AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರಮುಖ ಆಟಗಾರರಿಲ್ಲದ ಆಸ್ಟ್ರೇಲಿಯಾ ಟಿ20 ತಂಡ ಪ್ರಕಟ

Australia vs Pakistan T20I series: ನವೆಂಬರ್ 14 ರಿಂದ ಪಾಕಿಸ್ತಾನ್ ಮತ್ತು ಆಸ್ಟ್ರೇಲಿಯಾ ನಡುವಣ ಟಿ20 ಸರಣಿ ಶುರುವಾಗಲಿದೆ. ಈ ಸರಣಿಯ ಮೊದಲ ಪಂದ್ಯವು ಬ್ರಿಸ್ಬೇನ್​ನಲ್ಲಿ ನಡೆದರೆ, ನವೆಂಬರ್ 16 ರಂದು ನಡೆಯಲಿರುವ ಎರಡನೇ ಪಂದ್ಯಕ್ಕೆ ಸಿಡ್ನಿ ಆತಿಥ್ಯವಹಿಸಲಿದೆ.

ಪ್ರಮುಖ ಆಟಗಾರರಿಲ್ಲದ ಆಸ್ಟ್ರೇಲಿಯಾ ಟಿ20 ತಂಡ ಪ್ರಕಟ
Australia
ಝಾಹಿರ್ ಯೂಸುಫ್
|

Updated on:Oct 28, 2024 | 11:40 AM

Share

ಪಾಕಿಸ್ತಾನ್ ವಿರುದ್ಧದ ಟಿ20 ಸರಣಿಗಾಗಿ ಆಸ್ಟ್ರೇಲಿಯಾ ತಂಡವನ್ನು ಪ್ರಕಟಿಸಲಾಗಿದೆ. 13 ಸದಸ್ಯರ ಈ ತಂಡದಲ್ಲಿ ಪ್ರಮುಖ ಆಟಗಾರರು ಕಾಣಿಸಿಕೊಂಡಿಲ್ಲ ಎಂಬುದು ವಿಶೇಷ. ಆಸ್ಟ್ರೇಲಿಯಾ ತಂಡದ ಪ್ರಮುಖ ಆಟಗಾರರು ಭಾರತದ ವಿರುದ್ಧದ ಬಾರ್ಡರ್-ಗವಾಸ್ಕರ್ ಟೆಸ್ಟ್​ ಸರಣಿಗಾಗಿ ಸಜ್ಜಾಗುತ್ತಿದ್ದು, ಹೀಗಾಗಿ ಈ ಆಟಗಾರರಿಗೆ ಪಾಕ್ ವಿರುದ್ಧದ ಸರಣಿಯಿಂದ ವಿಶ್ರಾಂತಿ ನೀಡಲಾಗಿದೆ.

ಇನ್ನು ನಾಯಕ ಮಿಚೆಲ್ ಮಾರ್ಷ್ ಅನುಪಸ್ಥಿತಿಯಲ್ಲಿ ಆಸ್ಟ್ರೇಲಿಯಾ ತಂಡವನ್ನು ಗ್ಲೆನ್ ಮ್ಯಾಕ್ಸ್​ವೆಲ್ ಮುನ್ನಡೆಸುವ ಸಾಧ್ಯತೆಯಿದೆ. ಹಾಗೆಯೇ ತಂಡದಲ್ಲಿ ಟಿಮ್ ಡೇವಿಡ್, ಮಾರ್ಕಸ್ ಸ್ಟೊಯಿನಿಸ್ ಹಾಗೂ ಆ್ಯಡಂ ಝಂಪಾ ಕೂಡ ಕಾಣಿಸಿಕೊಂಡಿದ್ದಾರೆ.

ಪಾಕಿಸ್ತಾನ್ vs ಆಸ್ಟ್ರೇಲಿಯಾ ಟಿ20 ಸರಣಿ ಯಾವಾಗ ಶುರು?

ನವೆಂಬರ್ 14 ರಿಂದ ಪಾಕಿಸ್ತಾನ್ – ಆಸ್ಟ್ರೇಲಿಯಾ ನಡುವಣ ಟಿ20 ಸರಣಿ ಶುರುವಾಗಲಿದೆ. ಈ ಸರಣಿಯ ಮೊದಲ ಪಂದ್ಯವು ಬ್ರಿಸ್ಬೇನ್​ನಲ್ಲಿ ನಡೆದರೆ, ನವೆಂಬರ್ 16 ರಂದು ನಡೆಯಲಿರುವ ಎರಡನೇ ಪಂದ್ಯಕ್ಕೆ ಸಿಡ್ನಿ ಆತಿಥ್ಯವಹಿಸಲಿದೆ. ಇನ್ನು ನವೆಂಬರ್ 18 ರಂದು ಜರುಗಲಿರುವ ಮೂರನೇ ಪಂದ್ಯವು ಹೋಬರ್ಟ್​ನಲ್ಲಿ ನಡೆಯಲಿದೆ.

  • ಮೊದಲ T20I: ನವೆಂಬರ್ 14, ಬ್ರಿಸ್ಬೇನ್
  • ಎರಡನೇ T20I: ನವೆಂಬರ್ 16, ಸಿಡ್ನಿ
  • ಮೂರನೇ T20I: ನವೆಂಬರ್ 18, ಹೋಬರ್ಟ್

ಈ ಸರಣಿಗಾಗಿ ಉಭಯ ತಂಡಗಳು:

ಆಸ್ಟ್ರೇಲಿಯಾ ಟಿ20 ತಂಡ: ಶಾನ್ ಅಬಾಟ್, ಕ್ಸೇವಿಯರ್ ಬಾರ್ಟ್ಲೆಟ್, ಕೂಪರ್ ಕೊನೊಲಿ, ಟಿಮ್ ಡೇವಿಡ್, ನಾಥನ್ ಎಲ್ಲಿಸ್, ಜೇಕ್ ಫ್ರೇಸರ್-ಮೆಕ್‌ಗುರ್ಕ್, ಆರೋನ್ ಹಾರ್ಡಿ, ಜೋಶ್ ಇಂಗ್ಲಿಸ್, ಸ್ಪೆನ್ಸರ್ ಜಾನ್ಸನ್, ಗ್ಲೆನ್ ಮ್ಯಾಕ್ಸ್‌ವೆಲ್, ಮ್ಯಾಥ್ಯೂ ಶಾರ್ಟ್, ಮಾರ್ಕಸ್ ಸ್ಟೋನಿಸ್, ಆ್ಯಡಂ ಝಂಪಾ.

ಇದನ್ನೂ ಓದಿ: RCB ಉಳಿಸಿಕೊಂಡ ಆರು ಆಟಗಾರರು ಯಾರೆಲ್ಲಾ ಗೊತ್ತಾ?

ಪಾಕಿಸ್ತಾನ್ ಟಿ20 ತಂಡ: ಅರಾಫತ್ ಮಿನ್ಹಾಸ್, ಬಾಬರ್ ಆಝಂ, ಹ್ಯಾರಿಸ್ ರೌಫ್, ಹಸೀಬುಲ್ಲಾ, ಜಹಂದಾದ್ ಖಾನ್, ಮೊಹಮ್ಮದ್ ಅಬ್ಬಾಸ್ ಅಫ್ರಿದಿ, ಮೊಹಮ್ಮದ್ ರಿಝ್ವಾನ್ (ನಾಯಕ), ಮುಹಮ್ಮದ್ ಇರ್ಫಾನ್ ಖಾನ್, ನಸೀಮ್ ಶಾ, ಒಮೈರ್ ಬಿನ್ ಯೂಸುಫ್, ಸಾಹಿಬ್​ಝಾದ ಫರ್ಹಾನ್, ಸಲ್ಮಾನ್ ಆಘಾ, ಶಾಹೀನ್ ಅಫ್ರಿದಿ, ಸುಫ್ಯಾನ್ ಮೊಕಿಮ್, ಉಸ್ಮಾನ್ ಖಾನ್.

Published On - 11:39 am, Mon, 28 October 24

Follow Us
ಕಾರವಾರ-ಅಂಕೋಲಾ ಘಾಟ್ ರಸ್ತೆಯಲ್ಲಿ ಮೈದುಂಬಿದ ಜಲಧಾರೆಗಳು
ಕಾರವಾರ-ಅಂಕೋಲಾ ಘಾಟ್ ರಸ್ತೆಯಲ್ಲಿ ಮೈದುಂಬಿದ ಜಲಧಾರೆಗಳು
ನೆಲಮಂಗಲದಲ್ಲಿ ಶೂ ರ್ಯಾಕ್ ಒಳಗೆ ಕುಳಿತಿತ್ತು ದೈತ್ಯ ನಾಗರಹಾವು
ನೆಲಮಂಗಲದಲ್ಲಿ ಶೂ ರ್ಯಾಕ್ ಒಳಗೆ ಕುಳಿತಿತ್ತು ದೈತ್ಯ ನಾಗರಹಾವು
ನಾನು ಬೆಳೆದು ಬಂದ ಸಂಸ್ಕೃತಿಯ ಆಚರಣೆ; ವಿಡಿಯೋ ಹಂಚಿಕೊಂಡು ಭಾವುಕರಾದ ರಿಷಬ್
ನಾನು ಬೆಳೆದು ಬಂದ ಸಂಸ್ಕೃತಿಯ ಆಚರಣೆ; ವಿಡಿಯೋ ಹಂಚಿಕೊಂಡು ಭಾವುಕರಾದ ರಿಷಬ್
ಇಂದು ವಟಸಾವಿತ್ರಿ ವೃತವನ್ನು ಆಚರಿಸುವ ಪವಿತ್ರ ದಿನ!
ಇಂದು ವಟಸಾವಿತ್ರಿ ವೃತವನ್ನು ಆಚರಿಸುವ ಪವಿತ್ರ ದಿನ!
ಮಗನಿಗೆ ಬಣ್ಣ ಹಚ್ಚಿಸಿದ ರಿಷಬ್ ಶೆಟ್ಟಿ: ಯಕ್ಷಗಾನ ವೇದಿಕೆಯಲ್ಲಿ ರನ್ವಿತ್
ಮಗನಿಗೆ ಬಣ್ಣ ಹಚ್ಚಿಸಿದ ರಿಷಬ್ ಶೆಟ್ಟಿ: ಯಕ್ಷಗಾನ ವೇದಿಕೆಯಲ್ಲಿ ರನ್ವಿತ್
ಬಿಡದಿ ಟೌನ್​ಶಿಪ್: ರಾಜ್ಯವ್ಯಾಪಿ ಜನಾಂದೋಲನಕ್ಕೆ ಕುಮಾರಸ್ವಾಮಿ ತಂತ್ರ
ಬಿಡದಿ ಟೌನ್​ಶಿಪ್: ರಾಜ್ಯವ್ಯಾಪಿ ಜನಾಂದೋಲನಕ್ಕೆ ಕುಮಾರಸ್ವಾಮಿ ತಂತ್ರ
ರಾಮಮಂದಿರ ದೇಣಿಗೆ ಲೂಟಿ; ಬೀದರ್​ ಶಾಸಕನ ವಿರುದ್ಧವೂ ಎಸ್​ಐಟಿಗೆ ದೂರು
ರಾಮಮಂದಿರ ದೇಣಿಗೆ ಲೂಟಿ; ಬೀದರ್​ ಶಾಸಕನ ವಿರುದ್ಧವೂ ಎಸ್​ಐಟಿಗೆ ದೂರು
ಪುತ್ರನ ಕಳೆದುಕೊಂಡ ಭಾಮಾ ಹರೀಶ್ ಅವರ ತಬ್ಬಿ ಸಂತೈಸಿದ ಧ್ರುವ ಸರ್ಜಾ
ಪುತ್ರನ ಕಳೆದುಕೊಂಡ ಭಾಮಾ ಹರೀಶ್ ಅವರ ತಬ್ಬಿ ಸಂತೈಸಿದ ಧ್ರುವ ಸರ್ಜಾ
ಶಾಲೆ ಒಳಗಡೆ ಬೆಂಕಿ ಹಚ್ಚಿದ ಕಿಡಿಗೇಡಿಗಳು: ಯೂನಿಫಾರ್ಮ್ ಬೆಂಕಿಗಾಹುತಿ
ಶಾಲೆ ಒಳಗಡೆ ಬೆಂಕಿ ಹಚ್ಚಿದ ಕಿಡಿಗೇಡಿಗಳು: ಯೂನಿಫಾರ್ಮ್ ಬೆಂಕಿಗಾಹುತಿ
ಪ್ರದೀಪ್ ಈಶ್ವರ್ ನಡವಳಿಕೆಗೆ ಕೈಮುಗಿದ ಕುಮಾರಸ್ವಾಮಿ
ಪ್ರದೀಪ್ ಈಶ್ವರ್ ನಡವಳಿಕೆಗೆ ಕೈಮುಗಿದ ಕುಮಾರಸ್ವಾಮಿ