AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs PAK: ಫಲಿಸಿತು ಕೋಟ್ಯಾಂತರ ಭಾರತೀಯರ ಪ್ರಾರ್ಥನೆ; ಪಾಕ್ ಬಗ್ಗುಬಡಿದ ಭಾರತ

India Dominates Pakistan in Asia Cup 2025: ದುಬೈನಲ್ಲಿ ನಡೆದ ಏಷ್ಯಾ ಕಪ್ 2025 ರ ಪಂದ್ಯದಲ್ಲಿ ಭಾರತ ಪಾಕಿಸ್ತಾನವನ್ನು ಏಕಪಕ್ಷೀಯವಾಗಿ ಸೋಲಿಸಿದೆ. ಪಾಕಿಸ್ತಾನ 127 ರನ್‌ಗಳಿಗೆ ಆಲೌಟ್ ಆಗಿತು. ಭಾರತ ಸುಲಭವಾಗಿ ಗೆಲುವು ಸಾಧಿಸಿತು. ಭಾರತದ ಬೌಲರ್‌ಗಳು ಅದ್ಭುತ ಪ್ರದರ್ಶನ ನೀಡಿದರು. ಹಾರ್ದಿಕ್ ಪಾಂಡ್ಯ ಮತ್ತು ಜಸ್ಪ್ರೀತ್ ಬುಮ್ರಾ ಮೊದಲ ವಿಕೆಟ್ ಪಡೆದರು. ಕುಲ್ದೀಪ್ ಯಾದವ್ 3 ವಿಕೆಟ್ ಪಡೆದು ಮಿಂಚಿದರು. ಈ ಗೆಲುವಿನೊಂದಿಗೆ ಭಾರತ ಟೂರ್ನಿಯಲ್ಲಿ ತನ್ನ ಸ್ಥಾನವನ್ನು ಗಟ್ಟಿಗೊಳಿಸಿಕೊಂಡಿದೆ.

IND vs PAK: ಫಲಿಸಿತು ಕೋಟ್ಯಾಂತರ ಭಾರತೀಯರ ಪ್ರಾರ್ಥನೆ; ಪಾಕ್ ಬಗ್ಗುಬಡಿದ ಭಾರತ
Team India
ಪೃಥ್ವಿಶಂಕರ
|

Updated on:Sep 14, 2025 | 11:40 PM

Share

ದುಬೈ ಅಂತರರಾಷ್ಟ್ರೀಯ ಕ್ರಿಕೆಟ್ ಮೈದಾನದಲ್ಲಿ ನಡೆದ 2025 ರ ಏಷ್ಯಾಕಪ್​ನ (Asia Cup 2025) ಆರನೇ ಪಂದ್ಯದಲ್ಲಿ ಕೋಟ್ಯಾಂತರ ಭಾರತೀಯರು ಯಾವ ರೀತಿಯ ಫಲಿತಾಂಶ ಬರಬೇಕು ಎಂದು ದೇವರಲ್ಲಿ ಮೊರೆ ಇಟ್ಟಿದ್ದರೋ ಅದೇ ಫಲಿತಾಂಶ ಹೊರಬಿದ್ದಿದೆ. ಬದ್ಧವೈರಿಗಳ ಕದನದಲ್ಲಿ ಪಾಕಿಸ್ತಾನವನ್ನು ಏಕಪಕ್ಷೀಯ ರೀತಿಯಲ್ಲಿ ಸೋಲಿಸಿದ ಟೀಂ ಇಂಡಿಯಾ ಟೂರ್ನಿಯಲ್ಲಿ ಸತತ ಎರಡನೇ ಗೆಲುವು ದಾಖಲಿಸಿದೆ. ಈ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಪಾಕಿಸ್ತಾನ ತಂಡ ಭಾರತದ ಬೌಲಿಂಗ್ ಮುಂದೆ ಮಕಾಡೆ ಮಲಗಿ 127 ರನ್ ಗಳಿಸಲಷ್ಟೇ ಶಕ್ತವಾಯಿತು. ಈ ಗುರಿ ಬೆನ್ನಟ್ಟಿದ ಟೀಂ ಇಂಡಿಯಾ 15.5 ಓವರ್​​ಗಳಲ್ಲಿ 3 ವಿಕೆಟ್‌ಗಳನ್ನು ಕಳೆದುಕೊಂಡು ಜಯದ ನಗೆಬೀರಿತು.

ಪಾಕ್ ತಂಡಕ್ಕೆ ಆರಂಭಿಕ ಆಘಾತ

ಪಂದ್ಯದಲ್ಲಿ ಟಾಸ್ ಗೆದ್ದು ಬ್ಯಾಟಿಂಗ್ ಆರಂಭಿಸಿದ ಪಾಕ್ ತಂಡಕ್ಕೆ ಟೀಂ ಇಂಡಿಯಾ ವೇಗಿಗಳಾದ ಹಾರ್ದಿಕ್ ಪಾಂಡ್ಯ ಹಾಗೂ ಜಸ್ಪ್ರಿತ್ ಬುಮ್ರಾ ಎರಡು ಬ್ಯಾಕ್ ಟು ಬ್ಯಾಕ್ ಆಘಾತ ನೀಡಿದರು. ಬೌಲಿಂಗ್ ಆರಂಭಿಸಿದ ಹಾರ್ದಿಕ್ ಪಾಂಡ್ಯ ಮೊದಲ ಎಸೆತದಲ್ಲೇ ಸ್ಯಾಮ್ ಅಯೂಬ್ ಅವರನ್ನು ಶೂನ್ಯಕ್ಕೆ ಔಟ್ ಮಾಡಿದರು. ನಂತರ ಜಸ್ಪ್ರೀತ್ ಬುಮ್ರಾ ಪಂದ್ಯದ ಎರಡನೇ ಓವರ್‌ನಲ್ಲಿ ಮೊಹಮ್ಮದ್ ಹ್ಯಾರಿಸ್ ಅವರನ್ನು 3 ರನ್‌ಗಳಿಗೆ ಔಟ್ ಮಾಡಿದರು.

3 ವಿಕೆಟ್ ಪಡೆದ ಕುಲ್ದೀಪ್

ಈ ವೇಳೆ ಸಾಹಿಬ್‌ಜಾದಾ ಮತ್ತು ಫಖರ್ ಜಮಾನ್ ಮೂರನೇ ವಿಕೆಟ್‌ಗೆ 39 ರನ್‌ಗಳ ಜೊತೆಯಾಟವನ್ನಾಡಿದರು. ಈ ವೇಳೆ ದಾಳಿಗಿಳಿದ ಅಕ್ಷರ್ ಪಟೇಲ್ 17 ರನ್‌ ಬಾರಿಸಿ ಇನ್ನಿಂಗ್ಸ್ ಕಟ್ಟುತ್ತಿದ್ದ ಫಖರ್ ಅವರನ್ನು ಔಟ್ ಮಾಡುವ ಮೂಲಕ ಈ ಜೊತೆಯಾಟವನ್ನು ಮುರಿದರು. ನಂತರ 10 ನೇ ಓವರ್‌ನ ಕೊನೆಯ ಎಸೆತದಲ್ಲಿ ಅಕ್ಷರ್ ಪಟೇಲ್ ಪಾಕ್ ನಾಯಕ ಸಲ್ಮಾನ್ ಆಘಾ ಅವರನ್ನು ಕೇವಲ 3 ರನ್‌ಗಳಿಗೆ ಪೆವಿಲಿಯನ್‌ ಸೇರುವಂತೆ ಮಾಡಿದರು. 13 ನೇ ಓವರ್‌ನ ನಾಲ್ಕನೇ ಮತ್ತು ಐದನೇ ಎಸೆತಗಳಲ್ಲಿ ಕುಲ್ದೀಪ್ ಯಾದವ್ ಪಾಕಿಸ್ತಾನಕ್ಕೆ ಸತತ ಎರಡು ಹೊಡೆತಗಳನ್ನು ನೀಡಿದರು. ಮೊದಲು ಹಸನ್ ನವಾಜ್ (5) ವಿಕೆಟ್ ಪಡೆದ ಕುಲ್ದೀಪ್ ಆ ಬಳಿಕ ಮೊಹಮ್ಮದ್ ನವಾಜ್ (0) ಅವರನ್ನು ಔಟ್ ಮಾಡಿದರು.

ಸಾಹಿಬ್‌ಜಾದಾ ಏಕಾಂಗಿ ಹೋರಾಟ

17 ನೇ ಓವರ್‌ನ ಮೊದಲ ಎಸೆತದಲ್ಲಿ ಸಾಹಿಬ್‌ಜಾದಾ ಫರ್ಹಾನ್ ಅವರನ್ನು ಔಟ್ ಮಾಡುವ ಮೂಲಕ ಕುಲ್ದೀಪ್ 3 ವಿಕೆಟ್ ಪಡೆದ ಸಾಧನೆ ಮಾಡಿದರು. ಪಾಕ್ ಪರ ಅತ್ಯಧಿಕ ರನ್​ಗಳ ಇನ್ನಿಂಗ್ಸ್ ಆಡಿದ ಸಾಹಿಬ್‌ಜಾದಾ 40 ರನ್ ಬಾರಿಸಿದರು.  ವರುಣ್ ಚಕ್ರವರ್ತಿ 11 ರನ್‌ ಗಳಿಸಿದ್ದ ಫಹೀಮ್ ಅಶ್ರಫ್ ಅವರನ್ನು ಎಲ್ಬಿಡಬ್ಲ್ಯೂ ಮಾಡುವ ಮೂಲಕ ತಮ್ಮ ಮೊದಲ ವಿಕೆಟ್ ಪಡೆದರು. ಬುಮ್ರಾ, ಸುಫಿಯಾನ್ ಮುಕಿಮ್ ಅವರನ್ನು ಕ್ಲೀನ್ ಬೌಲ್ಡ್ ಮಾಡಿ ಪಾಕಿಸ್ತಾನಕ್ಕೆ ಒಂಬತ್ತನೇ ಹೊಡೆತ ನೀಡಿದರು. ಆದರೆ ಕೊನೆಯ ಕೆಲವು ಓವರ್‌ಗಳಲ್ಲಿ ಶಾಹೀನ್ ಅದ್ಭುತ ಪ್ರದರ್ಶನ ನೀಡಿ ಸಿಕ್ಸರ್​ಗಳ ಮಳೆಗರೆದರು. ಶಾಹೀನ್ 16 ಎಸೆತಗಳಲ್ಲಿ 4 ಸಿಕ್ಸರ್‌ಗಳೊಂದಿಗೆ ಅಜೇಯ 33 ರನ್ ಬಾರಿಸಿದರು.

ಭಾರತಕ್ಕೆ ಸುಲಭ ಜಯ

128 ರನ್​ಗಳ ಗುರಿ ಬೆನ್ನಟ್ಟಿದ ಟೀಂ ಇಂಡಿಯಾ ಪರ ಅಭಿಷೇಕ್ ಶರ್ಮಾ ಮತ್ತು ಶುಭ್​ಮನ್ ಗಿಲ್ ತಂಡಕ್ಕೆ ಮತ್ತೊಮ್ಮೆ ಉತ್ತಮ ಆರಂಭ ನೀಡಿದರು, ಆದರೆ ಇಬ್ಬರೂ ಪವರ್‌ಪ್ಲೇನಲ್ಲಿಯೇ ತಮ್ಮ ವಿಕೆಟ್‌ಗಳನ್ನು ಕಳೆದುಕೊಂಡರು. ಗಿಲ್ 10 ರನ್ ಗಳಿಸಿ ಔಟಾದರೆ, ಅಭಿಷೇಕ್ ಶರ್ಮಾ 31 ರನ್ ಗಳಿಗೆ ವಿಕೆಟ್ ಒಪ್ಪಿಸಿದರು. ಆದಾಗ್ಯೂ ಅಭಿಷೇಕ್ ಔಟಾಗುವುದಕ್ಕೂ ಮುನ್ನ ತಂಡದ ಗೆಲುವನ್ನು ಖಚಿತ ಪಡಿಸಿದರು. ಇದರ ನಂತರ, ನಾಯಕ ಸೂರ್ಯಕುಮಾರ್, ತಿಲಕ್ ವರ್ಮಾ ಅವರೊಂದಿಗೆ  ಮೂರನೇ ವಿಕೆಟ್‌ಗೆ 56 ರನ್‌ಗಳ ಜೊತೆಯಾಟ ನಡೆಸಿದರು. ತಿಲಕ್ ವರ್ಮಾ 31 ರನ್ ಗಳಿಸಿ ಔಟಾದರು. ನಂತರ ಶಿವಂ ದುಬೆ ಮತ್ತು ಸೂರ್ಯಕುಮಾರ್ ಒಟ್ಟಾಗಿ ಭಾರತಕ್ಕೆ ಗೆಲುವಿನ ಔಪಚಾರಿಕತೆಯನ್ನು ಪೂರ್ಣಗೊಳಿಸಿದರು. ನಾಯಕ ಸೂರ್ಯ 37 ಎಸೆತಗಳಲ್ಲಿ 5 ಬೌಂಡರಿ ಹಾಗೂ 1 ಸಿಕ್ಸರ್ ಸಹಿತ ಅಜೇಯ 47 ರನ್ ಬಾರಿಸಿದರೆ, ಶಿವಂ ದುಬೆ 1 ಸಿಕ್ಸರ್ ಸಹಿತ 10 ರನ್ ಬಾರಿಸಿ ಅಜೇಯರಾಗಿ ಉಳಿದರು.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 11:17 pm, Sun, 14 September 25

ನನಗೆ ಅಶ್ವಿನಿ ಗೌಡ ಇಷ್ಟ, ಅವರೇ ಬಿಗ್ ಬಾಸ್ ಗೆಲ್ಲಬೇಕು: ಮಾಜಿ ಸ್ಪರ್ಧಿ
ನನಗೆ ಅಶ್ವಿನಿ ಗೌಡ ಇಷ್ಟ, ಅವರೇ ಬಿಗ್ ಬಾಸ್ ಗೆಲ್ಲಬೇಕು: ಮಾಜಿ ಸ್ಪರ್ಧಿ
ಮೈಲಾರಿಗೆ 14 ನ್ಯಾಯಾಂಗ ಬಂಧನ: ಜೈಲಿಗೆ ಹೋಗುವ ಮುನ್ನ ಸಿಂಗರ್ ಹೇಳಿದ್ದೇನು?
ಮೈಲಾರಿಗೆ 14 ನ್ಯಾಯಾಂಗ ಬಂಧನ: ಜೈಲಿಗೆ ಹೋಗುವ ಮುನ್ನ ಸಿಂಗರ್ ಹೇಳಿದ್ದೇನು?
ಬಿಗ್ ಬಾಸ್: ಸುದೀಪ್ ನಿರೂಪಣೆ ಟೀಕಿಸಿದವರಿಗೆ ವಿನಯ್ ಗೌಡ ಖಡಕ್ ತಿರುಗೇಟು
ಬಿಗ್ ಬಾಸ್: ಸುದೀಪ್ ನಿರೂಪಣೆ ಟೀಕಿಸಿದವರಿಗೆ ವಿನಯ್ ಗೌಡ ಖಡಕ್ ತಿರುಗೇಟು
ತನ್ನ ಪತ್ನಿ ಜತೆ ಸಹೋದರ ಲವ್ವಿಡವ್ವಿ: ತಮ್ಮನನ್ನು ಕೊಂದ ಅಣ್ಣ,
ತನ್ನ ಪತ್ನಿ ಜತೆ ಸಹೋದರ ಲವ್ವಿಡವ್ವಿ: ತಮ್ಮನನ್ನು ಕೊಂದ ಅಣ್ಣ,
ಯಾರು ಗೆಲ್ಲಬಹುದು, ಯಾರು ಚೆನ್ನಾಗಿ ಆಡ್ತಿದ್ದಾರೆ: ವಿನಯ್ ಹೇಳಿದ್ದೇನು?
ಯಾರು ಗೆಲ್ಲಬಹುದು, ಯಾರು ಚೆನ್ನಾಗಿ ಆಡ್ತಿದ್ದಾರೆ: ವಿನಯ್ ಹೇಳಿದ್ದೇನು?
ಸಚಿವ ನಿತಿನ್ ಗಡ್ಕರಿ ಕಿವಿಯಲ್ಲಿ ಟಿಎಂಸಿ ಸಂಸದ ಗುಟ್ಟಾಗಿ ಹೇಳಿದ್ದೇನು?
ಸಚಿವ ನಿತಿನ್ ಗಡ್ಕರಿ ಕಿವಿಯಲ್ಲಿ ಟಿಎಂಸಿ ಸಂಸದ ಗುಟ್ಟಾಗಿ ಹೇಳಿದ್ದೇನು?
ತಮ್ಮದೇ ಕಾರಿನಲ್ಲಿ ಮೋದಿಯನ್ನು ಬೀಳ್ಕೊಟ್ಟ ಇಥಿಯೋಪಿಯನ್ ಪ್ರಧಾನಿ
ತಮ್ಮದೇ ಕಾರಿನಲ್ಲಿ ಮೋದಿಯನ್ನು ಬೀಳ್ಕೊಟ್ಟ ಇಥಿಯೋಪಿಯನ್ ಪ್ರಧಾನಿ
ತನ್ನ ಪ್ರಾಣವನ್ನೂ ಲೆಕ್ಕಿಸದೆ ಸೈಕಲ್​ನಿಂದ ಬಿದ್ದ ತಮ್ಮನನ್ನು ಕಾಪಾಡಿದ ಅಣ್ಣ
ತನ್ನ ಪ್ರಾಣವನ್ನೂ ಲೆಕ್ಕಿಸದೆ ಸೈಕಲ್​ನಿಂದ ಬಿದ್ದ ತಮ್ಮನನ್ನು ಕಾಪಾಡಿದ ಅಣ್ಣ
ಚೈತ್ರಾಗೆ ಕೀ ಕೊಟ್ಟ ಗಿಲ್ಲಿ: ನಕ್ಕು ಸುಸ್ತಾದ ರಜತ್-ರಘು
ಚೈತ್ರಾಗೆ ಕೀ ಕೊಟ್ಟ ಗಿಲ್ಲಿ: ನಕ್ಕು ಸುಸ್ತಾದ ರಜತ್-ರಘು
ಗೃಹಲಕ್ಷ್ಮಿ ಬಗ್ಗೆ ತಪ್ಪು ಮಾಹಿತಿ: ವಿಷಾದ ವ್ಯಕ್ತಪಡಿಸಿದ ಹೆಬ್ಬಾಳ್ಕರ್
ಗೃಹಲಕ್ಷ್ಮಿ ಬಗ್ಗೆ ತಪ್ಪು ಮಾಹಿತಿ: ವಿಷಾದ ವ್ಯಕ್ತಪಡಿಸಿದ ಹೆಬ್ಬಾಳ್ಕರ್