AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

2 ಪಂದ್ಯದಲ್ಲೂ ನಾವೇ ಗೆಲ್ತೀವಿ: ಟೀಮ್ ಇಂಡಿಯಾಗೆ ಹ್ಯಾರಿಸ್ ರೌಫ್ ಎಚ್ಚರಿಕೆ

Asia Cup 2025: ಯುಎಇನಲ್ಲಿ ನಡೆಯಲಿರುವ ಈ ಬಾರಿಯ ಏಷ್ಯಾಕಪ್​ನಲ್ಲಿ ಒಟ್ಟು 8 ತಂಡಗಳು ಕಣಕ್ಕಿಳಿಯಲಿವೆ. ಈ ತಂಡಗಳಲ್ಲಿ ಭಾರತ, ಪಾಕಿಸ್ತಾನ್, ಒಮಾನ್ ಮತ್ತು ಯುಎಇ ಗ್ರೂಪ್ ಎ ನಲ್ಲಿದ್ದರೆ, ಬಾಂಗ್ಲಾದೇಶ್, ಅಫ್ಘಾನಿಸ್ತಾನ್, ಹಾಂಗ್​ ಕಾಂಗ್ ಹಾಗೂ ಶ್ರೀಲಂಕಾ ಬಿ ಗ್ರೂಪ್​ನಲ್ಲಿದೆ. ಹೀಗಾಗಿ ಮೊದಲ ಸುತ್ತಿನಲ್ಲೇ ಭಾರತ ಮತ್ತು ಪಾಕಿಸ್ತಾನ್ ತಂಡಗಳ ಮುಖಾಮುಖಿಯನ್ನು ಎದುರು ನೋಡಬಹುದು.

2 ಪಂದ್ಯದಲ್ಲೂ ನಾವೇ ಗೆಲ್ತೀವಿ: ಟೀಮ್ ಇಂಡಿಯಾಗೆ ಹ್ಯಾರಿಸ್ ರೌಫ್ ಎಚ್ಚರಿಕೆ
Haris Rauf
ಝಾಹಿರ್ ಯೂಸುಫ್
|

Updated on:Aug 25, 2025 | 11:54 AM

Share

ಬಹುನಿರೀಕ್ಷಿತ ಏಷ್ಯಾಕಪ್ ಟಿ20 ಟೂರ್ನಿಗೆ ದಿನಗಣನೆ ಶುರುವಾಗಿದೆ. ಸೆಪ್ಟೆಂಬರ್ 9 ರಿಂದ ಆರಂಭವಾಗಲಿರುವ ಈ ಟೂರ್ನಿಯ 6ನೇ ಪಂದ್ಯದಲ್ಲಿ ಸಾಂಪ್ರದಾಯಿಕ ಎದುರಾಳಿಗಳಾದ ಭಾರತ ಮತ್ತು ಪಾಕಿಸ್ತಾನ್ ತಂಡಗಳು ಮುಖಾಮುಖಿಯಾಗಲಿದೆ. ದುಬೈನ ಇಂಟರ್​ನ್ಯಾಷನಲ್ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆಯಲಿರುವ ಈ ಪಂದ್ಯಗಳಲ್ಲಿ ನಾವೇ ಗೆಲ್ಲುತ್ತೇವೆ ಎಂದು ಪಾಕಿಸ್ತಾನ್ ತಂಡದ ವೇಗಿ ಹ್ಯಾರಿಸ್ ರೌಫ್ ಹೇಳಿದ್ದಾರೆ.

ಹ್ಯಾರಿಸ್ ರೌಫ್ ಅಭ್ಯಾಸ ಮಾಡುತ್ತಿದ್ದ ವೇಳೆ ಅಭಿಮಾನಿಯೊಬ್ಬರು ಏಷ್ಯಾಕಪ್ ಹಾಗೂ ಭಾರತದ ಬಗ್ಗೆ ಪ್ರಶ್ನಿಸಿದ್ದಾರೆ. ಇದಕ್ಕೆ ಉತ್ತರಿಸಿದ ರೌಫ್, ಇನ್​​ಷಾ ಅಲ್ಲಾಹ್, ಈ ಸಲ ಎರಡೂ ಮ್ಯಾಚ್​ಗಳಲ್ಲೂ ನಾವೇ ಗೆಲ್ತೀವಿ ಎಂದಿದ್ದಾರೆ.

ಈ ಬಾರಿಯ ಏಷ್ಯಾಕಪ್​ನಲ್ಲಿ ಭಾರತ ಮತ್ತು ಪಾಕಿಸ್ತಾನ್ ತಂಡಗಳು ಒಂದೇ ಗುಂಪಿನಲ್ಲಿದೆ. ಅದರಂತೆ ಮೊದಲ ಸುತ್ತಿನಲ್ಲಿ ನಡೆಯಲಿರುವ ಪಂದ್ಯದಲ್ಲಿ ಉಭಯ ತಂಡಗಳು ಒಂದು ಬಾರಿ ಮುಖಾಮುಖಿಯಾಗಲಿದೆ. ಈ ಪಂದ್ಯವು ಸೆಪ್ಟೆಂಬರ್ 14 ರಂದು ದುಬೈನಲ್ಲಿ ನಡೆಯಲಿದೆ.

ಇನ್ನು ಉಭಯ ತಂಡಗಳು ಮೊದಲ ಸುತ್ತಿನ ಅಂಕ ಪಟ್ಟಿಯಲ್ಲಿ ಮೊದಲೆರಡು ಸ್ಥಾನಗಳನ್ನು ಅಲಂಕರಿಸಿದರೆ ಸೂಪರ್-4 ಹಂತಕ್ಕೇರಲಿದೆ. ಈ ಸುತ್ತಿನಲ್ಲೂ ಭಾರತ ಮತ್ತು ಪಾಕಿಸ್ತಾನ್ ತಂಡಗಳ ಮುಖಾಮುಖಿಯನ್ನು ಎದುರು ನೋಡಬಹುದು. ಇದನ್ನೇ ಪ್ರಸ್ತಾಪಿಸಿ ಹ್ಯಾರಿಸ್ ರೌಫ್ ಈ ಬಾರಿ ನಾವು ಟೀಮ್ ಇಂಡಿಯಾ ವಿರುದ್ಧ ಎರಡೂ ಮ್ಯಾಚ್​ಗಳಲ್ಲೂ ಗೆಲ್ಲಲಿದ್ದೇವೆ ಎಂದು ತಿಳಿಸಿದ್ದಾರೆ.

ಇದೀಗ ಟೀಮ್ ಇಂಡಿಯಾಗೆ ಹ್ಯಾರಿಸ್ ರೌಫ್ ನೀಡಿರುವ ಪರೋಕ್ಷ ಎಚ್ಚರಿಕೆಯ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದ್ದು, ಕ್ರಿಕೆಟ್​ ಪ್ರೇಮಿಗಳು ಉಭಯ ತಂಡಗಳ ಮುಖಾಮುಖಿಯನ್ನು ಎದುರು ನೋಡಲು ಕಾತುರದಿಂದ ಕಾಯುತ್ತಿದ್ದಾರೆ. ಇನ್ನು ಈ ಕಾತುರತೆಯನ್ನು ಹೆಚ್ಚಿಸುವಂತೆ ಇದೀಗ ಏಷ್ಯಾಕಪ್​ಗೆ ಭಾರತ ಮತ್ತು ಪಾಕಿಸ್ತಾನ್ ತಂಡಗಳ ಘೋಷಣೆಯಾಗಿದೆ. ಅದರಂತೆ ಈ ಬಾರಿ ಕಣಕ್ಕಿಳಿಯಲಿರುವ ಆಟಗಾರರ ಪಟ್ಟಿ ಈ ಕೆಳಗಿನಂತಿದೆ…

ಭಾರತ ತಂಡ: ಸಂಜು ಸ್ಯಾಮ್ಸನ್ (ವಿಕೆಟ್ ಕೀಪರ್), ಅಭಿಷೇಕ್ ಶರ್ಮಾ, ತಿಲಕ್ ವರ್ಮಾ, ಸೂರ್ಯಕುಮಾರ್ ಯಾದವ್ (ನಾಯಕ), ಶುಭ್​ಮನ್ ಗಿಲ್ (ಉಪನಾಯಕ),  ಹಾರ್ದಿಕ್ ಪಾಂಡ್ಯ, ಶಿವಂ ದುಬೆ, ಅಕ್ಷರ್ ಪಟೇಲ್, ಜಸ್ಪ್ರೀತ್ ಬುಮ್ರಾ, ಅರ್ಷದೀಪ್ ಸಿಂಗ್, ವರುಣ್ ಚಕ್ರವರ್ತಿ, ಜಿತೇಶ್ ಶರ್ಮಾ (ವಿಕೆಟ್ ಕೀಪರ್), ಕುಲ್ದೀಪ್ ಯಾದವ್, ಹರ್ಷಿತ್ ರಾಣಾ, ರಿಂಕು ಸಿಂಗ್.

ಇದನ್ನೂ ಓದಿ: ಯಾರಿಂದಲೂ ಸಾಧ್ಯವಾಗದ ಹೊಸ ವಿಶ್ವ ದಾಖಲೆ ಬರೆದ  ಶಾಕಿಬ್ ಅಲ್ ಹಸನ್..!

ಪಾಕಿಸ್ತಾನ್ ತಂಡ: ಸಲ್ಮಾನ್ ಅಲಿ ಅಘಾ (ನಾಯಕ), ಅಬ್ರಾರ್ ಅಹ್ಮದ್, ಫಹೀಮ್ ಅಶ್ರಫ್, ಫಖರ್ ಝಮಾನ್, ಹ್ಯಾರಿಸ್ ರೌಫ್, ಹಸನ್ ಅಲಿ, ಹಸನ್ ನವಾಝ್, ಹುಸೇನ್ ತಲತ್, ಖುಷ್ದಿಲ್ ಶಾ, ಮೊಹಮ್ಮದ್ ಹ್ಯಾರಿಸ್ (ವಿಕೆಟ್ ಕೀಪರ್), ಮೊಹಮ್ಮದ್ ನವಾಜ್, ಮೊಹಮ್ಮದ್ ವಾಸಿಂ ಜೂನಿಯರ್, ಸಾಹಿಬ್​ಝಾದ್ ಫರ್ಹಾನ್, ಶಾಹೀನ್ ಅಫ್ರಿದಿ, ಸಲ್ಮಾನ್ ಮಿರ್ಝಾ, ಸೈಮ್ ಅಯ್ಯೂಬ್ ಮತ್ತು ಸುಫಿಯಾನ್ ಮುಖಿಮ್.

Published On - 11:54 am, Mon, 25 August 25

Follow Us
Zahir Yusuf
Zahir Yusuf

ಟಿವಿ9 ಡಿಜಿಟಲ್ ಮುಖ್ಯ ಉಪ ಸಂಪಾದಕ. 10 ವರ್ಷಗಳಿಂದ ಕನ್ನಡ ಡಿಜಿಟಲ್​ ಮಾಧ್ಯಮದಲ್ಲಿ ಪತ್ರಿಕಾ ವೃತ್ತಿ. ಕ್ರೀಡಾ ಸುದ್ದಿ, ದೀರ್ಘ ಲೇಖನ, ವಿಶ್ಲೇಷಣೆ, ಹೀಗೆ ಎಲ್ಲ ತರಹದ ಬರಹದಲ್ಲೂ ಅನುಭವ. ಪ್ರಸ್ತುತ ವಿದ್ಯಮಾನಗಳ ವ್ಯಾಖ್ಯಾನ, ಚರ್ಚೆಯಲ್ಲಿ ನೈಪುಣ್ಯ. ಈ ಹಿಂದೆ ಉದಯವಾಣಿ, ನ್ಯೂಸ್ 18 ಕನ್ನಡ ಡಿಜಿಟಲ್​​ನಲ್ಲಿ ಕೆಲಸ ಮಾಡಿದ ಅನುಭವ. ಆಸಕ್ತಿದಾಯಕ ವಿಷಯ ಕ್ರೀಡೆ, ಸಿನಿಮಾ ಮತ್ತು ರಾಜಕೀಯ.

Read More
ಬಿಡದಿ ಟೌನ್‌ಶಿಪ್‌ ವಿವಾದ: ಕಾನೂನಾತ್ಮಕ ಹೋರಾಟ ಮಾಡ್ತೇವೆ; ಕುಮಾರಸ್ವಾಮಿ
ಬಿಡದಿ ಟೌನ್‌ಶಿಪ್‌ ವಿವಾದ: ಕಾನೂನಾತ್ಮಕ ಹೋರಾಟ ಮಾಡ್ತೇವೆ; ಕುಮಾರಸ್ವಾಮಿ
ಅತಾವುಲ್ಲಾ ಹತ್ಯೆ ಪ್ರಕರಣದ ಬಗ್ಗೆ ಸ್ಫೋಟಕ ಹೇಳಿಕೆ ನೀಡಿದ ಪೊಲೀಸರು
ಅತಾವುಲ್ಲಾ ಹತ್ಯೆ ಪ್ರಕರಣದ ಬಗ್ಗೆ ಸ್ಫೋಟಕ ಹೇಳಿಕೆ ನೀಡಿದ ಪೊಲೀಸರು
9 ಗಂಟೆ ಕಾರ್ಯಾಚರಣೆ ಬಳಿಕ ಬೋರ್​​ವೆಲ್​ನಿಂದ 4 ವರ್ಷದ ಬಾಲಕನ ರಕ್ಷಣೆ!
9 ಗಂಟೆ ಕಾರ್ಯಾಚರಣೆ ಬಳಿಕ ಬೋರ್​​ವೆಲ್​ನಿಂದ 4 ವರ್ಷದ ಬಾಲಕನ ರಕ್ಷಣೆ!
ಬಿಸಿಸಿಐನ ರೋಬೋ ಶ್ವಾನ ಚಂಪಕ್ ಮೇಲೆ ಕೊಹ್ಲಿ ಅಸಮಾಧಾನ
ಬಿಸಿಸಿಐನ ರೋಬೋ ಶ್ವಾನ ಚಂಪಕ್ ಮೇಲೆ ಕೊಹ್ಲಿ ಅಸಮಾಧಾನ
ಲಕ್ಕುಂಡಿಯಲ್ಲಿ ಪತ್ತೆಯಾಗಿದ್ದ ನಿಧಿ ಮೌಲ್ಯ 8 ಕೋಟಿ ರೂ
ಲಕ್ಕುಂಡಿಯಲ್ಲಿ ಪತ್ತೆಯಾಗಿದ್ದ ನಿಧಿ ಮೌಲ್ಯ 8 ಕೋಟಿ ರೂ
ತಮಿಳು ನಟ ಜಯಂ ರವಿ ಕಣ್ಣೀರು, ಆಕ್ರೋಶ: ಆಗಿದ್ದೇನು? ವಿಡಿಯೋ ನೋಡಿ
ತಮಿಳು ನಟ ಜಯಂ ರವಿ ಕಣ್ಣೀರು, ಆಕ್ರೋಶ: ಆಗಿದ್ದೇನು? ವಿಡಿಯೋ ನೋಡಿ
ಝಲ್ಮುರಿ ಇಲ್ಲಿಗೂ ತಲುಪಿತೇ? ಮೋದಿ ಪ್ರಶ್ನೆಗೆ ಭಾರತೀಯ ವಲಸಿಗರ ಕರತಾಡನ
ಝಲ್ಮುರಿ ಇಲ್ಲಿಗೂ ತಲುಪಿತೇ? ಮೋದಿ ಪ್ರಶ್ನೆಗೆ ಭಾರತೀಯ ವಲಸಿಗರ ಕರತಾಡನ
ಹಾವೇರಿ: ಸಿನಿಮೀಯ ಶೈಲಿಯಲ್ಲಿ ಕಳ್ಳತನ; ಲಕ್ಷಾಂತರ ಮೌಲ್ಯದ ಚಿನ್ನಾಭರಣ ಲೂಟಿ
ಹಾವೇರಿ: ಸಿನಿಮೀಯ ಶೈಲಿಯಲ್ಲಿ ಕಳ್ಳತನ; ಲಕ್ಷಾಂತರ ಮೌಲ್ಯದ ಚಿನ್ನಾಭರಣ ಲೂಟಿ
ಪ್ರಧಾನಿ ಮೋದಿಗೆ ಹೇಗ್‌ನಲ್ಲಿ ಯುವ ಕಲಾವಿದರಿಂದ ಸಂಗೀತ, ನೃತ್ಯದ ಸ್ವಾಗತ
ಪ್ರಧಾನಿ ಮೋದಿಗೆ ಹೇಗ್‌ನಲ್ಲಿ ಯುವ ಕಲಾವಿದರಿಂದ ಸಂಗೀತ, ನೃತ್ಯದ ಸ್ವಾಗತ
ಭೀಕರ ಅಪಘಾತ; ಫುಟ್‌ಪಾತ್‌ಗೆ ನುಗ್ಗಿದ ಕಾರು, ಮಗು ಸೇರಿ ಮೂವರಿಗೆ ಗಂಭೀರ ಗಾಯ
ಭೀಕರ ಅಪಘಾತ; ಫುಟ್‌ಪಾತ್‌ಗೆ ನುಗ್ಗಿದ ಕಾರು, ಮಗು ಸೇರಿ ಮೂವರಿಗೆ ಗಂಭೀರ ಗಾಯ