AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಿಮ್ಮನ್ನ ಫೈನಲ್​ನಲ್ಲಿ ನೋಡ್ಕೋತೀವಿ: ಟೀಮ್ ಇಂಡಿಯಾಗೆ ಶಾಹೀನ್ ಅಫ್ರಿದಿ ಎಚ್ಚರಿಕೆ

Asia Cup 2025: ಏಷ್ಯಾಕಪ್​ನ 17ನೇ ಪಂದ್ಯದಲ್ಲಿ ಪಾಕಿಸ್ತಾನ್ ಹಾಗೂ ಬಾಂಗ್ಲಾದೇಶ್ ತಂಡಗಳು ಮುಖಾಮುಖಿಯಾಗಲಿದೆ. ಈ ಮ್ಯಾಚ್​ನಲ್ಲಿ ಗೆಲ್ಲುವ ತಂಡ ಫೈನಲ್​ಗೆ ಪ್ರವೇಶಿಸಲಿದೆ. ಹೀಗೆ ಫೈನಲ್​ಗೆ ಪ್ರವೇಶಿಸಿದ ತಂಡವು ಸೆಪ್ಟೆಂಬರ್ 28 ರಂದು ನಡೆಯಲಿರುವ ಫೈನಲ್ ಮ್ಯಾಚ್​ನಲ್ಲಿ ಟೀಮ್ ಇಂಡಿಯಾವನ್ನು ಎದುರಿಸಲಿದೆ.

ನಿಮ್ಮನ್ನ ಫೈನಲ್​ನಲ್ಲಿ ನೋಡ್ಕೋತೀವಿ: ಟೀಮ್ ಇಂಡಿಯಾಗೆ ಶಾಹೀನ್ ಅಫ್ರಿದಿ ಎಚ್ಚರಿಕೆ
Shaheen Afridi
ಝಾಹಿರ್ ಯೂಸುಫ್
|

Updated on:Sep 25, 2025 | 12:24 PM

Share

ಈ ಬಾರಿಯ ಏಷ್ಯಾಕಪ್​ ಫೈನಲ್​ನಲ್ಲಿ ಭಾರತ ಮತ್ತು ಪಾಕಿಸ್ತಾನ್ ತಂಡಗಳು ಮುಖಾಮುಖಿಯಾಗಲಿದೆಯಾ? ಈ ಪ್ರಶ್ನೆಗೆ ಇಂದು (ಸೆ.25) ಉತ್ತರ ಸಿಗಲಿದೆ. ಏಕೆಂದರೆ ಭಾರತ ತಂಡವು ಈಗಾಗಲೇ ಫೈನಲ್​ಗೆ ಪ್ರವೇಶಿಸಿದೆ. ಅತ್ತ ಇಂದು ನಡೆಯಲಿರುವ ಬಾಂಗ್ಲಾದೇಶ್ ವಿರುದ್ಧದ ಪಂದ್ಯದಲ್ಲಿ ಪಾಕಿಸ್ತಾನ್ ತಂಡ ಗೆದ್ದರೆ ಫೈನಲ್​ಗೆ ಎಂಟ್ರಿ ಕೊಡಲಿದೆ. ಹೀಗಾದಲ್ಲಿ ಸೆಪ್ಟೆಂಬರ್ 28 ರಂದು ಭಾರತ ಮತ್ತು ಪಾಕಿಸ್ತಾನ್ ತಂಡಗಳು ಫೈನಲ್​ನಲ್ಲಿ ಮುಖಾಮುಖಿಯಾಗಲಿದೆ. ಈ ಪಂದ್ಯಕ್ಕೂ ಮುನ್ನವೇ ಪಾಕ್ ವೇಗಿ ಶಾಹೀನ್ ಅಫ್ರಿದಿ ಟೀಮ್ ಇಂಡಿಯಾಗೆ ಎಚ್ಚರಿಕೆಯ ಸಂದೇಶ ರವಾನಿಸಿದ್ದಾರೆ.

ಪಾಕಿಸ್ತಾನ್ ವಿರುದ್ಧದ ಸೂಪರ್-4 ಪಂದ್ಯದಲ್ಲಿ ಗೆದ್ದ ಬಳಿಕ ಟೀಮ್ ಇಂಡಿಯಾ ನಾಯಕ ಸೂರ್ಯಕುಮಾರ್ ಯಾದವ್  ಪಾಕ್ ತಂಡವನ್ನು ಇನ್ಮುಂದೆ ನಮ್ಮ ಪ್ರಬಲ ಪ್ರತಿಸ್ಪರ್ಧಿ ಎಂದು ಬಿಂಬಿಸಬೇಡಿ ಎಂದು ಮಾಧ್ಯಮದವರಿಗೆ ಮನವಿ ಮಾಡಿದ್ದರು.

ಭಾರತ ತಂಡವು ಪಾಕ್ ವಿರುದ್ಧ ಏಕಪಕ್ಷೀಯವಾಗಿ ಪಂದ್ಯ ಗೆಲ್ಲುತ್ತಿದೆ. ಇಲ್ಲಿ ಪ್ರತಿಸ್ಪರ್ಧೆ ಅಥವಾ ಪೈಪೋಟಿ ಎಂಬುದೇ ಇಲ್ಲ. ಪ್ರತಿ ಸಲ ಏಕಪಕ್ಷೀಯವಾಗಿ ನಾವೇ ಗೆಲ್ಲುತ್ತಿರುವಾಗ, ಪೈಪೋಟಿಯ ಮಾತೇ ಬರಲ್ಲ. ಹೀಗಾಗಿ ನೀವೆಲ್ಲರೂ ಈ ‘ಪೈಪೋಟಿ’ಯ ಬಗ್ಗೆ ಪ್ರಶ್ನೆಗಳನ್ನು ಕೇಳುವುದನ್ನು ನಿಲ್ಲಿಸಬೇಕು ಎಂದು ಸೂರ್ಯಕುಮಾರ್ ಯಾದವ್ ಹೇಳಿದ್ದರು.

ಒಂದು ತಂಡವು ಪರಸ್ಪರ 15 ಅಥವಾ 20 ಪಂದ್ಯಗಳನ್ನು ಆಡಿದರೆ, ಅದರಲ್ಲಿ ಉಭಯ ತಂಡಗಳು ಸ್ 7-7 ಅಥವಾ 8-7 ಪಂದ್ಯಗಳನ್ನು ಗೆದ್ದರೆ ಮಾತ್ರ ಅದನ್ನು ಪೈಪೋಟಿ ಎಂದು ಕರೆಯಲಾಗುತ್ತದೆ. ಆದರೆ ನನ್ನ ಊಹೆ ಪ್ರಕಾರ ನಾವು ಪಾಕಿಸ್ತಾನ್ ವಿರುದ್ಧ 13-0, 10-1 ಅಂತರದಿಂದ ಮೇಲುಗೈ ಹೊಂದಿದ್ದೇವೆ.

ಹೀಗಾಗಿ ಭಾರತಕ್ಕೆ ಪಾಕಿಸ್ತಾನ್ ಸಾಟಿಯೇ ಅಲ್ಲ. ಇದೇ ಕಾರಣದಿಂದ ಇನ್ಮುಂದೆ ಉಭಯ ತಂಡಗಳ ಪಂದ್ಯವನ್ನು ಪೈಪೋಟಿ ಎಂದು ಬಿಂಬಿಸದಿರಿ ಎಂದು ಟೀಮ್ ಇಂಡಿಯಾ ನಾಯಕ ಸೂರ್ಯಕುಮಾರ್ ಯಾದವ್ ಮನವಿ ಮಾಡಿದ್ದರು.

ಸೂರ್ಯಕುಮಾರ್ ಯಾದವ್ ಅವರ ಈ ಹೇಳಿಕೆ ಕುರಿತು ಶಾಹೀನ್ ಅಫ್ರಿದಿ ಅವರನ್ನು ಕೇಳಿದಾಗ, ಅವರು ಏನು ಬೇಕಾದರೂ ಹೇಳಲಿ. ಅವರಿಗೆ ಅವರದೇ ಆದ ದೃಷ್ಟಿಕೋನವಿದೆನಾವು ಸಹ ಏಷ್ಯಾಕಪ್ ಗೆಲ್ಲಲು ಬಂದಿದ್ದೇವೆ. ಹೀಗಾಗಿ ನಮ್ಮ ಗುರಿ ಫೈನಲ್​ಗೇರುವುದು.

ನಾವು ಫೈನಲ್​ಗೇರಿದರೆ ಬಳಿಕ ನೋಡ್ಕೋತೀವಿ.  ಫೈನಲ್​ನಲ್ಲಿ ನಾವು ಏನು? ನಾವು ಏನಲ್ಲ ಎಂಬುದನ್ನು ತೋರಿಸುತ್ತೇವೆ. ಆವಾಗ ನೋಡೋಣ ಎಂದು ಶಾಹೀನ್ ಅಫ್ರಿದಿ ಹೇಳಿದ್ದಾರೆ.

ಇದನ್ನೂ ಓದಿ: ಹಿಸ್ಟರಿ… ಹಿಸ್ಟರಿ… ಹಿಸ್ಟರಿ… ಕ್ಯಾಚ್ ಕೈಚೆಲ್ಲಿ ಇತಿಹಾಸ ನಿರ್ಮಿಸಿದ ಟೀಮ್ ಇಂಡಿಯಾ

ಇದೀಗ ಶಾಹೀನ್ ಅಫ್ರಿದಿಯ ಹೇಳಿಕೆಯು ಭಾರೀ ವೈರಲ್ ಆಗಿದ್ದು, ಟೀಮ್ ಇಂಡಿಯಾ ಅಭಿಮಾನಿಗಳು ಪಾಕ್ ತಂಡವು ಫೈನಲ್​ಗೇರುವುದನ್ನು ಎದುರು ನೋಡುತ್ತಿದ್ದಾರೆ. ಈ ಮೂಲಕ ಪಾಕ್ ಪಡೆಯನ್ನು ಬಗ್ಗು ಬಡಿದು ಟೀಮ್ ಇಂಡಿಯಾ ಚಾಂಪಿಯನ್ ಪಟ್ಟ ಅಲಂಕರಿಸಲಿ ಎಂದು ಬಯಸುತ್ತಿದ್ದಾರೆ.

Published On - 12:24 pm, Thu, 25 September 25

Follow Us
ಝಾಹಿರ್ ಯೂಸುಫ್
ಝಾಹಿರ್ ಯೂಸುಫ್

ಟಿವಿ9 ಡಿಜಿಟಲ್ ಮುಖ್ಯ ಉಪ ಸಂಪಾದಕ. 10 ವರ್ಷಗಳಿಂದ ಕನ್ನಡ ಡಿಜಿಟಲ್​ ಮಾಧ್ಯಮದಲ್ಲಿ ಪತ್ರಿಕಾ ವೃತ್ತಿ. ಕ್ರೀಡಾ ಸುದ್ದಿ, ದೀರ್ಘ ಲೇಖನ, ವಿಶ್ಲೇಷಣೆ, ಹೀಗೆ ಎಲ್ಲ ತರಹದ ಬರಹದಲ್ಲೂ ಅನುಭವ. ಪ್ರಸ್ತುತ ವಿದ್ಯಮಾನಗಳ ವ್ಯಾಖ್ಯಾನ, ಚರ್ಚೆಯಲ್ಲಿ ನೈಪುಣ್ಯ. ಈ ಹಿಂದೆ ಉದಯವಾಣಿ, ನ್ಯೂಸ್ 18 ಕನ್ನಡ ಡಿಜಿಟಲ್​​ನಲ್ಲಿ ಕೆಲಸ ಮಾಡಿದ ಅನುಭವ. ಆಸಕ್ತಿದಾಯಕ ವಿಷಯ ಕ್ರೀಡೆ, ಸಿನಿಮಾ ಮತ್ತು ರಾಜಕೀಯ.

Read More
ತಾಯಿ ಪಾರ್ಥೀವ ಶರೀರದ ಎದುರು ಕಣ್ಣೀರು ಹಾಕಿದ ಶ್ರೀಮುರಳಿ
ತಾಯಿ ಪಾರ್ಥೀವ ಶರೀರದ ಎದುರು ಕಣ್ಣೀರು ಹಾಕಿದ ಶ್ರೀಮುರಳಿ
ಸಿಎಂ ಡಿಕೆಶಿಗೆ ಮೋಹನ್ ದಾಸ್ ಪೈ ಸಲಹೆ: ಉದ್ಯಮಿ ಹೇಳಿದ್ದೇನು?
ಸಿಎಂ ಡಿಕೆಶಿಗೆ ಮೋಹನ್ ದಾಸ್ ಪೈ ಸಲಹೆ: ಉದ್ಯಮಿ ಹೇಳಿದ್ದೇನು?
ಕೊನೆಗೂ ಖಾತೆ ವಹಿಸಿಕೊಂಡ ಸಚಿವ ಕೃಷ್ಣ ಭೈರೇಗೌಡ: ಜಿಬಿಎ ಕಚೇರಿಯಲ್ಲಿ ಸಭೆ
ಕೊನೆಗೂ ಖಾತೆ ವಹಿಸಿಕೊಂಡ ಸಚಿವ ಕೃಷ್ಣ ಭೈರೇಗೌಡ: ಜಿಬಿಎ ಕಚೇರಿಯಲ್ಲಿ ಸಭೆ
ಹುಬ್ಬಳ್ಳಿ ಭಂಡಿವಾಡದಲ್ಲಿ ಹತ್ತೇ ನಿಮಿಷದಲ್ಲಿ ಉಳೀತು ಇನ್ನೂರು ಮಕ್ಕಳ ಜೀವ
ಹುಬ್ಬಳ್ಳಿ ಭಂಡಿವಾಡದಲ್ಲಿ ಹತ್ತೇ ನಿಮಿಷದಲ್ಲಿ ಉಳೀತು ಇನ್ನೂರು ಮಕ್ಕಳ ಜೀವ
ಒಬ್ಬೊಬ್ರಿಗೆ ಕೊಡ್ತೀನಿ ನೋಡಿ; ಸಮಂತಾ ಎಚ್ಚರಿಕೆ ನೀಡಿದ್ದು ಯಾರಿಗೆ?
ಒಬ್ಬೊಬ್ರಿಗೆ ಕೊಡ್ತೀನಿ ನೋಡಿ; ಸಮಂತಾ ಎಚ್ಚರಿಕೆ ನೀಡಿದ್ದು ಯಾರಿಗೆ?
ಎಸಿಎಫ್​​ ಮನೆಯಲ್ಲಿ ಖಜಾನೆ ಕಂಡು ಲೋಕಾಯಕ್ತ ಅಧಿಕಾರಿಗಳೇ ಶಾಕ್​​
ಎಸಿಎಫ್​​ ಮನೆಯಲ್ಲಿ ಖಜಾನೆ ಕಂಡು ಲೋಕಾಯಕ್ತ ಅಧಿಕಾರಿಗಳೇ ಶಾಕ್​​
ಮೈಸೂರು ಪಬ್​​ ದುರಂತ ಕೇಸ್​​ಗೆ ಟ್ವಿಸ್ಟ್​​: ಕೇಳಿಬಂತು ಸ್ಫೋಟಕ ಆರೋಪ
ಮೈಸೂರು ಪಬ್​​ ದುರಂತ ಕೇಸ್​​ಗೆ ಟ್ವಿಸ್ಟ್​​: ಕೇಳಿಬಂತು ಸ್ಫೋಟಕ ಆರೋಪ
ಮೇಲ್ಛಾವಣಿ ಕುಸಿತದಿಂದ ಜೀವ ಭಯದಲ್ಲೇ ಸರ್ಕಾರಿ ಶಾಲೆಗೆ ಬರುತ್ತಿರುವ ಮಕ್ಕಳು
ಮೇಲ್ಛಾವಣಿ ಕುಸಿತದಿಂದ ಜೀವ ಭಯದಲ್ಲೇ ಸರ್ಕಾರಿ ಶಾಲೆಗೆ ಬರುತ್ತಿರುವ ಮಕ್ಕಳು
ಸೋಲುವ ಪಂದ್ಯವನ್ನು ಟೈ ಮಾಡಿ, ಆಮೇಲೆ ಸೋತ ಟೀಮ್ ಇಂಡಿಯಾ
ಸೋಲುವ ಪಂದ್ಯವನ್ನು ಟೈ ಮಾಡಿ, ಆಮೇಲೆ ಸೋತ ಟೀಮ್ ಇಂಡಿಯಾ
ಈ ರಾಶಿಯವರಿಗಿಂದು ಹಣದ ವಿಷಯದಲ್ಲಿ ಆತುರದ ನಿರ್ಧಾರ ಬೇಡ
ಈ ರಾಶಿಯವರಿಗಿಂದು ಹಣದ ವಿಷಯದಲ್ಲಿ ಆತುರದ ನಿರ್ಧಾರ ಬೇಡ