AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದಾಖಲೆಯ ಗೆಲುವು ಸಾಧಿಸಿದ ಪಾಕಿಸ್ತಾನ್: ಟೀಮ್ ಇಂಡಿಯಾ ರೆಕಾರ್ಡ್ ಸೇಫ್

Pakistan vs Nepal: ಐದನೇ ವಿಕೆಟ್​ಗೆ ಜೊತೆಯಾದ ಬಾಬರ್ ಆಝಂ ಹಾಗೂ ಇಫ್ತಿಕರ್ ಬರೋಬ್ಬರಿ 214 ರನ್​ಗಳ ಜೊತೆಯಾಟವಾಡಿದರು. ಈ ವೇಳೆ ಬಾಬರ್ ಆಝಂ 109 ಎಸೆತಗಳಲ್ಲಿ ಶತಕ ಪೂರೈಸಿದರು. ಶತಕದ ಬಳಿಕ ಬಿರುಸಿನ ಬ್ಯಾಟಿಂಗ್ ಪ್ರದರ್ಶಿಸಿದ ಬಾಬರ್ 131 ಎಸೆತಗಳಲ್ಲಿ 4 ಭರ್ಜರಿ ಸಿಕ್ಸ್ ಹಾಗೂ 14 ಫೋರ್​ಗಳೊಂದಿಗೆ 151 ರನ್​ ಬಾರಿಸಿ ನಿರ್ಗಮಿಸಿದರು.

ದಾಖಲೆಯ ಗೆಲುವು ಸಾಧಿಸಿದ ಪಾಕಿಸ್ತಾನ್: ಟೀಮ್ ಇಂಡಿಯಾ ರೆಕಾರ್ಡ್ ಸೇಫ್
Pakistan
TV9 Web
| Edited By: |

Updated on: Aug 30, 2023 | 10:00 PM

Share

Asia Cup 2023: ಏಷ್ಯಾಕಪ್​ನ ಮೊದಲ ಪಂದ್ಯದಲ್ಲಿ ಭರ್ಜರಿ ಜಯ ಸಾಧಿಸಿ ಪಾಕಿಸ್ತಾನ್ ತಂಡ ಶುಭಾರಂಭ ಮಾಡಿದೆ. ಮುಲ್ತಾನ್​ನ ನ್ಯಾಷನಲ್​ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆದ ಈ ಪಂದ್ಯದಲ್ಲಿ ಟಾಸ್ ಗೆದ್ದ ಪಾಕಿಸ್ತಾನ್ ತಂಡದ ನಾಯಕ ಬಾಬರ್ ಆಝಂ ಬ್ಯಾಟಿಂಗ್ ಆಯ್ದುಕೊಂಡಿದ್ದರು. ಅದರಂತೆ ಇನಿಂಗ್ಸ್ ಆರಂಭಿಸಿದ ಪಾಕ್ ತಂಡಕ್ಕೆ ಆರಂಭಿಕ ಆಘಾತ ನೀಡುವಲ್ಲಿ ನೇಪಾಳ ಬೌಲರ್​ಗಳು ಯಶಸ್ವಿಯಾಗಿದ್ದರು.

ಪವರ್​ಪ್ಲೇನಲ್ಲಿ ಭರ್ಜರಿ ಬೌಲಿಂಗ್:

ನೇಪಾಳ ತಂಡವು ಮೊದಲ 10 ಓವರ್​ಗಳಲ್ಲಿ ಅತ್ಯದ್ಭುತ ಬೌಲಿಂಗ್ ಪ್ರದರ್ಶನ ನೀಡಿದ್ದರು. ಆರಂಭಿಕರಾದ ಫಖರ್ ಝಮಾನ್ (14) ಹಾಗೂ ಇಮಾಮ್ ಉಲ್ ಹಕ್ (5) ವಿಕೆಟ್ ಪಡೆಯುವ ಮೂಲಕ ಪಾಕ್ ತಂಡಕ್ಕೆ ಆರಂಭಿಕ ಆಘಾತ ನೀಡಿದ್ದರು. ಅಷ್ಟೇ ಅಲ್ಲದೆ ಮೊದಲ ಓವರ್​ಗಳಲ್ಲಿ ನೀಡಿದ್ದು ಕೇವಲ 44 ರನ್​ಗಳು ಮಾತ್ರ.

ಪಂದ್ಯದ ಚಿತ್ರಣ ಬದಲಿಸಿದ ಬಾಬರ್-ಇಫ್ತಿಕರ್:

ಪಾಕಿಸ್ತಾನ್ ತಂಡವು ಆರಂಭಿಕ ಆಘಾತಕ್ಕೆ ಒಳಗಾದರೂ ಆ ಬಳಿಕ ಕಣಕ್ಕಿಳಿದ ಬಾಬರ್ ಆಝಂ ಹಾಗೂ ಇಫ್ತಿಕರ್ ಅಹ್ಮದ್ ಭರ್ಜರಿ ಬ್ಯಾಟಿಂಗ್ ಪ್ರದರ್ಶಿಸಿದ್ದರು. ಇನ್ನು 4ನೇ ಕ್ರಮಾಂಕದಲ್ಲಿ ಕಣಕ್ಕಿಳಿದ ಮೊಹಮ್ಮದ್ ರಿಝ್ವಾನ್ 44 ರನ್​ಗಳ ಕೊಡುಗೆ ನೀಡಿದರು. ಆದರೆ ಕೇವಲ 4 ರನ್​ಗೆ ವಿಕೆಟ್ ಒಪ್ಪಿಸಿ ಆಘಾ ಸಲ್ಮಾನ್ ನಿರಾಸೆ ಮೂಡಿಸಿದರು.

ಐದನೇ ವಿಕೆಟ್​ಗೆ ಜೊತೆಯಾದ ಬಾಬರ್ ಆಝಂ ಹಾಗೂ ಇಫ್ತಿಕರ್ ಬರೋಬ್ಬರಿ 214 ರನ್​ಗಳ ಜೊತೆಯಾಟವಾಡಿದರು. ಈ ವೇಳೆ ಬಾಬರ್ ಆಝಂ 109 ಎಸೆತಗಳಲ್ಲಿ ಶತಕ ಪೂರೈಸಿದರು. ಶತಕದ ಬಳಿಕ ಬಿರುಸಿನ ಬ್ಯಾಟಿಂಗ್ ಪ್ರದರ್ಶಿಸಿದ ಬಾಬರ್ 131 ಎಸೆತಗಳಲ್ಲಿ 4 ಭರ್ಜರಿ ಸಿಕ್ಸ್ ಹಾಗೂ 14 ಫೋರ್​ಗಳೊಂದಿಗೆ 151 ರನ್​ ಬಾರಿಸಿ ನಿರ್ಗಮಿಸಿದರು.

ಇಫ್ತಿಕರ್ ಅಹ್ಮದ್ ಅಬ್ಬರ:

ಬಾಬರ್ ಆಝಂ ಔಟಾಗುತ್ತಿದ್ದಂತೆ ಮತ್ತೊಂದೆಡೆ ಇಫ್ತಿಕ್ ಅಹ್ಮದ್ ಅಬ್ಬರ ಶುರು ಮಾಡಿದ್ದರು. ಕೇವಲ 67 ಎಸೆತಗಳಲ್ಲಿ ಶತಕ ಪೂರೈಸಿದ ಇಫ್ತಿಕರ್ ತಂಡದ ಮೊತ್ತವನ್ನು 300 ರ ಗಡಿದಾಟಿಸಿದರು. ಅಷ್ಟೇ ಅಲ್ಲದೆ 71 ಎಸೆತಗಳಲ್ಲಿ 4 ಭರ್ಜರಿ ಸಿಕ್ಸ್ ಹಾಗೂ 11 ಫೋರ್​ಗಳೊಂದಿಗೆ ಅಜೇಯ 109 ರನ್ ಬಾರಿಸಿ ತಂಡದ ಮೊತ್ತವನ್ನು 6 ವಿಕೆಟ್ ನಷ್ಟಕ್ಕೆ 342 ಕ್ಕೆ ತಂದು ನಿಲ್ಲಿಸಿದರು.

ಪಾಕ್ ಮಾರಕ ಬೌಲಿಂಗ್​ಗೆ ತತ್ತರಿಸಿದ ನೇಪಾಳ:

343 ರನ್​ಗಳ ಕಠಿಣ ಗುರಿ ಪಡೆದ ನೇಪಾಳ ತಂಡವು ಶಾಹೀನ್ ಅಫ್ರಿದಿಯ ಮೊದಲ ಓವರ್​ನಲ್ಲೇ 2 ವಿಕೆಟ್ ಕಳೆದುಕೊಂಡಿತು. ಇನ್ನು 2ನೇ ಓವರ್​ನಲ್ಲಿ ನಸೀಮ್ ಶಾ 3ನೇ ಯಶಸ್ಸು ತಂದುಕೊಟ್ಟರು. ಈ ಆರಂಭಿಕ ಆಘಾತದಿಂದ ನೇಪಾಳ ತಂಡವು ಚೇತರಿಸಿಕೊಳ್ಳಲೇ ಇಲ್ಲ ಎನ್ನಬಹುದು.

ಏಕೆಂದರೆ 2 ವಿಕೆಟ್ ಕಬಳಿಸುವ ಮೂಲಕ ಹ್ಯಾರಿಸ್ ರೌಫ್ ನೇಪಾಳ ತಂಡದ ಮಧ್ಯಮ ಕ್ರಮಾಂಕಕ್ಕೆ ಶಾಕ್ ನೀಡಿದರು. ಇದಾಗ್ಯೂ ನೇಪಾಳ ಪರ ಆರಿಫ್ ಶೇಖ್ 26 ರನ್​ಗಳಿಸಿದರೆ, ಸೋಂಪಲ್ 28 ರನ್​ಗಳ ಕೊಡುಗೆ ನೀಡಿದರು.

ಈ ಹಂತದಲ್ಲಿ ದಾಳಿಗಿಳಿದ ಸ್ಪಿನ್ನರ್ ಶಾದಾಬ್ ಖಾನ್ ಕೆಳ ಕ್ರಮಾಂಕದ ಬ್ಯಾಟರ್​ಗಳಿಗೆ ಪೆವಿಲಿಯನ್ ಹಾದಿ ತೋರಿಸಿದರು. ಇದರೊಂದಿಗೆ ನೇಪಾಳ ತಂಡವು 23.4 ಓವರ್​ಗಳಲ್ಲಿ 104 ರನ್​ಗಳಿಸಿ ಆಲೌಟ್ ಆಯಿತು. ಇತ್ತ 238 ರನ್​ಗಳ ಭರ್ಜರಿ ಜಯದೊಂದಿಗೆ ಪಾಕಿಸ್ತಾನ್ ಶುಭಾರಂಭ ಮಾಡಿದೆ.

ದಾಖಲೆಯ ಜಯ:

ಇದು ಪಾಕಿಸ್ತಾನ್ ತಂಡದ ಏಷ್ಯಾಕಪ್​ನಲ್ಲಿನ ಅತ್ಯಂತ ದೊಡ್ಡ ಗೆಲುವಾಗಿದೆ. ಅಂದರೆ ಈ ಹಿಂದೆ ಪಾಕ್ ತಂಡವು ಏಷ್ಯಾಕಪ್​ನಲ್ಲಿ ಬಾಂಗ್ಲಾದೇಶ್ ವಿರುದ್ಧ 233 ರನ್​ಗಳಿಂದ ಜಯ ಸಾಧಿಸಿತ್ತು. ಇದೀಗ ಈ ದಾಖಲೆಯನ್ನು ಮುರಿದು ಬಾಬರ್ ಆಝಂ ಪಡೆದ 238 ರನ್​ಗಳ ಗೆಲುವನ್ನು ತನ್ನದಾಗಿಸಿಕೊಂಡಿದೆ.

ಇದನ್ನೂ ಓದಿ: ಏಷ್ಯಾಕಪ್​ನಲ್ಲಿ ನಿರ್ಧಾರವಾಗಲಿದೆ ಯಾರು ನಂಬರ್ 1

ಟೀಮ್ ಇಂಡಿಯಾ ದಾಖಲೆ ಸೇಫ್:

ಏಷ್ಯಾಕಪ್​ನಲ್ಲಿ ಅತ್ಯಧಿಕ ರನ್​ಗಳ ಅಂತರದಿಂದ ಗೆದ್ದ ದಾಖಲೆ ಟೀಮ್ ಇಂಡಿಯಾ ಹೆಸರಿನಲ್ಲಿದೆ. ಭಾರತ ತಂಡವು 2008 ರಲ್ಲಿ ಹಾಂಗ್​ಕಾಂಗ್ ವಿರುದ್ಧ 256 ರನ್​ಗಳ ಜಯ ಸಾಧಿಸಿ ದಾಖಲೆ ನಿರ್ಮಿಸಿದೆ. ಇದೀಗ ಪಾಕ್ ತಂಡವು 238 ರನ್​ಗಳ ಗೆಲುವು ಸಾಧಿಸುವ ಮೂಲಕ ಈ ಪಟ್ಟಿಯಲ್ಲಿ 2ನೇ ಸ್ಥಾನ ಅಲಂಕರಿಸಿದೆ.

Follow Us
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು
ಹುಲಿ ಹಿಡಿಯದಿದ್ರೆ ನಿಮ್ಮನ್ನೇ ಬೋನಿಗೆ ಹಾಕುತ್ತೇವೆ: ರೈತರ ಎಚ್ಚರಿಕೆ
ಹುಲಿ ಹಿಡಿಯದಿದ್ರೆ ನಿಮ್ಮನ್ನೇ ಬೋನಿಗೆ ಹಾಕುತ್ತೇವೆ: ರೈತರ ಎಚ್ಚರಿಕೆ
ರಾಮ ಮಂದಿರ ಟ್ರಸ್ಟ್, ಕೇಂದ್ರ ಮತ್ತು ಯುಪಿ ಸರ್ಕಾರಗಳಿಗೆ ಸುಪ್ರೀಂ ನೋಟಿಸ್
ರಾಮ ಮಂದಿರ ಟ್ರಸ್ಟ್, ಕೇಂದ್ರ ಮತ್ತು ಯುಪಿ ಸರ್ಕಾರಗಳಿಗೆ ಸುಪ್ರೀಂ ನೋಟಿಸ್
ಧಾರ್ಮಿಕ ದತ್ತಿ ಇಲಾಖೆ ದೇಗುಲಗಳಿಗೆ ಹೊಸ ಮಾರ್ಗಸೂಚಿ
ಧಾರ್ಮಿಕ ದತ್ತಿ ಇಲಾಖೆ ದೇಗುಲಗಳಿಗೆ ಹೊಸ ಮಾರ್ಗಸೂಚಿ
ಚಲಿಸುವ ರೈಲಿನಿಂದ ಬೀಳುತ್ತಿದ್ದ ಯುವಕನನ್ನು ರಕ್ಷಿಸಿದ ಸಿಬ್ಬಂದಿ!
ಚಲಿಸುವ ರೈಲಿನಿಂದ ಬೀಳುತ್ತಿದ್ದ ಯುವಕನನ್ನು ರಕ್ಷಿಸಿದ ಸಿಬ್ಬಂದಿ!
ರೌಡಿಶೀಟರ್ ಬರ್ತ್‌ಡೇ ಪಾರ್ಟಿಯಲ್ಲಿ ಬಿಜೆಪಿ ಶಾಸಕ ಭಾಗಿ
ರೌಡಿಶೀಟರ್ ಬರ್ತ್‌ಡೇ ಪಾರ್ಟಿಯಲ್ಲಿ ಬಿಜೆಪಿ ಶಾಸಕ ಭಾಗಿ