AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Asia Cup 2023: ಭಾರತ vs ಶ್ರೀಲಂಕಾ ನಡುವೆ ಫೈನಲ್ ಫೈಟ್

India vs Sri Lanka Final: ಸೆಪ್ಟೆಂಬರ್ 17 ರಂದು ಭಾರತ ಮತ್ತು ಶ್ರೀಲಂಕಾ ನಡುವೆ ಫೈನಲ್ ಪಂದ್ಯ ನಡೆಯಲಿದೆ. ಕೊಲಂಬೊದ ಆರ್​. ಪ್ರೇಮದಾಸ ಮೈದಾನದಲ್ಲಿ ನಡೆಯಲಿರುವ ಈ ಪಂದ್ಯದಲ್ಲಿ ಗೆಲ್ಲುವ ಮೂಲಕ ಟೀಮ್ ಇಂಡಿಯಾ ಚಾಂಪಿಯನ್ ಪಟ್ಟ ಅಲಂಕರಿಸುವ ವಿಶ್ವಾಸದಲ್ಲಿದೆ.

Asia Cup 2023: ಭಾರತ vs ಶ್ರೀಲಂಕಾ ನಡುವೆ ಫೈನಲ್ ಫೈಟ್
India vs Sri Lanka
TV9 Web
| Edited By: |

Updated on:Sep 15, 2023 | 1:22 AM

Share

ಏಷ್ಯಾಕಪ್​ನ ಸೂಪರ್ ಫೋರ್ ಹಂತದ 5ನೇ ಪಂದ್ಯದಲ್ಲಿ ಪಾಕಿಸ್ತಾನ್ ವಿರುದ್ಧ ಶ್ರೀಲಂಕಾ ತಂಡ ರೋಚಕ ಜಯ ಸಾಧಿಸಿದೆ. ಈ ಗೆಲುವಿನೊಂದಿಗೆ ಶ್ರೀಲಂಕಾ ತಂಡ ಫೈನಲ್​ಗೆ ಅರ್ಹತೆ ಗಿಟ್ಟಿಸಿಕೊಂಡಿದೆ. ಅದರಂತೆ ಸೆಪ್ಟೆಂಬರ್ 17 ರಂದು ನಡೆಯಲಿರುವ ಫೈನಲ್ ಫೈಟ್​ನಲ್ಲಿ ಭಾರತ ಮತ್ತು ಶ್ರೀಲಂಕಾ ತಂಡಗಳು ಮುಖಾಮುಖಿಯಾಗಲಿದೆ.

ಇದಕ್ಕೂ ಮುನ್ನ ಭಾರತ ತಂಡವು ಸೂಪರ್-4 ಹಂತದ ಮೊದಲೆರಡು ಪಂದ್ಯಗಳಲ್ಲಿ ಭರ್ಜರಿ ಜಯ ಸಾಧಿಸಿ ಫೈನಲ್​ಗೆ ಪ್ರವೇಶಿಸಿತ್ತು. ಇದಾಗ್ಯೂ ಶುಕ್ರವಾರ ನಡೆಯಲಿರುವ ಸೂಪರ್-4 ಹಂತದ ಕೊನೆಯ ಪಂದ್ಯದಲ್ಲಿ ಭಾರತ ತಂಡವು ಬಾಂಗ್ಲಾದೇಶ್ ತಂಡವನ್ನು ಎದುರಿಸಲಿದೆ. ಆದರೆ ಈ ಪಂದ್ಯವು ಟೀಮ್ ಇಂಡಿಯಾ ಪಾಲಿಗೆ ಔಪಚಾರಿಕ. ಹೀಗಾಗಿ ಈ ಪಂದ್ಯದಿಂದ ಸ್ಟಾರ್ ಆಟಗಾರರು ವಿಶ್ರಾಂತಿ ಪಡೆಯುವ ಸಾಧ್ಯತೆಯಿದೆ.

ಕನಸಾಗಿಯೇ ಉಳಿದ ಭಾರತ-ಪಾಕ್ ಫೈನಲ್ ಫೈಟ್:

ಏಷ್ಯಾಕಪ್​ ಇತಿಹಾಸದಲ್ಲೇ ಇದುವರೆಗೆ ಭಾರತ ಮತ್ತು ಪಾಕಿಸ್ತಾನ್ ಫೈನಲ್ ಆಡಿಲ್ಲ. ಆದರೆ ಈ ಬಾರಿ ಸಾಂಪ್ರದಾಯಿಕ ಎದುರಾಳಿಗಳ ನಡುವಣ ಅಂತಿಮ ಹಣಾಹಣಿಯನ್ನು ನಿರೀಕ್ಷಿಸಲಾಗಿತ್ತು. ಏಕೆಂದರೆ ಶ್ರೀಲಂಕಾ ವಿರುದ್ಧ ಗೆದ್ದರೆ ಪಾಕಿಸ್ತಾನ್ ಹಾಗೂ ಭಾರತ ಫೈನಲ್​ನಲ್ಲಿ ಮುಖಾಮುಖಿಯಾಗುವ ಸಾಧ್ಯತೆಯಿತ್ತು. ಆದರೆ ನಿರ್ಣಾಯಕ ಪಂದ್ಯದಲ್ಲಿ ಬಾಬರ್ ಪಡೆ ಮುಗ್ಗರಿಸಿದೆ. ಇದರೊಂದಿಗೆ 16ನೇ ಆವೃತ್ತಿಯಲ್ಲೂ ಭಾರತ-ಪಾಕಿಸ್ತಾನ್ ನಡುವಣ ಫೈನಲ್ ಫೈಟ್​ನ ನಿರೀಕ್ಷೆ ಹುಸಿಯಾಗಿದೆ.

ಏಷ್ಯಾಕಪ್ ಫೈನಲ್ ಯಾವಾಗ?

ಸೆಪ್ಟೆಂಬರ್ 17 ರಂದು ಭಾರತ ಮತ್ತು ಶ್ರೀಲಂಕಾ ನಡುವೆ ಫೈನಲ್ ಪಂದ್ಯ ನಡೆಯಲಿದೆ. ಕೊಲಂಬೊದ ಆರ್​. ಪ್ರೇಮದಾಸ ಮೈದಾನದಲ್ಲಿ ನಡೆಯಲಿರುವ ಈ ಪಂದ್ಯದಲ್ಲಿ ಗೆಲ್ಲುವ ಮೂಲಕ ಟೀಮ್ ಇಂಡಿಯಾ ಚಾಂಪಿಯನ್ ಪಟ್ಟ ಅಲಂಕರಿಸುವ ವಿಶ್ವಾಸದಲ್ಲಿದೆ.

ಶ್ರೀಲಂಕಾ ತಂಡ: ದಸುನ್ ಶಾನಕ (ನಾಯಕ), ಪಾತುಮ್ ನಿಸ್ಸಾಂಕ, ದಿಮುತ್ ಕರುಣಾರತ್ನೆ, ಕುಸಾಲ್ ಪೆರೇರ, ಕುಸಾಲ್ ಮೆಂಡಿಸ್ (ಉಪನಾಯಕ), ಚರಿತ್ ಅಸಲಂಕ, ಧನಂಜಯ ಡಿ ಸಿಲ್ವ, ಸದೀರ ಸಮರವಿಕ್ರಮ, ಮಹೀಶ್ ತೀಕ್ಷಣ, ದುನಿತ್ ವೆಲ್ಲಲಗೆ, ಮಥೀಶ ಪತಿರಾಣ, ಕಸುನ್ ರಜಿತ, ದುಶನ್ ಹೇಮಂತ, ಬಿನೂರ ಫರ್ನಾಂಡೊ, ಪ್ರಮೋದ್ ಮಧುಶನ್.

ಇದನ್ನೂ ಓದಿ: ಕಿಂಗ್ ಕೊಹ್ಲಿಯ 1 ಶತಕಕ್ಕೆ 10 ದಾಖಲೆಗಳು ಉಡೀಸ್..!

ಭಾರತ ತಂಡ: ರೋಹಿತ್ ಶರ್ಮಾ (ನಾಯಕ), ಶುಭ್​ಮನ್ ಗಿಲ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಕೆಎಲ್ ರಾಹುಲ್ (ವಿಕೆಟ್ ಕೀಪರ್), ತಿಲಕ್ ವರ್ಮಾ, ಇಶಾನ್ ಕಿಶನ್ (ವಿಕೆಟ್ ಕೀಪರ್), ಸೂರ್ಯಕುಮಾರ್ ಯಾದವ್, ಹಾರ್ದಿಕ್ ಪಾಂಡ್ಯ (ಉಪನಾಯಕ), ರವೀಂದ್ರ ಜಡೇಜಾ, ಅಕ್ಷರ್ ಪಟೇಲ್, ಶಾರ್ದೂಲ್ ಠಾಕೂರ್, ಕುಲ್ದೀಪ್ ಯಾದವ್, ಮೊಹಮ್ಮದ್ ಸಿರಾಜ್, ಜಸ್ಪ್ರೀತ್ ಬುಮ್ರಾ, ಮೊಹಮ್ಮದ್ ಶಮಿ, ಪ್ರಸಿದ್ಧ್ ಕೃಷ್ಣ.

ಏಷ್ಯಾಕಪ್ ವಿನ್ನರ್ – ರನ್ನರ್ ತಂಡಗಳ ಪಟ್ಟಿ ಹೀಗಿದೆ:

1984 ರಿಂದ 2023 ರವರೆಗಿನ ಏಷ್ಯಾಕಪ್ ವಿಜೇತರ ಪಟ್ಟಿ
ವರ್ಷ ವಿಜೇತ ತಂಡ ರನ್ನರ್ ಅಪ್ ತಂಡ  ಪಂದ್ಯ ನಡೆದ ಸ್ಥಳ
1984 ಭಾರತ ಶ್ರೀಲಂಕಾ ಯುಎಇ
1986 ಶ್ರೀಲಂಕಾ ಪಾಕಿಸ್ತಾನ್ ಶ್ರೀಲಂಕಾ
1988 ಭಾರತ ಶ್ರೀಲಂಕಾ ಬಾಂಗ್ಲಾದೇಶ್
1991 ಭಾರತ ಶ್ರೀಲಂಕಾ ಭಾರತ
1995 ಭಾರತ ಶ್ರೀಲಂಕಾ ಯುಎಇ
1997 ಶ್ರೀಲಂಕಾ ಭಾರತ ಶ್ರೀಲಂಕಾ
2000 ಪಾಕಿಸ್ತಾನ್ ಶ್ರೀಲಂಕಾ ಬಾಂಗ್ಲಾದೇಶ್
2004 ಶ್ರೀಲಂಕಾ ಭಾರತ ಶ್ರೀಲಂಕಾ
2008 ಶ್ರೀಲಂಕಾ ಭಾರತ ಪಾಕಿಸ್ತಾನ
2010 ಭಾರತ ಶ್ರೀಲಂಕಾ ಶ್ರೀಲಂಕಾ
2012 ಪಾಕಿಸ್ತಾನ್ ಬಾಂಗ್ಲಾದೇಶ್ ಬಾಂಗ್ಲಾದೇಶ್
2014 ಶ್ರೀಲಂಕಾ ಪಾಕಿಸ್ತಾನ್ ಬಾಂಗ್ಲಾದೇಶ್
2016 ಭಾರತ ಬಾಂಗ್ಲಾದೇಶ್ ಬಾಂಗ್ಲಾದೇಶ್
2018 ಭಾರತ ಬಾಂಗ್ಲಾದೇಶ್ ಯುಎಇ
2022 ಶ್ರೀಲಂಕಾ ಪಾಕಿಸ್ತಾನ್ ಯುಎಇ

Published On - 1:06 am, Fri, 15 September 23

ಇದ್ದಕ್ಕಿದ್ದಂತೆ ಜನರು, ಹಸುಗಳ ಮೇಲೆ ಕಾಡು ಕರಡಿ ದಾಳಿ; ವಿಡಿಯೋ ವೈರಲ್
ಇದ್ದಕ್ಕಿದ್ದಂತೆ ಜನರು, ಹಸುಗಳ ಮೇಲೆ ಕಾಡು ಕರಡಿ ದಾಳಿ; ವಿಡಿಯೋ ವೈರಲ್
ಮೈಸೂರು ರಿಂಗ್ ರಸ್ತೆಯ ಪರಿಸ್ಥಿತಿ ಹೇಗಿದೆ? ವಿಡಿಯೋ ಮೂಲಕ ತಿಳಿಸಿದ ಅನಿರುದ್
ಮೈಸೂರು ರಿಂಗ್ ರಸ್ತೆಯ ಪರಿಸ್ಥಿತಿ ಹೇಗಿದೆ? ವಿಡಿಯೋ ಮೂಲಕ ತಿಳಿಸಿದ ಅನಿರುದ್
ನರಕ ಸದೃಶ್ಯವಾಗಿತ್ತು ಖಳನಟ ವಜ್ರಮುನಿ ಕೊನೆಯ ದಿನಗಳು
ನರಕ ಸದೃಶ್ಯವಾಗಿತ್ತು ಖಳನಟ ವಜ್ರಮುನಿ ಕೊನೆಯ ದಿನಗಳು
ಉತ್ತರಾಖಂಡದ ಜೋಶಿಮಠದಲ್ಲಿರುವ ಸೇನಾ ಶಿಬಿರದಲ್ಲಿ ಬೆಂಕಿ ಅವಘಡ
ಉತ್ತರಾಖಂಡದ ಜೋಶಿಮಠದಲ್ಲಿರುವ ಸೇನಾ ಶಿಬಿರದಲ್ಲಿ ಬೆಂಕಿ ಅವಘಡ
ಪತಿ ಮತ್ತು ಮಾವನಿಂದ ಚಿತ್ರಹಿಂಸೆ
ಪತಿ ಮತ್ತು ಮಾವನಿಂದ ಚಿತ್ರಹಿಂಸೆ
ಬಳ್ಳಾರಿ ಗಲಭೆ: ಶಾಸಕ ಜನಾರ್ದನರೆಡ್ಡಿ ನಿವಾಸದಲ್ಲಿ ಮತ್ತೊಂದು ಬುಲೆಟ್ ಪತ್ತೆ
ಬಳ್ಳಾರಿ ಗಲಭೆ: ಶಾಸಕ ಜನಾರ್ದನರೆಡ್ಡಿ ನಿವಾಸದಲ್ಲಿ ಮತ್ತೊಂದು ಬುಲೆಟ್ ಪತ್ತೆ
ಗಿಲ್ಲಿ-ಅಶ್ವಿನಿ ನಡುವೆ ಮತ್ತೆ ಜಗಳ, ಯೋಗ್ಯತೆ ಬಗ್ಗೆ ಮಾತು: ವಿಡಿಯೋ
ಗಿಲ್ಲಿ-ಅಶ್ವಿನಿ ನಡುವೆ ಮತ್ತೆ ಜಗಳ, ಯೋಗ್ಯತೆ ಬಗ್ಗೆ ಮಾತು: ವಿಡಿಯೋ
ರಿವರ್ಸ್ ವೇಳೆ ನಿಯಂತ್ರಣ ತಪ್ಪಿದ ಕಾರು: ವಿಡಿಯೋ ನೋಡಿದ್ರೆ ಹೌಹಾರ್ತೀರಿ
ರಿವರ್ಸ್ ವೇಳೆ ನಿಯಂತ್ರಣ ತಪ್ಪಿದ ಕಾರು: ವಿಡಿಯೋ ನೋಡಿದ್ರೆ ಹೌಹಾರ್ತೀರಿ
ಬಳ್ಳಾರಿ ಘರ್ಷಣೆಯಲ್ಲಿ ಕೈ ಕಾರ್ಯಕರ್ತ ಬಲಿ: ಗಲಾಟೆ ಶುರುವಾಗಿದ್ದು ಹೇಗೆ?
ಬಳ್ಳಾರಿ ಘರ್ಷಣೆಯಲ್ಲಿ ಕೈ ಕಾರ್ಯಕರ್ತ ಬಲಿ: ಗಲಾಟೆ ಶುರುವಾಗಿದ್ದು ಹೇಗೆ?
ಸರ್ಕಾರಿ ಶಾಲಾ ಮಕ್ಕಳಿಗೆ ಶಿಕ್ಷಕರಿಂದ ಔತಣಕೂಟ: ವಿಶೇಷವೇನು?
ಸರ್ಕಾರಿ ಶಾಲಾ ಮಕ್ಕಳಿಗೆ ಶಿಕ್ಷಕರಿಂದ ಔತಣಕೂಟ: ವಿಶೇಷವೇನು?