AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಏಷ್ಯಾಕಪ್ ವೇಳಾಪಟ್ಟಿ ಬಗ್ಗೆ ಮಹತ್ವದ ನಿರ್ಧಾರ: ಭಾರತ- ಪಾಕ್ ಮುಖಾಮುಖಿ ಯಾವ ಮೈದಾನದಲ್ಲಿ? ಫೈನಲ್ ಎಲ್ಲಿ ಗೊತ್ತಾ?

Asia Cup 2023: ಈ ಹಿಂದೆ ಭಾರತ ಮತ್ತು ಪಾಕಿಸ್ತಾನ ತಂಡಗಳ ನಡುವಿನ ಲೀಗ್​ ಹಂತದ ಮೊದಲ ಪಂದ್ಯ ಮಳೆಯಿಂದಾಗಿ ರದ್ದಾಗಿತ್ತು. ಇದೀಗ ಸೂಪರ್ -4 ಹಂತದಲ್ಲಿ ಈ ಎರಡು ತಂಡಗಳು ಸೆಪ್ಟೆಂಬರ್ 10 ರಂದು ಮತ್ತೆ ಮುಖಾಮುಖಿಯಾಗಲಿದ್ದು, ಈ ಪಂದ್ಯ ಕೊಲಂಬೊದಲ್ಲಿ ನಡೆಯಲಿದೆ.

ಏಷ್ಯಾಕಪ್ ವೇಳಾಪಟ್ಟಿ ಬಗ್ಗೆ ಮಹತ್ವದ ನಿರ್ಧಾರ: ಭಾರತ- ಪಾಕ್ ಮುಖಾಮುಖಿ ಯಾವ ಮೈದಾನದಲ್ಲಿ? ಫೈನಲ್ ಎಲ್ಲಿ ಗೊತ್ತಾ?
ಭಾರತ- ಪಾಕಿಸ್ತಾನ
ಪೃಥ್ವಿಶಂಕರ
|

Updated on:Sep 06, 2023 | 7:37 AM

Share

ಶ್ರೀಲಂಕಾದಲ್ಲಿ ಸುರಿಯುತ್ತಿರುವ ಭಾರಿ ಮಳೆಯಿಂದಾಗಿ ಏಷ್ಯಾಕಪ್ (Asia Cup 2023)​ ಆಯೋಜನೆಗೆ ಹಿನ್ನಡೆಯುಂಟಾಗಿದೆ. ಈ ಕಾಂಟಿನೆಂಟಲ್ ಈವೆಂಟ್​ನ ಹೈವೋಲ್ಟೇಜ್ ಪಂದ್ಯವಾಗಿದ್ದ ಭಾರತ ಮತ್ತು ಪಾಕಿಸ್ತಾನ (India vs Pakistan) ನಡುವಿನ ಪಂದ್ಯವೇ ಮಳೆಯಿಂದಾಗಿ ರದ್ದಾಗಿತ್ತು. ಇದರ ನಂತರ, ಮಳೆಯಿಂದಾಗಿ, ಏಷ್ಯಾಕಪ್‌ನ ಸೂಪರ್-4 ರೌಂಡ್ ಮತ್ತು ಫೈನಲ್‌ ಪಂದ್ಯಗಳ ಸ್ಥಳಗಳನ್ನು ಬದಲಾಹಿಸುವ ಸಾಧ್ಯತೆಗಳಿವೆ ಎಂದು ಹಲವು ಮಾಧ್ಯಮಗಳು ವರದಿ ಮಾಡಿದ್ದವು. ಆದರೆ ಏಷ್ಯನ್ ಕ್ರಿಕೆಟ್ ಕೌನ್ಸಿಲ್ ಈ ಬಗ್ಗೆ ಅಧಿಕೃತ ಹೇಳಿಕೆ ನೀಡಿದ್ದು, ಏಷ್ಯಾಕಪ್ ಪಂದ್ಯಗಳು ನಡೆಯುವ ಸ್ಥಳಗಳಲ್ಲಿ ಯಾವುದೇ ಬದಲಾವಣೆ ಇಲ್ಲ. ಪಂದ್ಯಗಳನ್ನು ಈ ಮೊದಲೇ ನಿರ್ಧರಿಸಿದ ಸ್ಥಳಗಳಲ್ಲಿ ಅಂದರೆ ಕೊಲಂಬೊದಲ್ಲಿಯೇ (Colombo) ಆಡಲಾಗುತ್ತದೆ ಎಂಬ ಮಾಹಿತಿ ನೀಡಿದೆ.

ಈ ಹಿಂದೆ ಭಾರತ ಮತ್ತು ಪಾಕಿಸ್ತಾನ ತಂಡಗಳ ನಡುವಿನ ಲೀಗ್​ ಹಂತದ ಮೊದಲ ಪಂದ್ಯ ಮಳೆಯಿಂದಾಗಿ ರದ್ದಾಗಿತ್ತು. ಇದೀಗ ಸೂಪರ್ -4 ಹಂತದಲ್ಲಿ ಈ ಎರಡು ತಂಡಗಳು ಸೆಪ್ಟೆಂಬರ್ 10 ರಂದು ಮತ್ತೆ ಮುಖಾಮುಖಿಯಾಗಲಿದ್ದು, ಈ ಪಂದ್ಯ ಕೊಲಂಬೊದಲ್ಲಿ ನಡೆಯಲಿದೆ.

Asia Cup 2023: ಏಷ್ಯಾಕಪ್ ಸೂಪರ್-4 ಹಂತದ ಪಂದ್ಯಕ್ಕೆ ಪಾಕ್ ತಂಡ ಪ್ರಕಟ; ಸ್ಟಾರ್ ಬೌಲರ್​ಗೆ ಕೋಕ್

ಹಂಬಂಟೋಟದಲ್ಲಿ ನಡೆಯುವ ವದಂತಿ

ಪಲ್ಲೆಕೆಲೆ ಮತ್ತು ಕೊಲಂಬೊದಲ್ಲಿ ಭಾರಿ ಮಳೆಯ ಹಿನ್ನೆಲೆಯಲ್ಲಿ ಸೂಪರ್-4 ಮತ್ತು ಫೈನಲ್ ಪಂದ್ಯಗಳನ್ನು ಹಂಬಂಟೋಟಾದಲ್ಲಿ ನಡೆಸಬಹುದು ಎಂದು ಈ ಹಿಂದೆ ವರದಿಯಾಗಿತ್ತು. ಏಕೆಂದರೆ ಅಲ್ಲಿ ಹವಾಮಾನವು ಸ್ಪಷ್ಟವಾಗಿದ್ದು, ಮಳೆಯಾಗುವ ಸಾಧ್ಯತೆಗಳಿಲ್ಲದಿರುವುದರಿಂದ ಯಾವುದೇ ತೊಂದರೆಯಿಲ್ಲದೆ ಪಂದ್ಯಗಳನ್ನು ಆಯೋಜಿಸಬಹುದು ಎಂದು ವರದಿಯಾಗಿತ್ತು. ಆದರೆ ಈಗ ವೇಳಾಪಟ್ಟಿಯಲ್ಲಿ ಯಾವುದೇ ಬದಲಾವಣೆ ಇಲ್ಲ ಎಂದು ಎಸಿಸಿ ಸ್ಪಷ್ಟಪಡಿಸಿದೆ.

ಪಿಸಿಬಿ ಹೇಳಿದ್ದೇನು?

ಶ್ರೀಲಂಕಾದಲ್ಲಿ ಭಾರೀ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಬಿಸಿಸಿಐ ಕಾರ್ಯದರ್ಶಿ ಮತ್ತು ಎಸಿಸಿ ಅಧ್ಯಕ್ಷ ಜೈ ಶಾ ಅವರಿಗೆ ಕರೆ ಮಾಡಿ ದುಬೈನಲ್ಲಿ ಏಷ್ಯಾಕಪ್ ಪಂದ್ಯಗಳನ್ನು ಆಯೋಜಿಸುವಂತೆ ಕೇಳಿಕೊಂಡಿದ್ದೆ. ಅಲ್ಲದೆ ಶ್ರೀಲಂಕಾದ ಡಂಬುಲಾದಲ್ಲಿ ಪಂದ್ಯ ನಡೆಸುವಂತೆ ಕೇಳಿಕೊಂಡಿದ್ದೆ. ಆದರೆ ಪಿಸಿಬಿ ಮನವಿಯನ್ನು ಎಸಿಸಿ ಒಪ್ಪಿಕೊಳ್ಳಲಿಲ್ಲ. ಅಲ್ಲದೆ ಮಳೆಯ ಮುನ್ಸೂಚನೆ ಇದ್ದರೂ ಶ್ರೀಲಂಕಾದ ಉಳಿದ ಮೈದಾನಗಳನ್ನು ಪಂದ್ಯ ಆಯೋಜನೆಗೆ ಆಯ್ಕೆ ಮಾಡಲಾಗಲಿಲ್ಲ ಎಂದು ಪಾಕಿಸ್ತಾನ ಕ್ರಿಕೆಟ್ ಮಂಡಳಿ ಅಧ್ಯಕ್ಷ ಝಾಕಾ ಅಶ್ರಫ್ ಎಸಿಸಿ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ.

ಭಾರತ ಪಾಕಿಸ್ತಾನ ಪಂದ್ಯದ ಮೇಲೆ ಕಣ್ಣು

ಭಾರತ ಮತ್ತು ಪಾಕಿಸ್ತಾನ ನಡುವಿನ ಲೀಗ್ ಹಂತದ ಪಂದ್ಯ ಮಳೆಯಿಂದ ರದ್ದಾಗಿತ್ತು. ಹೀಗಾಗಿ ಅಭಿಮಾನಿಗಳಿಗೆ ಇದು ಭಾರಿ ನಿರಾಸೆಯನ್ನುಂಟು ಮಾಡಿತ್ತು. ಆದರೆ ಇದೀಗ ಸೂಪರ್ 4 ಹಂತದಲ್ಲಿ ಈ ಉಭಯ ತಂಡಗಳು ಇದೇ ಸೆಪ್ಟೆಂಬರ್ 10 ರಂದು ಮತ್ತೊಮ್ಮೆ ಮುಖಾಮುಖಿಯಾಗಲಿವೆ. ಈ ಬಾರಿಯಾದರೂ ಮಳೆಯಿಂದಾಗಿ ಪಂದ್ಯ ರದ್ದಾಗದಿರಲಿ ಎಂದು ಅಭಿಮಾನಿಗಳು ಹಾರೈಸಿದ್ದಾರೆ.

ಇನ್ನಷ್ಟು ಕ್ರೀಡಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 7:35 am, Wed, 6 September 23

Follow Us
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ
ಕರ್ನಾಟಕದಲ್ಲಿ ರಾಷ್ಟ್ರಪತಿ ಆಳ್ವಿಕೆ ಬರುತ್ತೆ ಎಂದ ಬಿಜೆಪಿ ಶಾಸಕ
ಕರ್ನಾಟಕದಲ್ಲಿ ರಾಷ್ಟ್ರಪತಿ ಆಳ್ವಿಕೆ ಬರುತ್ತೆ ಎಂದ ಬಿಜೆಪಿ ಶಾಸಕ
ಬಂಗಾಳದಲ್ಲಿ ಜಂಗಲ್ ರಾಜ್​ನ ಅಂತ್ಯದ ಆರಂಭ; ಪ್ರಧಾನಿ ಮೋದಿ ವಾಗ್ದಾಳಿ
ಬಂಗಾಳದಲ್ಲಿ ಜಂಗಲ್ ರಾಜ್​ನ ಅಂತ್ಯದ ಆರಂಭ; ಪ್ರಧಾನಿ ಮೋದಿ ವಾಗ್ದಾಳಿ
ತಂಡದ ಹೀನಾಯ ಪ್ರದರ್ಶನ; ಮಧ್ಯದಲ್ಲೇ ಕ್ರೀಡಾಂಗಣ ತೊರೆದ ಆಕಾಶ್ ಅಂಬಾನಿ
ತಂಡದ ಹೀನಾಯ ಪ್ರದರ್ಶನ; ಮಧ್ಯದಲ್ಲೇ ಕ್ರೀಡಾಂಗಣ ತೊರೆದ ಆಕಾಶ್ ಅಂಬಾನಿ
ರಣಬಿಸಿಲಿಗೆ ಕೋಲಾರದಲ್ಲಿ ಮಣ್ಣಿನ ಮಡಿಕೆ ಖರೀದಿಗೆ ಮುಗಿಬೀಳ್ತಿರೋ ಜನ!
ರಣಬಿಸಿಲಿಗೆ ಕೋಲಾರದಲ್ಲಿ ಮಣ್ಣಿನ ಮಡಿಕೆ ಖರೀದಿಗೆ ಮುಗಿಬೀಳ್ತಿರೋ ಜನ!
ಮಗುವಿನ ಸಮೇತ ಎಸ್ಕಲೇಟರ್​ನಿಂದ ಬೀಳೋಕಾದ ಮಹಿಳೆ
ಮಗುವಿನ ಸಮೇತ ಎಸ್ಕಲೇಟರ್​ನಿಂದ ಬೀಳೋಕಾದ ಮಹಿಳೆ
CET ಪರೀಕ್ಷೆಯಲ್ಲಿ ಜನಿವಾರ ತೆಗೆಸಿದ ಆರೋಪ ಸುಧಾಕರ್ ಏನಂದ್ರು?
CET ಪರೀಕ್ಷೆಯಲ್ಲಿ ಜನಿವಾರ ತೆಗೆಸಿದ ಆರೋಪ ಸುಧಾಕರ್ ಏನಂದ್ರು?
ಪೊಲೀಸರೆದುರೇ ಯುವಕನಿಗೆ ಯದ್ವಾತದ್ವ ಹೊಡೆದ ಹುಡುಗಿಯರು! ವಿಡಿಯೋ ವೈರಲ್
ಪೊಲೀಸರೆದುರೇ ಯುವಕನಿಗೆ ಯದ್ವಾತದ್ವ ಹೊಡೆದ ಹುಡುಗಿಯರು! ವಿಡಿಯೋ ವೈರಲ್
ರೋಗಿಗಳಿಗಾಗಿ ಬೆಡ್ ಮೀಸಲು; ಎಸಿ, ಫ್ಯಾನ್ ಅಳವಡಿಕೆ!
ರೋಗಿಗಳಿಗಾಗಿ ಬೆಡ್ ಮೀಸಲು; ಎಸಿ, ಫ್ಯಾನ್ ಅಳವಡಿಕೆ!
ಕೊಪ್ಪಳ ಜನರ ನೀರಿನ ದಾಹ ತಣಿಸುವ ಹಿರೇಹಳ್ಳ ಜಲಾಶಯ ಬತ್ತಿ ಹೋಯ್ತು
ಕೊಪ್ಪಳ ಜನರ ನೀರಿನ ದಾಹ ತಣಿಸುವ ಹಿರೇಹಳ್ಳ ಜಲಾಶಯ ಬತ್ತಿ ಹೋಯ್ತು