AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

AUS vs AFG: ಅಫ್ಘಾನ್ ಮಣಿಸಿದ ಆಸೀಸ್; ಹಾಲಿ ಚಾಂಪಿಯನ್​ಗಳ ಸೇಮಿಸ್ ಹಾದಿ ಇನ್ನೂ ಜೀವಂತ! ಆದರೆ?

T20 World Cup 2022: ಟಿ20 ವಿಶ್ವಕಪ್​ನಲ್ಲಿ ಇಂದು ನಡೆದ ಆಸ್ಟ್ರೇಲಿಯಾ ಮತ್ತು ಅಫ್ಘಾನಿಸ್ತಾನ ನಡುವಿನ ಪಂದ್ಯದಲ್ಲಿ ಆಸ್ಟ್ರೇಲಿಯಾ ತಂಡ ಕೊನೆಯ ಓವರ್​ನಲ್ಲಿ ಗೆಲುವು ಸಾಧಿಸುವಲ್ಲಿ ಯಶಸ್ವಿಯಾಗಿದೆ.

AUS vs AFG: ಅಫ್ಘಾನ್ ಮಣಿಸಿದ ಆಸೀಸ್; ಹಾಲಿ ಚಾಂಪಿಯನ್​ಗಳ ಸೇಮಿಸ್ ಹಾದಿ ಇನ್ನೂ ಜೀವಂತ! ಆದರೆ?
Aus Vs Afg
TV9 Web
| Edited By: |

Updated on:Nov 04, 2022 | 5:49 PM

Share

ಟಿ20 ವಿಶ್ವಕಪ್​ನಲ್ಲಿ (T20 World Cup) ಇಂದು ನಡೆದ ಆಸ್ಟ್ರೇಲಿಯಾ ಮತ್ತು ಅಫ್ಘಾನಿಸ್ತಾನ (Australia and Afghanistan) ನಡುವಿನ ಪಂದ್ಯದಲ್ಲಿ ಆಸ್ಟ್ರೇಲಿಯಾ ತಂಡ ಕೊನೆಯ ಓವರ್​ನಲ್ಲಿ ಗೆಲುವು ಸಾಧಿಸುವಲ್ಲಿ ಯಶಸ್ವಿಯಾಗಿದೆ. ಈ ಮೂಲಕ ವಿಶ್ವಕಪ್​ನಲ್ಲಿ ಆಡಿರುವ 5 ಪಂದ್ಯಗಳಲ್ಲಿ 3 ರಲ್ಲಿ ಗೆದ್ದು ಒಂದರಲ್ಲಿ ಸೋಲನುಭವಿಸಿರುವ ಆತಿಥೇಯ ತಂಡ 7 ಅಂಕಗಳೊಂದಿಗೆ ಪಾಯಿಂಟ್​ ಪಟ್ಟಿಯಲ್ಲಿ ಎರಡನೇ ಸ್ಥಾನಕ್ಕೇರಿದೆ. ಇದರೊಂದಿಗೆ ಹಾಲಿ ಚಾಂಪಿಯನ್​ಗಳು ತಮ್ಮ ಸೆಮಿಫೈನಲ್​ ಕನಸನ್ನು ಇನ್ನು ಜೀವಂತವಾಗಿರಿಸಿಕೊಂಡಿದ್ದಾರೆ. ಆದರೆ ಮುಂದಿನ ಪಂದ್ಯದಲ್ಲಿ ಶ್ರೀಲಂಕಾ ವಿರುದ್ಧ ಇಂಗ್ಲೆಂಡ್ ಸೋತರಷ್ಟೇ ಕಾಂಗರೂಗಳು ಸುಗಮವಾಗಿ ಸೇಮಿಸ್​ಗೆ ಎಂಟ್ರಿಕೊಡಲಿದ್ದಾರೆ. ಒಂದು ವೇಳೆ ಇಂಗ್ಲೆಂಡ್ ಈ ಪಂದ್ಯದಲ್ಲಿ ಗೆಲುವು ಸಾಧಿಸಿದರೆ ಇಂಗ್ಲೆಂಡ್​ಗೆ ಸೆಮಿಫೈನಲ್ ಟಿಕೆಟ್ ಖಚಿತವಾಗಲಿದೆ.

ಈ ಪಂದ್ಯದಲ್ಲಿ ಗೆಲುವು ಸಾಧಿಸಿದರಾದರೂ ವಿಶ್ವ ಚಾಂಪಿಯನ್​ಗಳಿಗೆ ಟಿ20 ವಿಶ್ವಕಪ್ ಅವರ ಸ್ವಂತ ತವರಿನಲ್ಲಿಯೇ ಪಂದ್ಯದಿಂದ ಪಂದ್ಯದ ಸವಾಲಾಗಿದೆ ಎಂಬುದು ಸಾಬೀತಾಗಿದೆ. ಅಲ್ಪ ಅಂತರದಲ್ಲಿ ಗೆದ್ದಿರುವ ಆಸೀಸ್​, ಸೆಮಿಫೈನಲ್‌ಗೆ ತಲುಪುವ ಸಾಧ್ಯತೆಗಳು ಕೇವಲ ನಿರೀಕ್ಷೆಯ ಮೇಲಿವೆ. ಆಸ್ಟ್ರೇಲಿಯ ವಿರುದ್ಧ ಚೊಚ್ಚಲ ಟಿ20 ಪಂದ್ಯವನ್ನಾಡುತ್ತಿರುವ ಅಫ್ಘಾನಿಸ್ತಾನ ತಂಡ ಕೊನೆಯ ಎಸೆತದವರೆಗೂ ಕಠಿಣ ಹೋರಾಟ ನೀಡಿ ಕೇವಲ 4 ರನ್‌ಗಳಿಂದ ಸೋಲನುಭವಿಸಿತು.

ಮ್ಯಾಕ್ಸ್​ವೆಲ್ ಅರ್ಧಶತಕ

ಅಡಿಲೇಡ್‌ನಲ್ಲಿ ನಡೆದ ಈ ಪಂದ್ಯದಲ್ಲಿ ಆಸ್ಟ್ರೇಲಿಯ ತಂಡ ನಾಯಕ ಆ್ಯರೋನ್ ಫಿಂಚ್ ಇಲ್ಲದೆ ಕಣಕ್ಕಿಳಿದಿತ್ತು. ಅಂತಹ ಪರಿಸ್ಥಿತಿಯಲ್ಲಿ, ತಂಡವು ಕೆಲವು ಬದಲಾವಣೆಗಳನ್ನು ಮಾಡಿತ್ತಾದರೂ ಈ ತಂತ್ರ ಯಶಸ್ವಿಯಾಗಲಿಲ್ಲ. ಟಾಸ್ ಗೆದ್ದು ಮೊದಲು ಬೌಲಿಂಗ್ ಮಾಡಿದ ಅಫ್ಘಾನಿಸ್ತಾನ, ಆಸ್ಟ್ರೇಲಿಯಾವನ್ನು 168 ರನ್‌ಗಳಿಗೆ ಕಟ್ಟಿಹಾಕುವಲ್ಲಿ ಯಶಸ್ವಿಯಾಯಿತು. ಆಸೀಸ್ ಪರ ಮ್ಯಾಕ್ಸ್​ವೆಲ್ ಅಜೇಯ ಅರ್ಧಶತಕ ಸಿಡಿಸಿದರೆ, ಮಾರ್ಷ್​ 45 ರನ್​ಗಳ ಕೊಡುಗೆ ನೀಡಿದರು. ಉಳಿದಂತೆ ವಾರ್ನರ್ 25 ರನ್ ಬಾರಿಸಿದರೆ, ಸ್ಟೋಯ್ನಿಸ್ ಕೂಡ 25 ರನ್​ಗಳ ಅವಶ್ಯಕ ಇನ್ನಿಂಗ್ಸ್ ಆಡಿದರು. ಇದಾದ ಬಳಿಕ ಬಲಿಷ್ಠ ಬ್ಯಾಟಿಂಗ್ ಮಾಡಿದ ಅಫ್ಘಾನಿಸ್ತಾನ ತಂಡ, ಕೆಲ ಸಮಯ ಕಾಂಗರೂಗಳನ್ನು ಚಿಂತೆಗೀಡು ಮಾಡುವುದರಲ್ಲಿ ಯಶಸ್ವಿಯಾಗಿತ್ತು.

ಇದನ್ನೂ ಓದಿ: Virat Kohli: ಸಿಡಿಲಬ್ಬರದ ಅರ್ಧಶತಕ ಸಿಡಿಸಿದ ಬಾಂಗ್ಲಾ ಆಟಗಾರನಿ​ಗೆ ವಿಶೇಷ ಉಡುಗೊರೆ ನೀಡಿದ ಕೊಹ್ಲಿ

ಅಫ್ಘಾನ್ ಬ್ಯಾಟ್ಸ್‌ಮನ್‌ಗಳ ಅಬ್ಬರ

ರಹಮಾನುಲ್ಲಾ ಗುರ್ಬಾಜ್ ಅವರ ಅಬ್ಬರದ ಆರಂಭಿಕ ಬಲದಿಂದ ಅಫ್ಘಾನಿಸ್ತಾನ ಆರಂಭದಲ್ಲಿ 2 ವಿಕೆಟ್ ಕಳೆದುಕೊಂಡರೂ ಆಸ್ಟ್ರೇಲಿಯಾದ ಮೇಲೆ ಒತ್ತಡವನ್ನು ಕಾಯ್ದುಕೊಂಡಿತು. ನಂತರ ಗುಲ್ಬದಿನ್ ನೈಬ್ ಮತ್ತು ಇಬ್ರಾಹಿಂ ಜದ್ರಾನ್ ಅವರ 59 ರನ್‌ಗಳ ಅತ್ಯುತ್ತಮ ಜೊತೆಯಾಟವು ಅಫ್ಘಾನಿಸ್ತಾನಕ್ಕೆ ಅನಿರೀಕ್ಷಿತ ಗೆಲುವಿನ ಭರವಸೆಯನ್ನು ನೀಡಿತು.

ಆದರೆ ಇಲ್ಲಿ ಆಸ್ಟ್ರೇಲಿಯಾ ಒಂದು ಓವರ್‌ನಲ್ಲಿ ಮೂರು ವಿಕೆಟ್‌ಗಳನ್ನು ಬೀಳಿಸುವ ಮೂಲಕ ಪುನರಾಗಮನ ಮಾಡಿತು. ಗ್ಲೆನ್ ಮ್ಯಾಕ್ಸ್‌ವೆಲ್ ಅವರ ನೇರ ಎಸೆತದಲ್ಲಿ ಗುಲ್ಬದಿನ್ ನೈಬ್ ರನ್ ಔಟ್ ಆದರೆ, ಅದೇ ಓವರ್‌ನಲ್ಲಿ ಸ್ಪಿನ್ನರ್ ಆಡಮ್ ಝಂಪಾ ಮತ್ತೆರಡು ವಿಕೆಟ್ ಪಡೆದರು.

ಸ್ಟಾರ್ ಲೆಗ್ ಸ್ಪಿನ್ನರ್ ರಶೀದ್ ಖಾನ್ ಕೊನೆಯ ಓವರ್‌ಗಳಲ್ಲಿ ಮಿಂಚಿನ ಬ್ಯಾಟಿಂಗ್ ಮಾಡಿ ಕೇವಲ 23 ಎಸೆತಗಳಲ್ಲಿ ಅಜೇಯ 48 ರನ್ ಗಳಿಸಿ ತಂಡವನ್ನು ಗೆಲುವಿನ ಸಮೀಪಕ್ಕೆ ಕೊಂಡೊಯ್ದರು. ಆದರೆ ಕೊನೆಯ ಓವರ್‌ ಎಸೆದ ಮಾರ್ಕಸ್ ಸ್ಟೋನಿಸ್, ರಶೀದ್ ಅಬ್ಬರದ ನಡುವೆಯೂ ಆಸ್ಟ್ರೇಲಿಯಾದ ಮಾನ ಕಾಪಾಡುವಲ್ಲಿ ಯಶಸ್ವಿಯಾದರು.

ಇನ್ನಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 5:20 pm, Fri, 4 November 22

ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ
ಬಿಜೆಪಿ ಕಾರ್ಯಕರ್ತೆ ವಿವಸ್ತ್ರ ಕೇಸ್​: ಸಿಎಂ ವಿರುದ್ಧ ಜೋಶಿ ವಾಗ್ದಾಳಿ
ಬಿಜೆಪಿ ಕಾರ್ಯಕರ್ತೆ ವಿವಸ್ತ್ರ ಕೇಸ್​: ಸಿಎಂ ವಿರುದ್ಧ ಜೋಶಿ ವಾಗ್ದಾಳಿ
ಕೆಪಿಸಿಸಿ ಕಚೇರಿಯಲ್ಲೇ ಮೊಳಗಿತು ‘ಮುಂದಿನ ಸಿಎಂ ಡಿಕೆ ಶಿವಕುಮಾರ್’ ಘೋಷಣೆ
ಕೆಪಿಸಿಸಿ ಕಚೇರಿಯಲ್ಲೇ ಮೊಳಗಿತು ‘ಮುಂದಿನ ಸಿಎಂ ಡಿಕೆ ಶಿವಕುಮಾರ್’ ಘೋಷಣೆ
ಹಳೆ ದ್ವೇಷಕ್ಕೆ ರೌಡಿಶೀಟರ್ ಅಪಹರಿಸಿ ಚಿತ್ರಹಿಂಸೆ: ಬೆರಳು ಕತ್ತರಿಸಿ ವಿಕೃತಿ
ಹಳೆ ದ್ವೇಷಕ್ಕೆ ರೌಡಿಶೀಟರ್ ಅಪಹರಿಸಿ ಚಿತ್ರಹಿಂಸೆ: ಬೆರಳು ಕತ್ತರಿಸಿ ವಿಕೃತಿ
ಸಿಎಂ ಕುರ್ಚಿ ಕದನ: ಇಲ್ಲಿದೆ ರಾಜ್ಯ ರಾಜಕೀಯದ ಬಿಗ್​​ ಅಪ್ಡೇಟ್​!
ಸಿಎಂ ಕುರ್ಚಿ ಕದನ: ಇಲ್ಲಿದೆ ರಾಜ್ಯ ರಾಜಕೀಯದ ಬಿಗ್​​ ಅಪ್ಡೇಟ್​!
ಈ ಸರ್ಕಾರಿ ಬಸ್​​ಗಳಿಗೆ ದೇವರೇ ಗತಿ
ಈ ಸರ್ಕಾರಿ ಬಸ್​​ಗಳಿಗೆ ದೇವರೇ ಗತಿ