AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Asia Cup 2023: ಟೀಮ್ ಇಂಡಿಯಾಗೆ ಪ್ಲೇಯಿಂಗ್ 11 ಆಯ್ಕೆಯೇ ದೊಡ್ಡ ಸವಾಲು

Asia Cup 2023: ಮಧ್ಯಮ ಕ್ರಮಾಂಕದಲ್ಲಿ ಹಾರ್ದಿಕ್ ಪಾಂಡ್ಯ ಹಾಗೂ ರವೀಂದ್ರ ಜಡೇಜಾ ತಂಡಕ್ಕೆ ಬಲ ತುಂಬುವ ನಿರೀಕ್ಷೆಯಿದೆ. ಇಲ್ಲಿ 7 ಕ್ರಮಾಂಕಗಳು ಪೂರ್ಣ ಎನ್ನಬಹುದು. ಇನ್ನುಳಿದ ನಾಲ್ಕು ಸ್ಥಾನಗಳಲ್ಲಿ ಮೂವರು ವೇಗಿಗಳು ಕಾಣಿಸಿಕೊಳ್ಳುವುದು ಖಚಿತ.

Asia Cup 2023: ಟೀಮ್ ಇಂಡಿಯಾಗೆ ಪ್ಲೇಯಿಂಗ್ 11 ಆಯ್ಕೆಯೇ ದೊಡ್ಡ ಸವಾಲು
Team India (ಸಾಂದರ್ಭಿಕ ಚಿತ್ರ)
Follow us
TV9 Web
| Updated By: ಝಾಹಿರ್ ಯೂಸುಫ್

Updated on: Aug 21, 2023 | 7:28 PM

ಏಷ್ಯಾಕಪ್​ಗಾಗಿ ಬಿಸಿಸಿಐ ಆಯ್ಕೆ ಸಮಿತಿ 17 ಸದಸ್ಯರನ್ನು ಆಯ್ಕೆ ಮಾಡಿದೆ. ಈ ಹದಿನೇಳು ಸದಸ್ಯರಿಂದ 11 ಆಟಗಾರರನ್ನು ಆಯ್ಕೆ ಮಾಡುವುದೇ ಇದೀಗ ಟೀಮ್ ಇಂಡಿಯಾ ಮುಂದಿರುವ ದೊಡ್ಡ ಸವಾಲು. ಏಕೆಂದರೆ ಭಾರತ ತಂಡವು ಏಷ್ಯಾಕಪ್​ನಲ್ಲಿ ತನ್ನ ಮೊದಲ ಪಂದ್ಯವನ್ನು ಪಾಕಿಸ್ತಾನ್ ವಿರುದ್ಧ ಆಡಲಿದೆ. ಈ ಪಂದ್ಯಕ್ಕಾಗಿ ಬಲಿಷ್ಠ ಪ್ಲೇಯಿಂಗ್ ಇಲೆವೆನ್​ ಅನ್ನು ರೂಪಿಸಬೇಕಿದೆ.

ಆದರೆ ಇದೀಗ ತಂಡಕ್ಕೆ ಆಯ್ಕೆಯಾಗಿರುವ ಕೆಎಲ್ ರಾಹುಲ್ ಹಾಗೂ ಶ್ರೇಯಸ್ ಅಯ್ಯರ್ ಕಳೆದ ನಾಲ್ಕೈದು ತಿಂಗಳುಗಳಿಂದ ಸ್ಪರ್ಧಾತ್ಮಕ ಕ್ರಿಕೆಟ್ ಆಡಿಯೇ ಇಲ್ಲ. ಇನ್ನು ತಂಡದಲ್ಲಿರುವ ಸೂರ್ಯಕುಮಾರ್ ಯಾದವ್ ಫಾರ್ಮ್​ನಲ್ಲಿಲ್ಲ. ಹಾಗೆಯೇ ಹೊಸದಾಗಿ ಆಯ್ಕೆಯಾಗಿರುವ ತಿಲಕ್ ವರ್ಮಾಗೆ ಅಂತಾರಾಷ್ಟ್ರೀಯ ಏಕದಿನ ಕ್ರಿಕೆಟ್​ನ ಅನುಭವ ಇಲ್ಲ.

ಹೀಗಾಗಿಯೇ ಪಾಕಿಸ್ತಾನ್ ವಿರುದ್ಧದ ಪಂದ್ಯಕ್ಕಾಗಿ ಪ್ಲೇಯಿಂಗ್ ಇಲೆವೆನ್ ರೂಪಿಸುವುದು ನಾಯಕ ರೋಹಿತ್ ಶರ್ಮಾ ಹಾಗೂ ಕೋಚ್ ರಾಹುಲ್ ದ್ರಾವಿಡ್ ಮುಂದಿರುವ ದೊಡ್ಡ ಸವಾಲು ಎನ್ನಬಹುದು.

ಇಲ್ಲಿ ಆರಂಭಿಕರಾಗಿ ಶುಭ್​ಮನ್ ಗಿಲ್ ಹಾಗೂ ರೋಹಿತ್ ಶರ್ಮಾ ಕಣಕ್ಕಿಳಿಯುವುದು ಖಚಿತ ಎನ್ನಬಹುದು. ಹಾಗೆಯೇ ಮೂರನೇ ಕ್ರಮಾಂಕ ವಿರಾಟ್ ಕೊಹ್ಲಿಗೆ ಖಾಯಂ. ನಾಲ್ಕನೇ ಸ್ಥಾನದಲ್ಲಿ ಶ್ರೇಯಸ್ ಅಯ್ಯರ್ ಕಣಕ್ಕಿಳಿಯಬೇಕಾಗುತ್ತದೆ. ಹಾಗೆಯೇ ಐದನೇ ಕ್ರಮಾಂಕದಲ್ಲಿ ಕೆಎಲ್ ರಾಹುಲ್. ಇದರ ಜೊತೆಗೆ ವಿಕೆಟ್ ಕೀಪಿಂಗ್ ಜವಾಬ್ದಾರಿಯನ್ನು ಕೂಡ ನಿರ್ವಹಿಸಬೇಕು.

ಆದರೆ ಸಂಪೂರ್ಣ ಫಿಟ್​ನೆಸ್ ಹೊಂದಿಲ್ಲದ ಕಾರಣ ರಾಹುಲ್ ಮೊದಲ ಪಂಧ್ಯದಿಂದ ಹೊರಗುಳಿಯುವ ಸಾಧ್ಯತೆಯಿದೆ ಎಂದು ಖುದ್ದು ಆಯ್ಕೆ ಸಮಿತಿ ಅಧ್ಯಕ್ಷ ಅಜಿತ್ ಅಗರ್ಕರ್ ತಿಳಿಸಿದ್ದಾರೆ. ಒಂದು ವೇಳೆ ರಾಹುಲ್ ಹೊರಗುಳಿದರೆ ವಿಕೆಟ್ ಕೀಪರ್ ಆಗಿ ಇಶಾನ್ ಕಿಶನ್ ಕಣಕ್ಕಿಳಿಯಬೇಕಾಗುತ್ತದೆ.

ಇಲ್ಲಿ ಗಮನಿಸಬೇಕಾದ ವಿಷಯ ಎಂದರೆ ಇಶಾನ್ ಕಿಶನ್ ಆರಂಭಿಕನಾಗಿ ಮಾತ್ರ ಇದುವರೆಗೆ ಯಶಸ್ಸು ಸಾಧಿಸಿದ್ದಾರೆ. ಹೀಗಾಗಿ ಓಪನರ್ ಆಗಿ ಕಣಕ್ಕಿಳಿಸಿದರೆ, ಶುಭ್​ಮನ್ ಗಿಲ್ ಅವರ ಬ್ಯಾಟಿಂಗ್ ಕ್ರಮಾಂಕದಲ್ಲೂ ಬದಲಾವಣೆ ಮಾಡಬೇಕಾಗುತ್ತದೆ.

ಇತ್ತ ಗಿಲ್​ಗೆ 3ನೇ ಕ್ರಮಾಂಕಗಿಂತ ಕೆಳಗಿನ ಸ್ಥಾನದಲ್ಲಿ ಬ್ಯಾಟಿಂಗ್ ಮಾಡಿದ ಅನುಭವವಿಲ್ಲ. ಹಾಗಾಗಿ ಪಾಕಿಸ್ತಾನ್ ವಿರುದ್ಧದ ಪಂದ್ಯಕ್ಕೂ ಮುನ್ನ ಕೆಎಲ್ ರಾಹುಲ್ ಅವರ ಸಂಪೂರ್ಣ ಚೇತರಿಸಿಕೊಳ್ಳಬೇಕಿರುವುದು ಟೀಮ್ ಇಂಡಿಯಾ ಪಾಲಿಗೆ ಅನಿವಾರ್ಯ.

ಇನ್ನು ಮಧ್ಯಮ ಕ್ರಮಾಂಕದಲ್ಲಿ ಹಾರ್ದಿಕ್ ಪಾಂಡ್ಯ ಹಾಗೂ ರವೀಂದ್ರ ಜಡೇಜಾ ತಂಡಕ್ಕೆ ಬಲ ತುಂಬುವ ನಿರೀಕ್ಷೆಯಿದೆ. ಇಲ್ಲಿ 7 ಕ್ರಮಾಂಕಗಳು ಪೂರ್ಣ ಎನ್ನಬಹುದು. ಇನ್ನುಳಿದ ನಾಲ್ಕು ಸ್ಥಾನಗಳಲ್ಲಿ ಮೂವರು ವೇಗಿಗಳು ಕಾಣಿಸಿಕೊಳ್ಳುವುದು ಖಚಿತ. ಈ ಸ್ಥಾನಗಳಲ್ಲಿ ಜಸ್​ಪ್ರೀತ್ ಬುಮ್ರಾ, ಮೊಹಮ್ಮದ್ ಶಮಿ ಹಾಗೂ ಮೊಹಮ್ಮದ್ ಸಿರಾಜ್ ಕಾಣಿಸಿಕೊಳ್ಳಬಹುದು. ಹಾಗೆಯೇ 11ನೇ ಆಟಗಾರನಾಗಿ ಸ್ಪಿನ್ನರ್ ಕುಲ್ದೀಪ್​ ಯಾದವ್​ಗೆ ಅವಕಾಶ ಸಿಗಬಹುದು.

ಈ ಲೆಕ್ಕಾಚಾರಗಳೊಂದಿಗೆ ಪ್ಲೇಯಿಂಗ್ ಇಲೆವೆನ್ ರೂಪಿಸಿದರೆ ಆಲ್​ರೌಂಡರ್​ಗಳಾದ ಅಕ್ಷರ್ ಪಟೇಲ್ ಹಾಗೂ ಶಾರ್ದೂಲ್ ಠಾಕೂರ್ ಅವರನ್ನು ಕೈ ಬಿಡಬೇಕಾಗುತ್ತದೆ.

ಒಟ್ಟಿನಲ್ಲಿ ಮೊದಲ ಪಂದ್ಯದಲ್ಲೇ ಸಾಂಪ್ರದಾಯಿಕ ಎದುರಾಳಿಯನ್ನು ಎದುರಿಸಲಿರುವ ಭಾರತ ತಂಡಕ್ಕೆ ಕಂಬ್ಯಾಕ್ ಮಾಡಿರುವ ಆಟಗಾರರದ್ದೇ ಚಿಂತೆಯಾಗಿದೆ. ಇಲ್ಲಿ ಕೆಎಲ್ ರಾಹುಲ್ ಹಾಗೂ ಶ್ರೇಯಸ್ ಅಯ್ಯರ್ ಫಾರ್ಮ್​ನಲ್ಲಿದ್ದಾರಾ ಎಂಬುದು ಪಾಕ್​ ವಿರುದ್ಧದ ಪಂದ್ಯದ ಬಳಿಕವಷ್ಟೇ ತಿಳಿಯಲಿದೆ. ಹೀಗಾಗಿ ರೋಹಿತ್ ಶರ್ಮಾ ಇವರಿಬ್ಬರಲ್ಲಿ ಒಬ್ಬರನ್ನು ಕೈ ಬಿಡಲಿದ್ದಾರಾ ಅಥವಾ ಇಬ್ಬರನ್ನೂ ಕಣಕ್ಕಿಳಿಸಲಿದ್ದಾರಾ ಕಾದು ನೋಡಬೇಕಿದೆ.

ಇದನ್ನೂ ಓದಿ: ಸ್ಪೋಟಕ ಬ್ಯಾಟಿಂಗ್​ ಮೂಲಕ ದಾಖಲೆ ಬರೆದ ರಿಂಕು ಸಿಂಗ್

ಏಷ್ಯಾಕಪ್​ಗೆ ಭಾರತ ತಂಡ: ರೋಹಿತ್ ಶರ್ಮಾ (ನಾಯಕ), ಶುಭ್​ಮನ್ ಗಿಲ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಕೆಎಲ್ ರಾಹುಲ್ (ವಿಕೆಟ್ ಕೀಪರ್), ತಿಲಕ್ ವರ್ಮಾ, ಇಶಾನ್ ಕಿಶನ್ (ವಿಕೆಟ್ ಕೀಪರ್), ಸೂರ್ಯಕುಮಾರ್ ಯಾದವ್, ಹಾರ್ದಿಕ್ ಪಾಂಡ್ಯ (ಉಪನಾಯಕ), ರವೀಂದ್ರ ಜಡೇಜಾ, ಅಕ್ಷರ್ ಪಟೇಲ್, ಶಾರ್ದೂಲ್ ಠಾಕೂರ್, ಕುಲ್ದೀಪ್ ಯಾದವ್, ಮೊಹಮ್ಮದ್ ಸಿರಾಜ್, ಜಸ್ಪ್ರೀತ್ ಬುಮ್ರಾ, ಮೊಹಮ್ಮದ್ ಶಮಿ, ಪ್ರಸಿದ್ಧ್ ಕೃಷ್ಣ, ಸಂಜು ಸ್ಯಾಮ್ಸನ್ (ಮೀಸಲು ಆಟಗಾರ).

ಶಿವಾನಂದ ಪಾಟೀಲ್ ರಾಜೀನಾಮೆ ಅಂಗೀಕರಿಸಲು ಬರಲ್ಲ: ಯುಟಿ ಖಾದರ್
ಶಿವಾನಂದ ಪಾಟೀಲ್ ರಾಜೀನಾಮೆ ಅಂಗೀಕರಿಸಲು ಬರಲ್ಲ: ಯುಟಿ ಖಾದರ್
ಪತ್ರದಲ್ಲಿ ಷರತ್ತುಗಳಿರಲ್ಲ, 2 ಸಾಲಿನ ಸಾರಾಂಶ ಮಾತ್ರ ಇರುತ್ತದೆ: ಯತ್ನಾಳ್
ಪತ್ರದಲ್ಲಿ ಷರತ್ತುಗಳಿರಲ್ಲ, 2 ಸಾಲಿನ ಸಾರಾಂಶ ಮಾತ್ರ ಇರುತ್ತದೆ: ಯತ್ನಾಳ್
ತನಿಖೆಯನ್ನು ಎನ್​ಐಎಗೆ ವಹಿಸುವಂತೆ ಅಮಿತ್ ಶಾರನ್ನು ಕೋರಿದ್ದೇನೆ: ಸಚಿವೆ
ತನಿಖೆಯನ್ನು ಎನ್​ಐಎಗೆ ವಹಿಸುವಂತೆ ಅಮಿತ್ ಶಾರನ್ನು ಕೋರಿದ್ದೇನೆ: ಸಚಿವೆ
ಸುಹಾಸ್ ಕಾರಿಗೆ ಮೀನಿನ ವಾಹನ ಡಿಕ್ಕಿ ಹೊಡೆದ ಸಿಸಿಟಿವಿ ದೃಶ್ಯ ಇಲ್ಲಿದೆ
ಸುಹಾಸ್ ಕಾರಿಗೆ ಮೀನಿನ ವಾಹನ ಡಿಕ್ಕಿ ಹೊಡೆದ ಸಿಸಿಟಿವಿ ದೃಶ್ಯ ಇಲ್ಲಿದೆ
ಆಂಧ್ರ ಡಿಸಿಎಂ ಪವನ್ ಕಲ್ಯಾಣ್​​ಗೆ ಚಾಕೋಲೇಟ್ ಕೊಟ್ಟ ಪ್ರಧಾನಿ ಮೋದಿ
ಆಂಧ್ರ ಡಿಸಿಎಂ ಪವನ್ ಕಲ್ಯಾಣ್​​ಗೆ ಚಾಕೋಲೇಟ್ ಕೊಟ್ಟ ಪ್ರಧಾನಿ ಮೋದಿ
ಸುಹಾಸ್ ಕುಟುಂಬಕ್ಕೆ ₹25 ಲಕ್ಷ ಪರಿಹಾರ ನೀಡಲು ನಿರ್ಧರಿಸಿದ್ದೇವೆ:ವಿಜಯೇಂದ್ರ
ಸುಹಾಸ್ ಕುಟುಂಬಕ್ಕೆ ₹25 ಲಕ್ಷ ಪರಿಹಾರ ನೀಡಲು ನಿರ್ಧರಿಸಿದ್ದೇವೆ:ವಿಜಯೇಂದ್ರ
ರಾಜೀನಾಮೆ ಪತ್ರವನ್ನು ಸ್ವೀಕರಿಸಿದ್ದೇನೆ, ಅಂಗೀಕರಿಸಿಲ್ಲ: ಸ್ಪೀಕರ್ ಖಾದರ್
ರಾಜೀನಾಮೆ ಪತ್ರವನ್ನು ಸ್ವೀಕರಿಸಿದ್ದೇನೆ, ಅಂಗೀಕರಿಸಿಲ್ಲ: ಸ್ಪೀಕರ್ ಖಾದರ್
ಯೋಗಿ ಆದಿತ್ಯನಾಥರಂತೆ ಡೇರಿಂಗ್ ರಾಜಕೀಯ ನಾಯಕನಾಗುತ್ತೇನೆಂದ SSLC ಟಾಪರ್
ಯೋಗಿ ಆದಿತ್ಯನಾಥರಂತೆ ಡೇರಿಂಗ್ ರಾಜಕೀಯ ನಾಯಕನಾಗುತ್ತೇನೆಂದ SSLC ಟಾಪರ್
ಯತ್ನಾಳ್ ಮಾತುಗಳ ಆಡಿಯೋ ಕ್ಲಿಪ್ ಮಾಧ್ಯಮಗಳ ಮುಂದೆ ಪ್ಲೇ ಮಾಡಿದ ಪಾಟೀಲ್
ಯತ್ನಾಳ್ ಮಾತುಗಳ ಆಡಿಯೋ ಕ್ಲಿಪ್ ಮಾಧ್ಯಮಗಳ ಮುಂದೆ ಪ್ಲೇ ಮಾಡಿದ ಪಾಟೀಲ್
ಪೊಲೀಸ್ ಠಾಣೆಗಳಿಗೆ ಕೊಳ್ಳಿಯಿಡುವ ರಾಜ್ಯದಲ್ಲಿ ಕಾನೂನು ಎಲ್ಲಿರುತ್ತೆ? ಶಾಸಕ
ಪೊಲೀಸ್ ಠಾಣೆಗಳಿಗೆ ಕೊಳ್ಳಿಯಿಡುವ ರಾಜ್ಯದಲ್ಲಿ ಕಾನೂನು ಎಲ್ಲಿರುತ್ತೆ? ಶಾಸಕ