AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Asia Cup 2023: ನಾವು ಭಿಕ್ಷೆ ಬೇಡುತ್ತಿಲ್ಲ…ಇಷ್ಟವಿಲ್ಲದಿದ್ರೆ ಭಾರತ ಬರಬೇಡಿ ಎಂದ ಅಫ್ರಿದಿ..!

India vs Pakistan: ಕ್ರಿಕೆಟ್‌ನಿಂದಾಗಿ ಭಾರತ-ಪಾಕಿಸ್ತಾನ ಸಂಬಂಧಗಳು ಯಾವಾಗಲೂ ಸುಧಾರಿಸಿವೆ. ಭಾರತದಲ್ಲಿ ಪಾಕಿಸ್ತಾನ ಕ್ರಿಕೆಟ್ ಆಡುವುದನ್ನು ಭಾರತೀಯರು ನೋಡಲು ಬಯಸುತ್ತಾರೆ.

Asia Cup 2023: ನಾವು ಭಿಕ್ಷೆ ಬೇಡುತ್ತಿಲ್ಲ...ಇಷ್ಟವಿಲ್ಲದಿದ್ರೆ ಭಾರತ ಬರಬೇಡಿ ಎಂದ ಅಫ್ರಿದಿ..!
India vs Pakistan
TV9 Web
| Edited By: |

Updated on: Dec 06, 2022 | 5:31 PM

Share

Asia Cup 2023: ಏಷ್ಯಾಕಪ್ 2023ರ ಕುರಿತಾದ ಭಾರತ-ಪಾಕಿಸ್ತಾನ್ (India vs Pakistan) ಕ್ರಿಕೆಟ್ ಮಂಡಳಿಗಳ ನಡುವಣ ವಾಕ್ಸಮರ ಮುಂದುವರೆದಿದೆ. ಪಾಕಿಸ್ತಾನದಲ್ಲಿ ನಡೆಯಲಿರುವ ಏಷ್ಯಾಕಪ್​ನಿಂದ ಟೀಮ್ ಇಂಡಿಯಾ ಹಿಂದೆ ಸರಿಯಲಿದೆ ಎಂಬ ಬಿಸಿಸಿಐ ಅಧ್ಯಕ್ಷ ಜಯ್ ಶಾ ಅವರ ಹೇಳಿಕೆಯಿಂದ ಶುರುವಾದ ಈ ಚರ್ಚೆಯು ಇದೀಗ ಹೊಸ ಜಟಾಪಟಿಗೆ ಎಡೆ ಮಾಡಿಕೊಟ್ಟಿದೆ. ಏಕೆಂದರೆ ಏಷ್ಯಾಕಪ್ 2023 ರ ವಿಚಾರದಲ್ಲಿ ಪಾಕಿಸ್ತಾನ್ ಕ್ರಿಕೆಟ್ ಮಂಡಳಿ ಹಾಗೂ ಭಾರತೀಯ ಕ್ರಿಕೆಟ್ ಮಂಡಳಿ ವಿಭಿನ್ನ ನಿಲುವು ಹೊಂದಿದೆ. ಪಾಕ್​ನಲ್ಲಿ ಟೂರ್ನಿ ಆಯೋಜಿಸಿದರೆ ಭಾರತ ಹಿಂದೆ ಸರಿಯಲಿದೆ ಎಂದು ಬಿಸಿಸಿಐ ಈಗಾಗಲೇ ಸ್ಪಷ್ಟಪಡಿಸಿದ್ದು,  ಮತ್ತೊಂದೆಡೆ ಪಾಕಿಸ್ತಾನದಲ್ಲಿ ಟೂರ್ನಿಯನ್ನು ಆಯೋಜಿಸದೇ ತಟಸ್ಥ ಸ್ಥಳದಲ್ಲಿ ನಡೆಸಿದರೆ ಪಾಕ್ ತಂಡ ಕೂಡ ಭಾಗವಹಿಸಲ್ಲ ಎಂದು ಪಿಸಿಬಿ ಅಧ್ಯಕ್ಷ ರಮೀಜ್ ರಾಜಾ ಹೇಳಿದ್ದಾರೆ.

ಇದೀಗ ರಮೀಜ್ ರಾಜಾ ಅವರ ಹೇಳಿಕೆ ಪಾಕ್ ತಂಡದ ಮಾಜಿ ನಾಯಕ ಶಾಹೀದ್ ಅಫ್ರಿದಿ ಬೆಂಬಲ ವ್ಯಕ್ತಪಡಿಸಿದ್ದಾರೆ. ಉಭಯ ದೇಶಗಳ ನಡುವಿನ ಸಂಬಂಧವನ್ನು ಸುಧಾರಿಸಲು ಕ್ರಿಕೆಟ್ ಮಾಧ್ಯಮವಾಗಿದೆ. ಆದರೆ ಏಷ್ಯಾಕಪ್ ಅನ್ನು ಆಯೋಜಿಸಲು ತಮ್ಮ ದೇಶವು ಯಾರನ್ನೂ ಬೇಡಿಕೊಂಡಿಲ್ಲ. ನಮ್ಮ ಬಳಿ ಆಯೋಜನೆ ಹಕ್ಕು ಇರುವ ಕಾರಣದಿಂದಲೇ ಪಾಕ್​ನಲ್ಲೇ ಟೂರ್ನಿ ನಡೆಸಲು ನಿರ್ಧರಿಸಿದ್ದೇವೆ. ಹೀಗಾಗಿ ಏಷ್ಯಾಕಪ್ ಆಯೋಜನೆಯಿಂದ ಪಾಕ್ ಹಿಂದೆ ಸರಿಯಬಾರದು ಅಫ್ರಿದಿ ಅಭಿಪ್ರಾಯಪಟ್ಟಿದ್ದಾರೆ.

ಕ್ರಿಕೆಟ್‌ನಿಂದಾಗಿ ಭಾರತ-ಪಾಕಿಸ್ತಾನ ಸಂಬಂಧಗಳು ಯಾವಾಗಲೂ ಸುಧಾರಿಸಿವೆ. ಭಾರತದಲ್ಲಿ ಪಾಕಿಸ್ತಾನ ಕ್ರಿಕೆಟ್ ಆಡುವುದನ್ನು ಭಾರತೀಯರು ನೋಡಲು ಬಯಸುತ್ತಾರೆ. ಈ ಬಾರಿ ಏಷ್ಯಾಕಪ್ ಆಯೋಜನೆಯ ಹಕ್ಕುಗಳನ್ನು ನಾವು ಹೊಂದಿದ್ದೇವೆ. ಬದಲಾಗಿ ನಾವು ಟೂರ್ನಿ ಆಯೋಜಿಸಬೇಕೆಂದು ಯಾರನ್ನೂ ಬೇಡಿಕೊಳ್ಳುತ್ತಿಲ್ಲ ಎಂಬುದನ್ನು ಅರ್ಥ ಮಾಡಿಕೊಳ್ಳಬೇಕು.

ಇದನ್ನೂ ಓದಿ
Image
IPL 2023: RCB ಈ ನಾಲ್ವರು ಆಟಗಾರರ ಖರೀದಿಗೆ ಮುಂದಾಗಬಹುದು..!
Image
IPL 2023: ಈ ಬಾರಿಯ ಐಪಿಎಲ್​ನಿಂದ 5 ಆಟಗಾರರು ಔಟ್..!
Image
IPL 2023 Mini Auction: ಐಪಿಎಲ್ ಮಿನಿ ಹರಾಜು ಲೀಸ್ಟ್ ಔಟ್: ಯಾವ ದೇಶದಿಂದ ಎಷ್ಟು ಆಟಗಾರರು?
Image
New Record: ಅತ್ಯಧಿಕ ಟೆಸ್ಟ್ ಶತಕ: ಕೊಹ್ಲಿ, ರೂಟ್​ರನ್ನು ಹಿಂದಿಕ್ಕಿದ ಸ್ಟೀವ್ ಸ್ಮಿತ್

ಏಷ್ಯಾಕಪ್ 2023 ರ ಆಯೋಜನೆಗೆ ನಾವು ಪ್ರಾಮಾಣಿಕವಾಗಿ ಹೋಸ್ಟಿಂಗ್ ಹಕ್ಕುಗಳನ್ನು ಪಡೆದುಕೊಂಡಿದ್ದೇವೆ. ಭಾರತಕ್ಕೆ ಬರಲು ಇಷ್ಟವಿಲ್ಲದಿದ್ದರೆ ಬರಬೇಡಿ ಅಷ್ಟೇ. ಬದಲಾಗಿ ಏಷ್ಯಾಕಪ್‌ನ ಆತಿಥ್ಯವನ್ನು ಪಾಕಿಸ್ತಾನದಿಂದ ಕಸಿದುಕೊಂಡರೆ, ಪಾಕಿಸ್ತಾನ್ ತಂಡ ಕೂಡ ಟೂರ್ನಿಯಿಂದ ಹಿಂದೆ ಸರಿಯಲಿದೆ ಎಂದು ಅಫ್ರಿದಿ ಎಚ್ಚರಿಸಿದ್ದಾರೆ.

2023ರ ಏಷ್ಯಾಕಪ್ ಪಾಕಿಸ್ತಾನದಲ್ಲಿ ನಡೆದರೆ ಭಾರತ ತಂಡವು ಭಾಗವಹಿಸುವುದಿಲ್ಲ ಎಂದು ಬಿಸಿಸಿಐ ಹೇಳಿದೆ. ಆಟಗಾರರ ಸುರಕ್ಷತೆಯ ದೃಷ್ಟಿಯಲ್ಲಿ ಭಾರತೀಯ ಕ್ರಿಕೆಟ್ ಮಂಡಳಿ ಈ ನಿರ್ಧಾರಕ್ಕೆ ಮುಂದಾಗಿದೆ. ಅಲ್ಲದೆ ತಟಸ್ಥ ಸ್ಥಳಗಳಲ್ಲಿ ಟೂರ್ನಿಯನ್ನು ಆಯೋಜಿಸುವಂತೆ ಪಾಕಿಸ್ತಾನ್ ಕ್ರಿಕೆಟ್ ಮಂಡಳಿಗೆ ಮನವಿ ಮಾಡಿದೆ. ಆದರೆ ಪಾಕ್ ಹೊರತುಪಡಿಸಿ ಬೇರೆ ಕಡೆ ಟೂರ್ನಿ ಆಯೋಜಿಸಲು ಏಷ್ಯನ್ ಕ್ರಿಕೆಟ್ ಕೌನ್ಸಿಲ್ ಮುಂದಾದರೆ, ಪಾಕಿಸ್ತಾನ್ ತಂಡವು ಏಷ್ಯಾಕಪ್​ನಿಂದ ಹಿಂದೆ ಸರಿಯಲಿದೆ ಎಂದು ಪಾಕ್ ಕ್ರಿಕೆಟ್ ಮಂಡಳಿ ತಿಳಿಸಿದೆ. ಹೀಗಾಗಿ ಮುಂಬರುವ ಏಷ್ಯಾಕಪ್ ಎಲ್ಲಿ ನಡೆಯಲಿದೆ ಎಂಬುದರ ಬಗ್ಗೆ ಇನ್ನೂ ಕೂಡ ಯಾವುದೇ ಸ್ಪಷ್ಟತೆ ಇಲ್ಲ.

ಸಚಿವ ನಿತಿನ್ ಗಡ್ಕರಿ ಕಿವಿಯಲ್ಲಿ ಟಿಎಂಸಿ ಸಂಸದ ಗುಟ್ಟಾಗಿ ಹೇಳಿದ್ದೇನು?
ಸಚಿವ ನಿತಿನ್ ಗಡ್ಕರಿ ಕಿವಿಯಲ್ಲಿ ಟಿಎಂಸಿ ಸಂಸದ ಗುಟ್ಟಾಗಿ ಹೇಳಿದ್ದೇನು?
ತಮ್ಮದೇ ಕಾರಿನಲ್ಲಿ ಮೋದಿಯನ್ನು ಬೀಳ್ಕೊಟ್ಟ ಇಥಿಯೋಪಿಯನ್ ಪ್ರಧಾನಿ
ತಮ್ಮದೇ ಕಾರಿನಲ್ಲಿ ಮೋದಿಯನ್ನು ಬೀಳ್ಕೊಟ್ಟ ಇಥಿಯೋಪಿಯನ್ ಪ್ರಧಾನಿ
ತನ್ನ ಪ್ರಾಣವನ್ನೂ ಲೆಕ್ಕಿಸದೆ ಸೈಕಲ್​ನಿಂದ ಬಿದ್ದ ತಮ್ಮನನ್ನು ಕಾಪಾಡಿದ ಅಣ್ಣ
ತನ್ನ ಪ್ರಾಣವನ್ನೂ ಲೆಕ್ಕಿಸದೆ ಸೈಕಲ್​ನಿಂದ ಬಿದ್ದ ತಮ್ಮನನ್ನು ಕಾಪಾಡಿದ ಅಣ್ಣ
ಚೈತ್ರಾಗೆ ಕೀ ಕೊಟ್ಟ ಗಿಲ್ಲಿ: ನಕ್ಕು ಸುಸ್ತಾದ ರಜತ್-ರಘು
ಚೈತ್ರಾಗೆ ಕೀ ಕೊಟ್ಟ ಗಿಲ್ಲಿ: ನಕ್ಕು ಸುಸ್ತಾದ ರಜತ್-ರಘು
ಗೃಹಲಕ್ಷ್ಮಿ ಬಗ್ಗೆ ತಪ್ಪು ಮಾಹಿತಿ: ವಿಷಾದ ವ್ಯಕ್ತಪಡಿಸಿದ ಹೆಬ್ಬಾಳ್ಕರ್
ಗೃಹಲಕ್ಷ್ಮಿ ಬಗ್ಗೆ ತಪ್ಪು ಮಾಹಿತಿ: ವಿಷಾದ ವ್ಯಕ್ತಪಡಿಸಿದ ಹೆಬ್ಬಾಳ್ಕರ್
ಜೈಲಲ್ಲಿ ಖಾಕಿ ಕಾರ್ಯಾಚರಣೆಗೆ ಪತರುಗುಟ್ಟಿದ ಕೈದಿಗಳು
ಜೈಲಲ್ಲಿ ಖಾಕಿ ಕಾರ್ಯಾಚರಣೆಗೆ ಪತರುಗುಟ್ಟಿದ ಕೈದಿಗಳು
ಬೆಂಗಳೂರಿನಲ್ಲಿ ಶಿಲ್ಪಾ ಶೆಟ್ಟಿ ಒಡೆತನದ ಬ್ಯಾಸ್ಟಿಯನ್ ಪಬ್ ಮೇಲೆ ಐಟಿ ದಾಳಿ
ಬೆಂಗಳೂರಿನಲ್ಲಿ ಶಿಲ್ಪಾ ಶೆಟ್ಟಿ ಒಡೆತನದ ಬ್ಯಾಸ್ಟಿಯನ್ ಪಬ್ ಮೇಲೆ ಐಟಿ ದಾಳಿ
2026 ಮೇಷ ರಾಶಿಯವರಿಗೆ ಮಹತ್ತರವಾದ ಬದಲಾವಣೆಯ ವರ್ಷ
2026 ಮೇಷ ರಾಶಿಯವರಿಗೆ ಮಹತ್ತರವಾದ ಬದಲಾವಣೆಯ ವರ್ಷ
ಜೈಲುಗಳಲ್ಲಿ ಅಕ್ರಮ ತಡೆಗಟ್ಟಲು ಎಐ ತಂತ್ರಜ್ಞಾನ ಬಳಕೆ!
ಜೈಲುಗಳಲ್ಲಿ ಅಕ್ರಮ ತಡೆಗಟ್ಟಲು ಎಐ ತಂತ್ರಜ್ಞಾನ ಬಳಕೆ!
ಇಥಿಯೋಪಿಯಾದ ಗಾಯಕರ ಕಂಠದಲ್ಲಿ ವಂದೇ ಮಾತರಂ ಗೀತೆ ಕೇಳಿ ಖುಷಿಪಟ್ಟ ಮೋದಿ
ಇಥಿಯೋಪಿಯಾದ ಗಾಯಕರ ಕಂಠದಲ್ಲಿ ವಂದೇ ಮಾತರಂ ಗೀತೆ ಕೇಳಿ ಖುಷಿಪಟ್ಟ ಮೋದಿ