AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs PAK: ಫೈನಲ್ ಗೆದ್ದರೂ ಭಾರತ ಏಷ್ಯಾಕಪ್ ಟ್ರೋಫಿ ಸ್ವೀಕರಿಸಲ್ವಾ?

Asia Cup 2025 Final India vs Pakistan: ಏಷ್ಯಾಕಪ್ ಇತಿಹಾಸದಲ್ಲೇ ಇದೇ ಮೊದಲ ಬಾರಿಗೆ ಭಾರತ ಮತ್ತು ಪಾಕಿಸ್ತಾನ್ ತಂಡಗಳು ಫೈನಲ್​ನಲ್ಲಿ ಮುಖಾಮುಖಿಯಾಗುತ್ತಿದೆ. ಈ ಪಂದ್ಯದಲ್ಲಿ ಗೆಲ್ಲುವ ಫೇವರೇಟ್ ತಂಡವಾಗಿ ಭಾರತ ಗುರುತಿಸಿಕೊಂಡಿದೆ. ಈ ಗೆಲುವಿನ ಬಳಿಕ ಟೀಮ್ ಇಂಡಿಯಾ ನಾಯಕ ಸೂರ್ಯಕುಮಾರ್ ಯಾದವ್ ಏಷ್ಯಾಕಪ್ ಟ್ರೋಫಿ ಸ್ವೀಕರಿಸಲಿದ್ದಾರಾ ಎಂಬುದೇ ಈಗ ದೊಡ್ಡ ಪ್ರಶ್ನೆ.

IND vs PAK: ಫೈನಲ್ ಗೆದ್ದರೂ ಭಾರತ ಏಷ್ಯಾಕಪ್ ಟ್ರೋಫಿ ಸ್ವೀಕರಿಸಲ್ವಾ?
Suryakumar Yadav
ಝಾಹಿರ್ ಯೂಸುಫ್
|

Updated on: Sep 28, 2025 | 2:09 PM

Share

ಭಾರತ ಮತ್ತು ಪಾಕಿಸ್ತಾನ್ ನಡುವಣ ಏಷ್ಯಾಕಪ್ ಫೈನಲ್​ ಪಂದ್ಯಕ್ಕಾಗಿ ಕ್ಷಣಗಣನೆ ಶುರುವಾಗಿದೆ. ಇಂದು (ಸೆ.28) ರಾತ್ರಿ ನಡೆಯಲಿರುವ ಬಿಗ್ ಫೈನಲ್​ನಲ್ಲಿ ಏಷ್ಯಾದ ಬದ್ಧ ವೈರಿಗಳು ಸೆಣಸಲಿವೆ. ಈ ತಂಡಗಳಲ್ಲಿ ಗೆಲ್ಲುವ ಫೇವರೇಟ್ ಆಗಿ ಗುರುತಿಸಿಕೊಂಡಿರುವುದು ಭಾರತ. ಏಕೆಂದರೆ ಮೊದಲ ಸುತ್ತಿನಲ್ಲಿ ಪಾಕ್ ಪಡೆಯನ್ನು ಟೀಮ್ ಇಂಡಿಯಾ 7 ವಿಕೆಟ್​ಗಳಿಂದ ಸೋಲಿಸಿತ್ತು. ಇನ್ನು ದ್ವಿತೀಯ ಸುತ್ತಿನಲ್ಲಿ ಭಾರತೀಯ ಪಡೆ 6 ವಿಕೆಟ್​ಗಳ ಜಯ ಸಾಧಿಸಿತ್ತು. ಹೀಗಾಗಿ ಇಂದಿನ ಪಂದ್ಯದಲ್ಲೂ ಭಾರತದ ಗೆಲುವನ್ನು ನಿರೀಕ್ಷಿಸಬಹುದು. ಆದರೆ ಈ ಗೆಲುವಿನ ಬಳಿಕ ಟೀಮ್ ಇಂಡಿಯಾ ಏಷ್ಯಾಕಪ್ ಟ್ರೋಫಿ ಸ್ವೀಕರಿಸಲ್ವಾ? ಎಂಬ ಪ್ರಶ್ನೆಯೊಂದು ಹುಟ್ಟಿಕೊಂಡಿದೆ.

ಇಂತಹದೊಂದು ಪ್ರಶ್ನೆ ಹುಟ್ಟಿಕೊಳ್ಳಲು ಮುಖ್ಯ ಕಾರಣ ಏಷ್ಯನ್ ಕ್ರಿಕೆಟ್ ಕೌನ್ಸಿಲ್​ನ ಮುಖ್ಯಸ್ಥ ಮೊಹ್ಸಿನ್ ನಖ್ವಿ ಆಗಿರುವುದು. ಅಂದರೆ ಪಾಕಿಸ್ತಾನ್ ಕ್ರಿಕೆಟ್ ಬೋರ್ಡ್​ನ ಅಧ್ಯಕ್ಷರೇ ಈಗ ಏಷ್ಯನ್ ಕ್ರಿಕೆಟ್ ಕೌನ್ಸಿಲ್​ನ ಮುಖ್ಯಸ್ಥ ಹುದ್ದೆಯಲ್ಲಿದ್ದಾರೆ. ಹೀಗಾಗಿ ಮೊಹ್ಸಿನ್ ನಖ್ವಿ ಏಷ್ಯಾಕಪ್ ಟ್ರೋಫಿಯನ್ನು ಗೆದ್ದ ತಂಡಕ್ಕೆ ಹಸ್ತಾಂತರಿಸಲಿದ್ದಾರೆ.

ಇತ್ತ ಪಾಕಿಸ್ತಾನ್ ಆಟಗಾರರೊಂದಿಗೆ ಹ್ಯಾಂಡ್ ಶೇಕ್ ನೀಡಲು ಹಿಂದೇಟು ಹಾಕಿರುವ  ಭಾರತೀಯರು ಇದೀಗ ಪಾಕಿಸ್ತಾನ್ ಕ್ರಿಕೆಟ್ ಬೋರ್ಡ್​ ಅಧ್ಯಕ್ಷರಿಂದ ಟ್ರೋಫಿ ಸ್ವೀಕರಿಸಲಿದ್ದಾರಾ ಎಂಬ ಪ್ರಶ್ನೆಯೊಂದು ಹುಟ್ಟಿಕೊಂಡಿದೆ. ಏಕೆಂದರೆ ನಖ್ವಿ ಕೇವಲ ಪಿಸಿಬಿ ಹಾಗೂ ಎಸಿಸಿ ಮುಖ್ಯಸ್ಥನ ಸ್ಥಾನದಲ್ಲಿ ಮಾತ್ರವಿಲ್ಲ. ಬದಲಾಗಿ ಪಾಕಿಸ್ತಾನ ಸರ್ಕಾರದ ಆಂತರಿಕ ವ್ಯವಹಾರಗಳ ಸಚಿವರಾಗಿಯೂ ಕಾರ್ಯ ನಿರ್ವಹಿಸುತ್ತಿದ್ದಾರೆ.

ಈ ಹಿನ್ನಲೆ ಟೀಮ್ ಇಂಡಿಯಾ ನಾಯಕ ಸೂರ್ತಕುಮಾರ್ ಯಾದವ್ ಏಷ್ಯನ್ ಕ್ರಿಕೆಟ್ ಕೌನ್ಸಿಲ್​ನ ಮುಖ್ಯಸ್ಥ ನಖ್ವಿಯಿಂದ ಏಷ್ಯಾಕಪ್ ಟ್ರೋಫಿ ಸ್ವೀಕರಿಸುತ್ತಾರಾ ಎಂಬುದೇ ಸದ್ಯದ ಕುತೂಹಲ.

ಏಷ್ಯಾಕಪ್ ಫೈನಲ್ ಎಷ್ಟು ಗಂಟೆ ಶುರು?

ಭಾರತ-ಪಾಕಿಸ್ತಾನ್ ನಡುವಣ ಫೈನಲ್ ಪಂದ್ಯವು ಭಾರತೀಯ ಕಾಲಮಾನ ರಾತ್ರಿ 8 ಗಂಟೆಗೆ ಶುರುವಾಗಲಿದೆ. ದುಬೈ ಇಂಟರ್​ನ್ಯಾಷನಲ್ ಸ್ಟೇಡಿಯಂನಲ್ಲಿ ನಡೆಯಲಿರುವ ಈ ಪಂದ್ಯದ ಟಾಸ್ ಪ್ರಕ್ರಿಯೆ ರಾತ್ರಿ 7.30 ಕ್ಕೆ ನಡೆಯಲಿದೆ.

ಉಭಯ ತಂಡಗಳು:

ಭಾರತ ತಂಡ: ಸಂಜು ಸ್ಯಾಮ್ಸನ್ (ವಿಕೆಟ್ ಕೀಪರ್), ಅಭಿಷೇಕ್ ಶರ್ಮಾ, ತಿಲಕ್ ವರ್ಮಾ, ಸೂರ್ಯಕುಮಾರ್ ಯಾದವ್ (ನಾಯಕ), ಶುಭ್​ಮನ್ ಗಿಲ್ (ಉಪನಾಯಕ),  ಹಾರ್ದಿಕ್ ಪಾಂಡ್ಯ, ಶಿವಂ ದುಬೆ, ಅಕ್ಷರ್ ಪಟೇಲ್, ಜಸ್ಪ್ರೀತ್ ಬುಮ್ರಾ, ಅರ್ಷದೀಪ್ ಸಿಂಗ್, ವರುಣ್ ಚಕ್ರವರ್ತಿ, ಜಿತೇಶ್ ಶರ್ಮಾ (ವಿಕೆಟ್ ಕೀಪರ್), ಕುಲ್ದೀಪ್ ಯಾದವ್, ಹರ್ಷಿತ್ ರಾಣಾ, ರಿಂಕು ಸಿಂಗ್.

ಇದನ್ನೂ ಓದಿ: ಭಾರತ vs ಪಾಕಿಸ್ತಾನ್ ನಡುವೆ 5 ಬಾರಿ ಫೈನಲ್​: 3 ಬಾರಿ ಪಾಕ್ ಚಾಂಪಿಯನ್

ಪಾಕಿಸ್ತಾನ್ ತಂಡ: ಸಲ್ಮಾನ್ ಅಲಿ ಅಘಾ (ನಾಯಕ), ಅಬ್ರಾರ್ ಅಹ್ಮದ್, ಫಹೀಮ್ ಅಶ್ರಫ್, ಫಖರ್ ಝಮಾನ್, ಹ್ಯಾರಿಸ್ ರೌಫ್, ಹಸನ್ ಅಲಿ, ಹಸನ್ ನವಾಝ್, ಹುಸೇನ್ ತಲತ್, ಖುಷ್ದಿಲ್ ಶಾ, ಮೊಹಮ್ಮದ್ ಹ್ಯಾರಿಸ್ (ವಿಕೆಟ್ ಕೀಪರ್), ಮೊಹಮ್ಮದ್ ನವಾಜ್, ಮೊಹಮ್ಮದ್ ವಾಸಿಂ ಜೂನಿಯರ್, ಸಾಹಿಬ್​ಝಾದ್ ಫರ್ಹಾನ್, ಶಾಹೀನ್ ಅಫ್ರಿದಿ, ಸಲ್ಮಾನ್ ಮಿರ್ಝಾ, ಸೈಮ್ ಅಯ್ಯೂಬ್ ಮತ್ತು ಸುಫಿಯಾನ್ ಮುಖಿಮ್.

Follow Us
ಭವಾನಿ ಶಂಕರ ದೇವಸ್ಥಾನದ ಪುಷ್ಕರಣಿ ಜಾಗ ಒತ್ತುವರಿ ಆರೋಪ
ಭವಾನಿ ಶಂಕರ ದೇವಸ್ಥಾನದ ಪುಷ್ಕರಣಿ ಜಾಗ ಒತ್ತುವರಿ ಆರೋಪ
ಪ್ರಜ್ವಲ್ ರೇವಣ್ಣ ಬಳಿ ಮತ್ತೊಂದು ಮೊಬೈಲ್ ಪತ್ತೆ!
ಪ್ರಜ್ವಲ್ ರೇವಣ್ಣ ಬಳಿ ಮತ್ತೊಂದು ಮೊಬೈಲ್ ಪತ್ತೆ!
ಮದುವೆ ಮನೆ ಆಹಾರ ಪರಿಶೀಲನೆಗೂ ಸೂಚನೆ: ಖಾದರ್ ಮಹತ್ವದ ಘೋಷಣೆ
ಮದುವೆ ಮನೆ ಆಹಾರ ಪರಿಶೀಲನೆಗೂ ಸೂಚನೆ: ಖಾದರ್ ಮಹತ್ವದ ಘೋಷಣೆ
ಸೊಳ್ಳೆ ಕಾಟಕ್ಕೆ ಮುಕ್ತಿ ನೀಡಿ ಪ್ಲೀಸ್, ದರ್ಶನ್; ನಾನೇನು ಮಾಡೋಕಾಗಲ್ಲ DGP
ಸೊಳ್ಳೆ ಕಾಟಕ್ಕೆ ಮುಕ್ತಿ ನೀಡಿ ಪ್ಲೀಸ್, ದರ್ಶನ್; ನಾನೇನು ಮಾಡೋಕಾಗಲ್ಲ DGP
ಕೋಟಿ ಆಸ್ತಿಗಾಗಿ ಜೀವಂತ ವೃದ್ಧನ ಮರಣ ಪ್ರಮಾಣಪತ್ರ ಸೃಷ್ಟಿಸಿ ವಂಚನೆ!
ಕೋಟಿ ಆಸ್ತಿಗಾಗಿ ಜೀವಂತ ವೃದ್ಧನ ಮರಣ ಪ್ರಮಾಣಪತ್ರ ಸೃಷ್ಟಿಸಿ ವಂಚನೆ!
ಒಂಟಿ ಮನೆಗಳನ್ನೇ ದರೋಡೆ ಮಾಡ್ತಿದ್ದ ಖತರ್ನಾಕ್ ಗ್ಯಾಂಗ್ ಬಂಧನ
ಒಂಟಿ ಮನೆಗಳನ್ನೇ ದರೋಡೆ ಮಾಡ್ತಿದ್ದ ಖತರ್ನಾಕ್ ಗ್ಯಾಂಗ್ ಬಂಧನ
ನಾಗೇಂದ್ರ ರಾಜೀನಾಮೆ ಪಟ್ಟು, ರಾಜ್ಯಾದ್ಯಂತ ಪ್ರತಿಭಟನೆಗೂ ಬಿಜೆಪಿ ಪ್ಲ್ಯಾನ್
ನಾಗೇಂದ್ರ ರಾಜೀನಾಮೆ ಪಟ್ಟು, ರಾಜ್ಯಾದ್ಯಂತ ಪ್ರತಿಭಟನೆಗೂ ಬಿಜೆಪಿ ಪ್ಲ್ಯಾನ್
ಇಂದು ನಾಗಪಂಚಮಿಯ ಜೊತೆಗೆ ಸೂರ್ಯ ಸಂಕ್ರಮಣದ ವಿಶೇಷ ಪರ್ವ ದಿನ!
ಇಂದು ನಾಗಪಂಚಮಿಯ ಜೊತೆಗೆ ಸೂರ್ಯ ಸಂಕ್ರಮಣದ ವಿಶೇಷ ಪರ್ವ ದಿನ!
ಚಿಕ್ಕಪ್ಪನ ಜೊತೆ ನಟನೆ, ನಟ ನಿರಂಜನ್ ಹೇಳಿದ್ದೇನು? ವಿಡಿಯೋ ನೋಡಿ
ಚಿಕ್ಕಪ್ಪನ ಜೊತೆ ನಟನೆ, ನಟ ನಿರಂಜನ್ ಹೇಳಿದ್ದೇನು? ವಿಡಿಯೋ ನೋಡಿ
ದರ್ಶನ್ ಅಭಿಮಾನಿಗಳಿಗೆ ನಗುತ್ತಲೇ ಬುದ್ಧಿವಾದ ಹೇಳಿದ ವಿಜಯಲಕ್ಷ್ಮಿ ದರ್ಶನ್
ದರ್ಶನ್ ಅಭಿಮಾನಿಗಳಿಗೆ ನಗುತ್ತಲೇ ಬುದ್ಧಿವಾದ ಹೇಳಿದ ವಿಜಯಲಕ್ಷ್ಮಿ ದರ್ಶನ್