AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Asia Cup 2025: ಏಷ್ಯಾಕಪ್ ಆರಂಭಕ್ಕೂ ಮುನ್ನವೇ ಭಾರತ- ಪಾಕ್ ನಾಯಕರ ನಡುವೆ ಶೀತಲ ಸಮರ

India vs Pakistan Asia Cup 2025: ಏಷ್ಯಾ ಕಪ್ 2025ರ ಪಂದ್ಯಾವಳಿ ಆರಂಭಕ್ಕೂ ಮೊದಲು ನಡೆದ ಪತ್ರಿಕಾಗೋಷ್ಠಿಯಲ್ಲಿ ಭಾರತದ ನಾಯಕ ಸೂರ್ಯಕುಮಾರ್ ಯಾದವ್ ಮತ್ತು ಪಾಕಿಸ್ತಾನದ ನಾಯಕ ಸಲ್ಮಾನ್ ಅಲಿ ಅಘಾ ಅವರ ನಡುವೆ ಯಾವುದೇ ಸಂವಾದ ಅಥವಾ ಕೈಕುಲುಕುವಿಕೆ ಇರಲಿಲ್ಲ. ಇದು ಭಾರತ-ಪಾಕಿಸ್ತಾನ ಕ್ರಿಕೆಟ್ ಸ್ಪರ್ಧೆಯನ್ನು ಇನ್ನಷ್ಟು ರೋಚಕಗೊಳಿಸಿದೆ.

Asia Cup 2025: ಏಷ್ಯಾಕಪ್ ಆರಂಭಕ್ಕೂ ಮುನ್ನವೇ ಭಾರತ- ಪಾಕ್ ನಾಯಕರ ನಡುವೆ ಶೀತಲ ಸಮರ
Ind Vs Pak
ಪೃಥ್ವಿಶಂಕರ
|

Updated on:Sep 09, 2025 | 5:26 PM

Share

ಬಹುನಿರೀಕ್ಷಿತ ಏಷ್ಯಾಕಪ್ (Asia Cup 2025) ಇಂದಿನಿಂದ ಆರಂಭವಾಗುತ್ತಿದೆ. ಅಫ್ಘಾನಿಸ್ತಾನ ಮತ್ತು ಹಾಂಗ್ ಕಾಂಗ್ ನಡುವಿನ ಪಂದ್ಯದೊಂದಿಗೆ ಪ್ರಾರಂಭವಾಗುತ್ತಿದ್ದು, ಭಾರತ ಸೆಪ್ಟೆಂಬರ್ 10 ರಂದು ಯುಎಇ ವಿರುದ್ಧ ತನ್ನ ಮೊದಲ ಪಂದ್ಯವನ್ನು ಆಡಲಿದೆ. ಆ ಬಳಿಕ ಪಂದ್ಯಾವಳಿಯ ಬಹುನಿರೀಕ್ಷಿತ ಪಂದ್ಯ ಭಾರತ ಹಾಗೂ ಪಾಕಿಸ್ತಾನದ (India vs Pakistan) ನಡುವೆ ಸೆಪ್ಟೆಂಬರ್ 14 ರಂದು ನಡೆಯಲಿದೆ. ಆದರೆ ಪಂದ್ಯಾವಳಿ ಪ್ರಾರಂಭವಾಗುವ ಮೊದಲು ಎಲ್ಲಾ ತಂಡಗಳ ನಾಯಕರೊಂದಿಗೆ ಇಂದು ಪತ್ರಿಕಾಗೋಷ್ಠಿಯನ್ನು ನಡೆಸಲಾಯಿತು. ಇದರಲ್ಲಿ ಭಾರತ ತಂಡದ ನಾಯಕ ಸೂರ್ಯಕುಮಾರ್ ಯಾದವ್ ಹಾಗೂ ಪಾಕಿಸ್ತಾನ ತಂಡದ ನಾಯಕ ಸಲ್ಮಾನ್ ಅಲಿ ಅಘಾ ಕೂಡ ಭಾಗವಹಿಸಿದ್ದರು. ಆದರೆ ಈ ಪತ್ರಿಕಾಗೋಷ್ಠಿಯಲ್ಲಿಯೂ ಉಭಯ ನಾಯಕರು ಯಾವುದೇ ಮಾತುಕತೆಯನ್ನಾಡಿಲ್ಲ, ಹಾಗೆಯೇ ಕೈ ಕೂಡ ಕುಲುಕದೆ ಅಂತರ ಕಾಯ್ದುಕೊಂಡಿದ್ದಾರೆ.

ಪಾಕ್ ನಾಯಕನನ್ನು ಕಡೆಗಣಿಸಿದ ಸೂರ್ಯ

ವಾಸ್ತವವಾಗಿ ಕೆಲವು ದಿನಗಳ ಹಿಂದೆ ಭಾರತ ಹಾಗೂ ಪಾಕಿಸ್ತಾನ ತಂಡದ ಆಟಗಾರರು ಒಂದೇ ಮೈದಾನದಲ್ಲಿ ಅಭ್ಯಾಸ ನಡೆಸಿದರೂ ಒಬ್ಬರಿಗೊಬ್ಬರು ಮಾತನಾಡುವುದಾಗಲಿ ಅಥವಾ ಕಡೆ ಪಕ್ಷ ಕೈಕುಲುಕುವುದಾಗಲಿ ಮಾಡಿಲಿಲ್ಲ ಎಂದು ವರದಿಯಾಗಿತ್ತು. ಇದೀಗ ಅದಕ್ಕೆ ಪೂರಕವೆಂಬಂತೆ ಇಂದು ನಡೆದ ಪತ್ರಿಕಾಗೋಷ್ಠಿಯಲ್ಲೂ ಉಭಯ ತಂಡಗಳ ನಾಯಕರು ಅಂತರವನ್ನು ಕಾಯ್ದುಕೊಂಡಿದ್ದಾರೆ.

ಮೇಲೆ ಹೇಳಿದಂತೆ ಪಂದ್ಯಾವಳಿಯ ಉದ್ಘಾಟನೆಗೂ ಮುನ್ನ ನಡೆದ ಪತ್ರಿಕಾಗೋಷ್ಠಿಯಲ್ಲಿ ಸೂರ್ಯಕುಮಾರ್ ಯಾದವ್ ಮತ್ತು ಪಾಕಿಸ್ತಾನ ನಾಯಕ ಸಲ್ಮಾನ್ ಅಲಿ ಆಘಾ ನಡುವೆ ಯಾವುದೇ ಔಪಚಾರಿಕ ಶುಭಾಶಯ ಕೋರಿಕೆ ಇರಲಿಲ್ಲ, ಇದು ಕ್ರಿಕೆಟ್ ಅಭಿಮಾನಿಗಳ ಗಮನ ಸೆಳೆಯಿತು. ವಾಸ್ತವವಾಗಿ, ಎಲ್ಲಾ ತಂಡಗಳ ನಾಯಕರು ಪತ್ರಿಕಾಗೋಷ್ಠಿಯಲ್ಲಿ ಭಾಗವಹಿಸಿದ್ದರು, ಆದರೆ ಸೂರ್ಯಕುಮಾರ್ ಮತ್ತು ಸಲ್ಮಾನ್ ಪರಸ್ಪರ ಅಂತರ ಕಾಯ್ದುಕೊಂಡರು.

ಮೊಹ್ಸಿನ್ ನಖ್ವಿ ಜೊತೆ ಸೂರ್ಯ  ಹಸ್ತಲಾಘವ

ಪತ್ರಿಕಾಗೋಷ್ಠಿಯ ನಂತರ, ಸೂರ್ಯಕುಮಾರ್ ಅಫ್ಘಾನಿಸ್ತಾನ ನಾಯಕ ರಶೀದ್ ಖಾನ್ ಮತ್ತು ಇತರ ಕೆಲವು ನಾಯಕರೊಂದಿಗೆ ಮಾತುಕತೆ ನಡೆಸಿದರು, ಆದರೆ ಸಲ್ಮಾನ್ ಅವರೊಂದಿಗೆ ಯಾವುದೇ ಸಂಭಾಷಣೆ ಅಥವಾ ಹಸ್ತಲಾಘವ ಮಾಡಲಿಲ್ಲ. ಮತ್ತೊಂದೆಡೆ, ಸೂರ್ಯಕುಮಾರ್ ಔಪಚಾರಿಕವಾಗಿ ಏಷ್ಯನ್ ಕ್ರಿಕೆಟ್ ಕೌನ್ಸಿಲ್ ಅಧ್ಯಕ್ಷ ಮತ್ತು ಪಾಕಿಸ್ತಾನ ಕ್ರಿಕೆಟ್ ಮಂಡಳಿಯ ಮುಖ್ಯಸ್ಥ ಮೊಹ್ಸಿನ್ ನಖ್ವಿ ಅವರೊಂದಿಗೆ ಹಸ್ತಲಾಘವ ಮಾಡಿದರು. ಟೂರ್ನಿ ಆರಂಭಕ್ಕೂ ಮುನ್ನವೇ ಉಭಯ ತಂಡಗಳ ಈ ನಡೆ ಟೂರ್ನಿಗೆ ಇನ್ನಷ್ಟು ರಂಗು ತಂದಿದೆ. ಪಂದ್ಯದ ದಿನ ಈ ಎರಡೂ ತಂಡಗಳ ನಡುವೆ ಯಾವ ರೀತಿಯ ಜಿದ್ದಾಜಿದ್ದಿನ ಹೋರಾಟವಿರುತ್ತದೆ ಎಂಬುದನ್ನು ನೋಡಲು ಅಭಿಮಾನಿಗಳು ಕಾತುರರಾಗಿದ್ದಾರೆ.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 5:23 pm, Tue, 9 September 25

ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!