AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Asia cup 2025: ಭಾರತ- ಪಾಕ್ ಸೂಪರ್ 4 ಪಂದ್ಯದಲ್ಲಿ ಟಾಸ್ ಗೆದ್ದವರೇ ಬಾಸ್

India vs Pakistan Asia Cup 2025: ಏಷ್ಯಾಕಪ್ 2025 ರ ಸೂಪರ್ ಫೋರ್ ಹಂತದಲ್ಲಿ ಭಾರತ ಮತ್ತು ಪಾಕಿಸ್ತಾನ ತಂಡಗಳು ಸೆಪ್ಟೆಂಬರ್ 21 ರಂದು ದುಬೈನಲ್ಲಿ ಮುಖಾಮುಖಿಯಾಗಲಿವೆ. ದುಬೈನಲ್ಲಿ ಚೇಸಿಂಗ್ ತಂಡಗಳು ಹೆಚ್ಚಾಗಿ ಗೆದ್ದಿರುವ ಇತಿಹಾಸವಿದೆ. ಲೀಗ್ ಹಂತದಲ್ಲಿ ಭಾರತ ಪಾಕಿಸ್ತಾನವನ್ನು ಸೋಲಿಸಿತ್ತು. ಈ ಪಂದ್ಯದಲ್ಲಿ ಟಾಸ್ ನಿರ್ಣಾಯಕ ಪಾತ್ರ ವಹಿಸಲಿದೆ ಎಂದು ನಿರೀಕ್ಷಿಸಲಾಗಿದೆ. ಭಾರತ ತಂಡ ಉತ್ತಮ ಫಾರ್ಮ್‌ನಲ್ಲಿದ್ದರೂ, ಪಾಕಿಸ್ತಾನ ಸೇಡು ತೀರಿಸಿಕೊಳ್ಳಲು ಪ್ರಯತ್ನಿಸುತ್ತದೆ.

Asia cup 2025: ಭಾರತ- ಪಾಕ್ ಸೂಪರ್ 4 ಪಂದ್ಯದಲ್ಲಿ ಟಾಸ್ ಗೆದ್ದವರೇ ಬಾಸ್
Ind Vs Pak Toss
ಪೃಥ್ವಿಶಂಕರ
|

Updated on: Sep 20, 2025 | 10:45 PM

Share

2025 ರ ಏಷ್ಯಾಕಪ್‌ನಲ್ಲಿ (Asia Cup 2025) ಸೂಪರ್ ಫೋರ್ ಸುತ್ತು ಇಂದಿನಿಂದ ಪ್ರಾರಂಭವಾಗಿದೆ. ಮೊದಲ ಪಂದ್ಯ ಶ್ರೀಲಂಕಾ ಹಾಗೂ ಬಾಂಗ್ಲಾದೇಶ ನಡುವೆ ನಡೆಯುತ್ತಿದ್ದರೆ, ಎರಡಮೇ ಪಂದ್ಯ ಭಾರತ ಮತ್ತು ಪಾಕಿಸ್ತಾನ (India vs Pakistan) ನಡುವೆ ಸೆಪ್ಟೆಂಬರ್ 21 ರಂದು ನಡೆಯಲಿದೆ. ಈ ಪಂದ್ಯಾವಳಿಯಲ್ಲಿ ಉಭಯ ತಂಡಗಳ ಎರಡನೇ ಮುಖಾಮುಖಿ ಇದಾಗಿದ್ದು, ಲೀಗ್ ಹಂತದಲ್ಲಿ ಟೀಂ ಇಂಡಿಯಾ ಪಾಕಿಸ್ತಾನವನ್ನು ಏಳು ವಿಕೆಟ್‌ಗಳಿಂದ ಸೋಲಿಸಿತ್ತು. ಇದೀಗ ಸೂಪರ್ ಫೋರ್‌ನಲ್ಲಿಯೂ ಈ ಗೆಲುವಿನ ಓಟವನ್ನು ಮುಂದುವರಿಸುವ ಇರಾದೆಯಲ್ಲಿ ಟೀಂ ಇಂಡಿಯಾ ಇದೆ. ಆದಾಗ್ಯೂ, ದುಬೈನಲ್ಲಿ ನಡೆಯಲಿರುವ ಈ ಪಂದ್ಯದಲ್ಲಿ ಟಾಸ್ ನಿರ್ಣಾಯಕ ಪಾತ್ರ ವಹಿಸಬಹುದು ಎಂಬುದು ಅಂಕಿ ಅಂಶಗಳು ಹೇಳಿದ ಸತ್ಯವಾಗಿದೆ.

ದುಬೈನಲ್ಲಿ ಟಾಸ್ ದಾಖಲೆ ಹೇಗಿದೆ?

ಭಾರತ ಮತ್ತು ಪಾಕಿಸ್ತಾನ ತಂಡಗಳು ಸೆಪ್ಟೆಂಬರ್ 21 ರಂದು ದುಬೈನಲ್ಲಿ ಮುಖಾಮುಖಿಯಾಗಲಿವೆ . ಇಲ್ಲಿ ಇಲ್ಲಿಯವರೆಗೆ ಆಡಿರುವ ಒಂಬತ್ತು ಟಿ20ಐ ಪಂದ್ಯಗಳಲ್ಲಿ ಚೇಸಿಂಗ್ ತಂಡ ಗೆದ್ದಿರುವುದರಿಂದ ಟಾಸ್ ನಿರ್ಣಾಯಕ ಪಾತ್ರ ವಹಿಸುತ್ತದೆ ಎಂಬುದನ್ನು ಅರಿತುಕ್ಕೊಳ್ಳಬಹುದು. ಇದನ್ನು ಪರಿಗಣಿಸಿ, ಎರಡೂ ತಂಡಗಳು ಟಾಸ್ ಗೆದ್ದ ನಂತರ ಮೊದಲು ಬೌಲಿಂಗ್ ಮಾಡಲು ನಿರ್ಧರಿಸಬಹುದು.

ಭಾರತ ಮತ್ತು ಪಾಕಿಸ್ತಾನ ಈ ಮೈದಾನದಲ್ಲಿ ಇದುವರೆಗೆ ನಾಲ್ಕು ಟಿ20 ಪಂದ್ಯಗಳನ್ನು ಆಡಿವೆ. ಇವುಗಳಲ್ಲಿ ಪ್ರತಿಯೊಂದರಲ್ಲೂ ಚೇಸಿಂಗ್ ಮಾಡಿದ ತಂಡ ಗೆದ್ದಿದೆ. ಈ ಟೂರ್ನಮೆಂಟ್‌ನ ಲೀಗ್ ಪಂದ್ಯದಲ್ಲಿ, ಚೇಸಿಂಗ್ ಮಾಡಿದ ಟೀಂ ಇಂಡಿಯಾ ಪಾಕಿಸ್ತಾನ ವಿರುದ್ಧ ಏಳು ವಿಕೆಟ್‌ಗಳಿಂದ ಗೆದ್ದಿತ್ತು. ಈ ಪಿಚ್‌ನಲ್ಲಿ 185 ರನ್‌ಗಳ ಗುರಿಯನ್ನು ಇದುವರೆಗೆ ಬೆನ್ನಟ್ಟಲಾಗಿಲ್ಲ.

Asia cup 2025: ಪಾಕ್ ವಿರುದ್ಧದ ಪಂದ್ಯಕ್ಕೆ ಟೀಂ ಇಂಡಿಯಾದಲ್ಲಿ 2 ಬದಲಾವಣೆ ಖಚಿತ

ಭಾರತದ ಅಜೇಯ ಓಟ

ಇನ್ನು ಈ ಟೂರ್ನಮೆಂಟ್‌ನಲ್ಲಿ ಟೀಂ ಇಂಡಿಯಾ ಇಲ್ಲಿಯವರೆಗೆ ಯಾವುದೇ ಪಂದ್ಯವನ್ನು ಸೋತಿಲ್ಲ. ಸೂಪರ್ ಫೋರ್‌ನಲ್ಲಿ ಈ ಗೆಲುವಿನ ಓಟವನ್ನು ಮುಂದುವರಿಸಲು ಪ್ರಯತ್ನಿಸಲಿದೆ. ಇನ್ನು ಲೀಗ್ ಪಂದ್ಯದಲ್ಲಿ ಟೀಂ ಇಂಡಿಯಾ ವಿರುದ್ಧ ಮೊದಲು ಬ್ಯಾಟಿಂಗ್ ಮಾಡಿದ ಪಾಕಿಸ್ತಾನ 9 ವಿಕೆಟ್‌ಗೆ 127 ರನ್ ಗಳಿಸಿತು. ಇದಕ್ಕೆ ಉತ್ತರವಾಗಿ ಭಾರತ ತಂಡವು 15.5 ಓವರ್‌ಗಳಲ್ಲಿ 3 ವಿಕೆಟ್‌ಗಳ ನಷ್ಟಕ್ಕೆ ಈ ಗುರಿಯನ್ನು ತಲುಪಿತು. ಈಗ, ಪಾಕಿಸ್ತಾನ ಈ ಸೋಲಿಗೆ ಸೇಡು ತೀರಿಸಿಕೊಳ್ಳಲು ಇರಾದೆಯಲ್ಲಿದೆ.

ಆದಾಗ್ಯೂ, ಭಾರತ ತಂಡವು ಪ್ರಸ್ತುತ ಅತ್ಯುತ್ತಮ ಫಾರ್ಮ್‌ನಲ್ಲಿದೆ. 2024 ರಲ್ಲಿ ಟಿ20 ವಿಶ್ವಕಪ್ ಗೆದ್ದ ನಂತರ, ಟೀಂ ಇಂಡಿಯಾ ಯಾವುದೇ ಟಿ 20 ಸರಣಿಯನ್ನು ಕಳೆದುಕೊಂಡಿಲ್ಲ. ಈ ಅವಧಿಯಲ್ಲಿ ಭಾರತ ಒಟ್ಟು 23 ಪಂದ್ಯಗಳನ್ನು ಆಡಿದ್ದು, ಕೇವಲ 3 ಪಂದ್ಯಗಳಲ್ಲಿ ಮಾತ್ರ ಸೋತಿದೆ. ಇದನ್ನು ಗಮನಿಸಿದರೆ, ಪಾಕಿಸ್ತಾನ ಗೆಲ್ಲಲು ಅಸಾಧಾರಣ ಪ್ರದರ್ಶನ ನೀಡಬೇಕಾಗುತ್ತದೆ.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಇಂಡೋನೇಷ್ಯಾದ 1,000 ವರ್ಷದ ಶಿವನ ದೇವಸ್ಥಾನದ ಜೀರ್ಣೋದ್ಧಾರಕ್ಕೆ ಭಾರತ ಬೆಂಬಲ
ಇಂಡೋನೇಷ್ಯಾದ 1,000 ವರ್ಷದ ಶಿವನ ದೇವಸ್ಥಾನದ ಜೀರ್ಣೋದ್ಧಾರಕ್ಕೆ ಭಾರತ ಬೆಂಬಲ
ಶಿರಾಡಿ ಘಾಟ್‌ನಲ್ಲಿ ನಿಯಂತ್ರಣ ತಪ್ಪಿ ಡಾಂಬರ್ ಟ್ಯಾಂಕರ್ ಪಲ್ಟಿ
ಶಿರಾಡಿ ಘಾಟ್‌ನಲ್ಲಿ ನಿಯಂತ್ರಣ ತಪ್ಪಿ ಡಾಂಬರ್ ಟ್ಯಾಂಕರ್ ಪಲ್ಟಿ
ಪ್ರಜ್ವಲ್​ಗೆ 1 ಕೋಟಿ 25 ಲಕ್ಷ ರೂ. ಸಂಭಾವನೆ; ಬಾಕಿ ಹಣಕ್ಕಾಗಿ ವಿವಾದ?
ಪ್ರಜ್ವಲ್​ಗೆ 1 ಕೋಟಿ 25 ಲಕ್ಷ ರೂ. ಸಂಭಾವನೆ; ಬಾಕಿ ಹಣಕ್ಕಾಗಿ ವಿವಾದ?
ರಾಮಾಯಣ, ಮಹಾಭಾರತ ಇಂಡೋನೇಷ್ಯಾ- ಭಾರತದ ಬಾಂಧವ್ಯದ ಸ್ತಂಭಗಳು; ಪ್ರಧಾನಿ ಮೋದಿ
ರಾಮಾಯಣ, ಮಹಾಭಾರತ ಇಂಡೋನೇಷ್ಯಾ- ಭಾರತದ ಬಾಂಧವ್ಯದ ಸ್ತಂಭಗಳು; ಪ್ರಧಾನಿ ಮೋದಿ
ವಯನಾಡಿನಲ್ಲಿ ಮತ್ತೊಮ್ಮೆ ಪ್ರಕೃತಿ ವಿಕೋಪ; ಭೂಕುಸಿತದಿಂದ ಮೂವರು ಸಾವು
ವಯನಾಡಿನಲ್ಲಿ ಮತ್ತೊಮ್ಮೆ ಪ್ರಕೃತಿ ವಿಕೋಪ; ಭೂಕುಸಿತದಿಂದ ಮೂವರು ಸಾವು
ಮುಸ್ಲಿಂ ಹೆಸರನ್ನ ಡಿಲೀಟ್ ಮಾಡದಂತೆ ಡಿಸಿಗೆ ನಿರ್ದೇಶನ
ಮುಸ್ಲಿಂ ಹೆಸರನ್ನ ಡಿಲೀಟ್ ಮಾಡದಂತೆ ಡಿಸಿಗೆ ನಿರ್ದೇಶನ
ಮಂಜು ಮುಸುಕಿದ ಹಾದಿ, ಬೆಟ್ಟ-ಗುಡ್ಡಗಳ ಅದ್ಭುತ ಸೌಂದರ್ಯ:ಆಗುಂಬೆಯ ಸೊಬಗು
ಮಂಜು ಮುಸುಕಿದ ಹಾದಿ, ಬೆಟ್ಟ-ಗುಡ್ಡಗಳ ಅದ್ಭುತ ಸೌಂದರ್ಯ:ಆಗುಂಬೆಯ ಸೊಬಗು
ಗದಗನಲ್ಲಿ ಮನಕಲಕುವ ದೃಶ್ಯ: ಮಳೆಗಾಗಿ ಮಂಡಿಯೂರಿ ಕಣ್ಣೀರಿಟ್ಟ ರೈತರು
ಗದಗನಲ್ಲಿ ಮನಕಲಕುವ ದೃಶ್ಯ: ಮಳೆಗಾಗಿ ಮಂಡಿಯೂರಿ ಕಣ್ಣೀರಿಟ್ಟ ರೈತರು
‘ಕರಾವಳಿ’ ಕಿರಿಕ್; ನಟ ಪ್ರಜ್ವಲ್, ನಿರ್ದೇಶಕ ಗುರುದತ್ ನಡುವೆ ಆಗಿದ್ದೇನು?
‘ಕರಾವಳಿ’ ಕಿರಿಕ್; ನಟ ಪ್ರಜ್ವಲ್, ನಿರ್ದೇಶಕ ಗುರುದತ್ ನಡುವೆ ಆಗಿದ್ದೇನು?
ಹಾಸನದಲ್ಲಿ ಮಳೆ ಆರ್ಭಟಕ್ಕೆ ಶಿರಾಡಿಘಾಟ್ ವ್ಯಾಪ್ತಿಯಲ್ಲಿ ಭೂಕುಸಿತ
ಹಾಸನದಲ್ಲಿ ಮಳೆ ಆರ್ಭಟಕ್ಕೆ ಶಿರಾಡಿಘಾಟ್ ವ್ಯಾಪ್ತಿಯಲ್ಲಿ ಭೂಕುಸಿತ