AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರಮುಖ ಆಟಗಾರರಿಲ್ಲದ ಆಸ್ಟ್ರೇಲಿಯಾ ಟಿ20 ತಂಡ ಪ್ರಕಟ

Australia vs Pakistan T20I series: ನವೆಂಬರ್ 14 ರಿಂದ ಪಾಕಿಸ್ತಾನ್ ಮತ್ತು ಆಸ್ಟ್ರೇಲಿಯಾ ನಡುವಣ ಟಿ20 ಸರಣಿ ಶುರುವಾಗಲಿದೆ. ಈ ಸರಣಿಯ ಮೊದಲ ಪಂದ್ಯವು ಬ್ರಿಸ್ಬೇನ್​ನಲ್ಲಿ ನಡೆದರೆ, ನವೆಂಬರ್ 16 ರಂದು ನಡೆಯಲಿರುವ ಎರಡನೇ ಪಂದ್ಯಕ್ಕೆ ಸಿಡ್ನಿ ಆತಿಥ್ಯವಹಿಸಲಿದೆ.

ಪ್ರಮುಖ ಆಟಗಾರರಿಲ್ಲದ ಆಸ್ಟ್ರೇಲಿಯಾ ಟಿ20 ತಂಡ ಪ್ರಕಟ
Australia
ಝಾಹಿರ್ ಯೂಸುಫ್
|

Updated on:Oct 28, 2024 | 11:40 AM

Share

ಪಾಕಿಸ್ತಾನ್ ವಿರುದ್ಧದ ಟಿ20 ಸರಣಿಗಾಗಿ ಆಸ್ಟ್ರೇಲಿಯಾ ತಂಡವನ್ನು ಪ್ರಕಟಿಸಲಾಗಿದೆ. 13 ಸದಸ್ಯರ ಈ ತಂಡದಲ್ಲಿ ಪ್ರಮುಖ ಆಟಗಾರರು ಕಾಣಿಸಿಕೊಂಡಿಲ್ಲ ಎಂಬುದು ವಿಶೇಷ. ಆಸ್ಟ್ರೇಲಿಯಾ ತಂಡದ ಪ್ರಮುಖ ಆಟಗಾರರು ಭಾರತದ ವಿರುದ್ಧದ ಬಾರ್ಡರ್-ಗವಾಸ್ಕರ್ ಟೆಸ್ಟ್​ ಸರಣಿಗಾಗಿ ಸಜ್ಜಾಗುತ್ತಿದ್ದು, ಹೀಗಾಗಿ ಈ ಆಟಗಾರರಿಗೆ ಪಾಕ್ ವಿರುದ್ಧದ ಸರಣಿಯಿಂದ ವಿಶ್ರಾಂತಿ ನೀಡಲಾಗಿದೆ.

ಇನ್ನು ನಾಯಕ ಮಿಚೆಲ್ ಮಾರ್ಷ್ ಅನುಪಸ್ಥಿತಿಯಲ್ಲಿ ಆಸ್ಟ್ರೇಲಿಯಾ ತಂಡವನ್ನು ಗ್ಲೆನ್ ಮ್ಯಾಕ್ಸ್​ವೆಲ್ ಮುನ್ನಡೆಸುವ ಸಾಧ್ಯತೆಯಿದೆ. ಹಾಗೆಯೇ ತಂಡದಲ್ಲಿ ಟಿಮ್ ಡೇವಿಡ್, ಮಾರ್ಕಸ್ ಸ್ಟೊಯಿನಿಸ್ ಹಾಗೂ ಆ್ಯಡಂ ಝಂಪಾ ಕೂಡ ಕಾಣಿಸಿಕೊಂಡಿದ್ದಾರೆ.

ಪಾಕಿಸ್ತಾನ್ vs ಆಸ್ಟ್ರೇಲಿಯಾ ಟಿ20 ಸರಣಿ ಯಾವಾಗ ಶುರು?

ನವೆಂಬರ್ 14 ರಿಂದ ಪಾಕಿಸ್ತಾನ್ – ಆಸ್ಟ್ರೇಲಿಯಾ ನಡುವಣ ಟಿ20 ಸರಣಿ ಶುರುವಾಗಲಿದೆ. ಈ ಸರಣಿಯ ಮೊದಲ ಪಂದ್ಯವು ಬ್ರಿಸ್ಬೇನ್​ನಲ್ಲಿ ನಡೆದರೆ, ನವೆಂಬರ್ 16 ರಂದು ನಡೆಯಲಿರುವ ಎರಡನೇ ಪಂದ್ಯಕ್ಕೆ ಸಿಡ್ನಿ ಆತಿಥ್ಯವಹಿಸಲಿದೆ. ಇನ್ನು ನವೆಂಬರ್ 18 ರಂದು ಜರುಗಲಿರುವ ಮೂರನೇ ಪಂದ್ಯವು ಹೋಬರ್ಟ್​ನಲ್ಲಿ ನಡೆಯಲಿದೆ.

  • ಮೊದಲ T20I: ನವೆಂಬರ್ 14, ಬ್ರಿಸ್ಬೇನ್
  • ಎರಡನೇ T20I: ನವೆಂಬರ್ 16, ಸಿಡ್ನಿ
  • ಮೂರನೇ T20I: ನವೆಂಬರ್ 18, ಹೋಬರ್ಟ್

ಈ ಸರಣಿಗಾಗಿ ಉಭಯ ತಂಡಗಳು:

ಆಸ್ಟ್ರೇಲಿಯಾ ಟಿ20 ತಂಡ: ಶಾನ್ ಅಬಾಟ್, ಕ್ಸೇವಿಯರ್ ಬಾರ್ಟ್ಲೆಟ್, ಕೂಪರ್ ಕೊನೊಲಿ, ಟಿಮ್ ಡೇವಿಡ್, ನಾಥನ್ ಎಲ್ಲಿಸ್, ಜೇಕ್ ಫ್ರೇಸರ್-ಮೆಕ್‌ಗುರ್ಕ್, ಆರೋನ್ ಹಾರ್ಡಿ, ಜೋಶ್ ಇಂಗ್ಲಿಸ್, ಸ್ಪೆನ್ಸರ್ ಜಾನ್ಸನ್, ಗ್ಲೆನ್ ಮ್ಯಾಕ್ಸ್‌ವೆಲ್, ಮ್ಯಾಥ್ಯೂ ಶಾರ್ಟ್, ಮಾರ್ಕಸ್ ಸ್ಟೋನಿಸ್, ಆ್ಯಡಂ ಝಂಪಾ.

ಇದನ್ನೂ ಓದಿ: RCB ಉಳಿಸಿಕೊಂಡ ಆರು ಆಟಗಾರರು ಯಾರೆಲ್ಲಾ ಗೊತ್ತಾ?

ಪಾಕಿಸ್ತಾನ್ ಟಿ20 ತಂಡ: ಅರಾಫತ್ ಮಿನ್ಹಾಸ್, ಬಾಬರ್ ಆಝಂ, ಹ್ಯಾರಿಸ್ ರೌಫ್, ಹಸೀಬುಲ್ಲಾ, ಜಹಂದಾದ್ ಖಾನ್, ಮೊಹಮ್ಮದ್ ಅಬ್ಬಾಸ್ ಅಫ್ರಿದಿ, ಮೊಹಮ್ಮದ್ ರಿಝ್ವಾನ್ (ನಾಯಕ), ಮುಹಮ್ಮದ್ ಇರ್ಫಾನ್ ಖಾನ್, ನಸೀಮ್ ಶಾ, ಒಮೈರ್ ಬಿನ್ ಯೂಸುಫ್, ಸಾಹಿಬ್​ಝಾದ ಫರ್ಹಾನ್, ಸಲ್ಮಾನ್ ಆಘಾ, ಶಾಹೀನ್ ಅಫ್ರಿದಿ, ಸುಫ್ಯಾನ್ ಮೊಕಿಮ್, ಉಸ್ಮಾನ್ ಖಾನ್.

Published On - 11:39 am, Mon, 28 October 24

ದುರಹಂಕಾರದಿಂದ ಬಿಗ್ ಬಾಸ್ ನಿರೂಪಣೆ ಬೇಡ ಅಂತ ನಾನು ಹೇಳಲಿಲ್ಲ: ಸುದೀಪ್
ದುರಹಂಕಾರದಿಂದ ಬಿಗ್ ಬಾಸ್ ನಿರೂಪಣೆ ಬೇಡ ಅಂತ ನಾನು ಹೇಳಲಿಲ್ಲ: ಸುದೀಪ್
ಯಶಸ್ವಿ ಜೈಸ್ವಾಲ್ ಸ್ಫೋಟಕ ಸೆಂಚುರಿ: ಮುಂಬೈ ದಾಖಲೆಯ ರನ್ ಚೇಸ್​
ಯಶಸ್ವಿ ಜೈಸ್ವಾಲ್ ಸ್ಫೋಟಕ ಸೆಂಚುರಿ: ಮುಂಬೈ ದಾಖಲೆಯ ರನ್ ಚೇಸ್​
ಮೊಟ್ಟೆಗಳಲ್ಲಿ ಕ್ಯಾನ್ಸರ್ ಕಾರಕ ಅಂಶ ಪತ್ತೆ?: ಭಾರಿ ಚರ್ಚೆ
ಮೊಟ್ಟೆಗಳಲ್ಲಿ ಕ್ಯಾನ್ಸರ್ ಕಾರಕ ಅಂಶ ಪತ್ತೆ?: ಭಾರಿ ಚರ್ಚೆ
‘ಮಾರ್ಕ್’ ಸಿನಿಮಾದಲ್ಲಿ ಹೀರೋಯಿನ್ ಇಲ್ಲ ಯಾಕೆ? ಉತ್ತರಿಸಿದ ಕಿಚ್ಚ ಸುದೀಪ್
‘ಮಾರ್ಕ್’ ಸಿನಿಮಾದಲ್ಲಿ ಹೀರೋಯಿನ್ ಇಲ್ಲ ಯಾಕೆ? ಉತ್ತರಿಸಿದ ಕಿಚ್ಚ ಸುದೀಪ್
ಚುನಾವಣೆಯಲ್ಲಿ ಸೋತಿದ್ದಕ್ಕೆ ಮೀಸೆ ಬೋಳಿಸಿಕೊಂಡ ಎಲ್‌ಡಿಎಫ್ ಕಾರ್ಯಕರ್ತ
ಚುನಾವಣೆಯಲ್ಲಿ ಸೋತಿದ್ದಕ್ಕೆ ಮೀಸೆ ಬೋಳಿಸಿಕೊಂಡ ಎಲ್‌ಡಿಎಫ್ ಕಾರ್ಯಕರ್ತ
ಶಾಲೆಯ ಬಳಿ ಸೆಕ್ಯುರಿಟಿಯ ಭುಜಕ್ಕೆ ಕಚ್ಚಿದ ಬೀದಿ ನಾಯಿ
ಶಾಲೆಯ ಬಳಿ ಸೆಕ್ಯುರಿಟಿಯ ಭುಜಕ್ಕೆ ಕಚ್ಚಿದ ಬೀದಿ ನಾಯಿ
ರೈಲಿನಲ್ಲಿ ಟಾಯ್ಲೆಟ್​ನಿಂದ ಹೊರಬರಲಾರದೆ ಪೊಲೀಸರಿಗೆ ಕರೆ ಮಾಡಿದ ಮಹಿಳೆ
ರೈಲಿನಲ್ಲಿ ಟಾಯ್ಲೆಟ್​ನಿಂದ ಹೊರಬರಲಾರದೆ ಪೊಲೀಸರಿಗೆ ಕರೆ ಮಾಡಿದ ಮಹಿಳೆ
ನಕಲಿ ಪೊಲೀಸರಿಗೆ ಅಸಲಿ ಖಾಕಿ ಶಾಕ್​​: ದರೋಡೆಗಿಳಿದಿದ್ದ ಗ್ಯಾಂಗ್​​ ಅರೆಸ್ಟ್
ನಕಲಿ ಪೊಲೀಸರಿಗೆ ಅಸಲಿ ಖಾಕಿ ಶಾಕ್​​: ದರೋಡೆಗಿಳಿದಿದ್ದ ಗ್ಯಾಂಗ್​​ ಅರೆಸ್ಟ್
ರಜತ್ ಪಾಪದ ಕೊಡ ತುಂಬಿದೆ, ಮನೆಯಿಂದ ಹೊರಗೆ ಕಳಿಸ್ತೀನಿ: ಗಿಲ್ಲಿ ಚಾಲೆಂಜ್
ರಜತ್ ಪಾಪದ ಕೊಡ ತುಂಬಿದೆ, ಮನೆಯಿಂದ ಹೊರಗೆ ಕಳಿಸ್ತೀನಿ: ಗಿಲ್ಲಿ ಚಾಲೆಂಜ್
Video: ತರಗತಿಯಲ್ಲಿ ಕುಳಿತಿದ್ದಾಗಲೇ ಹೃದಯಾಘಾತದಿಂದ ವಿದ್ಯಾರ್ಥಿನಿ ಸಾವು
Video: ತರಗತಿಯಲ್ಲಿ ಕುಳಿತಿದ್ದಾಗಲೇ ಹೃದಯಾಘಾತದಿಂದ ವಿದ್ಯಾರ್ಥಿನಿ ಸಾವು