AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Asia Cup 2025: ಒಂದು ಪಂದ್ಯ… ಮೂರು ತಂಡಗಳ ಫೈನಲ್ ಭವಿಷ್ಯ..!

Asia Cup 2025: ಏಷ್ಯಾಕಪ್ 2025ರಲ್ಲಿ ಒಟ್ಟು 8 ತಂಡಗಳು ಕಣಕ್ಕಿಳಿದಿದ್ದವು. ಈ ಎಂಟು ತಂಡಗಳಲ್ಲಿ ಈಗಾಗಲೇ 5 ಟೀಮ್​ಗಳು ಟೂರ್ನಿಯಿಂದ ಹೊರಬಿದ್ದಿದೆ. ಇದೀಗ ಏಷ್ಯಾಕಪ್ ಫೈನಲ್ ರೇಸ್​ನಲ್ಲಿ ಉಳಿದಿರುವುದು ಭಾರತ, ಪಾಕಿಸ್ತಾನ್ ಮತ್ತು ಬಾಂಗ್ಲಾದೇಶ್. ಈ ಮೂರು ತಂಡಗಳಲ್ಲಿ ಎರಡು ಟೀಮ್ ಫೈನಲ್ ಆಡುವುದು ಖಚಿತ.

Asia Cup 2025: ಒಂದು ಪಂದ್ಯ... ಮೂರು ತಂಡಗಳ ಫೈನಲ್ ಭವಿಷ್ಯ..!
Asia Cup 2025
ಝಾಹಿರ್ ಯೂಸುಫ್
|

Updated on: Sep 24, 2025 | 12:54 PM

Share

ಏಷ್ಯಾಕಪ್ ಟೂರ್ನಿಯು ಮುಕ್ತಾಯದ ಹಂತಕ್ಕೆ ಬಂದು ನಿಂತಿದೆ. ಈಗಾಗಲೇ 15 ಪಂದ್ಯಗಳು ಮುಗಿದಿದ್ದು, ಇನ್ನುಳಿದಿರುವುದು ಕೇವಲ 3 ಮ್ಯಾಚ್​ಗಳು ಮಾತ್ರ. ಈ ಮೂರು ಪಂದ್ಯಗಳೊಂದಿಗೆ ಈ ಬಾರಿಯ ಏಷ್ಯಾಕಪ್​ನಲ್ಲಿ ಫೈನಲ್ ಆಡಲಿರುವ ತಂಡಗಳಾವುವು ಎಂಬುದು ನಿರ್ಧಾರವಾಗಲಿದೆ.

ಅದರಲ್ಲೂ ಭಾರತ ಮತ್ತು ಬಾಂಗ್ಲಾದೇಶ್ ನಡುವಣ ಇಂದಿನ ಪಂದ್ಯದಲ್ಲಿ ಟೀಮ್ ಇಂಡಿಯಾ ಗೆದ್ದರೆ ಫೈನಲ್​ಗೆ ಎಂಟ್ರಿ ಕೊಡುವುದು ಖಚಿತ. ಒಂದು ವೇಳೆ ಬಾಂಗ್ಲಾದೇಶ್ ತಂಡ ಜಯ ಸಾಧಿಸಿದರೆ, ಅತ್ತ ಪಾಕಿಸ್ತಾನ್ ತಂಡದ ಫೈನಲ್ ಹಾದಿ ಕಠಿಣವಾಗಲಿದೆ.  ಹಾಗಿದ್ರೆ ಮೂರು ತಂಡಗಳ ಫೈನಲ್ ಸಮೀಕರಣ ಹೇಗಿದೆ ಎಂದು ನೋಡೋಣ..

ಭಾರತ: ಟೀಮ್ ಇಂಡಿಯಾ ಬಾಂಗ್ಲಾದೇಶ್ ವಿರುದ್ಧದ ಪಂದ್ಯದಲ್ಲಿ ಗೆದ್ದರೆ ನೇರವಾಗಿ ಫೈನಲ್​ಗೆ ಎಂಟ್ರಿ ಕೊಡಲಿದೆ. ಏಕೆಂದರೆ ಪಾಕಿಸ್ತಾನ್ ತಂಡವು ಈಗಾಗಲೇ 2 ಪಂದ್ಯಗಳನ್ನಾಡಿದ್ದು, ಮುಂದಿನ ಮ್ಯಾಚ್​ನಲ್ಲಿ ಗೆದ್ದರೂ ಒಟ್ಟು 4 ಅಂಕಗಳನ್ನು ಮಾತ್ರ ಪಡೆಯಲಿದೆ. ಅತ್ತ ಪಾಕ್ ತಂಡ ತನ್ನ ಕೊನೆಯ ಪಂದ್ಯವಾಡಬೇಕಿರುವುದು ಬಾಂಗ್ಲಾದೇಶ್ ವಿರುದ್ಧ. ಅಂದರೆ ಪಾಕ್ ಅಥವಾ ಬಾಂಗ್ಲಾದೇಶ್ ತಂಡ ತಮ್ಮ ಕೊನೆಯ ಪಂದ್ಯದಲ್ಲಿ ಗೆದ್ದರೂ ಭಾರತ ತಂಡದ ಮೇಲೆ ಯಾವುದೇ ಪರಿಣಾಮ ಬೀರುವುದಿಲ್ಲ. ಹೀಗಾಗಿಯೇ ಭಾರತ ತಂಡವು ಮುಂದಿನ 2 ಮ್ಯಾಚ್​ಗಳಲ್ಲಿ ಒಂದು ಗೆಲುವು ದಾಖಲಿಸಿದರೆ ಫೈನಲ್​ಗೆ ಎಂಟ್ರಿ ಕೊಡುವುದು ಖಚಿತ. ಅದರಂತೆ ಇಂದಿನ ಪಂದ್ಯದಲ್ಲಿ ಬಾಂಗ್ಲಾದೇಶ್ ವಿರುದ್ಧ ಟೀಮ್ ಇಂಡಿಯಾ ಗೆದ್ದರೆ ನೇರವಾಗಿ ಫೈನಲ್​ಗೆ ಅರ್ಹತೆ ಪಡೆಯಲಿದೆ.

ಬಾಂಗ್ಲಾದೇಶ್: ಭಾರತದ ವಿರುದ್ಧದ ಪಂದ್ಯದಲ್ಲಿ ಬಾಂಗ್ಲಾದೇಶ್ ತಂಡ ಗೆದ್ದರೂ ನೇರವಾಗಿ ಫೈನಲ್​ಗೆ ಎಂಟ್ರಿ ಕೊಡುವುದಿಲ್ಲ. ಏಕೆಂದರೆ ಪಾಕಿಸ್ತಾನ್ ಹಾಗೂ ಭಾರತ ತಂಡಕ್ಕೆ ಒಂದೊಂದು ಪಂದ್ಯಗಳಿವೆ. ಇತ್ತ ಟೀಮ್ ಇಂಡಿಯಾ ಇಂದು ಸೋತರೂ ಶ್ರೀಲಂಕಾ ವಿರುದ್ಧ ಭರ್ಜರಿ ಜಯ ಸಾಧಿಸುವ ಮೂಲಕ ಫೈನಲ್​ಗೇರಲು ಅವಕಾಶವಿದೆ. ಆದರೆ ಬಾಂಗ್ಲಾದೇಶ್ ತಂಡ ಫೈನಲ್​ಗೇರಲು ಭಾರತ ಮತ್ತು ಪಾಕಿಸ್ತಾನ್ ವಿರುದ್ಧ ಗೆಲ್ಲಲೇಬೇಕು. ಒಂದು ವೇಳೆ ಬಾಂಗ್ಲಾದೇಶ್ ತಂಡವು ಭಾರತದ ವಿರುದ್ಧ ಗೆದ್ದು ಪಾಕಿಸ್ತಾನ್ ವಿರುದ್ಧ ಸೋತರೂ ಫೈನಲ್​ಗೆ ಅರ್ಹತೆ ಪಡೆಯಬಹುದು. ಆದರೆ ಇಂತಹದೊಂದು ಅವಕಾಶ ಸೃಷ್ಟಿಯಾಗಲು ಬಾಂಗ್ಲಾದೇಶ್ ತಂಡವು ಪಾಕಿಸ್ತಾನ್ ತಂಡಕ್ಕಿಂತ ಹೆಚ್ಚಿನ ನೆಟ್ ರನ್ ರೇಟ್ ಹೊಂದಿರಬೇಕಾಗುತ್ತದೆ.

ಪಾಕಿಸ್ತಾನ್: ಪಾಕ್ ಪಡೆಯು ಫೈನಲ್​ಗೇರಲು ಬಾಂಗ್ಲಾದೇಶ್ ವಿರುದ್ಧ ಗೆಲ್ಲಲೇಬೇಕು. ಅದರಲ್ಲೂ ಇಂದಿನ ಪಂದ್ಯದಲ್ಲಿ ಟೀಮ್ ಇಂಡಿಯಾ ವಿರುದ್ಧ ಬಾಂಗ್ಲಾದೇಶ್ ಸೋತರೆ ಪಾಕಿಸ್ತಾನ್ ತಂಡದ ಹಾದಿ ಸುಗಮವಾಗಲಿದೆ. ಏಕೆಂದರೆ ಬಾಂಗ್ಲಾ ಪಡೆ ಸೋತರೆ ನೆಟ್ ರನ್ ರೇಟ್​​ನಲ್ಲಿ ಇಳಿಕೆಯಾಗಲಿದೆ. ಅತ್ತ ಕೊನೆಯ ಪಂದ್ಯದಲ್ಲಿ ಬಾಂಗ್ಲಾದೇಶ್ ತಂಡವನ್ನು ಸೋಲಿಸಿ 4 ಅಂಕಗಳೊಂದಿಗೆ ನೇರವಾಗಿ ಫೈನಲ್​ಗೇರಬಹುದು. ಒಂದು ವೇಳೆ ಪಾಕಿಸ್ತಾನ್ ತಂಡವು ಕೊನೆಯ ಪಂದ್ಯದಲ್ಲಿ ಸೋತರೆ ಬಾಂಗ್ಲಾದೇಶ್ ತಂಡ ಫೈನಲ್​ಗೆ ಎಂಟ್ರಿ ಕೊಡಲಿದೆ.

ಇದನ್ನೂ ಓದಿ: ಡಕ್​ಮ್ಯಾನ್… ಅನಗತ್ಯ ವಿಶ್ವ ದಾಖಲೆ ಬರೆದ ದಸುನ್ ಶಾನಕ

ಹೀಗಾಗಿಯೇ ಸೂಪರ್-4 ಹಂತದ ಕೊನೆಯ ಮೂರು ಪಂದ್ಯಗಳು ಈ ಬಾರಿಯ ಫೈನಲಿಸ್ಟ್​ಗಳನ್ನು ನಿರ್ಧರಿಸಲಿದೆ. ಅದರಲ್ಲೂ ಇಂದಿನ ಮ್ಯಾಚ್​ನಲ್ಲಿ ಬಾಂಗ್ಲಾದೇಶ್ ವಿರುದ್ಧ ಭಾರತ ತಂಡ ಗೆದ್ದರೆ ಟೀಮ್ ಇಂಡಿಯಾ ಫೈನಲ್​ ಆಡುವುದು ಖಚಿತ. ಅತ್ತ ಬಾಂಗ್ಲಾದೇಶ್ ಹಾಗೂ ಪಾಕಿಸ್ತಾನ್ ನಡುವಣ ಪಂದ್ಯವು ಸೆಮಿಫೈನಲ್ ಪೈಪೋಟಿಯಾಗಿ ಮಾರ್ಪಡಲಿದೆ.

ಏಷ್ಯಾಕಪ್ ಸೂಪರ್-4 ಪಾಯಿಂಟ್ಸ್ ಟೇಬಲ್ (ದಿನಾಂಕ 24/9/25)

ತಂಡ ಪಂದ್ಯಗಳು ಗೆಲುವು ಸೋಲು ಅಂಕಗಳು ನೆಟ್​ ರನ್​ ರೇಟ್
ಭಾರತ 1 1 0 2 +0.689
ಪಾಕಿಸ್ತಾನ್ 2 1 1 2 +0.226
ಬಾಂಗ್ಲಾದೇಶ್ 1 1 0 2 +0.121
ಶೀಲಂಕಾ 2 0 2 0 -0.590

Follow Us
ಕೇದಾರನಾಥ ವಿಐಪಿ ದರ್ಶನ; ಬಿಕೆಟಿಸಿ ಮುಖ್ಯಸ್ಥರ ವಿರುದ್ಧ ಅರ್ಚಕರ ಪ್ರತಿಭಟನೆ
ಕೇದಾರನಾಥ ವಿಐಪಿ ದರ್ಶನ; ಬಿಕೆಟಿಸಿ ಮುಖ್ಯಸ್ಥರ ವಿರುದ್ಧ ಅರ್ಚಕರ ಪ್ರತಿಭಟನೆ
ನಿಧಿ ಆಸೆಗೆ ತಾಯಿಯನ್ನೇ ಬಲಿ ಕೊಡಲು ಯತ್ನ!: ಚಾಮರಾಜನಗರದಲ್ಲಿ ಶಾಕಿಂಗ್ ಘಟನೆ
ನಿಧಿ ಆಸೆಗೆ ತಾಯಿಯನ್ನೇ ಬಲಿ ಕೊಡಲು ಯತ್ನ!: ಚಾಮರಾಜನಗರದಲ್ಲಿ ಶಾಕಿಂಗ್ ಘಟನೆ
ಎಕ್ಸಿಟ್ ಪೋಲ್ ಬೆನ್ನಲ್ಲೇ ಬಾಂಗ್ಲಾದೇಶಕ್ಕೆ ನಡುಕ
ಎಕ್ಸಿಟ್ ಪೋಲ್ ಬೆನ್ನಲ್ಲೇ ಬಾಂಗ್ಲಾದೇಶಕ್ಕೆ ನಡುಕ
ಮಳೆ ಬಂದು ನಿಂತರೂ 2 ದಿನದಿಂದ ನಡೆಯುತ್ತಲೇ ಇದೆ ಅಂಡರ್ ಪಾಸ್ ಕ್ಲೀನ್ ಕಾರ್ಯ
ಮಳೆ ಬಂದು ನಿಂತರೂ 2 ದಿನದಿಂದ ನಡೆಯುತ್ತಲೇ ಇದೆ ಅಂಡರ್ ಪಾಸ್ ಕ್ಲೀನ್ ಕಾರ್ಯ
‘ವಸುದೇವ ಕುಟುಂಬ’ ಧಾರಾವಾಹಿ ಸಂಭಾವನೆ ವಿವಾದ: ವಿವರಿಸಿದ ನಟಿ ಚೈತ್ರಾ
‘ವಸುದೇವ ಕುಟುಂಬ’ ಧಾರಾವಾಹಿ ಸಂಭಾವನೆ ವಿವಾದ: ವಿವರಿಸಿದ ನಟಿ ಚೈತ್ರಾ
ಬೆಂಗಳೂರಿನ ಈ ಆಟೋ ಚಾಲಕನಿಗೆ ಆಟೋವೇ ಮನೆ, ಮೆಟ್ರೋ ನಿಲ್ದಾಣವೇ ಆಸರೆ
ಬೆಂಗಳೂರಿನ ಈ ಆಟೋ ಚಾಲಕನಿಗೆ ಆಟೋವೇ ಮನೆ, ಮೆಟ್ರೋ ನಿಲ್ದಾಣವೇ ಆಸರೆ
ಲೋಡ್ ಆಗಿದ್ದ ಬಂದೂಕು ಹಿಡಿದು ಯುವಕರ ಹುಚ್ಚಾಟ! ವಿಡಿಯೋ ವೈರಲ್
ಲೋಡ್ ಆಗಿದ್ದ ಬಂದೂಕು ಹಿಡಿದು ಯುವಕರ ಹುಚ್ಚಾಟ! ವಿಡಿಯೋ ವೈರಲ್
ಇನ್ಫೋಸಿಸ್ ನಾರಾಯಣ ಮೂರ್ತಿ ಹೇಳಿಕೆಗೆ ಹರಿಪ್ರಸಾದ್ ಕೆಂಡಾಮಂಡಲ
ಇನ್ಫೋಸಿಸ್ ನಾರಾಯಣ ಮೂರ್ತಿ ಹೇಳಿಕೆಗೆ ಹರಿಪ್ರಸಾದ್ ಕೆಂಡಾಮಂಡಲ
ಲಾಂಗ್ ವೀಕೆಂಡ್: ಬೆಂಗಳೂರು-ನೆಲಮಂಗಲ ಹೈವೇಯಲ್ಲಿ ಭಾರೀ ಟ್ರಾಫಿಕ್ ಜಾಮ್!
ಲಾಂಗ್ ವೀಕೆಂಡ್: ಬೆಂಗಳೂರು-ನೆಲಮಂಗಲ ಹೈವೇಯಲ್ಲಿ ಭಾರೀ ಟ್ರಾಫಿಕ್ ಜಾಮ್!
ಮಲೆ ಮಹದೇಶ್ವರ ಬೆಟ್ಟದಿಂದ ಬರುತ್ತಿದ್ದ ಬಸ್​​ ಪಲ್ಟಿ: ತಪ್ಪಿದ ಭಾರಿ ಅನಾಹುತ
ಮಲೆ ಮಹದೇಶ್ವರ ಬೆಟ್ಟದಿಂದ ಬರುತ್ತಿದ್ದ ಬಸ್​​ ಪಲ್ಟಿ: ತಪ್ಪಿದ ಭಾರಿ ಅನಾಹುತ