AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭಾರತದ ಬೌಲಿಂಗ್ ಬಿರುಗಾಳಿಗೆ ಬಾಂಗ್ಲಾ ತತ್ತರ: ರುತುರಾಜ್ ಪಡೆಗೆ 97 ರನ್ಸ್ ಟಾರ್ಗೆಟ್

Asian Games Mens T20I 2023: India vs Bangladesh Semi Final 1: ಏಷ್ಯನ್ ಗೇಮ್ಸ್ ಪುರುಷರ ಮೊದಲ ಟಿ20 ಸೆಮಿಫೈನಲ್ ಪಂದ್ಯದಲ್ಲಿ ಟಾಸ್ ಗೆದ್ದ ಟೀಮ್ ಇಂಡಿಯಾ ನಾಯಕ ರುತುರಾಜ್ ಬೌಲಿಂಗ್ ಆಯ್ಕೆ ಮಾಡಿಕೊಂಡರು. ಅದರಂತೆ ಬ್ಯಾಟಿಂಗ್​ಗೆ ಇಳಿದ ಬಾಂಗ್ಲಾ 50 ರನ್​ಗು ಮೊದಲೇ 5 ವಿಕೆಟ್ ಕಳೆದುಕೊಂಡಿತು. ಟೀಮ್ ಇಂಡಿಯಾ ಬೌಲಿಂಗ್ ದಾಳಿಗೆ ತತ್ತರಿಸಿ ಕೇವಲ 96 ರನ್ಸ್ ಗಳಿಸಿದೆ.

ಭಾರತದ ಬೌಲಿಂಗ್ ಬಿರುಗಾಳಿಗೆ ಬಾಂಗ್ಲಾ ತತ್ತರ: ರುತುರಾಜ್ ಪಡೆಗೆ 97 ರನ್ಸ್ ಟಾರ್ಗೆಟ್
Team India (1)
Vinay Bhat
|

Updated on: Oct 06, 2023 | 8:18 AM

Share

ಚೀನಾದ ಹ್ಯಾಂಗ್‌ಝೌನ ಪಿಂಗ್​ಫೆಂಗ್ ಕ್ಯಾಂಪಸ್ ಕ್ರಿಕೆಟ್ ಫೀಲ್ಡ್​ನಲ್ಲಿ ನಡೆಯುತ್ತಿರುವ ಏಷ್ಯನ್ ಗೇಮ್ಸ್ (Asian Games 2023) ಪುರುಷರ ಮೊದಲ ಟಿ20 ಸೆಮಿಫೈನಲ್ ಪಂದ್ಯದಲ್ಲಿ ರುತುರಾಜ್ ಗಾಯಕ್ವಾಡ್ ನಾಯಕತ್ವದ ಭಾರತ ತಂಡ ಸೈಫ್ ಹಸನ್ ನೇತೃತ್ವದ ಬಾಂಗ್ಲಾದೇಶ ತಂಡವನ್ನು ಎದುರಿಸುತ್ತಿದೆ. ಈಗಾಗಲೇ ಮೊದಲು ಬ್ಯಾಟಿಂಗ್ ಮಾಡಿರುವ ಬಾಂಗ್ಲಾ ಪಡೆ ಟೀಮ್ ಇಂಡಿಯಾ ಬೌಲಿಂಗ್ ದಾಳಿಗೆ ತತ್ತರಿಸಿ ಕೇವಲ 96 ರನ್ಸ್ ಗಳಿಸಿದೆ.

ಟಾಸ್ ಗೆದ್ದ ಟೀಮ್ ಇಂಡಿಯಾ ನಾಯಕ ರುತುರಾಜ್ ಬೌಲಿಂಗ್ ಆಯ್ಕೆ ಮಾಡಿಕೊಂಡರು. ಅದರಂತೆ ಬ್ಯಾಟಿಂಗ್​ಗೆ ಇಳಿದ ಬಾಂಗ್ಲಾ 50 ರನ್​ಗು ಮೊದಲೇ 5 ವಿಕೆಟ್ ಕಳೆದುಕೊಂಡಿತು. ಮೊಹಮ್ಮದುಲ್ ಹಸನ್ 5, ನಾಯಕ ಸೈಫ್ ಹಸನ್ 1 ರನ್ ಗಳಿಸಿದರೆ ಜಾಕಿರ್ ಹಸನ್ ಸೊನ್ನೆ ಸುತ್ತಿದರು. ಪರ್ವೇಜ್ ಹೊಸೈನ್ ಎಮನ್ 23 ರನ್​ಗಳ ಕೊಡುಗೆ ನೀಡಿದರು. ಜೇಕರ್ ಅಲಿ 14 ರನ್ ಗಳಿಸಿದರು. ಉಳಿದ ಬ್ಯಾಟರ್​ಗಳೆಲ್ಲ ಬಂದಷ್ಟೆ ವೇಗದಲ್ಲಿ ಪೆವಿಲಿಯನ್ ಸೇರಿಕೊಂಡರು. ಬಾಂಗ್ಲಾ 20 ಓವರ್​ಗಳಲ್ಲಿ 9 ವಿಕೆಟ್ ನಷ್ಟಕ್ಕೆ 96 ರನ್​ಗಳಿಸಿತಷ್ಟೆ. ಭಾರತ ಪರ ಸಾಯಿ ಕಿಶೋರ್ 3 ವಿಕೆಟ್ ಕಿತ್ತರೆ, ವಾಷಿಂಗ್ಟನ್ ಸುಂದರ್ 2 ವಿಕೆಟ್ ಪಡೆದರು.

ಇದನ್ನೂ ಓದಿ
Image
ಟೀಮ್ ಇಂಡಿಯಾ ಟ್ರೈನಿಂಗ್ ಸೆಷನ್​ನಿಂದ ಬಯಲಾಯಿತು ದೊಡ್ಡ ಸುದ್ದಿ
Image
ವಿಶ್ವಕಪ್​ನಲ್ಲಿಂದು ಪಾಕಿಸ್ತಾನ-ನೆದರ್ಲೆಂಡ್ಸ್ ಮುಖಾಮುಖಿ
Image
ಏಷ್ಯನ್ ಗೇಮ್ಸ್ ಸೆಮಿ ಫೈನಲ್: ಟಾಸ್ ಗೆದ್ದ ಭಾರತ ಬೌಲಿಂಗ್ ಆಯ್ಕೆ
Image
ಇಂಗ್ಲೆಂಡ್ ವಿರುದ್ಧ ಭರ್ಜರಿ ಸೆಂಚುರಿ ಸಿಡಿಸಿ ದಾಖಲೆ ಬರೆದ ಕನ್ನಡಿಗ..!

ಒಂದೇ ಓವರ್​ನಲ್ಲಿ ಎರಡು ವಿಕೆಟ್ ಪಡೆದ ವಾಷಿಂಗ್ಟನ್ ಸುಂದರ್ ವಿಡಿಯೋ:

ಇಂದಿನ ಪಂದ್ಯಕ್ಕೆ ಟೀಮ್ ಇಂಡಿಯಾದಲ್ಲಿ ಒಂದು ಬದಲಾವಣೆ ಮಾಡಲಾಗಿದೆ. ಆವೇಶ್ ಖಾನ್ ಬದಲು ಶಹ್ಬಾಜ್ ಅಹ್ಮದ್ ಸ್ಥಾನ ಪಡೆದುಕೊಂಡಿದ್ದಾರೆ. ಈ ಮೂಲಕ ಶಹ್ಬಾಜ್ ಅಂತರರಾಷ್ಟ್ರೀಯ ಟಿ20 ಕ್ರಿಕೆಟ್​ಗೆ ಪದಾರ್ಪಣೆ ಮಾಡಿದ್ದಾರೆ. ಉಳಿದಂತೆ ಓಪನರ್​ಗಳಾಗಿ ರುತುರಾಜ್ ಮತ್ತು ಯಶಸ್ವಿ ಜೈಸ್ವಾಲ್ ಇದ್ದರೆ ನಂತರದಲ್ಲಿ ತಿಲಕ್ ವರ್ಮಾ, ಜಿತೇಶ್ ಶರ್ಮಾ, ರಿಂಕು ಸಿಂಗ್ ಇದ್ದಾರೆ. ಆಲ್ರೌಂಡರ್​ಗಳಾಗಿ ಶಿವಂ ದುಬೆ ಹಾಗೂ ವಾಷಿಂಗ್ಟನ್ ಸುಂದರ್ ಕಾಣಿಸಿಕೊಂಡಿದ್ದಾರೆ. ಬಿಷ್ಟೋಯಿ, ಸಾಯಿ ಕಿಶೋರ್ ಹಾಗೂ ಅರ್ಶ್​ದೀಪ್ ಸಿಂಗ್ ಪ್ರಮುಖ ಬೌಲರ್​ಗಳಾಗಿದ್ದಾರೆ.

ಶಾಹೀನ್ ಅಫ್ರಿದಿ ಅನ್​ ಫಿಟ್​: ಪಾಕ್ ತಂಡಕ್ಕೆ ಹೊಸ ಚಿಂತೆ ಶುರು..!

ಇಂದಿನ ಪಂದ್ಯದಲ್ಲಿ ಗೆದ್ದ ತಂಡ ನೇರವಾಗಿ ಫೈನಲ್​ಗೆ ಪ್ರವೇಶ ಪಡೆಯಲಿದೆ. ಇದರ ಮೂಲಕ ಒಂದು ಪದಕ ಖಚಿತ ಪಡಿಸಿಕೊಳ್ಳುತ್ತದೆ. ಸೋತ ತಂಡ ಸೆಮಿ ಫೈನಲ್-2 ನಲ್ಲಿ ಸೋತ ತಂಡದ ವಿರುದ್ಧ ಕಂಚಿನ ಪದಕಕ್ಕಾಗಿ ಹೋರಾಟ ನಡೆಸಲಿದೆ.

ಭಾರತ ಪ್ಲೇಯಿಂಗ್ ಇಲೆವೆನ್: ರುತುರಾಜ್ ಗಾಯಕ್ವಾಡ್ (ನಾಯಕ) , ಯಶಸ್ವಿ ಜೈಸ್ವಾಲ್ , ತಿಲಕ್ ವರ್ಮಾ , ಜಿತೇಶ್ ಶರ್ಮಾ ( ವಿಕೆಟ್ ಕೀಪರ್ ) , ರಿಂಕು ಸಿಂಗ್ , ಶಿವಂ ದುಬೆ , ವಾಷಿಂಗ್ಟನ್ ಸುಂದರ್ , ಶಜ್ಬಾಜ್ ಅಹ್ಮದ್, ರವಿಶ್ರೀನಿವಾಸನ್ ಸಾಯಿ ಕಿಶೋರ್ , ರವಿ ಬಿಷ್ಣೋಯ್ , ಅರ್ಷ್​ದೀಪ್ ಸಿಂಗ್.

ಬಾಂಗ್ಲಾದೇಶ ಪ್ಲೇಯಿಂಗ್ XI: ಪರ್ವೇಜ್ ಹೊಸೈನ್ ಎಮನ್, ಮೊಹಮ್ಮದುಲ್ ಹಸನ್ ಜಾಯ್, ಜಾಕಿರ್ ಹಸನ್, ಸೈಫ್ ಹಸನ್ (ನಾಯಕ), ಅಫೀಫ್ ಹೊಸೈನ್, ಶಹದತ್ ಹೊಸೈನ್, ಜೇಕರ್ ಅಲಿ (ವಿಕೆಟ್ ಕೀಪರ್), ರಾಕಿಬುಲ್ ಹಸನ್, ಹಸನ್ ಮುರಾದ್, ಮೃತುಂಜಯ್ ಚೌಧುರಿ, ರಿಪಾನ್ ಮೊಂಡೋಲ್.

ಇನ್ನಷ್ಟು ಕ್ರೀಡಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಚಿಕ್ಕಮಗಳೂರಲ್ಲಿ ವರುಣನ ಅಬ್ಬರ: ಅಕಾಲಿಕ ಮಳೆಗೆ ಕೊಚ್ಚಿಹೋದ ಕಾಫಿ
ಚಿಕ್ಕಮಗಳೂರಲ್ಲಿ ವರುಣನ ಅಬ್ಬರ: ಅಕಾಲಿಕ ಮಳೆಗೆ ಕೊಚ್ಚಿಹೋದ ಕಾಫಿ
ಕಾಂಗ್ರೆಸ್​​​ನಲ್ಲಿ ಮಹತ್ವದ ಬೆಳವಣಿಗೆ: ಡಿಕೆಶಿಗೆ ರಾಹುಲ್ ಮಹತ್ವದ ಸಂದೇಶ
ಕಾಂಗ್ರೆಸ್​​​ನಲ್ಲಿ ಮಹತ್ವದ ಬೆಳವಣಿಗೆ: ಡಿಕೆಶಿಗೆ ರಾಹುಲ್ ಮಹತ್ವದ ಸಂದೇಶ
ಡಿಕೆಶಿ, ಸಿದ್ದರಾಮಯ್ಯ ಜತೆ ಪ್ರತ್ಯೇಕವಾಗ ರಾಹುಲ್ ರಹಸ್ಯ ಮಾತು
ಡಿಕೆಶಿ, ಸಿದ್ದರಾಮಯ್ಯ ಜತೆ ಪ್ರತ್ಯೇಕವಾಗ ರಾಹುಲ್ ರಹಸ್ಯ ಮಾತು
ಕಾರು ಅಪಘಾತಕ್ಕೆ 1 ವರ್ಷ: ಅಂದಿನ ಕಹಿ ಘಟನೆಯನ್ನು ಮೆಲುಕು ಹಾಕಿದ ಸಚಿವೆ
ಕಾರು ಅಪಘಾತಕ್ಕೆ 1 ವರ್ಷ: ಅಂದಿನ ಕಹಿ ಘಟನೆಯನ್ನು ಮೆಲುಕು ಹಾಕಿದ ಸಚಿವೆ
ಕೇರಳದಲ್ಲಿ ಕರ್ನಾಟಕ ಅಯ್ಯಪ್ಪ ಮಾಲಾಧಾರಿಗಳ ವಾಹನಗಳಿಗೆ ನಿರ್ಬಂಧ
ಕೇರಳದಲ್ಲಿ ಕರ್ನಾಟಕ ಅಯ್ಯಪ್ಪ ಮಾಲಾಧಾರಿಗಳ ವಾಹನಗಳಿಗೆ ನಿರ್ಬಂಧ
ರಾಹುಲ್ ಗಾಂಧಿ ಭೇಟಿ ಬಳಿಕ ಸಿದ್ರಾಮಯ್ಯ ಕೊಟ್ಟ ಸುಳಿವು ಏನು?
ರಾಹುಲ್ ಗಾಂಧಿ ಭೇಟಿ ಬಳಿಕ ಸಿದ್ರಾಮಯ್ಯ ಕೊಟ್ಟ ಸುಳಿವು ಏನು?
24 ತಲೆಗಳ 6 ತಲೆಗೆ ಇಳಿಸಿದ್ದೀನಿ, ನಾನು ಒನ್ ಮ್ಯಾನ್ ಆರ್ಮಿ: ಧ್ರುವಂತ್
24 ತಲೆಗಳ 6 ತಲೆಗೆ ಇಳಿಸಿದ್ದೀನಿ, ನಾನು ಒನ್ ಮ್ಯಾನ್ ಆರ್ಮಿ: ಧ್ರುವಂತ್
ಡಾನ್​​ ರೀತಿ ಗನ್​​ ಹಿಡಿದು ಆವಾಜ್​​ ಹಾಕಿದ್ದಾತ ತಂದಿದ್ದು ನಕಲಿ ಬಂದೂಕು!
ಡಾನ್​​ ರೀತಿ ಗನ್​​ ಹಿಡಿದು ಆವಾಜ್​​ ಹಾಕಿದ್ದಾತ ತಂದಿದ್ದು ನಕಲಿ ಬಂದೂಕು!
ಗಿಲ್ಲಿ ನಟ ಬಡವನಾ ಅಥವಾ ಶ್ರೀಮಂತನಾ? ಅಸಲಿ ವಿಷಯ ತೆರೆದಿಟ್ಟ ಸಂಬಂಧಿಕರು
ಗಿಲ್ಲಿ ನಟ ಬಡವನಾ ಅಥವಾ ಶ್ರೀಮಂತನಾ? ಅಸಲಿ ವಿಷಯ ತೆರೆದಿಟ್ಟ ಸಂಬಂಧಿಕರು
ಸಿಕ್ಕ ನಿಧಿಯನ್ನು ಸರ್ಕಾರಕ್ಕೆ ನೀಡಿದ ಕುಟುಂಬಕ್ಕೆ ಬಂಪರ್ ಗಿಫ್ಟ್
ಸಿಕ್ಕ ನಿಧಿಯನ್ನು ಸರ್ಕಾರಕ್ಕೆ ನೀಡಿದ ಕುಟುಂಬಕ್ಕೆ ಬಂಪರ್ ಗಿಫ್ಟ್