AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Asia Cup 2025: ಏಷ್ಯಾಕಪ್​ನಲ್ಲಿ ಭಾರತದ ಮುಂದಿನ ಪಂದ್ಯ ಯಾವಾಗ, ಯಾರ ವಿರುದ್ಧ, ಎಲ್ಲಿ?

IND vs Oman live Streaming: ಭಾರತ ಮತ್ತು ಓಮನ್ ನಡುವಿನ ಈ ಪಂದ್ಯವು ಸೆಪ್ಟೆಂಬರ್ 19 ರಂದು ನಡೆಯಲಿದೆ. ಪಂದ್ಯವು ಭಾರತೀಯ ಕಾಲಮಾನ ರಾತ್ರಿ 8:00 ಗಂಟೆಗೆ ಆರಂಭವಾಗಲಿದೆ. ಪಂದ್ಯ ಪ್ರಾರಂಭವಾಗುವ ಅರ್ಧ ಗಂಟೆ ಮೊದಲು ಅಂದರೆ ಸಂಜೆ 7:30 ಕ್ಕೆ ಟಾಸ್ ನಡೆಯಲಿದೆ. ಈ ಪಂದ್ಯವು ಅಬುದಾಬಿಯ ಶೇಖ್ ಝಯೇದ್ ಕ್ರಿಕೆಟ್ ಕ್ರೀಡಾಂಗಣದಲ್ಲಿ ಆಯೋಜಿಸಲಾಗಿದೆ.

Asia Cup 2025: ಏಷ್ಯಾಕಪ್​ನಲ್ಲಿ ಭಾರತದ ಮುಂದಿನ ಪಂದ್ಯ ಯಾವಾಗ, ಯಾರ ವಿರುದ್ಧ, ಎಲ್ಲಿ?
Oman Vs India
ಪ್ರೀತಿ ಭಟ್​, ಗುಣವಂತೆ
| Edited By: |

Updated on:Sep 16, 2025 | 9:41 AM

Share

ಬೆಂಗಳೂರು (ಸೆ. 16): 2025 ರ ಏಷ್ಯಾಕಪ್‌ನಲ್ಲಿ ಭಾರತ ತಂಡ (Indian Cricket Team) ಅಮೋಘ ಪ್ರದರ್ಶನ ನೀಡಿ ಅಗ್ರಸ್ಥಾನದಲ್ಲಿದೆ. ಲೀಗ್ ಹಂತದಲ್ಲಿ ತನ್ನ ಎರಡೂ ಪಂದ್ಯಗಳನ್ನು ಗೆಲ್ಲುವ ಮೂಲಕ ಟೀಮ್ ಇಂಡಿಯಾ ಸೂಪರ್ -4 ರಲ್ಲಿ ಸ್ಥಾನ ಪಡೆದುಕೊಂಡಿದೆ. ಭಾರತ ತಂಡವು ತನ್ನ ಮೊದಲ ಪಂದ್ಯದಲ್ಲಿ ಯುಎಇಯನ್ನು 9 ವಿಕೆಟ್‌ಗಳಿಂದ ಸೋಲಿಸಿತು. ಬಳಿಕ ತನ್ನ ಎರಡನೇ ಪಂದ್ಯದಲ್ಲಿ ಪಾಕಿಸ್ತಾನವನ್ನು 7 ವಿಕೆಟ್‌ಗಳಿಂದ ಸೋಲಿಸಿತು. ಇದೀಗ ಗುಂಪು ಹಂತದ ಕೊನೆಯ ಪಂದ್ಯಕ್ಕೆ ಸೂರ್ಯಕುಮಾರ್ ಪಡೆ ಸಜ್ಜಾಗುತ್ತಿದೆ.

ಪಂದ್ಯ ಯಾವಾಗ ಮತ್ತು ಯಾವ ಸಮಯದಲ್ಲಿ?

ಭಾರತ ತನ್ನ ಮುಂದಿನ ಪಂದ್ಯವನ್ನು ಓಮನ್ ವಿರುದ್ಧ ಆಡಲಿದೆ. ಟೀಮ್ ಇಂಡಿಯಾದ ದೀರ್ಘ ವಿರಾಮದ ಬಳಿಕ ಈ ಪಂದ್ಯವು ಸೆಪ್ಟೆಂಬರ್ 19 ಶುಕ್ರವಾರದಂದು ನಡೆಯಲಿದೆ. ಪಂದ್ಯವು ಭಾರತೀಯ ಕಾಲಮಾನ ರಾತ್ರಿ 8:00 ಗಂಟೆಗೆ ಆರಂಭವಾಗಲಿದೆ. ಪಂದ್ಯ ಪ್ರಾರಂಭವಾಗುವ ಅರ್ಧ ಗಂಟೆ ಮೊದಲು ಅಂದರೆ ಸಂಜೆ 7:30 ಕ್ಕೆ ಟಾಸ್ ನಡೆಯಲಿದೆ. ಈ ಪಂದ್ಯವು ಅಬುದಾಬಿಯ ಶೇಖ್ ಝಯೇದ್ ಕ್ರಿಕೆಟ್ ಕ್ರೀಡಾಂಗಣದಲ್ಲಿ ನಡೆಯಲಿದ್ದು, ಅಲ್ಲಿ ಅಪಾರ ಪ್ರೇಕ್ಷಕರು ಸೇರುವ ನಿರೀಕ್ಷೆಯಿದೆ.

ಇದನ್ನೂ ಓದಿ
Image
ಏಷ್ಯಾಕಪ್​ನಲ್ಲಿ ದಿಢೀರ್ ಸೂಪರ್-4 ಗೆ ಅರ್ಹತೆ ಪಡೆದ ಟೀಮ್ ಇಂಡಿಯಾ
Image
PAK ಯುಎಇ ವಿರುದ್ಧ ಆಡದಿದ್ದರೆ ಏನಾಗುತ್ತದೆ?: ಯಾವ ತಂಡ ಸೂಪರ್ -4ಗೆ?
Image
ಏಷ್ಯಾಕಪ್ 2025: ಪಾಕ್ ತಂಡಕ್ಕೆ ಸಂಕಷ್ಟ ತಂದ ಯುಎಇ ಗೆಲುವು
Image
ಭಾರತ ಪಾಕಿಸ್ತಾನದ ವಿರುದ್ಧ ಆಡಿದ್ದೇಕೆ? ಕಾರಣ ತಿಳಿಸಿದ ಸಚಿವ ಕಿರಣ್ ರಿಜಿಜು

ಪಂದ್ಯದ ನೇರಪ್ರಸಾರವನ್ನು ನೀವು ಎಲ್ಲಿ ವೀಕ್ಷಿಸಬಹುದು?

ಭಾರತ vs ಓಮನ್ ಪಂದ್ಯವನ್ನು ಭಾರತದಲ್ಲಿ ಸೋನಿ ಸ್ಪೋರ್ಟ್ಸ್ ನೆಟ್‌ವರ್ಕ್‌ನಲ್ಲಿ ಟಿವಿಯಲ್ಲಿ ನೇರ ಪ್ರಸಾರ ಮಾಡಲಾಗುತ್ತದೆ. ಅಭಿಮಾನಿಗಳು ಹಿಂದಿ ಮತ್ತು ಇಂಗ್ಲಿಷ್ ಎರಡೂ ಭಾಷೆಗಳಲ್ಲಿ ಕಾಮೆಂಟರಿಯನ್ನು ಆನಂದಿಸಬಹುದು. ವೀರೇಂದ್ರ ಸೆಹ್ವಾಗ್, ಇರ್ಫಾನ್ ಪಠಾಣ್, ಅಜಯ್ ಜಡೇಜಾ, ವಿವೇಕ್ ರಜ್ದಾನ್, ಅಭಿಷೇಕ್ ನಾಯರ್, ಸಬಾ ಕರೀಮ್, ಗೌರವ್ ಕಪೂರ್, ಆತಿಶ್ ತುಕ್ರಾಲ್ ಮತ್ತು ಸಮೀರ್ ಕೊಚಾರ್ ಹಿಂದಿ ಕಾಮೆಂಟರಿ ಪ್ಯಾನೆಲ್‌ನ ಭಾಗವಾಗಿದ್ದಾರೆ.

Asia Cup Seuper-4: ಏಷ್ಯಾಕಪ್​ನಲ್ಲಿ ದಿಢೀರ್ ಸೂಪರ್-4 ಗೆ ಅರ್ಹತೆ ಪಡೆದ ಟೀಮ್ ಇಂಡಿಯಾ

ಆನ್‌ಲೈನ್ ಲೈವ್ ಸ್ಟ್ರೀಮಿಂಗ್

ಕ್ರಿಕೆಟ್ ಅಭಿಮಾನಿಗಳು ಸೋನಿ ಲಿವ್ ಅಪ್ಲಿಕೇಶನ್ ಮತ್ತು ವೆಬ್‌ಸೈಟ್‌ನಲ್ಲಿ ಲೈವ್ ಸ್ಟ್ರೀಮಿಂಗ್ ಅನ್ನು ಆನಂದಿಸಬಹುದು.

ಎರಡೂ ತಂಡಗಳು:

ಭಾರತ ತಂಡ: ಸೂರ್ಯಕುಮಾರ್ ಯಾದವ್ (ನಾಯಕ), ಶುಭ್​ಮನ್ ಗಿಲ್ (ಉಪನಾಯಕ), ಸಂಜು ಸ್ಯಾಮ್ಸನ್, ಅಭಿಷೇಕ್ ಶರ್ಮಾ, ತಿಲಕ್ ವರ್ಮಾ, ರಿಂಕು ಸಿಂಗ್, ಹಾರ್ದಿಕ್ ಪಾಂಡ್ಯ, ಶಿವಂ ದುಬೆ, ಕುಲದೀಪ್ ಯಾದವ್, ಅಕ್ಷರ್ ಪಟೇಲ್, ಜಿತೇಶ್ ಶರ್ಮಾ, ಹರ್ಷಿತ್ ಸಿಂಗ್, ಜರುನ್.

ಮೀಸಲು ಆಟಗಾರರು: ಪ್ರಸಿದ್ಧ್ ಕೃಷ್ಣ, ವಾಷಿಂಗ್ಟನ್ ಸುಂದರ್, ರಿಯಾನ್ ಪರಾಗ್, ಧ್ರುವ್ ಜುರೆಲ್ ಮತ್ತು ಯಶಸ್ವಿ ಜೈಸ್ವಾಲ್.

ಓಮನ್ ತಂಡ: ಜತೀಂದರ್ ಸಿಂಗ್ (ನಾಯಕ), ಹಮ್ಮದ್ ಮಿರ್ಜಾ, ವಿನಾಯಕ್ ಶುಕ್ಲಾ, ಸುಫ್ಯಾನ್ ಯೂಸುಫ್, ಆಶಿಶ್ ಒಡೆಡೆರಾ, ಅಮೀರ್ ಕಲೀಮ್, ಮೊಹಮ್ಮದ್ ನದೀಮ್, ಸುಫ್ಯಾನ್ ಮೆಹಮೂದ್, ಆರ್ಯನ್ ಬಿಶ್ತ್, ಕರಣ್ ಸೋನಾವಾಲೆ, ಜಿಕ್ರಿಯಾ ಇಸ್ಲಾಂ, ಹಸ್ನೇನ್ ಅಲಿ, ಶಾಹಮ್ಮದ್, ಮೊಹಮ್ಮದ್, ಶಾಕೆ ಅಹ್ಮದ್, ಸಮಯ್ ಶ್ರೀವಾಸ್ತವ.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 9:41 am, Tue, 16 September 25

Follow Us
Preethi Bhat Gunavante
Preethi Bhat Gunavante

ಪ್ರೀತಿ ಭಟ್ ಗುಣವಂತೆ – ಮೂಲತಃ ಹೊನ್ನಾವರದ ಗುಣವಂತೆಯವಳು. ಪತ್ರಿಕೋದ್ಯಮ ಮತ್ತು ಸಮೂಹ ಸಂವಹನದಲ್ಲಿ (M.C.J) ಎಂ.ಎ ಮಾಡಿದ್ದು ಪತ್ರಿಕಾ ರಂಗದಲ್ಲಿ 6 ವರ್ಷಗಳ ಅನುಭವವಿದೆ. ಸುದ್ದಿ ಬಿಡುಗಡೆ ವಾರ ಪತ್ರಿಕೆಯಲ್ಲಿ, ಉದಯವಾಣಿ ದಿನ ಪತ್ರಿಕೆಯಲ್ಲಿ ಕೆಲಸ ಮಾಡಿದ್ದೇನೆ. ಅದಾದ ಬಳಿಕ 2023ರಿಂದ ಟಿವಿ9 ಕನ್ನಡದಲ್ಲಿ ಕೆಲಸ ಮಾಡುತ್ತಿದ್ದೇನೆ. ಅಧ್ಯಾತ್ಮ, ಆರೋಗ್ಯ, ಜೀವನಶೈಲಿಗೆ ಸಂಬಂಧಿಸಿದ ಲೇಖನಗಳನ್ನು ಬರೆಯುವುದರಲ್ಲಿ ಆಸಕ್ತಿ ಹೊಂದಿದ್ದು, ಓದುಗರಿಗೆ ಉತ್ತಮ ಲೇಖನಗಳನ್ನು ಒದಗಿಸುವಲ್ಲಿ ಪ್ರೀತಿಯಿಂದ, ಪ್ರಾಮಾಣಿಕವಾಗಿ ಪ್ರಯತ್ನಿಸುತ್ತಿದ್ದೇನೆ. ಬರವಣಿಗೆ ಹೊರತು ಪಡಿಸಿದರೆ ನನ್ನ ಆಸಕ್ತಿಕರ ಕ್ಷೇತ್ರ ಪ್ರವಾಸ.

Read More
ಅತಾವುಲ್ಲಾ ಹತ್ಯೆ ಪ್ರಕರಣದ ಬಗ್ಗೆ ಸ್ಫೋಟಕ ಹೇಳಿಕೆ ನೀಡಿದ ಪೊಲೀಸರು
ಅತಾವುಲ್ಲಾ ಹತ್ಯೆ ಪ್ರಕರಣದ ಬಗ್ಗೆ ಸ್ಫೋಟಕ ಹೇಳಿಕೆ ನೀಡಿದ ಪೊಲೀಸರು
9 ಗಂಟೆ ಕಾರ್ಯಾಚರಣೆ ಬಳಿಕ ಬೋರ್​​ವೆಲ್​ನಿಂದ 4 ವರ್ಷದ ಬಾಲಕನ ರಕ್ಷಣೆ!
9 ಗಂಟೆ ಕಾರ್ಯಾಚರಣೆ ಬಳಿಕ ಬೋರ್​​ವೆಲ್​ನಿಂದ 4 ವರ್ಷದ ಬಾಲಕನ ರಕ್ಷಣೆ!
ಬಿಸಿಸಿಐನ ರೋಬೋ ಶ್ವಾನ ಚಂಪಕ್ ಮೇಲೆ ಕೊಹ್ಲಿ ಅಸಮಾಧಾನ
ಬಿಸಿಸಿಐನ ರೋಬೋ ಶ್ವಾನ ಚಂಪಕ್ ಮೇಲೆ ಕೊಹ್ಲಿ ಅಸಮಾಧಾನ
ಲಕ್ಕುಂಡಿಯಲ್ಲಿ ಪತ್ತೆಯಾಗಿದ್ದ ನಿಧಿ ಮೌಲ್ಯ 8 ಕೋಟಿ ರೂ
ಲಕ್ಕುಂಡಿಯಲ್ಲಿ ಪತ್ತೆಯಾಗಿದ್ದ ನಿಧಿ ಮೌಲ್ಯ 8 ಕೋಟಿ ರೂ
ತಮಿಳು ನಟ ಜಯಂ ರವಿ ಕಣ್ಣೀರು, ಆಕ್ರೋಶ: ಆಗಿದ್ದೇನು? ವಿಡಿಯೋ ನೋಡಿ
ತಮಿಳು ನಟ ಜಯಂ ರವಿ ಕಣ್ಣೀರು, ಆಕ್ರೋಶ: ಆಗಿದ್ದೇನು? ವಿಡಿಯೋ ನೋಡಿ
ಝಲ್ಮುರಿ ಇಲ್ಲಿಗೂ ತಲುಪಿತೇ? ಮೋದಿ ಪ್ರಶ್ನೆಗೆ ಭಾರತೀಯ ವಲಸಿಗರ ಕರತಾಡನ
ಝಲ್ಮುರಿ ಇಲ್ಲಿಗೂ ತಲುಪಿತೇ? ಮೋದಿ ಪ್ರಶ್ನೆಗೆ ಭಾರತೀಯ ವಲಸಿಗರ ಕರತಾಡನ
ಹಾವೇರಿ: ಸಿನಿಮೀಯ ಶೈಲಿಯಲ್ಲಿ ಕಳ್ಳತನ; ಲಕ್ಷಾಂತರ ಮೌಲ್ಯದ ಚಿನ್ನಾಭರಣ ಲೂಟಿ
ಹಾವೇರಿ: ಸಿನಿಮೀಯ ಶೈಲಿಯಲ್ಲಿ ಕಳ್ಳತನ; ಲಕ್ಷಾಂತರ ಮೌಲ್ಯದ ಚಿನ್ನಾಭರಣ ಲೂಟಿ
ಪ್ರಧಾನಿ ಮೋದಿಗೆ ಹೇಗ್‌ನಲ್ಲಿ ಯುವ ಕಲಾವಿದರಿಂದ ಸಂಗೀತ, ನೃತ್ಯದ ಸ್ವಾಗತ
ಪ್ರಧಾನಿ ಮೋದಿಗೆ ಹೇಗ್‌ನಲ್ಲಿ ಯುವ ಕಲಾವಿದರಿಂದ ಸಂಗೀತ, ನೃತ್ಯದ ಸ್ವಾಗತ
ಭೀಕರ ಅಪಘಾತ; ಫುಟ್‌ಪಾತ್‌ಗೆ ನುಗ್ಗಿದ ಕಾರು, ಮಗು ಸೇರಿ ಮೂವರಿಗೆ ಗಂಭೀರ ಗಾಯ
ಭೀಕರ ಅಪಘಾತ; ಫುಟ್‌ಪಾತ್‌ಗೆ ನುಗ್ಗಿದ ಕಾರು, ಮಗು ಸೇರಿ ಮೂವರಿಗೆ ಗಂಭೀರ ಗಾಯ
ಜೆ.ಪಿ. ಪಾರ್ಕ್ ಫ್ಲೈಓವರ್ ಕೆಳಗೆ ಕಸದ ರಾಶಿ! GBA ನಿದ್ದೆ ಜಾರಿದೆಯೇ?
ಜೆ.ಪಿ. ಪಾರ್ಕ್ ಫ್ಲೈಓವರ್ ಕೆಳಗೆ ಕಸದ ರಾಶಿ! GBA ನಿದ್ದೆ ಜಾರಿದೆಯೇ?