Sign In

By signing in or creating an account, you agree with Associated Broadcasting Company's Terms & Conditions and Privacy Policy.

Asian Games: ಏಷ್ಯನ್ ಗೇಮ್ಸ್​ಗೆ 15 ಸದಸ್ಯರ ಶ್ರೀಲಂಕಾ ತಂಡ ಪ್ರಕಟ

Asian Games: ಚೀನಾದ ಹ್ಯಾಂಗ್‌ಝೌನಲ್ಲಿ ನಡೆಯಲ್ಲಿರುವ 2023 ರ ಏಷ್ಯನ್ ಗೇಮ್ಸ್​ಗೆ ಶ್ರೀಲಂಕಾ ಕ್ರಿಕೆಟ್​ ಮಂಡಳಿ ಶ್ರೀಲಂಕಾ ಎ ತಂಡವನ್ನು ಪ್ರಕಟಿಸಿದೆ. ಈ ಬಹು-ರಾಷ್ಟ್ರೀಯ ಈವೆಂಟ್‌ನಲ್ಲಿ ಪುರುಷರ ಮತ್ತು ಮಹಿಳೆಯರ ಎರಡೂ ತಂಡಗಳು ಸೆಪ್ಟೆಂಬರ್ 23 ರಿಂದ ಅಕ್ಟೋಬರ್ 8 ರವರೆಗೆ ಭಾಗವಹಿಸುತ್ತವೆ.

Asian Games: ಏಷ್ಯನ್ ಗೇಮ್ಸ್​ಗೆ 15 ಸದಸ್ಯರ ಶ್ರೀಲಂಕಾ ತಂಡ ಪ್ರಕಟ
ಶ್ರೀಲಂಕಾ ತಂಡ
Follow us
ಪೃಥ್ವಿಶಂಕರ
|

Updated on:Sep 19, 2023 | 9:52 AM

ಚೀನಾದ ಹ್ಯಾಂಗ್‌ಝೌನಲ್ಲಿ ನಡೆಯಲ್ಲಿರುವ 2023 ರ ಏಷ್ಯನ್ ಗೇಮ್ಸ್​ಗೆ (Asian Games) ಶ್ರೀಲಂಕಾ ಕ್ರಿಕೆಟ್​ ಮಂಡಳಿ ಶ್ರೀಲಂಕಾ (Sri Lanka) ಎ ತಂಡವನ್ನು ಪ್ರಕಟಿಸಿದೆ. ಈ ಬಹು-ರಾಷ್ಟ್ರೀಯ ಈವೆಂಟ್‌ನಲ್ಲಿ ಪುರುಷರ ಮತ್ತು ಮಹಿಳೆಯರ ಎರಡೂ ತಂಡಗಳು ಸೆಪ್ಟೆಂಬರ್ 23 ರಿಂದ ಅಕ್ಟೋಬರ್ 8 ರವರೆಗೆ ಭಾಗವಹಿಸುತ್ತವೆ. ಶ್ರೀಲಂಕಾ ಕ್ರಿಕೆಟ್ ಮಂಡಳಿಯು ಪುರುಷರ ಮತ್ತು ಮಹಿಳೆಯರ ತಂಡಗಳಲ್ಲಿ ತಲಾ 15 ಆಟಗಾರರನ್ನು ಆಯ್ಕೆ ಮಾಡಿದ್ದು, ಈ ಬಗ್ಗೆ ಟ್ವೀಟ್ ಮಾಡುವ ಮೂಲಕ ಮಾಹಿತಿ ನೀಡಿದೆ. ಪುರುಷರ ತಂಡದ ನಾಯಕತ್ವವನ್ನು ಸಹನ್ ಆರ್ಚಿಗೆ (Sahan Arachchige) ವಹಿಸಲಿದ್ದು, ಚಾಮರಿ ಅಟಾಪಟು ಮಹಿಳಾ ತಂಡದ ನಾಯತ್ವವಹಿಸಿಕೊಳ್ಳಲಿದ್ದಾರೆ.

ಇನ್ನೇನು ಕೆಲವೇ ದಿನಗಳಲ್ಲಿ ಏಕದಿನ ವಿಶ್ವಕಪ್ ಆರಂಭವಾಗುತ್ತಿರುವ ಕಾರಣ ಈ ಕ್ರೀಡಾಕೂಟಕ್ಕೆ ಪಾಕಿಸ್ತಾನ, ಭಾರತ ಮತ್ತು ಈಗ ಶ್ರೀಲಂಕಾದಂತಹ ತಂಡಗಳು ತಮ್ಮ ಎರಡನೇ ಶ್ರೇಣಿಯ ತಂಡಗಳನ್ನು ಕಳುಹಿಸಲು ನಿರ್ಧರಿಸಿವೆ. ಹೀಗಾಗಿ ಈ ಮೂರು ದೇಶಗಳ ಪುರುಷರ ತಂಡಗಳಲ್ಲಿ ಪ್ರಮುಖ ಆಟಗಾರರು ಕಾಣಿಸಿಕೊಳ್ಳುತ್ತಿಲ್ಲ.

Asian Games: 67 ವರ್ಷ, 32 ಕ್ರೀಡೆ; ಏಷ್ಯನ್ ಸಮರದಲ್ಲಿ ಭಾರತ ಎಷ್ಟು ಪದಕ ಗೆದ್ದಿದೆ ಗೊತ್ತಾ?

ಉಭಯ ತಂಡಗಳು

ಏಷ್ಯನ್ ಗೇಮ್ಸ್ ಪುರುಷರ ಶ್ರೀಲಂಕಾ ಕ್ರಿಕೆಟ್ ತಂಡ: ಸಹನ್ ಆರ್ಚಿಗೆ (ಕ್ಯಾಪ್ಟನ್), ಲಸಿತ್ ಕ್ರಾಸ್ಪುಲ್ಲೆ, ಶೆವೊನ್ ಡೇನಿಯಲ್, ಅಶೇನ್ ಬಂಡಾರ, ಅಹಾನ್ ವಿಕ್ರಮಸಿಂಘೆ, ಲಹಿರು ಉದಾರ (ವಿಕೆಟ್ ಕೀಪರ್), ರವಿಂದು ಫೆರ್ನಾಂಡೋ, ರನಿತಾ ಲಿಯಾನರಾಚ್ಚಿ, ನುವಾನಿಡು ಫೆರ್ನಾಂಡೋ, ಸಚಿತ ಜಯತಿಲಕ, ವಿಜಯಕಾಂತ್ ವ್ಯಾಸಕಾಂತ್, ನಿಮೇಶ್ ವಿಮುಕ್ತಿ, ಲಹಿರು ಸಮರಕೋನ್, ನುವಾನ್ ತುಷಾರ, ಇಸಿತಾ ವಿಜೆಸುಂದರ.

ಏಷ್ಯನ್ ಕ್ರೀಡಾಕೂಟಕ್ಕಾಗಿ ಮಹಿಳಾ ಶ್ರೀಲಂಕಾ ಕ್ರಿಕೆಟ್ ತಂಡ: ಚಾಮರಿ ಅಟಾಪಟು (ನಾಯಕ), ಹರ್ಷಿತಾ ಸಮರವಿಕ್ರಮ, ವಿಶ್ಮಿ ಗುಣರತ್ನೆ, ನೀಲಾಕ್ಷಿ ಡಿ ಸಿಲ್ವಾ, ಕವಿಶಾ ದಿಲ್ಹಾರಿ, ಇಮೇಶಾ ದುಲಾನಿ, ಅನುಷ್ಕಾ ಸಂಜೀವನಿ, ಓಷದಿ ರಣಸಿಂಘೆ, ಸುಗಂಧಿಕಾ ಕುಮಾರಿ, ಇನೋಕಾ ರಣವೀರ, ಉದೇಶಿಕಾ ಪ್ರಬೋಧನಿ, ಹಾಸಿನಿ ಕುಶಿನಿ ನುರಂಗಾನನ್, ಹಾಸಿನಿ ನುರಂಗಾನನ್.

ಇನ್ನಷ್ಟು ಕ್ರೀಡಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 9:49 am, Tue, 19 September 23

ಬೀದರ್ ಮತ್ತು ಕಲಬುರಗಿ ದರೋಡೆ ಪ್ರಕರಣಗಳ ನಡುವೆ ಲಿಂಕ್ ಇರೋ ಸಾಧ್ಯತೆ
ಬೀದರ್ ಮತ್ತು ಕಲಬುರಗಿ ದರೋಡೆ ಪ್ರಕರಣಗಳ ನಡುವೆ ಲಿಂಕ್ ಇರೋ ಸಾಧ್ಯತೆ
ಸಮಾಜ ಸ್ವಾಮೀಜಿಯನ್ನು ಕಡೆಗಣಿಸಿಲಾರಂಭಿಸಿದರೆ ಅಚ್ಚರಿಯಿಲ್ಲ: ವಿಜುಗೌಡ
ಸಮಾಜ ಸ್ವಾಮೀಜಿಯನ್ನು ಕಡೆಗಣಿಸಿಲಾರಂಭಿಸಿದರೆ ಅಚ್ಚರಿಯಿಲ್ಲ: ವಿಜುಗೌಡ
ಅಧಿವೇಶನದ ಬಗ್ಗೆ ಬೆಂಗಳೂರಲ್ಲಿ ಬ್ರೀಫ್ ಮಾಡಿದ್ದ ಮಲ್ಲಿಕಾರ್ಜುನ ಖರ್ಗೆ
ಅಧಿವೇಶನದ ಬಗ್ಗೆ ಬೆಂಗಳೂರಲ್ಲಿ ಬ್ರೀಫ್ ಮಾಡಿದ್ದ ಮಲ್ಲಿಕಾರ್ಜುನ ಖರ್ಗೆ
ದಾಳಿಗೆ ಬಂದ ಚಿರತೆಯಿಂದ ಬಾಲಕನನ್ನು ರಕ್ಷಿಸಿದ ಶ್ವಾನಗಳು
ದಾಳಿಗೆ ಬಂದ ಚಿರತೆಯಿಂದ ಬಾಲಕನನ್ನು ರಕ್ಷಿಸಿದ ಶ್ವಾನಗಳು
ಕೊಕ್ಕನೂರ ಆಂಜನೇಯ ಉತ್ಸವದಲ್ಲಿ ಗಮನ ಸೆಳೆದ ಗರಿ ಗರಿ ನೋಟಿನ‌ ಪಲ್ಲಕ್ಕಿ
ಕೊಕ್ಕನೂರ ಆಂಜನೇಯ ಉತ್ಸವದಲ್ಲಿ ಗಮನ ಸೆಳೆದ ಗರಿ ಗರಿ ನೋಟಿನ‌ ಪಲ್ಲಕ್ಕಿ
ರಥಗಳ ಮೇಲೆ ಬಾಳೆಹಣ್ಣು ಎಸೆದು ಹರಕೆ ತೀರಿಸಿಕೊಂಡ ಭಕ್ತರು
ರಥಗಳ ಮೇಲೆ ಬಾಳೆಹಣ್ಣು ಎಸೆದು ಹರಕೆ ತೀರಿಸಿಕೊಂಡ ಭಕ್ತರು
ಬೆಟ್ಟಿಂಗ್ ಆ್ಯಪ್ ಪ್ರಮೋಷನ್​ಗೆ ಇನ್​ಫ್ಲುಯೆನ್ಸರ್​ಗಳು ಎಷ್ಟು ಪಡೀತಾರೆ?
ಬೆಟ್ಟಿಂಗ್ ಆ್ಯಪ್ ಪ್ರಮೋಷನ್​ಗೆ ಇನ್​ಫ್ಲುಯೆನ್ಸರ್​ಗಳು ಎಷ್ಟು ಪಡೀತಾರೆ?
ಶವ ಸಂಸ್ಕಾರದ ಸಮಯದಲ್ಲಿ ಮಾಡಿದ ಸಹಾಯ ಹೇಗೆ ಫಲ ಕೊಡುತ್ತೆ?
ಶವ ಸಂಸ್ಕಾರದ ಸಮಯದಲ್ಲಿ ಮಾಡಿದ ಸಹಾಯ ಹೇಗೆ ಫಲ ಕೊಡುತ್ತೆ?
ರವಿ ಮೀನ ರಾಶಿಯಲ್ಲಿ, ಚಂದ್ರ ಸಿಂಹ ರಾಶಿಯಲ್ಲಿ ಸಂಚಾರ
ರವಿ ಮೀನ ರಾಶಿಯಲ್ಲಿ, ಚಂದ್ರ ಸಿಂಹ ರಾಶಿಯಲ್ಲಿ ಸಂಚಾರ
‘ಇಂಟರ್​ವಲ್​’ ಸಿನಿಮಾ ಗೆದ್ದಿದ್ದು ಹೇಗೆ? 25 ಡೇಸ್ ಸಂಭ್ರಮದಲ್ಲಿ ಚಿತ್ರತಂಡ
‘ಇಂಟರ್​ವಲ್​’ ಸಿನಿಮಾ ಗೆದ್ದಿದ್ದು ಹೇಗೆ? 25 ಡೇಸ್ ಸಂಭ್ರಮದಲ್ಲಿ ಚಿತ್ರತಂಡ