AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs PAK: ಪಾಕ್ ಪಡೆಯನ್ನು ಬಗ್ಗು ಬಡಿದ ಟೀಮ್ ಇಂಡಿಯಾ

Pakistan vs India: ಟೀಮ್ ಇಂಡಿಯಾ ಬ್ಯಾಟರ್​ಗಳಾದ ವಿರಾಟ್ ಕೊಹ್ಲಿ ಹಾಗೂ ಕೆಎಲ್ ರಾಹುಲ್ ಅಕ್ಷರಶಃ ಅಬ್ಬರಿಸಿದರು. ಸ್ಪೋಟಕ ಬ್ಯಾಟಿಂಗ್ ಪ್ರದರ್ಶಿಸಿದ ಕಿಂಗ್ ಕೊಹ್ಲಿ 84 ಎಸೆತಗಳಲ್ಲಿ ಶತಕ ಪೂರೈಸಿದರೆ, ಕೆಎಲ್ ರಾಹುಲ್ 100 ಎಸೆತಗಳಲ್ಲಿ ಸೆಂಚುರಿ ಸಿಡಿಸಿದರು. ಈ ಮೂಲಕ ಪಾಕ್ ಬೌಲರ್​ಗಳ ಬೆಂಡೆತ್ತಿದರು. ಅಷ್ಟೇ ಅಲ್ಲದೆ ಭಾರತ ತಂಡವು ಬೃಹತ್ ಮೊತ್ತ ಪೇರಿಸುವಲ್ಲಿ ಪ್ರಮುಖ ಪಾತ್ರವಹಿಸಿದರು.

IND vs PAK: ಪಾಕ್ ಪಡೆಯನ್ನು ಬಗ್ಗು ಬಡಿದ ಟೀಮ್ ಇಂಡಿಯಾ
ಟೀಮ್ ಇಂಡಿಯಾ
TV9 Web
| Edited By: |

Updated on:Sep 11, 2023 | 11:11 PM

Share

ಏಷ್ಯಾಕಪ್​ನ ಸೂಪರ್-4 ಹಂತದ 3ನೇ ಪಂದ್ಯದಲ್ಲಿ ಪಾಕಿಸ್ತಾನ್ ವಿರುದ್ದ ಟೀಮ್ ಇಂಡಿಯಾ 228 ರನ್​ಗಳ ಅಮೋಘ ಗೆಲುವು ದಾಖಲಿಸಿದೆ. ಕೊಲಂಬೊದ ಆರ್​. ಪ್ರೇಮದಾಸ ಮೈದಾನದಲ್ಲಿ ಭಾನುವಾರ ಆರಂಭವಾದ ಈ ಪಂದ್ಯದಲ್ಲಿ ಟಾಸ್ ಗೆದ್ದ ಪಾಕಿಸ್ತಾನ್ ತಂಡದ ನಾಯಕ ಬಾಬರ್ ಆಝಂ ಬೌಲಿಂಗ್ ಆಯ್ದುಕೊಂಡಿದ್ದರು. ಅದರಂತೆ ಮೊದಲು ಬ್ಯಾಟ್ ಮಾಡಿದ ಟೀಮ್ ಇಂಡಿಯಾಗೆ ರೋಹಿತ್ ಶರ್ಮಾ ಹಾಗೂ ಶುಭ್​ಮನ್ ಗಿಲ್ ಸಿಡಿಲಬ್ಬರದ ಆರಂಭ ಒದಗಿಸಿದ್ದರು.

ಶಾಹೀನ್ ಅಫ್ರಿದಿಯ ಮೊದಲ ಓವರ್​ನಲ್ಲಿ ಸಿಕ್ಸ್ ಸಿಡಿಸುವ ಮೂಲಕ ರನ್ ಖಾತೆ ತೆರೆದ ರೋಹಿತ್ ಶರ್ಮಾ ಬಿರುಸಿನ ಬ್ಯಾಟಿಂಗ್ ಪ್ರದರ್ಶಿಸಿದರು. ಮತ್ತೊಂದೆಡೆ ಯುವ ದಾಂಡಿಗ ಶುಭ್​ಮನ್ ಗಿಲ್ ಕೂಡ ಭರ್ಜರಿಯಾಗಿ ಬ್ಯಾಟ್ ಬೀಸಿದರು.

ಪರಿಣಾಮ ಗಿಲ್ ಬ್ಯಾಟ್​ನಿಂದ 37 ಎಸೆತಗಳಲ್ಲಿ ಅರ್ಧಶತಕ ಮೂಡಿಬಂದರೆ, ರೋಹಿತ್ ಶರ್ಮಾ 42 ಎಸೆತಗಳಲ್ಲಿ ಹಾಫ್ ಸೆಂಚುರಿ ಪೂರೈಸಿದರು. ಅಲ್ಲದೆ 16.3 ಓವರ್​ಗಳಲ್ಲಿ 121 ರನ್​ಗಳ​ ಜೊತೆಯಾಟವಾಡಿದರು.

ಈ ಹಂತದಲ್ಲಿ ಶಾದಾಬ್ ಖಾನ್ ಎಸೆತದಲ್ಲಿ ಭರ್ಜರಿ ಹೊಡೆತಕ್ಕೆ ಮುಂದಾಗಿ ರೋಹಿತ್ ಶರ್ಮಾ (56 ರನ್, 49ಎಸೆತ, 4 ಸಿಕ್ಸ್, 6 ಫೋರ್) ಕ್ಯಾಚ್ ನೀಡಿ ನಿರ್ಗಮಿಸಿದರು. ಇದರ ಬೆನ್ನಲ್ಲೇ 52 ಎಸೆತಗಳಲ್ಲಿ 10 ಫೋರ್​ಗಳೊಂದಿಗೆ 58 ರನ್​ಗಳಿಸಿದ್ದ ಶುಭ್​ಮನ್ ಗಿಲ್ ಶಾಹೀನ್ ಅಫ್ರಿದಿ ಎಸೆತದಲ್ಲಿ ಔಟಾದರು.

ಈ ಹಂತದಲ್ಲಿ ಜೊತೆಗೂಡಿದ ಕೆಎಲ್ ರಾಹುಲ್ ಹಾಗೂ ವಿರಾಟ್ ಕೊಹ್ಲಿ ತಂಡದ ಮೊತ್ತಕ್ಕೆ 24 ರನ್ ಸೇರಿಸಿದರು. ಟೀಮ್ ಇಂಡಿಯಾ 24.1 ಓವರ್​ಗಳಲ್ಲಿ 2 ವಿಕೆಟ್ ಕಳೆದುಕೊಂಡು 147 ರನ್​ ಕಲೆಹಾಕಿದ್ದ ವೇಳೆ ಮಳೆ ಬಂದಿದ್ದರಿಂದ ಪಂದ್ಯವನ್ನು ಮೀಸಲು ದಿನವಾದ ಸೋಮವಾರಕ್ಕೆ ಮುಂದೂಡಲಾಯಿತು.

ಮೀಸಲು ದಿನದಾಟದಲ್ಲಿ ಭಾರತೀಯರ ಪರಾಕ್ರಮ:

ಸೋಮವಾರ 24.1 ಓವರ್​ನಿಂದ ಶುರುವಾದ ಪಂದ್ಯದಲ್ಲಿ ಟೀಮ್ ಇಂಡಿಯಾ ಬ್ಯಾಟರ್​ಗಳಾದ ವಿರಾಟ್ ಕೊಹ್ಲಿ ಹಾಗೂ ಕೆಎಲ್ ರಾಹುಲ್ ಅಕ್ಷರಶಃ ಅಬ್ಬರಿಸಿದರು. ಸ್ಪೋಟಕ ಬ್ಯಾಟಿಂಗ್ ಪ್ರದರ್ಶಿಸಿದ ಕಿಂಗ್ ಕೊಹ್ಲಿ 84 ಎಸೆತಗಳಲ್ಲಿ ಶತಕ ಪೂರೈಸಿದರೆ, ಕೆಎಲ್ ರಾಹುಲ್ 100 ಎಸೆತಗಳಲ್ಲಿ ಸೆಂಚುರಿ ಸಿಡಿಸಿದರು. ಇದರೊಂದಿಗೆ ಟೀಮ್ ಇಂಡಿಯಾ ಸ್ಕೋರ್ 300 ರ ಗಡಿದಾಟಿತು.

ಇನ್ನು ಶತಕದ ಬಳಿಕ ಬಿರುಸಿನ ಬ್ಯಾಟಿಂಗ್ ಮುಂದುವರೆಸಿದ ಕೆಎಲ್ ರಾಹುಲ್ ಹಾಗೂ ಕಿಂಗ್ ಕೊಹ್ಲಿ ಪಾಕಿಸ್ತಾನ್ ಬೌಲರ್​ಗಳ ಬೆಂಡೆತ್ತಿದರು. ಈ ಮೂಲಕ 106 ಎಸೆತಗಳಲ್ಲಿ 2 ಭರ್ಜರಿ ಸಿಕ್ಸ್ ಹಾಗೂ 12 ಫೋರ್​ಗಳೊಂದಿಗೆ ಕೆಎಲ್ ರಾಹುಲ್ ಅಜೇಯ 111 ರನ್ ಬಾರಿಸಿದರು.

ಮತ್ತೊಂದೆಡೆ ಸಿಡಿಲಬ್ಬರದೊಂದಿಗೆ ವಿರಾಟ್ ಕೊಹ್ಲಿ 94 ಎಸೆತಗಳಲ್ಲಿ 3 ಭರ್ಜರಿ ಸಿಕ್ಸ್ ಹಾಗೂ 9 ಫೋರ್​ಗಳೊಂದಿಗೆ ಅಜೇಯ 122 ರನ್​ ಸಿಡಿಸಿದರು. ಇದರೊಂದಿಗೆ 50 ಓವರ್​ಗಳಲ್ಲಿ 2 ವಿಕೆಟ್ ನಷ್ಟಕ್ಕೆ ಟೀಮ್ ಇಂಡಿಯಾ ಮೊತ್ತ 356 ರನ್​ಗೆ ಬಂದು ನಿಂತಿತು.

ಪಾಕ್ ತಂಡಕ್ಕೆ ಕಠಿಣ ಗುರಿ:

357 ರನ್​ಗಳ ಕಠಿಣ ಗುರಿ ಬೆನ್ನತ್ತಿದ ಪಾಕಿಸ್ತಾನ್ ತಂಡಕ್ಕೆ ಜಸ್​ಪ್ರೀತ್ ಬುಮ್ರಾ ಆರಂಭಿಕ ಆಘಾತ ನೀಡಿದರು. 5ನೇ ಓವರ್​ನಲ್ಲಿ ಇಮಾಮ್ ಉಲ್ ಹಕ್ (6) ವಿಕೆಟ್ ಪಡೆದ ಬುಮ್ರಾ ಟೀಮ್ ಇಂಡಿಯಾಗೆ ಮೊದಲ ಯಶಸ್ಸು ತಂದುಕೊಟ್ಟರು. ಇದರ ಬೆನ್ನಲ್ಲೇ ಹಾರ್ದಿಕ್ ಪಾಂಡ್ಯ ಎಸೆತದಲ್ಲಿ ಬಾಬರ್ ಆಝಂ (10) ಕ್ಲೀನ್ ಬೌಲ್ಡ್ ಆದರು. ಇನ್ನು ಮೊಹಮ್ಮದ್ ರಿಝ್ವಾನ್ 2 ರನ್​ಗಳಿಸಿ ಶಾರ್ದೂಲ್ ಠಾಕೂರ್​ಗೆ ವಿಕೆಟ್ ಒಪ್ಪಿಸಿದರು.

ಈ ಹಂತದಲ್ಲಿ ದಾಳಿಗಿಳಿದ ಕುಲ್ದೀಪ್ ಯಾದವ್ ಪಾಕಿಸ್ತಾನ್ ತಂಡದ ಮಧ್ಯಮ ಕ್ರಮಾಂಕದ ಬ್ಯಾಟರ್​ಗಳನ್ನು ಸ್ಪಿನ್ ಬಲೆಗೆ ಕೆಡವಿದರು. ಫಖರ್ ಝಮಾನ್ (27) ರನ್ನು ಕ್ಲೀನ್ ಬೌಲ್ಡ್ ಮಾಡಿದ ಕುಲ್ದೀಪ್, ಇದರ ಬೆನ್ನಲ್ಲೇ ಸಲ್ಮಾನ್ ಆಘಾ (23) ವಿಕೆಟ್ ಪಡೆದರು.

ಆ ಬಳಿಕ ಇಫ್ತಿಕರ್ ಅಹ್ಮದ್ (23), ಶಾದಾಬ್ ಖಾನ್ (6) ಹಾಗೂ ಫಹೀಮ್ ಅಶ್ರಫ್ ವಿಕೆಟ್ ಕಬಳಿಸುವ ಮೂಲಕ ಕುಲ್ದೀಪ್ ಯಾದವ್ 5 ವಿಕೆಟ್​ಗಳ ಸಾಧನೆ ಮಾಡಿದರು. ಅತ್ತ ಗಾಯಗೊಂಡಿದ್ದ ಹ್ಯಾರಿಸ್ ರೌಫ್ ಹಾಗೂ ನಸೀಮ್ ಶಾ ಬ್ಯಾಟಿಂಗ್​ಗೆ ಇಳಿಯದ ಕಾರಣ ಪಾಕಿಸ್ತಾನ್ ತಂಡವು 128 ರನ್​ಗಳಿಗೆ ಇನಿಂಗ್ಸ್ ಅಂತ್ಯಗೊಳಿಸಿತು. ಈ ಮೂಲಕ ಟೀಮ್ ಇಂಡಿಯಾ 228 ರನ್​ಗಳ ಅಮೋಘ ಗೆಲುವು ದಾಖಲಿಸಿತು.

ಭಾರತದ ಪರ ಕುಲ್ದೀಪ್ ಯಾದವ್ 8 ಓವರ್​ಗಳಲ್ಲಿ 25 ರನ್ ನೀಡಿ 5 ವಿಕೆಟ್ ಕಬಳಿಸಿದರೆ, ಜಸ್​ಪ್ರೀತ್ ಬುಮ್ರಾ, ಹಾರ್ದಿಕ್ ಪಾಂಡ್ಯ ಹಾಗೂ ಶಾರ್ದೂಲ್ ಠಾಕೂರ್ ತಲಾ ಒಂದೊಂದು ವಿಕೆಟ್ ಕಬಳಿಸಿದರು.

ಭಾರತ ಪ್ಲೇಯಿಂಗ್ 11: ರೋಹಿತ್ ಶರ್ಮಾ (ನಾಯಕ), ಶುಭ್​ಮನ್ ಗಿಲ್, ವಿರಾಟ್ ಕೊಹ್ಲಿ, ಕೆಎಲ್ ರಾಹುಲ್, ಇಶಾನ್ ಕಿಶನ್, ಹಾರ್ದಿಕ್ ಪಾಂಡ್ಯ, ರವೀಂದ್ರ ಜಡೇಜಾ, ಜಸ್​ಪ್ರೀತ್ ಬುಮ್ರಾ, ಕುಲ್ದೀಪ್ ಯಾದವ್, ಮೊಹಮ್ಮದ್ ಸಿರಾಜ್, ಶಾರ್ದೂಲ್ ಠಾಕೂರ್.

ಇದನ್ನೂ ಓದಿ: ಕಿಂಗ್ ಕೊಹ್ಲಿಯ 1 ಶತಕಕ್ಕೆ 10 ದಾಖಲೆಗಳು ಉಡೀಸ್..!

ಪಾಕಿಸ್ತಾನ್ ಪ್ಲೇಯಿಂಗ್ 11: ಫಖರ್ ಝಮಾನ್, ಇಮಾಮ್ ಉಲ್ ಹಕ್, ಬಾಬರ್ ಆಝಂ (ನಾಯಕ), ಮೊಹಮ್ಮದ್ ರಿಝ್ವಾನ್ (ವಿಕೆಟ್ ಕೀಪರ್), ಸಲ್ಮಾನ್ ಆಘಾ, ಇಫ್ತಿಕರ್ ಅಹ್ಮದ್, ಶಾದಾಬ್ ಖಾನ್, ಫಹೀಮ್ ಅಶ್ರಫ್, ಶಾಹೀನ್ ಅಫ್ರಿದಿ, ನಸೀಮ್ ಶಾ, ಹ್ಯಾರಿಸ್ ರೌಫ್.

Published On - 11:05 pm, Mon, 11 September 23

Follow Us
ಅಂಜನಾದ್ರಿ ಆಂಜನೇಯನಿಗೆ ಸಮರ್ಪಿಸಿದ್ದ ಬಂಗಾರ ವಿವಾದಕ್ಕೆ ತೆರೆ
ಅಂಜನಾದ್ರಿ ಆಂಜನೇಯನಿಗೆ ಸಮರ್ಪಿಸಿದ್ದ ಬಂಗಾರ ವಿವಾದಕ್ಕೆ ತೆರೆ
ಹಿಜಾಬ್​​ಗೆ ಅವಕಾಶ ಬೆನ್ನಲ್ಲೇ ಕೇಸರಿ ಶಾಲು ಬಗ್ಗೆ ಸಚಿವರು ಹೇಳಿದ್ದೇನು?
ಹಿಜಾಬ್​​ಗೆ ಅವಕಾಶ ಬೆನ್ನಲ್ಲೇ ಕೇಸರಿ ಶಾಲು ಬಗ್ಗೆ ಸಚಿವರು ಹೇಳಿದ್ದೇನು?
ಮಲೆ ಮಹದೇಶ್ವರ ಬೆಟ್ಟದ ರಸ್ತೆಯಲ್ಲಿ ಕೊಳಚೆ ಪ್ರವಾಹ
ಮಲೆ ಮಹದೇಶ್ವರ ಬೆಟ್ಟದ ರಸ್ತೆಯಲ್ಲಿ ಕೊಳಚೆ ಪ್ರವಾಹ
ಮಗಳೊಟ್ಟಿಗೆ ಖುಷಿಯಿಂದ ಡ್ಯಾನ್ಸ್ ಮಾಡಿದ್ದರು ದಿಲೀಪ್ ರಾಜ್: ವಿಡಿಯೋ
ಮಗಳೊಟ್ಟಿಗೆ ಖುಷಿಯಿಂದ ಡ್ಯಾನ್ಸ್ ಮಾಡಿದ್ದರು ದಿಲೀಪ್ ರಾಜ್: ವಿಡಿಯೋ
ಹಿಜಾಬ್​​ಗೆ ಅನುಮತಿ ನೀಡಿರುವ ಬಗ್ಗೆ ಶಿಕ್ಷಣ ಸಚಿವ ಹೇಳಿದ್ದಿಷ್ಟು
ಹಿಜಾಬ್​​ಗೆ ಅನುಮತಿ ನೀಡಿರುವ ಬಗ್ಗೆ ಶಿಕ್ಷಣ ಸಚಿವ ಹೇಳಿದ್ದಿಷ್ಟು
‘ಧುರಂಧರ್’ ನಿರ್ದೇಶಕ ಆದಿತ್ಯ ಧರ್​​ಗೆ ಸಚಿವ ಸಂತೋಷ್ ಲಾಡ್ ಸವಾಲು
‘ಧುರಂಧರ್’ ನಿರ್ದೇಶಕ ಆದಿತ್ಯ ಧರ್​​ಗೆ ಸಚಿವ ಸಂತೋಷ್ ಲಾಡ್ ಸವಾಲು
10 ವರ್ಷದ ಬಳಿಕ ಚೀನಾಗೆ ತೆರಳಿದ ಟ್ರಂಪ್​ಗೆ ಅದ್ದೂರಿ ಸ್ವಾಗತ
10 ವರ್ಷದ ಬಳಿಕ ಚೀನಾಗೆ ತೆರಳಿದ ಟ್ರಂಪ್​ಗೆ ಅದ್ದೂರಿ ಸ್ವಾಗತ
ವಿದಾನಸೌಧ ಮೇಲೆ ಹಾರಾಡಿದ ಹೆಲಿಕಾಪ್ಟರ್‌, NSG ಕಮಾಂಡೋ ಮಾಕ್ ಡ್ರಿಲ್ ನೋಡಿ
ವಿದಾನಸೌಧ ಮೇಲೆ ಹಾರಾಡಿದ ಹೆಲಿಕಾಪ್ಟರ್‌, NSG ಕಮಾಂಡೋ ಮಾಕ್ ಡ್ರಿಲ್ ನೋಡಿ
ಕಾಂಜಾವಾಲಾ ಕೈಗಾರಿಕಾ ಪ್ರದೇಶದ ಕಾರ್ಖಾನೆಯಲ್ಲಿ ಬೆಂಕಿ ಅವಘಡ
ಕಾಂಜಾವಾಲಾ ಕೈಗಾರಿಕಾ ಪ್ರದೇಶದ ಕಾರ್ಖಾನೆಯಲ್ಲಿ ಬೆಂಕಿ ಅವಘಡ
ಮೈದಾನದಲ್ಲೇ ಕುಸಿದು ಬಿದ್ದು ಪಟ್ಟಣ ಪಂಚಾಯತ್‌ ಸದಸ್ಯ ಸಾವು
ಮೈದಾನದಲ್ಲೇ ಕುಸಿದು ಬಿದ್ದು ಪಟ್ಟಣ ಪಂಚಾಯತ್‌ ಸದಸ್ಯ ಸಾವು