AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನೇಪಾಳ ವಿರುದ್ಧ ಗೆದ್ದ ಭಾರತ: ಸೂಪರ್-4 ಹಂತಕ್ಕೇರಿದ ಟೀಮ್ ಇಂಡಿಯಾ

India vs Nepal: ಆರಂಭದಲ್ಲೇ ಟೀಮ್ ಇಂಡಿಯಾ ಆಟಗಾರರು ಕೈಚೆಲ್ಲಿದ ಮೂರು ಕ್ಯಾಚ್​ಗಳ ಸಂಪೂರ್ಣ ಲಾಭ ಪಡೆದ ಕುಶಾಲ್ ಭುರ್ಟೆಲ್ ಹಾಗೂ ಆಸಿಫ್ ಶೇಖ್ ಮೊದಲ ವಿಕೆಟ್​ಗೆ 65 ರನ್​ಗಳ ಜೊತೆಯಾಟವಾಡಿದರು. ಈ ಹಂತದಲ್ಲಿ ದಾಳಿಗಿಳಿದ ಶಾರ್ದೂಲ್ ಠಾಕೂರ್ ಕುಶಾಲ್ (38) ವಿಕೆಟ್ ಪಡೆದು ಟೀಮ್ ಇಂಡಿಯಾಗೆ ಮೊದಲ ಯಶಸ್ಸು ತಂದುಕೊಟ್ಟರು.

ನೇಪಾಳ ವಿರುದ್ಧ ಗೆದ್ದ ಭಾರತ: ಸೂಪರ್-4 ಹಂತಕ್ಕೇರಿದ ಟೀಮ್ ಇಂಡಿಯಾ
India vs Nepal
TV9 Web
| Edited By: |

Updated on: Sep 04, 2023 | 11:33 PM

Share

ಏಷ್ಯಾಕಪ್​ನ 5ನೇ ಪಂದ್ಯದಲ್ಲಿ ಟೀಮ್ ಇಂಡಿಯಾ 10 ವಿಕೆಟ್​ಗಳ ಅಮೋಘ ಗೆಲುವು ದಾಖಲಿಸಿದೆ. ನೇಪಾಳ ವಿರುದ್ಧದ ಈ ಪಂದ್ಯದಲ್ಲಿ ಗೆಲ್ಲುವ ಮೂಲಕ ಭಾರತ ತಂಡವು ಸೂಪರ್-4 ಸುತ್ತಿಗೆ ಪ್ರವೇಶಿಸಿದೆ. ಇದಕ್ಕೂ ಮುನ್ನ ಈ ಪಂದ್ಯದಲ್ಲಿ ಟಾಸ್ ಗೆದ್ದ ಟೀಮ್ ಇಂಡಿಯಾ ನಾಯಕ ರೋಹಿತ್ ಶರ್ಮಾ ಬೌಲಿಂಗ್ ಆಯ್ದುಕೊಂಡಿದ್ದರು. ಅದರಂತೆ ಮೊದಲು ಬ್ಯಾಟ್ ಮಾಡಿದ ನೇಪಾಳ ತಂಡವು ಉತ್ತಮ ಆರಂಭ ಪಡೆಯಿತು.

ಆರಂಭದಲ್ಲೇ ಟೀಮ್ ಇಂಡಿಯಾ ಆಟಗಾರರು ಕೈಚೆಲ್ಲಿದ ಮೂರು ಕ್ಯಾಚ್​ಗಳ ಸಂಪೂರ್ಣ ಲಾಭ ಪಡೆದ ಕುಶಾಲ್ ಭುರ್ಟೆಲ್ ಹಾಗೂ ಆಸಿಫ್ ಶೇಖ್ ಮೊದಲ ವಿಕೆಟ್​ಗೆ 65 ರನ್​ಗಳ ಜೊತೆಯಾಟವಾಡಿದರು. ಈ ಹಂತದಲ್ಲಿ ದಾಳಿಗಿಳಿದ ಶಾರ್ದೂಲ್ ಠಾಕೂರ್ ಕುಶಾಲ್ (38) ವಿಕೆಟ್ ಪಡೆದು ಟೀಮ್ ಇಂಡಿಯಾಗೆ ಮೊದಲ ಯಶಸ್ಸು ತಂದುಕೊಟ್ಟರು.

ಮತ್ತೊಂದೆಡೆ ಆಸಿಫ್ ಶೇಖ್ 97 ಎಸೆತಗಳಲ್ಲಿ 8 ಫೋರ್​ಗಳೊಂದಿಗೆ 58 ರನ್ ಬಾರಿಸಿದರು. ಈ ಹಂತದಲ್ಲಿ ಸ್ಪಿನ್ ಮೋಡಿ ಮಾಡಿದ ರವೀಂದ್ರ ಜಡೇಜಾ ಮೂರು ವಿಕೆಟ್​ಗಳನ್ನು ಪಡೆದು ನೇಪಾಳ ತಂಡಕ್ಕೆ ಶಾಕ್ ನೀಡಿದರು.

ಆದರೆ 8ನೇ ಕ್ರಮಾಂಕದಲ್ಲಿ ಕಣಕ್ಕಿಳಿದ ಸೋಂಪಾಲ್ ಕಮಿ 56 ಎಸೆತಗಳಲ್ಲಿ 48 ರನ್ ಬಾರಿಸುವ ಮೂಲಕ ತಂಡದ ಮೊತ್ತವನ್ನು 200 ರ ಗಡಿದಾಟಿಸಿದರು. ಈ ವೇಳೆ ದಾಳಿಗಿಳಿದ ಮೊಹಮ್ಮದ್ ಶಮಿ ಸೋಂಪಾಲ್ ವಿಕೆಟ್ ಪಡೆದರು. ಅಲ್ಲದೆ 48.2 ಓವರ್​ಗಳಲ್ಲಿ ನೇಪಾಳ ತಂಡವನ್ನು 230 ರನ್​ಗಳಿಗೆ ಆಲೌಟ್ ಮಾಡಿದರು.

ಟೀಮ್ ಇಂಡಿಯಾ ಪರ ರವೀಂದ್ರ ಜಡೇಜಾ ಹಾಗೂ ಮೊಹಮ್ಮದ್ ಸಿರಾಜ್ ತಲಾ 3 ವಿಕೆಟ್ ಪಡೆದರೆ, ಶಮಿ, ಹಾರ್ದಿಕ್ ಪಾಂಡ್ಯ ಹಾಗೂ ಶಾರ್ದೂಲ್ ಠಾಕೂರ್ ಒಂದೊಂದು ವಿಕೆಟ್ ಕಬಳಿಸಿದರು.

ಡಕ್​ವರ್ತ್ ಲೂಯಿಸ್ ನಿಯಮದಂತೆ ಟಾರ್ಗೆಟ್:

231 ರನ್​ಗಳ ಗುರಿ ಪಡೆದ ಟೀಮ್ ಇಂಡಿಯಾ ಬ್ಯಾಟಿಂಗ್ ವೇಳೆ ಮಳೆ ಬಂದಿದ್ದರಿಂದ ಕೆಲ ಕಾಲ ಪಂದ್ಯವು ಸ್ಥಗಿತಗೊಂಡಿತು. ಮಳೆ ನಿಂತ ಬಳಿಕ ಡಕ್​ವರ್ತ್ ಲೂಯಿಸ್ ನಿಯಮದ ಪ್ರಕಾರ 23 ಓವರ್​ಗಳಲ್ಲಿ ಟೀಮ್ ಇಂಡಿಯಾ 145 ರನ್​ಗಳ ಗುರಿ ನೀಡಲಾಯಿತು.

ಈ ಸುಲಭ ಗುರಿಯನ್ನು ಬೆನ್ನತ್ತಿದ ಟೀಮ್ ಇಂಡಿಯಾಗೆ  ಶುಭ್​ಮನ್ ಗಿಲ್ ಹಾಗೂ ರೋಹಿತ್ ಶರ್ಮಾ ಉತ್ತಮ ಆರಂಭ ಒದಗಿಸಿದ್ದರು. ಕೇವಲ 39 ಎಸೆತಗಳಲ್ಲಿ ಅರ್ಧಶತಕ ಸಿಡಿಸುವ ಮೂಲಕ ಹಿಟ್​ಮ್ಯಾನ್ ನೇಪಾಳ ಬೌಲರ್​ಗಳ ಬೆಂಡೆತ್ತಿದರು. ಮತ್ತೊಂದೆಡೆ ಶುಭ್​ಮನ್ ಗಿಲ್ 47 ಎಸೆತಗಳಲ್ಲಿ ಅರ್ಧಶತಕ ಪೂರೈಸಿದರು.

ಅಂತಿಮ ಹಂತದವರೆಗೆ ಅಜೇಯರಾಗಿ ಉಳಿದ ರೋಹಿತ್ ಶರ್ಮಾ (74) ಹಾಗೂ ಶುಭ್​ಮನ್ ಗಿಲ್ (67) 20.1 ಓವರ್​ಗಳಲ್ಲಿ ತಂಡವನ್ನು ಗುರಿ ಮುಟ್ಟಿಸುವ ಮೂಲಕ ಟೀಮ್ ಇಂಡಿಯಾಗೆ 10 ವಿಕೆಟ್​ಗಳ ಭರ್ಜರಿ ಜಯ ತಂದುಕೊಟ್ಟರು. ಈ ಗೆಲುವಿನೊಂದಿಗೆ ಭಾರತ ತಂಡವು ಸೂಪರ್-4 ಹಂತಕ್ಕೇರಿದೆ.

ಭಾರತ (ಪ್ಲೇಯಿಂಗ್ XI): ರೋಹಿತ್ ಶರ್ಮಾ (ನಾಯಕ), ಶುಭ್​ಮನ್ ಗಿಲ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಇಶಾನ್ ಕಿಶನ್ (ವಿಕೆಟ್ ಕೀಪರ್), ಹಾರ್ದಿಕ್ ಪಾಂಡ್ಯ, ರವೀಂದ್ರ ಜಡೇಜಾ, ಶಾರ್ದೂಲ್ ಠಾಕೂರ್, ಕುಲ್ದೀಪ್ ಯಾದವ್, ಮೊಹಮ್ಮದ್ ಶಮಿ, ಮೊಹಮ್ಮದ್ ಸಿರಾಜ್.

ಇದನ್ನೂ ಓದಿ: ಏಷ್ಯಾಕಪ್​ನಲ್ಲಿ ನಿರ್ಧಾರವಾಗಲಿದೆ ಯಾರು ನಂಬರ್ 1

ನೇಪಾಳ (ಪ್ಲೇಯಿಂಗ್ XI): ಕುಶಾಲ್ ಭುರ್ಟೆಲ್, ಆಸಿಫ್ ಶೇಖ್ (ವಿಕೆಟ್ ಕೀಪರ್), ರೋಹಿತ್ ಪೌಡೆಲ್ (ನಾಯಕ), ಭೀಮ್ ಶರ್ಕಿ, ಸೋಂಪಾಲ್ ಕಾಮಿ, ಗುಲ್ಸನ್ ಝಾ, ದೀಪೇಂದ್ರ ಸಿಂಗ್ ಐರಿ, ಕುಶಾಲ್ ಮಲ್ಲಾ, ಸಂದೀಪ್ ಲಮಿಚಾನೆ, ಕರಣ್ ಕೆಸಿ, ಲಲಿತ್ ರಾಜಬನ್ಶಿ.

Follow Us
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
ಮೋದಿ ಬಗ್ಗೆ ಮಾತಾಡಿದ್ದ ಖರ್ಗೆಗೆ ಟಾಂಗ್​​ ಕೊಟ್ಟ ಉಪರಾಷ್ಟ್ರಪತಿ
ಮೋದಿ ಬಗ್ಗೆ ಮಾತಾಡಿದ್ದ ಖರ್ಗೆಗೆ ಟಾಂಗ್​​ ಕೊಟ್ಟ ಉಪರಾಷ್ಟ್ರಪತಿ
ಹೆಂಡ್ತಿ ರೆಡ್​ ಹ್ಯಾಂಡ್ ಸಿಕ್ಕಿಬಿದ್ದಾಗ ಬುದ್ದಿ ಹೇಳಿದ್ದೆ: ಪತಿ ಕಣ್ಣೀರು!
ಹೆಂಡ್ತಿ ರೆಡ್​ ಹ್ಯಾಂಡ್ ಸಿಕ್ಕಿಬಿದ್ದಾಗ ಬುದ್ದಿ ಹೇಳಿದ್ದೆ: ಪತಿ ಕಣ್ಣೀರು!
ಮಾಳು ಊರಲ್ಲಿ ಬೈಕ್​ ಅಲ್ಲಿ ಲಾಂಗ್ ಡ್ರೈವ್ ಹೋದ ರಕ್ಷಿತಾ ಶೆಟ್ಟಿ
ಮಾಳು ಊರಲ್ಲಿ ಬೈಕ್​ ಅಲ್ಲಿ ಲಾಂಗ್ ಡ್ರೈವ್ ಹೋದ ರಕ್ಷಿತಾ ಶೆಟ್ಟಿ