IND vs SL: ಲಂಕಾ ವಿರುದ್ಧದ ಔಪಚಾರಿಕ ಪಂದ್ಯಕ್ಕೆ ಟೀಂ ಇಂಡಿಯಾ ಪ್ಲೇಯಿಂಗ್ 11 ಬದಲಾಗುತ್ತಾ?

IND vs SL: ಭಾರತ ತಂಡ ಏಷ್ಯಾಕಪ್ 2025 ರ ಫೈನಲ್‌ಗೆ ಅರ್ಹತೆ ಪಡೆದಿದೆ. ಶುಕ್ರವಾರದ ಶ್ರೀಲಂಕಾ ವಿರುದ್ಧದ ಪಂದ್ಯ ಔಪಚಾರಿಕವಾಗಿದ್ದರೂ, ಬೆಂಚ್ ಆಟಗಾರರಿಗೆ ಅವಕಾಶ ನೀಡುವ ಸಾಧ್ಯತೆಯಿದೆ. ಸಂಜು ಸ್ಯಾಮ್ಸನ್ ಅವರ ಸ್ಥಾನ ಮತ್ತು ತಂಡದ ಸಂಭಾವ್ಯ ಬದಲಾವಣೆಗಳ ಬಗ್ಗೆ ಚರ್ಚಿಸಲಾಗಿದೆ. ಆದಾಗ್ಯೂ ಫೈನಲ್ ಪಂದ್ಯವನ್ನು ಗಮನದಲ್ಲಿಟ್ಟುಕೊಂಡು ಭಾರತ ಗೆಲುವಿನ ಸಂಯೋಜನೆಯನ್ನು ಬದಲಿಸುವ ಸಾಧ್ಯತೆ ಕಡಿಮೆ.

IND vs SL: ಲಂಕಾ ವಿರುದ್ಧದ ಔಪಚಾರಿಕ ಪಂದ್ಯಕ್ಕೆ ಟೀಂ ಇಂಡಿಯಾ ಪ್ಲೇಯಿಂಗ್ 11 ಬದಲಾಗುತ್ತಾ?
Team India

Updated on: Sep 25, 2025 | 10:55 PM

2025 ರ ಏಷ್ಯಾಕಪ್‌ನಲ್ಲಿ (Asia Cup 2025) ಟೀಂ ಇಂಡಿಯಾ ಅಜೇಯವಾಗಿ ಫೈನಲ್ ತಲುಪಿದ್ದು ಶುಕ್ರವಾರ ನಡೆಯಲಿರುವ ಸೂಪರ್ ಫೋರ್ ಹಂತದ ಕೊನೆಯ ಪಂದ್ಯದಲ್ಲಿ ಶ್ರೀಲಂಕಾವನ್ನು (India vs Sri Lanka) ಎದುರಿಸಲಿದೆ. ಈ ಪಂದ್ಯವು ಭಾರತಕ್ಕೆ ಕೇವಲ ಔಪಚಾರಿಕವಾಗಿದೆ. ಏಕೆಂದರೆ ಮೇಲೆ ಹೇಳಿದಂತೆ ಟೀಂ ಇಂಡಿಯಾ ಈಗಾಗಲೇ ಫೈನಲ್ ತಲುಪಿದೆ. ಇತ್ತ ಶ್ರೀಲಂಕಾ ತಂಡಕ್ಕೂ ಇದು ಕೇವಲ ಔಪಚಾರಿಕ ಪಂದ್ಯವಾಗಿದೆ. ಏಕೆಂದರೆ ಶ್ರೀಲಂಕಾ ತಂಡ ತನ್ನ ಮೊದಲ ಎರಡು ಪಂದ್ಯಗಳನ್ನು ಸೋತು ಫೈನಲ್​ ರೇಸ್​​ನಿಂದ ಹೊರಬಿದ್ದಿದೆ. ಹೀಗಾಗಿ ಉಭಯ ತಂಡಗಳು ತಮ್ಮ ಪ್ಲೇಯಿಂಗ್ 11 ನಲ್ಲಿ ಇಷ್ಟು ದಿನ ಬೆಂಚ್ ಕಾದ ಆಟಗಾರರಿಗೆ ಅವಕಾಶ ನೀಡುವ ಸಾಧ್ಯತೆಗಳು ಹೆಚ್ಚಾಗಿವೆ.

ಭಾರತದ ಪ್ಲೇಯಿಂಗ್​ 11 ನಲ್ಲಿ ಬದಲಾವಣೆ?

ಮೇಲೆ ಹೇಳಿದಂತೆ ಫೈನಲ್ ಪಂದ್ಯಕ್ಕೂ ಮುನ್ನ ಟೀಂ ಇಂಡಿಯಾದಲ್ಲಿ ಕೆಲವು ಆಟಗಾರರಿಗೆ ವಿಶ್ರಾಂತಿ ನೀಡಿ ಬೆಂಚ್ ಕಾದ ಆಟಗಾರರಿಗೆ ಅವಕಾಶ ನೀಡಬಹುದು. ಆದರೆ ಏಷ್ಯಾಕಪ್‌ನಲ್ಲಿ ಇಲ್ಲಿಯವರೆಗೆ ಆಡಿರುವ ಪಂದ್ಯಗಳಲ್ಲಿ ಟೀಂ ಇಂಡಿಯಾ ಹೆಚ್ಚಿನ ಬದಲಾವಣೆಗಳನ್ನು ಮಾಡದೆ ಕಣಕ್ಕಿಳಿದಿದೆ. ಆದರೆ ಒಮಾನ್ ವಿರುದ್ಧದ ಪಂದ್ಯದಲ್ಲಿ ಮಾತ್ರ ಕೇವಲ 2 ಬದಲಾವಣೆಯನ್ನು ಮಾಡಿತ್ತು. ಆ ಪಂದ್ಯದಲ್ಲಿ, ಜಸ್ಪ್ರೀತ್ ಬುಮ್ರಾ ಮತ್ತು ವರುಣ್ ಚಕ್ರವರ್ತಿಗೆ ವಿಶ್ರಾಂತಿ ನೀಡಿ ಅರ್ಶ್ದೀಪ್ ಸಿಂಗ್ ಮತ್ತು ಹರ್ಷಿತ್ ರಾಣಾ ಅವರಿಗೆ ಅವಕಾಶ ನೀಡಿಲಾಗಿತ್ತು. ಈ ಪಂದ್ಯವನ್ನು ಹೊರತುಪಡಿಸಿ ಉಳಿದ ಪಂದ್ಯಗಳಲ್ಲಿ ಒಂದೇ ತಂಡ ಕಣಕ್ಕಿಳಿದಿದೆ.

ಸಂಜು ಬದಲು ಜಿತೇಶ್​ಗೆ ಅವಕಾಶ?

ಆದಾಗ್ಯೂ ಫೈನಲ್ ಪಂದ್ಯವನ್ನು ಗಮನದಲ್ಲಿಟ್ಟುಕೊಂಡು ಭಾರತ ತಂಡವು ಗೆಲುವಿನ ಸಂಯೋಜನೆಯನ್ನು ಬದಲಿಸಲು ಹೋಗುವುದಿಲ್ಲ. ಹೀಗಾಗಿ ಶ್ರೀಲಂಕಾ ವಿರುದ್ಧದ ಪಂದ್ಯಕ್ಕೆ ತಂಡದಲ್ಲಿ ಪ್ರಮುಖ ಬದಲಾವಣೆಗಳು ಅಸಂಭವ. ಆದರೆ ಇಡೀ ಟೂರ್ನಮೆಂಟ್‌ನಲ್ಲಿ ಒಂದೇ ಒಂದು ಪಂದ್ಯವನ್ನು ಆಡದ ಜಿತೇಶ್ ಅವರನ್ನು ಫಿನಿಷರ್ ಆಗಿ ಪರೀಕ್ಷಿಸಲು ಇದು ಭಾರತೀಯ ತಂಡದ ಆಡಳಿತ ಮಂಡಳಿಗೆ ಕೊನೆಯ ಅವಕಾಶವಾಗಿದೆ. ಸ್ಯಾಮ್ಸನ್ ಭಾರತೀಯ ಬ್ಯಾಟಿಂಗ್ ಕ್ರಮಾಂಕಕ್ಕೆ ಹೊಂದಿಕೊಳ್ಳುವಂತೆ ಕಾಣುತ್ತಿಲ್ಲ. ಬಾಂಗ್ಲಾದೇಶ ವಿರುದ್ಧದ ಪಂದ್ಯದಲ್ಲಿ, ಸ್ಯಾಮ್ಸನ್ ಅವರನ್ನು ಟಾಪ್ ಸೆವೆನ್‌ನಲ್ಲಿಯೂ ಕಣಕ್ಕಿಳಿಸಲಿಲ್ಲ. ಅವರು ಅಕ್ಷರ್ ಪಟೇಲ್‌ಗಿಂತ ಮೊದಲು ಬರಲು ಅರ್ಹರಲ್ಲದಿದ್ದರೆ ಅವರು ತಂಡದಲ್ಲಿ ಏನು ಮಾಡುತ್ತಿದ್ದಾರೆ ಎಂಬ ಪ್ರಶ್ನೆಗಳನ್ನು ಹುಟ್ಟುಹಾಕಿದೆ.

ಬ್ಯಾಟಿಂಗ್ ಕ್ರಮಾಂಕದಲ್ಲಿ ಬದಲಾವಣೆ?

ಶಿವಂ ದುಬೆ ಅವರನ್ನು ನಾಲ್ಕನೇ ಸ್ಥಾನದಲ್ಲಿ ಕಳುಹಿಸುವುದು ಅರ್ಥಪೂರ್ಣವಾಗಿದೆ, ಏಕೆಂದರೆ ಅವರು ಸ್ಪಿನ್ನರ್‌ಗಳ ವಿರುದ್ಧ ಚೆನ್ನಾಗಿ ಆಡುತ್ತಾರೆ. ಆದರೆ ಮಧ್ಯಮ ಕ್ರಮಾಂಕದಲ್ಲಿ ಎಡ-ಬಲ ಸಂಯೋಜನೆಗೆ ಇದು ಸೂಕ್ತವಲ್ಲ. ಹಾರ್ದಿಕ್ ಪಾಂಡ್ಯ ಅವರನ್ನು ಇಬ್ಬರು ಎಡಗೈ ಬ್ಯಾಟ್ಸ್‌ಮನ್‌ಗಳಾದ ತಿಲಕ್ ವರ್ಮಾ ಮತ್ತು ಅಕ್ಷರ್‌ಗಿಂತ ಮೊದಲು ಕಳುಹಿಸಲಾಯಿತು. ಗಂಭೀರ ಅವರ ಈ ಪ್ರಯೋಗ ಹೆಚ್ಚು ಫಲ ನೀಡಲಿಲ್ಲ. ಹೀಗಾಗಿ ಆರಂಭದ ಪಂದ್ಯಗಳಂತೆಯೇ ಟೀಂ ಇಂಡಿಯಾದ ಬ್ಯಾಟಿಂಗ್ ಕ್ರಮಾಂಕ ಇರಲಿದೆ. ಉಳಿದಂತೆ ತಂಡದಲ್ಲಿ ಯಾವುದೇ ಬದಲಾವಣೆಗಳನ್ನು ಮಾಡಲಾಗುವುದಿಲ್ಲ ಎನ್ನಬಹುದು.

Asia Cup 2025: ಹ್ಯಾಂಡ್‌ಶೇಕ್ ವಿವಾದ; ಐಸಿಸಿ ಮುಂದೆ ವಿಚಾರಣೆಗೆ ಹಾಜರಾದ ಸೂರ್ಯ

ಭಾರತದ ಸಂಭಾವ್ಯ ಪ್ಲೇಯಿಂಗ್ 11: ಅಭಿಷೇಕ್ ಶರ್ಮಾ, ಶುಭ್​ಮನ್ ಗಿಲ್, ಸೂರ್ಯಕುಮಾರ್ ಯಾದವ್, ತಿಲಕ್ ವರ್ಮಾ, ಸಂಜು ಸ್ಯಾಮ್ಸನ್, ಶಿವಂ ದುಬೆ, ಹಾರ್ದಿಕ್ ಪಾಂಡ್ಯ, ಅಕ್ಷರ್ ಪಟೇಲ್, ಕುಲ್ದೀಪ್ ಯಾದವ್, ಜಸ್ಪ್ರೀತ್ ಬುಮ್ರಾ, ವರುಣ್ ಚಕ್ರವರ್ತಿ.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 10:48 pm, Thu, 25 September 25