AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭಾರತ vs ಶ್ರೀಲಂಕಾ ಮುಖಾಮುಖಿ: ಯಾರು ಬಲಿಷ್ಠ..?

Asia Cup 2023: ಏಷ್ಯಾಕಪ್​ನಲ್ಲಿ ಭಾರತ ಮತ್ತು ಶ್ರೀಲಂಕಾ 8 ಬಾರಿ ಫೈನಲ್​ನಲ್ಲಿ ಮುಖಾಮುಖಿಯಾಗಿದೆ. ಈ ವೇಳೆ ಭಾರತ ತಂಡವು 5 ಬಾರಿ ಜಯ ಸಾಧಿಸಿದರೆ, ಶ್ರೀಲಂಕಾ ತಂಡವು 3 ಬಾರಿ ಟೀಮ್ ಇಂಡಿಯಾಗೆ ಸೋಲುಣಿಸಿ ಚಾಂಪಿಯನ್ ಪಟ್ಟ ಅಲಂಕರಿಸಿದೆ. ಈ ಅಂಕಿ ಅಂಶಗಳ ಪ್ರಕಾರ ಲಂಕಾ ತಂಡದಿಂದ ಅಂತಿಮ ಹಣಾಹಣಿಯಲ್ಲಿ ಭರ್ಜರಿ ಪೈಪೋಟಿ ಎದುರಾಗಬಹುದು.

ಭಾರತ vs ಶ್ರೀಲಂಕಾ ಮುಖಾಮುಖಿ: ಯಾರು ಬಲಿಷ್ಠ..?
India vs Sri Lanka
TV9 Web
| Edited By: |

Updated on: Sep 16, 2023 | 7:59 PM

Share

ಏಷ್ಯಾಕಪ್ 2023ರ ಫೈನಲ್ ಪಂದ್ಯದಲ್ಲಿ ಭಾರತ ಮತ್ತು ಶ್ರೀಲಂಕಾ ತಂಡಗಳು ಮುಖಾಮುಖಿಯಾಗಲಿದೆ. ಕೊಲಂಬೊದ ಆರ್​. ಪ್ರೇಮದಾಸ ಮೈದಾನದಲ್ಲಿ ನಡೆಯಲಿರುವ ಈ ಪಂದ್ಯದಲ್ಲಿ ಗೆಲ್ಲುವ ಮೂಲಕ 8ನೇ ಬಾರಿ ಚಾಂಪಿಯನ್ ಪಟ್ಟಕ್ಕೇರುವ ವಿಶ್ವಾಸದಲ್ಲಿದೆ ಟೀಮ್ ಇಂಡಿಯಾ. ಏಕೆಂದರೆ ಏಕದಿನ ಕ್ರಿಕೆಟ್​ನಲ್ಲಿ ಶ್ರೀಲಂಕಾ ವಿರುದ್ಧ ಭಾರತ ತಂಡವು ಪಾರುಪತ್ಯ ಮೆರೆಯುತ್ತಾ ಬಂದಿದೆ. ಇದಕ್ಕೆ ಸಾಕ್ಷಿ ಈ ಅಂಕಿ ಅಂಶಗಳು.

ಭಾರತ ಮತ್ತು ಶ್ರೀಲಂಕಾ ತಂಡಗಳು ಏಕದಿನ ಕ್ರಿಕೆಟ್​ನಲ್ಲಿ ಇದುವರೆಗೆ 166 ಪಂದ್ಯಗಳಲ್ಲಿ ಮುಖಾಮುಖಿಯಾಗಿವೆ. ಈ ವೇಳೆ ಶ್ರೀಲಂಕಾ ಗೆದ್ದಿರುವುದು ಕೇವಲ 57 ಪಂದ್ಯಗಳಲ್ಲಿ ಮಾತ್ರ. ಇದೇ ವೇಳೆ ಭಾರತ ತಂಡವು ಬರೋಬ್ಬರಿ 97 ಮ್ಯಾಚ್​ಗಳಲ್ಲಿ ಲಂಕಾ ತಂಡವನ್ನು ಬಗ್ಗು ಬಡಿದಿದೆ. ಇನ್ನು 11 ಪಂದ್ಯಗಳು ರದ್ದಾರೆ, 1 ಮ್ಯಾಚ್ ಟೈ ಆಗಿತ್ತು.

ಹಾಗೆಯೇ ಕೊನೆಯ 6 ಮುಖಾಮುಖಿಯಲ್ಲಿ ಟೀಮ್ ಇಂಡಿಯಾ ಐದರಲ್ಲಿ ಜಯ ಸಾಧಿಸಿದರೆ, ಶ್ರೀಲಂಕಾ ಗೆದ್ದಿರುವುದು ಕೇವಲ 1 ಪಂದ್ಯದಲ್ಲಿ ಮಾತ್ರ. ಅಂದರೆ ಇಲ್ಲಿ ಲಂಕಾ ಪಡೆಯ ವಿರುದ್ಧ ಟೀಮ್ ಇಂಡಿಯಾ ಮೇಲುಗೈ ಹೊಂದಿರುವುದು ಸ್ಪಷ್ಟ.

ಏಷ್ಯಾಕಪ್​ ಫೈನಲ್ ಫೈಟ್:

ಏಷ್ಯಾಕಪ್​ನಲ್ಲಿ ಭಾರತ ಮತ್ತು ಶ್ರೀಲಂಕಾ 8 ಬಾರಿ ಫೈನಲ್​ನಲ್ಲಿ ಮುಖಾಮುಖಿಯಾಗಿದೆ. ಈ ವೇಳೆ ಭಾರತ ತಂಡವು 5 ಬಾರಿ ಜಯ ಸಾಧಿಸಿದರೆ, ಶ್ರೀಲಂಕಾ ತಂಡವು 3 ಬಾರಿ ಟೀಮ್ ಇಂಡಿಯಾಗೆ ಸೋಲುಣಿಸಿ ಚಾಂಪಿಯನ್ ಪಟ್ಟ ಅಲಂಕರಿಸಿದೆ. ಈ ಅಂಕಿ ಅಂಶಗಳ ಪ್ರಕಾರ ಲಂಕಾ ತಂಡದಿಂದ ಅಂತಿಮ ಹಣಾಹಣಿಯಲ್ಲಿ ಭರ್ಜರಿ ಪೈಪೋಟಿ ಎದುರಾಗಬಹುದು.

ಲಂಕಾ ಪಡೆಗೆ ಪ್ಲಸ್ ಪಾಯಿಂಟ್:

ಏಷ್ಯಾಕಪ್​ನ ಫೈನಲ್ ಪಂದ್ಯವು ಕೊಲಂಬೊದ ಆರ್​. ಪ್ರೇಮದಾಸ ಮೈದಾನದಲ್ಲಿ ನಡೆಯುತ್ತಿರುವುದು ಶ್ರೀಲಂಕಾ ಪಾಲಿಗೆ ಪ್ಲಸ್ ಪಾಯಿಂಟ್ ಆಗಲಿದೆ. ಒಂದೆಡೆ ತವರಿನ ಅಭಿಮಾನಿಗಳ ಬೆಂಬಲದೊಂದಿಗೆ ತವರು ಪಿಚ್​ನಲ್ಲಿ ಶ್ರೀಲಂಕಾ ಅತ್ಯುತ್ತಮ ಪ್ರದರ್ಶನ ನೀಡುತ್ತಾ ಬಂದಿದೆ.

ಅದರಲ್ಲೂ ಸೂಪರ್-4 ಹಂತದಲ್ಲಿ ಇದೇ ಮೈದಾನದಲ್ಲಿ ಟೀಮ್ ಇಂಡಿಯಾವನ್ನು ಶ್ರೀಲಂಕಾ ತಂಡ 213 ರನ್​ಗಳಿಗೆ ಆಲೌಟ್ ಮಾಡಿತ್ತು. ಇದಾಗ್ಯೂ ಬೌಲರ್​ಗಳ ಸಾಂಘಿಕ ಪ್ರದರ್ಶನದಿಂದಾಗಿ ಈ ಪಂದ್ಯದಲ್ಲಿ ಭಾರತ ತಂಡವು 41 ರನ್​ಗಳಿಂದ ಜಯ ಸಾಧಿಸಿತ್ತು. ಇದೀಗ ಇದೇ ಮೈದಾನದಲ್ಲಿ ಫೈನಲ್ ಪಂದ್ಯ ನಡೆಯುತ್ತಿರುವುದರಿಂದ ಶ್ರೀಲಂಕಾ ತಂಡದಿಂದ ಭರ್ಜರಿ ಪೈಪೋಟಿಯನ್ನು ನಿರೀಕ್ಷಿಸಬಹುದು.

ಯಾರು ಬಲಿಷ್ಠ?

ಇಲ್ಲಿ ಒಟ್ಟಾರೆ ಅಂಕಿ ಅಂಶಗಳ ಪ್ರಕಾರ ಟೀಮ್ ಇಂಡಿಯಾ ಬಲಿಷ್ಠ ಎಂಬುದು ಸ್ಪಷ್ಟ. ಇದಾಗ್ಯೂ ತವರು ಮೈದಾನದ ಬೆಂಬಲ ಶ್ರೀಲಂಕಾ ತಂಡಕ್ಕಿರಲಿದೆ. ಅದರಲ್ಲೂ ಕೆಲ ಆಟಗಾರರಿಗೆ ಕೊಲಂಬೊ ತವರು ಪಿಚ್​. ಹೀಗಾಗಿ ಲಂಕಾ ಪಡೆಯಿಂದ ಕಠಿಣ ಪೈಪೋಟಿ ಎದುರಾಗುವ ಸಾಧ್ಯತೆಯಿದೆ.

ಶ್ರೀಲಂಕಾ ತಂಡ: ದಸುನ್ ಶಾನಕ (ನಾಯಕ), ಪಾತುಮ್ ನಿಸ್ಸಾಂಕ, ದಿಮುತ್ ಕರುಣಾರತ್ನೆ, ಕುಸಾಲ್ ಪೆರೇರ, ಕುಸಾಲ್ ಮೆಂಡಿಸ್ (ಉಪನಾಯಕ), ಚರಿತ್ ಅಸಲಂಕ, ಧನಂಜಯ ಡಿ ಸಿಲ್ವ, ಸದೀರ ಸಮರವಿಕ್ರಮ, ದುನಿತ್ ವೆಲ್ಲಾಲಗೆ, ಮಥೀಶ ಪತಿರಾಣ, ಕಸುನ್ ರಜಿತ, ದುಶನ್ ಹೇಮಂತ, ಬಿನೂರ ಫರ್ನಾಂಡೊ, ಪ್ರಮೋದ್ ಮಧುಶನ್.

ಇದನ್ನೂ ಓದಿ: ಕಿಂಗ್ ಕೊಹ್ಲಿಯ 1 ಶತಕಕ್ಕೆ 10 ದಾಖಲೆಗಳು ಉಡೀಸ್..!

ಭಾರತ ತಂಡ: ರೋಹಿತ್ ಶರ್ಮಾ (ನಾಯಕ), ಶುಭ್​ಮನ್ ಗಿಲ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಕೆಎಲ್ ರಾಹುಲ್ (ವಿಕೆಟ್ ಕೀಪರ್), ತಿಲಕ್ ವರ್ಮಾ, ಇಶಾನ್ ಕಿಶನ್ (ವಿಕೆಟ್ ಕೀಪರ್), ಸೂರ್ಯಕುಮಾರ್ ಯಾದವ್, ಹಾರ್ದಿಕ್ ಪಾಂಡ್ಯ (ಉಪನಾಯಕ), ರವೀಂದ್ರ ಜಡೇಜಾ, ಅಕ್ಷರ್ ಪಟೇಲ್, ಶಾರ್ದೂಲ್ ಠಾಕೂರ್, ಕುಲ್ದೀಪ್ ಯಾದವ್, ಮೊಹಮ್ಮದ್ ಸಿರಾಜ್, ಜಸ್ಪ್ರೀತ್ ಬುಮ್ರಾ, ಮೊಹಮ್ಮದ್ ಶಮಿ, ಪ್ರಸಿದ್ಧ್ ಕೃಷ್ಣ.

Follow Us
Web contact
Web contact

TV9 Kannada

Read More
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ