AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಏಷ್ಯಾಕಪ್ ವೇಳಾಪಟ್ಟಿ ಬಗ್ಗೆ ಮಹತ್ವದ ನಿರ್ಧಾರ: ಭಾರತ- ಪಾಕ್ ಮುಖಾಮುಖಿ ಯಾವ ಮೈದಾನದಲ್ಲಿ? ಫೈನಲ್ ಎಲ್ಲಿ ಗೊತ್ತಾ?

Asia Cup 2023: ಈ ಹಿಂದೆ ಭಾರತ ಮತ್ತು ಪಾಕಿಸ್ತಾನ ತಂಡಗಳ ನಡುವಿನ ಲೀಗ್​ ಹಂತದ ಮೊದಲ ಪಂದ್ಯ ಮಳೆಯಿಂದಾಗಿ ರದ್ದಾಗಿತ್ತು. ಇದೀಗ ಸೂಪರ್ -4 ಹಂತದಲ್ಲಿ ಈ ಎರಡು ತಂಡಗಳು ಸೆಪ್ಟೆಂಬರ್ 10 ರಂದು ಮತ್ತೆ ಮುಖಾಮುಖಿಯಾಗಲಿದ್ದು, ಈ ಪಂದ್ಯ ಕೊಲಂಬೊದಲ್ಲಿ ನಡೆಯಲಿದೆ.

ಏಷ್ಯಾಕಪ್ ವೇಳಾಪಟ್ಟಿ ಬಗ್ಗೆ ಮಹತ್ವದ ನಿರ್ಧಾರ: ಭಾರತ- ಪಾಕ್ ಮುಖಾಮುಖಿ ಯಾವ ಮೈದಾನದಲ್ಲಿ? ಫೈನಲ್ ಎಲ್ಲಿ ಗೊತ್ತಾ?
ಭಾರತ- ಪಾಕಿಸ್ತಾನ
ಪೃಥ್ವಿಶಂಕರ
|

Updated on:Sep 06, 2023 | 7:37 AM

Share

ಶ್ರೀಲಂಕಾದಲ್ಲಿ ಸುರಿಯುತ್ತಿರುವ ಭಾರಿ ಮಳೆಯಿಂದಾಗಿ ಏಷ್ಯಾಕಪ್ (Asia Cup 2023)​ ಆಯೋಜನೆಗೆ ಹಿನ್ನಡೆಯುಂಟಾಗಿದೆ. ಈ ಕಾಂಟಿನೆಂಟಲ್ ಈವೆಂಟ್​ನ ಹೈವೋಲ್ಟೇಜ್ ಪಂದ್ಯವಾಗಿದ್ದ ಭಾರತ ಮತ್ತು ಪಾಕಿಸ್ತಾನ (India vs Pakistan) ನಡುವಿನ ಪಂದ್ಯವೇ ಮಳೆಯಿಂದಾಗಿ ರದ್ದಾಗಿತ್ತು. ಇದರ ನಂತರ, ಮಳೆಯಿಂದಾಗಿ, ಏಷ್ಯಾಕಪ್‌ನ ಸೂಪರ್-4 ರೌಂಡ್ ಮತ್ತು ಫೈನಲ್‌ ಪಂದ್ಯಗಳ ಸ್ಥಳಗಳನ್ನು ಬದಲಾಹಿಸುವ ಸಾಧ್ಯತೆಗಳಿವೆ ಎಂದು ಹಲವು ಮಾಧ್ಯಮಗಳು ವರದಿ ಮಾಡಿದ್ದವು. ಆದರೆ ಏಷ್ಯನ್ ಕ್ರಿಕೆಟ್ ಕೌನ್ಸಿಲ್ ಈ ಬಗ್ಗೆ ಅಧಿಕೃತ ಹೇಳಿಕೆ ನೀಡಿದ್ದು, ಏಷ್ಯಾಕಪ್ ಪಂದ್ಯಗಳು ನಡೆಯುವ ಸ್ಥಳಗಳಲ್ಲಿ ಯಾವುದೇ ಬದಲಾವಣೆ ಇಲ್ಲ. ಪಂದ್ಯಗಳನ್ನು ಈ ಮೊದಲೇ ನಿರ್ಧರಿಸಿದ ಸ್ಥಳಗಳಲ್ಲಿ ಅಂದರೆ ಕೊಲಂಬೊದಲ್ಲಿಯೇ (Colombo) ಆಡಲಾಗುತ್ತದೆ ಎಂಬ ಮಾಹಿತಿ ನೀಡಿದೆ.

ಈ ಹಿಂದೆ ಭಾರತ ಮತ್ತು ಪಾಕಿಸ್ತಾನ ತಂಡಗಳ ನಡುವಿನ ಲೀಗ್​ ಹಂತದ ಮೊದಲ ಪಂದ್ಯ ಮಳೆಯಿಂದಾಗಿ ರದ್ದಾಗಿತ್ತು. ಇದೀಗ ಸೂಪರ್ -4 ಹಂತದಲ್ಲಿ ಈ ಎರಡು ತಂಡಗಳು ಸೆಪ್ಟೆಂಬರ್ 10 ರಂದು ಮತ್ತೆ ಮುಖಾಮುಖಿಯಾಗಲಿದ್ದು, ಈ ಪಂದ್ಯ ಕೊಲಂಬೊದಲ್ಲಿ ನಡೆಯಲಿದೆ.

Asia Cup 2023: ಏಷ್ಯಾಕಪ್ ಸೂಪರ್-4 ಹಂತದ ಪಂದ್ಯಕ್ಕೆ ಪಾಕ್ ತಂಡ ಪ್ರಕಟ; ಸ್ಟಾರ್ ಬೌಲರ್​ಗೆ ಕೋಕ್

ಹಂಬಂಟೋಟದಲ್ಲಿ ನಡೆಯುವ ವದಂತಿ

ಪಲ್ಲೆಕೆಲೆ ಮತ್ತು ಕೊಲಂಬೊದಲ್ಲಿ ಭಾರಿ ಮಳೆಯ ಹಿನ್ನೆಲೆಯಲ್ಲಿ ಸೂಪರ್-4 ಮತ್ತು ಫೈನಲ್ ಪಂದ್ಯಗಳನ್ನು ಹಂಬಂಟೋಟಾದಲ್ಲಿ ನಡೆಸಬಹುದು ಎಂದು ಈ ಹಿಂದೆ ವರದಿಯಾಗಿತ್ತು. ಏಕೆಂದರೆ ಅಲ್ಲಿ ಹವಾಮಾನವು ಸ್ಪಷ್ಟವಾಗಿದ್ದು, ಮಳೆಯಾಗುವ ಸಾಧ್ಯತೆಗಳಿಲ್ಲದಿರುವುದರಿಂದ ಯಾವುದೇ ತೊಂದರೆಯಿಲ್ಲದೆ ಪಂದ್ಯಗಳನ್ನು ಆಯೋಜಿಸಬಹುದು ಎಂದು ವರದಿಯಾಗಿತ್ತು. ಆದರೆ ಈಗ ವೇಳಾಪಟ್ಟಿಯಲ್ಲಿ ಯಾವುದೇ ಬದಲಾವಣೆ ಇಲ್ಲ ಎಂದು ಎಸಿಸಿ ಸ್ಪಷ್ಟಪಡಿಸಿದೆ.

ಪಿಸಿಬಿ ಹೇಳಿದ್ದೇನು?

ಶ್ರೀಲಂಕಾದಲ್ಲಿ ಭಾರೀ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಬಿಸಿಸಿಐ ಕಾರ್ಯದರ್ಶಿ ಮತ್ತು ಎಸಿಸಿ ಅಧ್ಯಕ್ಷ ಜೈ ಶಾ ಅವರಿಗೆ ಕರೆ ಮಾಡಿ ದುಬೈನಲ್ಲಿ ಏಷ್ಯಾಕಪ್ ಪಂದ್ಯಗಳನ್ನು ಆಯೋಜಿಸುವಂತೆ ಕೇಳಿಕೊಂಡಿದ್ದೆ. ಅಲ್ಲದೆ ಶ್ರೀಲಂಕಾದ ಡಂಬುಲಾದಲ್ಲಿ ಪಂದ್ಯ ನಡೆಸುವಂತೆ ಕೇಳಿಕೊಂಡಿದ್ದೆ. ಆದರೆ ಪಿಸಿಬಿ ಮನವಿಯನ್ನು ಎಸಿಸಿ ಒಪ್ಪಿಕೊಳ್ಳಲಿಲ್ಲ. ಅಲ್ಲದೆ ಮಳೆಯ ಮುನ್ಸೂಚನೆ ಇದ್ದರೂ ಶ್ರೀಲಂಕಾದ ಉಳಿದ ಮೈದಾನಗಳನ್ನು ಪಂದ್ಯ ಆಯೋಜನೆಗೆ ಆಯ್ಕೆ ಮಾಡಲಾಗಲಿಲ್ಲ ಎಂದು ಪಾಕಿಸ್ತಾನ ಕ್ರಿಕೆಟ್ ಮಂಡಳಿ ಅಧ್ಯಕ್ಷ ಝಾಕಾ ಅಶ್ರಫ್ ಎಸಿಸಿ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ.

ಭಾರತ ಪಾಕಿಸ್ತಾನ ಪಂದ್ಯದ ಮೇಲೆ ಕಣ್ಣು

ಭಾರತ ಮತ್ತು ಪಾಕಿಸ್ತಾನ ನಡುವಿನ ಲೀಗ್ ಹಂತದ ಪಂದ್ಯ ಮಳೆಯಿಂದ ರದ್ದಾಗಿತ್ತು. ಹೀಗಾಗಿ ಅಭಿಮಾನಿಗಳಿಗೆ ಇದು ಭಾರಿ ನಿರಾಸೆಯನ್ನುಂಟು ಮಾಡಿತ್ತು. ಆದರೆ ಇದೀಗ ಸೂಪರ್ 4 ಹಂತದಲ್ಲಿ ಈ ಉಭಯ ತಂಡಗಳು ಇದೇ ಸೆಪ್ಟೆಂಬರ್ 10 ರಂದು ಮತ್ತೊಮ್ಮೆ ಮುಖಾಮುಖಿಯಾಗಲಿವೆ. ಈ ಬಾರಿಯಾದರೂ ಮಳೆಯಿಂದಾಗಿ ಪಂದ್ಯ ರದ್ದಾಗದಿರಲಿ ಎಂದು ಅಭಿಮಾನಿಗಳು ಹಾರೈಸಿದ್ದಾರೆ.

ಇನ್ನಷ್ಟು ಕ್ರೀಡಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 7:35 am, Wed, 6 September 23

ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು
ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು
ಪರಪ್ಪನ ಅಗ್ರಹಾರ ಮಹಿಳಾ ಪೊಲೀಸ್ ಸಿಬ್ಬಂದಿಗೆ ಠಾಣೆಯಲ್ಲಿ ಸೀಮಂತ
ಪರಪ್ಪನ ಅಗ್ರಹಾರ ಮಹಿಳಾ ಪೊಲೀಸ್ ಸಿಬ್ಬಂದಿಗೆ ಠಾಣೆಯಲ್ಲಿ ಸೀಮಂತ
ಪ್ರೋಮೊನಲ್ಲೇ ಶಾಕ್ ಕೊಟ್ಟ ಬಿಗ್​​ಬಾಸ್: ಮನೆಯಿಂದ ಇಬ್ಬರು ಹೊರಕ್ಕೆ
ಪ್ರೋಮೊನಲ್ಲೇ ಶಾಕ್ ಕೊಟ್ಟ ಬಿಗ್​​ಬಾಸ್: ಮನೆಯಿಂದ ಇಬ್ಬರು ಹೊರಕ್ಕೆ
ದುರಹಂಕಾರದಿಂದ ಬಿಗ್ ಬಾಸ್ ನಿರೂಪಣೆ ಬೇಡ ಅಂತ ನಾನು ಹೇಳಲಿಲ್ಲ: ಸುದೀಪ್
ದುರಹಂಕಾರದಿಂದ ಬಿಗ್ ಬಾಸ್ ನಿರೂಪಣೆ ಬೇಡ ಅಂತ ನಾನು ಹೇಳಲಿಲ್ಲ: ಸುದೀಪ್
ಯಶಸ್ವಿ ಜೈಸ್ವಾಲ್ ಸ್ಫೋಟಕ ಸೆಂಚುರಿ: ಮುಂಬೈ ದಾಖಲೆಯ ರನ್ ಚೇಸ್​
ಯಶಸ್ವಿ ಜೈಸ್ವಾಲ್ ಸ್ಫೋಟಕ ಸೆಂಚುರಿ: ಮುಂಬೈ ದಾಖಲೆಯ ರನ್ ಚೇಸ್​