AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಏಷ್ಯಾ ಕಪ್ ಡೇಟ್ ಫಿಕ್ಸ್​: 3 ಸ್ಟೇಡಿಯಂಗಳಲ್ಲಿ ಟೂರ್ನಿ!

Asia Cup 2027: ಏಷ್ಯನ್ ರಾಷ್ಟ್ರಗಳ ಕ್ರಿಕೆಟ್ ಕದನ ಏಷ್ಯಾಕಪ್​ಗೆ ಡೇಟ್ ಫಿಕ್ಸ್ ಆಗಿದೆ. 2027ರ ಕೊನೆಯಲ್ಲಿ ನಡೆಯಲಿರುವ ಐಸಿಸಿ ಏಕದಿನ ವಿಶ್ವಕಪ್‌ಗೆ ದಿಕ್ಸೂಚಿಯಾಗಲಿರುವ ಈ ಟೂರ್ನಿಯು ಸಂಪೂರ್ಣವಾಗಿ 50 ಓವರ್‌ಗಳ ಮಾದರಿಯಲ್ಲಿ ನಡೆಯಲಿದ್ದು, ಈ ಕುರಿತಾದ ಸಂಪೂರ್ಣ ಮಾಹಿತಿ ಇಲ್ಲಿದೆ.

ಏಷ್ಯಾ ಕಪ್ ಡೇಟ್ ಫಿಕ್ಸ್​: 3 ಸ್ಟೇಡಿಯಂಗಳಲ್ಲಿ ಟೂರ್ನಿ!
Asia Cup 2027Image Credit source: x.com
ಝಾಹಿರ್ ಯೂಸುಫ್
|

Updated on: Jul 08, 2026 | 10:58 AM

Share

2027ರ ಏಷ್ಯಾ ಕಪ್ ಕ್ರಿಕೆಟ್ ಟೂರ್ನಿಗೆ ದಿನಾಂಕ ನಿಗದಿಯಾಗಿದೆ. ಮುಂದಿನ ವರ್ಷದ ಜೂನ್ 18 ರಿಂದ ಪಂದ್ಯಾವಳಿ ಆರಂಭವಾಗಲಿದ್ದು, ಜುಲೈ 4 ರಂದು ಮಹಾ ಫೈನಲ್ ಪಂದ್ಯ ಜರುಗಲಿದೆ. ಇನ್ನು ಈ ಬಾರಿ ಟೂರ್ನಿಯ ಆತಿಥ್ಯವನ್ನು ಬಾಂಗ್ಲಾದೇಶ್ ವಹಿಸಿಕೊಳ್ಳಲಿರುವುದು ಅಧಿಕೃತವಾಗಿದೆ. ಈ ಪಂದ್ಯಾವಳಿಯ ಕುರಿತಾದ ಮತ್ತಷ್ಟು ಮಾಹಿತಿ ಈ ಕೆಳಗಿನಂತಿದೆ.

ಏಕದಿನ ಮಾದರಿಯಲ್ಲಿ ಪಂದ್ಯಾವಳಿ:

ವಿಶ್ವಕಪ್ ಸರಣಿಗಳಿಗೆ ಅನುಗುಣವಾಗಿ ಏಷ್ಯಾ ಕಪ್ ಮಾದರಿಯನ್ನು ಬದಲಾಯಿಸಲಾಗುತ್ತದೆ. 2027ರ ಕೊನೆಯಲ್ಲಿ ಸೌತ್ ಆಫ್ರಿಕಾ/ಝಿಂಬಾಬ್ವೆ/ನಮೀಬಿಯಾದಲ್ಲಿ ಐಸಿಸಿ ಪುರುಷರ ಏಕದಿನ ವಿಶ್ವಕಪ್ ನಡೆಯಲಿದ್ದು, ಅದಕ್ಕೆ ಪೂರ್ವಸಿದ್ಧತೆಯಾಗಿ 2027ರ ಏಷ್ಯಾ ಕಪ್ ಅನ್ನು ಕೂಡ 50 ಓವರ್‌ಗಳ ಏಕದಿನ ಮಾದರಿಯಲ್ಲೇ ನಡೆಸಲು ಏಷ್ಯನ್ ಕ್ರಿಕೆಟ್ ಕೌನ್ಸಿಲ್ (ACC) ನಿರ್ಧರಿಸಿದೆ.

3 ಸ್ಟೇಡಿಯಂಗಳಲ್ಲಿ ಪಂದ್ಯ:

ಬಾಂಗ್ಲಾದೇಶ ಕ್ರಿಕೆಟ್ ಮಂಡಳಿ (BCB) ಟೂರ್ನಿಯನ್ನು ಯಶಸ್ವಿಯಾಗಿ ನಡೆಸಲು ಮೂರು ಪ್ರಮುಖ ನಗರಗಳ ಕ್ರೀಡಾಂಗಣಗಳನ್ನು ಪ್ರಸ್ತಾಪಿಸಿದೆ. ಈ ಸ್ಟೇಡಿಯಂಗಳಿಗೆ ಎಸಿಸಿ ಕಡೆಯಿಂದ ಗ್ರೀನ್ ಸಿಗ್ನಲ್ ಸಿಗುವುದು ಖಚಿತ ಎಂದು ವರದಿಯಾಗಿದೆ. ಆ ಸ್ಟೇಡಿಯಂಗಳೆಂದರೆ…

  • ಮಿರ್​​ಪುರ್ (ಢಾಕಾ): ಶೇರ್-ಎ-ಬಾಂಗ್ಲಾ ರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣ.
  • ಚತ್ತೋಗ್ರಾಮ್: ಬೀರ್ ಶ್ರೇಷ್ಠ ಫ್ಲೈಟ್ ಲೆಫ್ಟಿನೆಂಟ್ ಮತಿಯುರ್ ರೆಹಮಾನ್ ಕ್ರೀಡಾಂಗಣ.
  • ಸೈಲ್ಹೆಟ್: ಸೈಲ್ಹೆಟ್ ಅಂತಾರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣ.

ಈ ಟೂರ್ನಿಯ ಫೈನಲ್ ಪಂದ್ಯವನ್ನು ಢಾಕಾದ ಶೇರ್-ಎ-ಬಾಂಗ್ಲಾ ರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣದಲ್ಲಿ ಆಯೋಜಿಸಲು ಬಾಂಗ್ಲಾದೇಶ್ ಕ್ರಿಕೆಟ್ ಬೋರ್ಡ್ ಪ್ಲ್ಯಾನ್ ರೂಪಿಸಿದೆ.

ಭಾರತ ಮತ್ತು ಪಾಕಿಸ್ತಾನ್ ಮುಖಾಮುಖಿ:

ಈ ಬಾರಿಯ ಏಷ್ಯಾಕಪ್​ನಲ್ಲೂ ಭಾರತ ಮತ್ತು ಪಾಕಿಸ್ತಾನ್ ತಂಡಗಳು ಒಂದೇ ಗ್ರೂಪ್​ನಲ್ಲಿ ಕಾಣಿಸಿಕೊಳ್ಳಲಿದೆ. ಹೀಗಾಗಿ ಸಾಂಪ್ರದಾಯಿಕ ಎದುರಾಳಿಗಳು ಲೀಗ್​ ಹಂತದಲ್ಲೇ ಮುಖಾಮುಖಿಯಾಗಲಿದ್ದಾರೆ.

ಎಷ್ಟು ತಂಡಗಳು ಕಣಕ್ಕೆ?

ಏಷ್ಯಾದ ಅಗ್ರ 5 ಪೂರ್ಣಾವಧಿ ಸದಸ್ಯ ರಾಷ್ಟ್ರಗಳಾದ ಭಾರತ, ಪಾಕಿಸ್ತಾನ್, ಶ್ರೀಲಂಕಾ, ಬಾಂಗ್ಲಾದೇಶ್, ಅಫ್ಘಾನಿಸ್ತಾನ್ ತಂಡಗಳು ಕಣಕ್ಕಿಳಿಯುವುದು ಖಚಿತವಾಗಿದೆ. ಇನ್ನು ಅರ್ಹತಾ ಸುತ್ತಿನಲ್ಲಿ ಗೆದ್ದು ಬರುವ ಒಂದು ಅಸೋಸಿಯೇಟ್ ತಂಡ ಸೇರಿ ಒಟ್ಟು 6 ತಂಡಗಳು ಕಣಕ್ಕಿಳಿಯಲಿವೆ.

ಇದನ್ನೂ ಓದಿ: ಅರ್ಜೆಂಟೀನಾ ಪರ ‘ಆಡುತ್ತಿರುವ’ ರೆಫರಿ… ಗಂಭೀರ ಆರೋಪ!

11 ವರ್ಷಗಳ ನಂತರ ಬಾಂಗ್ಲಾದಲ್ಲಿ ಟೂರ್ನಿ:

ಬಾಂಗ್ಲಾದೇಶವು ಕೊನೆಯದಾಗಿ 2016 ರಲ್ಲಿ ಏಷ್ಯಾ ಕಪ್ (ಟಿ20 ಮಾದರಿ) ಆಯೋಜಿಸಿತ್ತು. ಈಗ ಸುದೀರ್ಘ 11 ವರ್ಷಗಳ ಬಳಿಕ ಮತ್ತೆ ಆತಿಥ್ಯ ವಹಿಸಲು ಸಜ್ಜಾಗಿ ನಿಂತಿದೆ. ಅದರಂತೆ 2027ರ ಏಷ್ಯಾಕಪ್​ ಏಕದಿನ ಟೂರ್ನಿಯು ಬಾಂಗ್ಲಾದೇಶ್​ನಲ್ಲಿ ಜರುಗಲಿದೆ.

Follow Us
ಚಾಮರಾಜೇಶ್ವರಸ್ವಾಮಿ ಆಷಾಢ ಮಾಸದ ರಥೋತ್ಸವಕ್ಕೆ ಕ್ಷಣಗಣನೆ ಆರಂಭ
ಚಾಮರಾಜೇಶ್ವರಸ್ವಾಮಿ ಆಷಾಢ ಮಾಸದ ರಥೋತ್ಸವಕ್ಕೆ ಕ್ಷಣಗಣನೆ ಆರಂಭ
‘ಟಾಕ್ಸಿಕ್ ನೋಡಿದವರು ವಾಟ್​ ದಿ ಹೆಲ್​ ವಾಸ್ ದ್ಯಾಟ್ ಅಂತ ಹೊರಗೆ ಬರ್ತಾರೆ’
‘ಟಾಕ್ಸಿಕ್ ನೋಡಿದವರು ವಾಟ್​ ದಿ ಹೆಲ್​ ವಾಸ್ ದ್ಯಾಟ್ ಅಂತ ಹೊರಗೆ ಬರ್ತಾರೆ’
ಸಿಟಿ ರವಿ ಚಿಕ್ಕಮಗಳೂರಿಗೆ ಬರದಂತೆ ತಡೀತೇವೆ, ಮುಸ್ಲಿಂ ಮುಖಂಡರ ಎಚ್ಚರಿಕೆ
ಸಿಟಿ ರವಿ ಚಿಕ್ಕಮಗಳೂರಿಗೆ ಬರದಂತೆ ತಡೀತೇವೆ, ಮುಸ್ಲಿಂ ಮುಖಂಡರ ಎಚ್ಚರಿಕೆ
ಭೀಕರ ಬರಕ್ಕೆ ತುತ್ತಾದ ರಾಯಚೂರು, ಲಿಂಗಸೂರಿನಲ್ಲಿ ಗುಳೆ ಹೊರಟ 40 ಸಾವಿರ ಜನ
ಭೀಕರ ಬರಕ್ಕೆ ತುತ್ತಾದ ರಾಯಚೂರು, ಲಿಂಗಸೂರಿನಲ್ಲಿ ಗುಳೆ ಹೊರಟ 40 ಸಾವಿರ ಜನ
ಬೆಂಗಳೂರು: ಕ್ಯಾಬ್ಗೆ ಕಾಯುತ್ತಿದ್ದ ಯುವತಿ ಜೊತೆ ವ್ಯಕ್ತಿ ಅಸಭ್ಯ ವರ್ತನೆ
ಬೆಂಗಳೂರು: ಕ್ಯಾಬ್ಗೆ ಕಾಯುತ್ತಿದ್ದ ಯುವತಿ ಜೊತೆ ವ್ಯಕ್ತಿ ಅಸಭ್ಯ ವರ್ತನೆ
ಸುಬ್ರಹ್ಮಣ್ಯ, ಹನುಮನ ಲಹರಿ ಇರುವ ಪರ್ವ ದಿನ: 12 ರಾಶಿಗಳ ದಿನ ಭವಿಷ್ಯ
ಸುಬ್ರಹ್ಮಣ್ಯ, ಹನುಮನ ಲಹರಿ ಇರುವ ಪರ್ವ ದಿನ: 12 ರಾಶಿಗಳ ದಿನ ಭವಿಷ್ಯ
ಸರ್ಕಾರದ ಜೊತೆ ಇರುತ್ತೇವೆ: ಡಿಕೆಶಿಗೆ ತೇಜಸ್ವಿ ಸೂರ್ಯ ಭರವಸೆ
ಸರ್ಕಾರದ ಜೊತೆ ಇರುತ್ತೇವೆ: ಡಿಕೆಶಿಗೆ ತೇಜಸ್ವಿ ಸೂರ್ಯ ಭರವಸೆ
ಪಶುವೈದ್ಯ ನೇಮಕಾತಿ ಹಗರಣ: CBI ತನಿಖೆಗೆ ಒಪ್ಪಿಸಿ ಎಂದ ಸುರೇಶ್ ಕುಮಾರ್
ಪಶುವೈದ್ಯ ನೇಮಕಾತಿ ಹಗರಣ: CBI ತನಿಖೆಗೆ ಒಪ್ಪಿಸಿ ಎಂದ ಸುರೇಶ್ ಕುಮಾರ್
ಪ್ರತಿಭಟನಾಕಾರರ ಮೇಲಿನ ಲಾಠಿಚಾರ್ಜ್​ಗೆ ಸದನದಲ್ಲಿ ಖರ್ಗೆ ಖಂಡನೆ
ಪ್ರತಿಭಟನಾಕಾರರ ಮೇಲಿನ ಲಾಠಿಚಾರ್ಜ್​ಗೆ ಸದನದಲ್ಲಿ ಖರ್ಗೆ ಖಂಡನೆ
ಡಿಕೆಶಿಗೆ ಹೈ ಸೆಕ್ಯೂರಿಟಿ:ದೆಹಲಿಯಲ್ಲಿ ವಿಶೇಷ ಭದ್ರತೆ ಇದೇ ಮೊದಲು
ಡಿಕೆಶಿಗೆ ಹೈ ಸೆಕ್ಯೂರಿಟಿ:ದೆಹಲಿಯಲ್ಲಿ ವಿಶೇಷ ಭದ್ರತೆ ಇದೇ ಮೊದಲು