ಕಾಗಿ, ಮತ್ತೊಂದು ದಿನ ವಿಶ್ರಾಂತಿಗಾಗಿ ಎಂದು ಎರಡು ದಿನ ಏಷ್ಯಾಕಪ್​ನಲ್ಲಿ ಪಂದ್ಯ ಆಯೋಜಿಸಲಾಗಿಲ್ಲ.

ವಿಶ್ವಕಪ್​ ಗೆಲ್ಲುವ ಫೇವರೇಟ್ ತಂಡ ಭಾರತ: ಇಲ್ಲಿದೆ ಕಾರಣ

ಇದನ್ನೂ ಓದಿ
Image
Asia Cup 2023: ಸೂಪರ್​-4 ನಲ್ಲಿ ಪಾಕಿಸ್ತಾನ್ ಶುಭಾರಂಭ: ಮುಂದಿನ ಎದುರಾಳಿ
Image
ಕೆರಿಬಿಯನ್ ಪ್ರೀಮಿಯರ್ ಲೀಗ್​ನಲ್ಲಿ ಕನ್ನಡತಿಯ ಮಿಂಚಿಂಗ್
Image
ಭಾರತ ಏಕದಿನ ವಿಶ್ವಕಪ್ ತಂಡದಲ್ಲಿ ಐವರಿಗಿಲ್ಲ ಸ್ಥಾನ..!
Image
ಏಕದಿನ ರ‍್ಯಾಂಕಿಂಗ್ ಪ್ರಕಟ: ಟಾಪ್-3 ನಲ್ಲಿ ಕಾಣಿಸಿಕೊಂಡ ಶುಭ್​ಮನ್ ಗಿಲ್

ಸೆ. 9ಕ್ಕೆ ಲಂಕಾ-ಬಾಂಗ್ಲಾ ಮುಖಾಮುಖಿ:

ಸೆಪ್ಟೆಂಬರ್ 9ಕ್ಕೆ ಏಷ್ಯಾಕಪ್​ನ ಸೂಪರ್-4 ಹಂತದ ಪಂದ್ಯದಲ್ಲಿ ಶ್ರೀಲಂಕಾ-ಬಾಂಗ್ಲಾದೇಶ ಮುಖಾಮುಖಿ ಆಗಲಿದೆ. ಕೊಲಂಬೊದ ಆರ್. ಪ್ರೇಮದಾಸ ಸ್ಟೇಡಿಯಂನಲ್ಲಿ ಈ ಪಂದ್ಯವನ್ನು ಆಯೋಜಿಸಲಾಗಿದೆ. ಈಗಾಗಲೇ ಮೊದಲ ಪಂದ್ಯದಲ್ಲಿ ಪಾಕ್ ವಿರುದ್ಧ ಸೋತ ಬಾಂಗ್ಲಾಕ್ಕೆ ಇದು ಮಾಡು ಇಲ್ಲವೇ ಮಡಿ ಪಂದ್ಯವಾಗಿದೆ. ಅತ್ತ ಗುಂಪು ಹಂತದಲ್ಲಿ ಬೊಂಬಾಟ್ ಪ್ರದರ್ಶನ ತೋರಿರುವ ಶ್ರೀಲಂಕಾ ಸೂಪರ್-4 ನಲ್ಲಿ ಯಾವ ರೀತಿ ಪ್ರದರ್ಶನ ತೋರುತ್ತೆ ಎಂಬುದು ನೋಡಬೇಕಿದೆ.

ಪಂದ್ಯಗಳು ನಡೆಯುವ ಸ್ಥಳಗಳಲ್ಲಿ ಬದಲಾವಣೆ ಇಲ್ಲ:

ಏಷ್ಯಾಕಪ್‌ನ ಸೂಪರ್-4 ರೌಂಡ್ ಮತ್ತು ಫೈನಲ್‌ ಪಂದ್ಯಗಳ ಸ್ಥಳಗಳನ್ನು ಬದಲಾಹಿಸುವ ಸಾಧ್ಯತೆಗಳಿವೆ ಎಂದು ಹಲವು ಮಾಧ್ಯಮಗಳು ವರದಿ ಮಾಡಿದ್ದವು. ಆದರೆ ಏಷ್ಯನ್ ಕ್ರಿಕೆಟ್ ಕೌನ್ಸಿಲ್ ಈ ಬಗ್ಗೆ ಅಧಿಕೃತ ಹೇಳಿಕೆ ನೀಡಿದ್ದು, ಏಷ್ಯಾಕಪ್ ಪಂದ್ಯಗಳು ನಡೆಯುವ ಸ್ಥಳಗಳಲ್ಲಿ ಯಾವುದೇ ಬದಲಾವಣೆ ಇಲ್ಲ. ಪಂದ್ಯಗಳನ್ನು ಈ ಮೊದಲೇ ನಿರ್ಧರಿಸಿದ ಸ್ಥಳಗಳಲ್ಲಿ ಅಂದರೆ ಕೊಲಂಬೊದಲ್ಲಿಯೇ ಆಡಲಾಗುತ್ತದೆ. ವೇಳಾಪಟ್ಟಿಯಲ್ಲಿ ಯಾವುದೇ ಬದಲಾವಣೆ ಇಲ್ಲ ಎಂಬ ಮಾಹಿತಿ ನೀಡಿದೆ.

ಇನ್ನಷ್ಟು ಕ್ರೀಡಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್