AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Asia Cup 2023: ಟೀಮ್ ಇಂಡಿಯಾದ ಇಬ್ಬರು ಆಟಗಾರರ ಕಂಬ್ಯಾಕ್ ಬಹುತೇಕ ಖಚಿತ..!

Asia Cup 2023: ಈ ಬಾರಿಯ ಏಷ್ಯಾಕಪ್ ಆಗಸ್ಟ್ 30 ರಿಂದ ಶುರುವಾಗಲಿದೆ. ಮೊದಲ ಪಂದ್ಯದಲ್ಲಿ ಪಾಕಿಸ್ತಾನ್ ಹಾಗೂ ನೇಪಾಳ ತಂಡಗಳು ಮುಖಾಮುಖಿಯಾಗಲಿದೆ.

Asia Cup 2023: ಟೀಮ್ ಇಂಡಿಯಾದ ಇಬ್ಬರು ಆಟಗಾರರ ಕಂಬ್ಯಾಕ್ ಬಹುತೇಕ ಖಚಿತ..!
Team India
TV9 Web
| Edited By: |

Updated on: Aug 05, 2023 | 7:08 PM

Share

Asia Cup 2023: ಮುಂದಿನ ಎರಡು ತಿಂಗಳಲ್ಲಿ ಟೀಮ್ ಇಂಡಿಯಾ 2 ಪ್ರಮುಖ ಟೂರ್ನಿಗಳನ್ನು ಆಡಲಿದೆ. ಇದರಲ್ಲಿ ಮೊದಲು ಏಷ್ಯಾಕಪ್ ಜರುಗಿದರೆ, ಆ ಬಳಿಕ ಏಕದಿನ ವಿಶ್ವಕಪ್ ಶುರುವಾಗಲಿದೆ. ಅಂದರೆ ಈ ಎರಡೂ ಟೂರ್ನಿಗಳಿಗಾಗಿ ಟೀಮ್ ಇಂಡಿಯಾ ಬಲಿಷ್ಠ ಬಳಗವನ್ನು ರೂಪಿಸಬೇಕಿದೆ. ಹೀಗಾಗಿಯೇ ಎಲ್ಲಾ ಸ್ಟಾರ್ ಆಟಗಾರರು ಏಷ್ಯಾಕಪ್​ನಲ್ಲಿ ಕಣಕ್ಕಿಳಿಯುವುದು ಖಚಿತ. ಇನ್ನು ಏಷ್ಯಾಕಪ್​ನಲ್ಲಿ ಕಾಣಿಸಿಕೊಂಡ ಬಹುತೇಕ ಆಟಗಾರರು ಏಕದಿನ ವಿಶ್ವಕಪ್​ ತಂಡಕ್ಕೆ ಆಯ್ಕೆಯಾಗಲಿದ್ದಾರೆ.

ಏಕೆಂದರೆ ಏಷ್ಯಾಕಪ್ ಆಗಸ್ಟ್ 30 ರಿಂದ ಶುರುವಾಗಲಿದೆ. ಅತ್ತ ಏಕದಿನ ವಿಶ್ವಕಪ್​ಗೆ ತಂಡವನ್ನು ಘೋಷಿಸಲು ಐಸಿಸಿ ವಿಧಿಸಿರುವ ಗಡುವು ಸೆಪ್ಟೆಂಬರ್ 5. ಅಂದರೆ ಏಷ್ಯಾಕಪ್ ನಡುವೆಯೇ ಭಾರತ ತಂಡ ಏಕದಿನ ವಿಶ್ವಕಪ್ ಬಳಗವನ್ನು ಪ್ರಕಟಿಸಬೇಕಿದೆ.

ಎನ್​ಸಿಎ ಶಿಬಿರ:

ಇತ್ತ ಏಷ್ಯಾಕಪ್ ಆರಂಭಕ್ಕೂ ಒಂದು ವಾರ ಮುಂಚಿತವಾಗಿ ಬೆಂಗಳೂರಿನ ನ್ಯಾಷನಲ್ ಕ್ರಿಕೆಟ್ ಅಕಾಡೆಮಿಯಲ್ಲಿ ಟೀಮ್ ಇಂಡಿಯಾಗೆ ವಿಶೇಷ ಶಿಬಿರವನ್ನು ಏರ್ಪಡಿಲಾಗಿದೆ. ಆಗಸ್ಟ್ 24 ರಿಂದ 29 ರವರೆಗೆ ನಡೆಯಲಿರುವ ಈ ಶಿಬಿರದಲ್ಲಿ ಏಷ್ಯಾಕಪ್​ಗೆ ಆಯ್ಕೆಯಾಗುವ ಆಟಗಾರರು ಕಾಣಿಸಿಕೊಳ್ಳಲಿದ್ದಾರೆ.

ವಿಶೇಷ ಎಂದರೆ ಈ ಶಿಬಿರದಲ್ಲಿ ಕೆಎಲ್ ರಾಹುಲ್ ಹಾಗೂ ಶ್ರೇಯಸ್ ಅಯ್ಯರ್ ಭಾಗವಹಿಸಲಿದ್ದಾರೆ ಎಂಬ ಮಾಹಿತಿ ಹೊರಬಿದ್ದಿದೆ. ಅಂದರೆ ಈ ಇಬ್ಬರು ಆಟಗಾರರು ಗಾಯದ ಕಾರಣ ತಂಡದಿಂದ ಹೊರಗುಳಿದಿದ್ದಾರೆ. ಇದಾಗ್ಯೂ ಚೇತರಿಕೆಯ ಅಂತಿಮ ಹಂತದಲ್ಲಿರುವ ಇಬ್ಬರೂ ಕೂಡ ಎನ್​ಸಿಎ ಶಿಬಿರದಲ್ಲಿ ಕಾಣಿಸಿಕೊಳ್ಳುವುದು ಖಚಿತವಾಗಿದೆ.

ಕೆಎಲ್ ರಾಹುಲ್ ಅಥವಾ ಶ್ರೇಯಸ್ ಅಯ್ಯರ್ ಈಗ ಸಂಪೂರ್ಣವಾಗಿ ಫಿಟ್ ಆಗಿಲ್ಲ. ಇದಾಗ್ಯೂ ಅವರು ತಂಡದ ಪ್ರಮುಖ ಭಾಗವಾಗಿದ್ದಾರೆ. ಹೀಗಾಗಿ ಇಬ್ಬರೂ ಶಿಬಿರಕ್ಕೆ ಸೇರಿಕೊಳ್ಳಲಿದ್ದಾರೆ ಎಂದು ಬಿಸಿಸಿಐ ಅಧಿಕಾರಿಯೊಬ್ಬರು ಖಚಿತಪಡಿಸಿದ್ದಾರೆ. ಅಂದರೆ ಏಷ್ಯಾಕಪ್ ಆರಂಭದ ವೇಳೆಗೆ ಈ ಇಬ್ಬರು ಆಟಗಾರರು ಫಿಟ್​ ಆಗುವುದು ಬಹುತೇಕ ಖಚಿತ ಎನ್ನಬಹುದು. ಅಲ್ಲದೆ ಕೆಎಲ್ ರಾಹುಲ್ ಹಾಗೂ ಶ್ರೇಯಸ್ ಅಯ್ಯರ್ ಅವರನ್ನು ಏಷ್ಯಾಕಪ್​ನಲ್ಲೂ ಎದುರು ನೋಡಬಹುದಾಗಿದೆ. ಇದೇ ಕಾರಣದಿಂದಾಗಿ ಇಬ್ಬರು ಆಟಗಾರರಿಗೆ ಎನ್​ಸಿಎ ಶಿಬಿರಕ್ಕೆ ಬುಲಾವ್ ನೀಡಲಾಗುತ್ತಿದೆ.

ಏಷ್ಯಾಕಪ್ ವೇಳಾಪಟ್ಟಿ:

  • ಆಗಸ್ಟ್ 30- ಪಾಕಿಸ್ತಾನ್ vs ನೇಪಾಳ (ಮುಲ್ತಾನ್)
  • ಆಗಸ್ಟ್ 31- ಬಾಂಗ್ಲಾದೇಶ್ vs ಶ್ರೀಲಂಕಾ (ಕ್ಯಾಂಡಿ)
  • ಸೆಪ್ಟೆಂಬರ್ 2- ಭಾರತ vs ಪಾಕಿಸ್ತಾನ್ (ಕ್ಯಾಂಡಿ)
  • ಸೆಪ್ಟೆಂಬರ್ 3- ಬಾಂಗ್ಲಾದೇಶ್ vs ಅಫ್ಘಾನಿಸ್ತಾನ್ (ಲಾಹೋರ್)
  • ಸೆಪ್ಟೆಂಬರ್ 4- ಭಾರತ vs ನೇಪಾಳ (ಕ್ಯಾಂಡಿ)
  • ಸೆಪ್ಟೆಂಬರ್ 5- ಶ್ರೀಲಂಕಾ vs ಅಫ್ಘಾನಿಸ್ತಾನ್ (ಲಾಹೋರ್)

ಇದನ್ನೂ ಓದಿ: Team India: ಶತಕ ಬಾರಿಸದೇ ವಿಶೇಷ ದಾಖಲೆ ಬರೆದ ಟೀಮ್ ಇಂಡಿಯಾ

ಸೂಪರ್-4 ಹಂತದ ವೇಳಾಪಟ್ಟಿ:

  • ಸೆಪ್ಟೆಂಬರ್ 6- A1 Vs B2 (ಲಾಹೋರ್)
  • ಸೆಪ್ಟೆಂಬರ್ 9- B1 Vs B2 (ಕೊಲಂಬೊ)
  • ಸೆಪ್ಟೆಂಬರ್ 10- A1 Vs A2 (ಕೊಲಂಬೊ)
  • ಸೆಪ್ಟೆಂಬರ್ 12- A2 Vs B1 (ಕೊಲಂಬೊ)
  • ಸೆಪ್ಟೆಂಬರ್ 14- A1 Vs B1 (ಕೊಲಂಬೊ)
  • ಸೆಪ್ಟೆಂಬರ್ 15- A2 Vs B2 (ಕೊಲಂಬೊ)
  • ಸೆಪ್ಟೆಂಬರ್ 17- ಫೈನಲ್ ಪಂದ್ಯ (ಕೊಲಂಬೊ)
Follow Us
ಕೇದಾರನಾಥಕ್ಕೆ ಹೊರಟಿದ್ದೀರಾ? ಮೊದಲ ದಿನವೇ ಭಕ್ತಸಾಗರದಿಂದ ಕಾಲ್ತುಳಿತ
ಕೇದಾರನಾಥಕ್ಕೆ ಹೊರಟಿದ್ದೀರಾ? ಮೊದಲ ದಿನವೇ ಭಕ್ತಸಾಗರದಿಂದ ಕಾಲ್ತುಳಿತ
ಬಿಸಿಲಿಗೆ ಕೆಂಗಟ್ಟ ಚಿಕ್ಕಮಗಳೂರು ಜನರಿಗೆ ತಂಪೆರೆದ ವರುಣ
ಬಿಸಿಲಿಗೆ ಕೆಂಗಟ್ಟ ಚಿಕ್ಕಮಗಳೂರು ಜನರಿಗೆ ತಂಪೆರೆದ ವರುಣ
ಅತ್ತೆಯ ಸಪೋರ್ಟ್ ಜತೆಗೆ ಎರಡು ಮಕ್ಕಳನ್ನ ಕಟ್ಟಿಕೊಂಡು ಚಿನ್ನದ ಗೆದ್ದ ಅಯಿಷಾ
ಅತ್ತೆಯ ಸಪೋರ್ಟ್ ಜತೆಗೆ ಎರಡು ಮಕ್ಕಳನ್ನ ಕಟ್ಟಿಕೊಂಡು ಚಿನ್ನದ ಗೆದ್ದ ಅಯಿಷಾ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್