AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

AUS vs ZIM: ಆಸ್ಟ್ರೇಲಿಯಾ 141 ರನ್​ಗೆ ಆಲೌಟ್: ಕಾಂಗರೂಗಳ ನಾಡಿನಲ್ಲಿ ಇತಿಹಾಸ ರಚಿಸಿದ ಜಿಂಬಾಬ್ವೆ ತಂಡ

Ryan Burl AUS vs ZIM: ಐತಿಹಾಸಿಕ ಗೆಲುವು ಸಾಧಿಸಬೇಕೆಂದು ಪಣತೊಟ್ಟ ಜಿಂಬಾಬ್ವೆ ನಾಯಕ ರೆಜಿಸ್ ಚಕಬ್ವಾ 72 ಎಸೆತಗಳಲ್ಲಿ ಅಜೇಯ 37 ರನ್ ಬಾರಿಸಿ ತಂಡಕ್ಕೆ ಜಯ ತಂದುಕೊಟ್ಟರು. ಈ ಮೂಲಕ ಜಿಂಬಾಬ್ವೆ ಆಸ್ಟ್ರೇಲಿಯಾ ವಿರುದ್ಧ ಆಸ್ಟ್ರೇಲಿಯಾದಲ್ಲಿ ಮೊಟ್ಟ ಮೊದಲ ಜಯ ಸಾಧಿಸಿದೆ.

AUS vs ZIM: ಆಸ್ಟ್ರೇಲಿಯಾ 141 ರನ್​ಗೆ ಆಲೌಟ್: ಕಾಂಗರೂಗಳ ನಾಡಿನಲ್ಲಿ ಇತಿಹಾಸ ರಚಿಸಿದ ಜಿಂಬಾಬ್ವೆ ತಂಡ
AUS vs ZIM 3rd ODI
TV9 Web
| Edited By: |

Updated on:Sep 03, 2022 | 11:31 AM

Share

ಜಿಂಬಾಬ್ವೆ ಕ್ರಿಕೆಟ್ ತಂಡ ಆಸ್ಟ್ರೇಲಿಯಾ (Australia vs Zimbabwe) ನೆಲದಲ್ಲಿ ಇತಿಹಾಸ ರಚಿಸಿದೆ. ಅಂತಿಮ ತೃತೀಯ ಏಕದಿನ ಪಂದ್ಯದಲ್ಲಿ 3 ವಿಕೆಟ್​ಗಳ ರೋಚಕ ಜಯ ಸಾಧಿಸುವ ಮೂಲಕ ಜಿಂಬಾಬ್ವೆ (Zimbabwe Cricket Team) ಕಾಂಗರೂಗಳ ನಾಡಿನಲ್ಲಿ ಚೊಚ್ಚಲ ಪಂದ್ಯ ಗೆದ್ದ ಸಾಧನೆ ಮಾಡಿದೆ. ಅಷ್ಟೇ ಅಲ್ಲದೆ ಶ್ರೇಷ್ಠ ಪ್ರದರ್ಶನ ತೋರಿದ ಜಿಂಬಾಬ್ವೆ ಆಸ್ಟ್ರೇಲಿಯಾವನ್ನು ಕೇವಲ 141 ರನ್​ಗೆ ಆಲೌಟ್ ಮಾಡುವ ಮೂಲಕ ಪರಾಕ್ರಮ ಮೆರೆಯಿತು. ಕೊನೆಯ ಪಂದ್ಯದಲ್ಲಿ ಜಿಂಬಾಬ್ವೆ ಗೆದ್ದಿದ್ದರೂ, ಮೊದಲ ಎರಡು ಪಂದ್ಯದಲ್ಲಿ ಆ್ಯರೋನ್ ಫಿಂಚ್ (Aaron Finch) ಪಡೆ ಜಯ ಸಾಧಿಸಿದ್ದ ಕಾರಣ 2-1 ಅಂತರದಿಂದ ಆಸೀಸ್ ಸರಣಿ ವಶಪಡಿಸಿಕೊಂಡಿದೆ.

ಮೂರನೇ ಏಕದಿನ ಪಂದ್ಯದಲ್ಲಿ ಟಾಸ್ ಗೆದ್ದ ಜಿಂಬಾಬ್ವೆ ಬೌಲಿಂಗ್ ಆಯ್ಕೆ ಮಾಡಿಕೊಂಡಿತು. ಅದರಂತೆ ಬ್ಯಾಟಿಂಗ್​ಗೆ ಇಳಿದ ಆಸ್ಟ್ರೇಲಿಯಾ ಜಿಂಬಾಬ್ವೆ ಬೌಲಿಂಗ್ ದಾಳಿಗೆ ನಲುಗಿ ಹೋಯಿತು. ಆಸ್ಟ್ರೇಲಿಯಾ 31 ಓವರ್​ಗಳಲ್ಲಿ 141 ರನ್​ಗೆ ಆಲೌಟ್ ಆಯಿತು. ಇದರಲ್ಲಿ ಬಹುಪಾಲು ಡೇವಿಡ್ ವಾರ್ನರ್ ಅವರದ್ದೇ ಆಗಿತ್ತು. 96 ಎಸೆತಗಳಲ್ಲಿ 14 ಫೋರ್, 2 ಸಿಕ್ಸರ್ ಬಾರಿಸಿ ವಾರ್ನರ್ 94 ರನ್ ಸಿಡಿಸಿದರು. ಇವರು ಬಿಟ್ಟರೆ ಗ್ಲೆನ್ ಮ್ಯಾಕ್ಸ್​ವೆಲ್ 19 ರನ್ ಗಳಿಸಿದ್ದೇ ಹೆಚ್ಚು.

ಇದನ್ನೂ ಓದಿ
Image
Team India: ಜಾಲಿ ಮೂಡ್​ನಲ್ಲಿ ಟೀಮ್ ಇಂಡಿಯಾ: ಮಸ್ತ್ ಮಜಾ ವಿಡಿಯೋ ವೈರಲ್
Image
Asia Cup 2022: ಏಷ್ಯಾಕಪ್ ಸೂಪರ್-4 ಹಂತದ ನಿಮಯಗಳೇನು..?
Image
IND vs PAK: ನಾಳೆ ಪಾಕ್ ವಿರುದ್ಧ ರಣ ರೋಚಕ ಕದನ: ಭಾರತದಿಂದ ಭರ್ಜರಿ ಅಭ್ಯಾಸ
Image
SL vs AFG: ಸೂಪರ್ 4 ಹಂತದ ಮೊದಲ ಪಂದ್ಯದಲ್ಲಿಂದು ಶ್ರೀಲಂಕಾ-ಅಫ್ಘಾನಿಸ್ತಾನ ಮುಖಾಮುಖಿ

ಆಸ್ಟ್ರೇಲಿಯಾದ ಇಬ್ಬರು ಬ್ಯಾಟ್ಸ್​ಮನ್​ಗಳಷ್ಟೆ ಎರಡಂಕಿ ರನ್ ಕಲೆಹಾಕಿದರು. ಉಳಿದವರ ಸ್ಕೋರ್ 5 ರನ್​ಗಳ ಮೇಲೆ ಹೋಗಲಿಲ್ಲ. ಫಿಂಚ್ 5, ಸ್ಟೀವ್ ಸ್ಮಿತ್ 1, ಅಲೆಕ್ಸ್ ಕ್ಯಾರಿ 4, ಮಾರ್ಕಸ್ ಸ್ಟಾಯಿನಿಸ್ ಹಾಗೂ ಗ್ರೀನ್ ತಲಾ 3 ರನ್, ಆಸ್ಟನ್ ಅಗರ್ ಹಾಗೂ ಜೋಶ್ ಹ್ಯಾಜ್ಲೆವುಡ್ 0, ಮಿಚೆಲ್ ಸ್ಟಾರ್ಕ್ 2 ಹಾಗೂ ಆ್ಯಡಂ ಜಂಪಾ ಅಜೇಯ 1 ರನ್ ಗಳಿಸಿದರು.

ಜಿಂಬಾಬ್ವೆ ಪರ ಎಲ್ಲರೂ ಅಮೋಘ ಬೌಲಿಂಗ್ ಪ್ರದರ್ಶನ ನೀಡಿದರು. ಇದರಲ್ಲಿ ಮುಖ್ಯವಾಗಿ ರ್ಯಾನ್ ಬರ್ಲ್ ಕೇವಲ 3 ಓವರ್​ಗೆ 10 ನೀಡಿ 5 ವಿಕೆಟ್ ಕಬಳಿಸಿದರು. ಉಳಿದಂತೆ ಬ್ರಾಡ್ ಎವನ್ಸ್ 2 ವಿಕೆಟ್, ನಗರ್ವ, ನ್ಯೂಚಿ, ಸೀಮ್ ವಿಲಿಯ್ಸನ್ ತಲಾ 1 ವಿಕೆಟ್ ಪಡೆದರು.

ಸುಲಭ ಟಾರ್ಗೆಟ್ ಬೆನ್ನಟ್ಟಿದ ಜಿಂಬಾಬ್ವೆ ಕೂಡ ಉತ್ತಮ ಆರಂಭ ಪಡೆದುಕೊಂಡರೂ ಮಧ್ಯಮ ಕ್ರಮಾಂಕದಲ್ಲಿ ದಿಢೀರ್ ಕುಸಿಯಿತು. ತಕುಡ್​ವನಾಶೆ ಕೈತಾನೋ ಹಾಗೂ ತಡಿವಾನಾಶೆ ಮರುಮಣಿ 38 ರನ್​ಗಳ ಜೊತೆಯಾಟ ಆಡಿದರು. ಕೈತಾನೋ 25 ಎಸೆತಗಳಲ್ಲಿ 19 ರನ್​ಗೆ ಔಟಾದರೆ, ತಡಿವಾನಾಶೆ 47 ಎಸೆತಗಳಲ್ಲಿ 35 ರನ್ ಬಾರಿಸಿದರು. ನಂತರ ದಿಢೀರ್ ಕುಸಿತ ಕಂಡು 77 ರನ್​ಗೆ 5 ವಿಕೆಟ್ ಕಳೆದುಕೊಂಡಿತು.

ಆದರೆ, ಐತಿಹಾಸಿಕ ಗೆಲುವು ಸಾಧಿಸಬೇಕೆಂದು ಪಣತೊಟ್ಟ ಜಿಂಬಾಬ್ವೆ ನಾಯಕ ರೆಜಿಸ್ ಚಕಬ್ವಾ 72 ಎಸೆತಗಳಲ್ಲಿ ಅಜೇಯ 37 ರನ್ ಬಾರಿಸಿ ತಂಡಕ್ಕೆ ಜಯ ತಂದುಕೊಟ್ಟರು. ಜಿಂಬಾಬ್ವೆ 39 ಓವರ್​ಗಳಲ್ಲಿ 7 ವಿಕಟ್ ನಷ್ಟಕ್ಕೆ 142 ರನ್ ಬಾರಿಸಿ 3 ವಿಕೆಟ್​ಗಳ ರೋಚಕ ಜಯ ಕಂಡಿತು. ಈ ಮೂಲಕ ಜಿಂಬಾಬ್ವೆ ಆಸ್ಟ್ರೇಲಿಯಾ ವಿರುದ್ಧ ಆಸ್ಟ್ರೇಲಿಯಾದಲ್ಲಿ ಮೊಟ್ಟ ಮೊದಲ ಗೆಲುವು ಸಾಧಿಸಿದೆ.

Published On - 11:31 am, Sat, 3 September 22

ಬ್ಲಿಂಕಿಟ್ ಡೆಲಿವರಿ ಬಾಯ್ ಆದ ಪರಿಣಿತಿ ಚೋಪ್ರಾ ಗಂಡ ರಾಘವ್ ಚಡ್ಡಾ
ಬ್ಲಿಂಕಿಟ್ ಡೆಲಿವರಿ ಬಾಯ್ ಆದ ಪರಿಣಿತಿ ಚೋಪ್ರಾ ಗಂಡ ರಾಘವ್ ಚಡ್ಡಾ
ಟಾಕ್ಸಿಕ್ ಟೀಸರ್ ಟೀಕಿಸಿದವರ ಗೂಗಲ್ ಸರ್ಚ್ ಹಿಸ್ಟರಿ ನೋಡಿ: ವಿನಯ್ ಗೌಡ
ಟಾಕ್ಸಿಕ್ ಟೀಸರ್ ಟೀಕಿಸಿದವರ ಗೂಗಲ್ ಸರ್ಚ್ ಹಿಸ್ಟರಿ ನೋಡಿ: ವಿನಯ್ ಗೌಡ
ಪೊಲೀಸ್ ಠಾಣೆಗೆ ಬೆಂಕಿ ಹಚ್ಚುತ್ತೇನೆ; ಬಜರಂಗದಳದ ವ್ಯಕ್ತಿಯಿಂದ ಬೆದರಿಕೆ
ಪೊಲೀಸ್ ಠಾಣೆಗೆ ಬೆಂಕಿ ಹಚ್ಚುತ್ತೇನೆ; ಬಜರಂಗದಳದ ವ್ಯಕ್ತಿಯಿಂದ ಬೆದರಿಕೆ
ಬಸ್​​ನಲ್ಲಿ 240 ಗ್ರಾಂ ಚಿನ್ನ ಕದ್ದಾಕೆ ಸಿಕ್ಕಿಬಿದ್ದಿದ್ಹೇಗೆ ಗೊತ್ತಾ?
ಬಸ್​​ನಲ್ಲಿ 240 ಗ್ರಾಂ ಚಿನ್ನ ಕದ್ದಾಕೆ ಸಿಕ್ಕಿಬಿದ್ದಿದ್ಹೇಗೆ ಗೊತ್ತಾ?
ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ
ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ