AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

AUS vs SA: ಆಫ್ರಿಕಾ ಎದುರು ಮೊದಲ ಟೆಸ್ಟ್ ಗೆದ್ದ ಆಸೀಸ್; ಭಾರತಕ್ಕೆ ಲಾಭ ತಂದ ಹರಿಣಗಳು ಸೋಲು..!

AUS vs SA: ಆಸ್ಟ್ರೆಲಿಯಾ ಹಾಗೂ ದಕ್ಷಿಣ ಆಫ್ರಿಕಾ ನಡುವಿನ 3 ಪಂದ್ಯಗಳ ಟೆಸ್ಟ್ ಸರಣಿಯ ಮೊದಲ ಟೆಸ್ಟ್ ಪಂದ್ಯ ಕೇವಲ 2ನೇ ದಿನದಲ್ಲಿ ಅಂತ್ಯಗೊಂಡಿದೆ. ಗಾಬಾ ಟೆಸ್ಟ್‌ನಲ್ಲಿ ಗೆಲುವು ಸಾಧಿಸುವುದರೊಂದಿಗೆ ಆತಿಥೇಯ ಆಸ್ಟ್ರೇಲಿಯಾ 3 ಟೆಸ್ಟ್‌ ಪಂದ್ಯಗಳ ಸರಣಿಯಲ್ಲಿ 1-0 ಅಂತರದಿಂದ ಮುನ್ನಡೆ ಸಾಧಿಸಿದೆ.

AUS vs SA: ಆಫ್ರಿಕಾ ಎದುರು ಮೊದಲ ಟೆಸ್ಟ್ ಗೆದ್ದ ಆಸೀಸ್; ಭಾರತಕ್ಕೆ ಲಾಭ ತಂದ ಹರಿಣಗಳು ಸೋಲು..!
ಆಸ್ಟ್ರೇಲಿಯಾ ತಂಡ
TV9 Web
| Edited By: |

Updated on:Dec 18, 2022 | 12:54 PM

Share

ಗಾಬಾದಲ್ಲಿ ನಡೆದ ಆಸ್ಟ್ರೆಲಿಯಾ ಹಾಗೂ ದಕ್ಷಿಣ ಆಫ್ರಿಕಾ (Australia Vs South Africa) ನಡುವಿನ 3 ಪಂದ್ಯಗಳ ಟೆಸ್ಟ್ ಸರಣಿಯ ಮೊದಲ ಟೆಸ್ಟ್ ಪಂದ್ಯ ಕೇವಲ 2ನೇ ದಿನದಲ್ಲಿ ಅಂತ್ಯಗೊಂಡಿದೆ. ಅಂದರೆ 5 ದಿನಗಳ ಆಟವು 3 ದಿನಗಳು ಬಾಕಿ ಉಳಿದಿರುವಂತೆಯೇ ಮುಗಿದಿದ್ದು, ಈ ಪಂದ್ಯದಲ್ಲಿ ಅತಿಥೇಯಾ ಆಸ್ಟ್ರೇಲಿಯಾ, ಹರಿಣಗಳನ್ನು ಬಗ್ಗು ಬಡಿದಿದೆ. ಗಾಬಾ ಟೆಸ್ಟ್‌ನಲ್ಲಿ (Gabba Test) ಗೆಲುವು ಸಾಧಿಸುವುದರೊಂದಿಗೆ ಆತಿಥೇಯ ಆಸ್ಟ್ರೇಲಿಯಾ 3 ಟೆಸ್ಟ್‌ಗಳ ಸರಣಿಯಲ್ಲಿ 1-0 ಅಂತರದಿಂದ ಮುನ್ನಡೆ ಸಾಧಿಸಿದೆ. ಗಾಬಾ ಟೆಸ್ಟ್‌ನಲ್ಲಿ ಗೆಲ್ಲಲು ದಕ್ಷಿಣ ಆಫ್ರಿಕಾ, ಆಸ್ಟ್ರೇಲಿಯಾ ಎದುರು ಕೇವಲ 34 ರನ್‌ಗಳ ಗುರಿಯನ್ನು ನೀಡಿತ್ತು. ಈ ಸಾಧಾರಣ ಗುರಿ ಬೆನ್ನಟ್ಟಿದ ಆಸ್ಟ್ರೇಲಿಯಾ 4 ವಿಕೆಟ್ ಕಳೆದುಕೊಂಡು ಗೆಲುವಿನ ನಗೆ ಬೀರಿತು.

ಬ್ರಿಸ್ಬೇನ್‌ನಲ್ಲಿ ನಡೆದ ಟೆಸ್ಟ್ ಸರಣಿಯ ಮೊದಲ ಟೆಸ್ಟ್‌ನಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ದಕ್ಷಿಣ ಆಫ್ರಿಕಾ ಮೊದಲ ಇನ್ನಿಂಗ್ಸ್ 152 ರನ್‌ಗಳಿಗೆ ಆಲೌಟ್ ಆಯಿತು. ಮೊದಲ ಇನ್ನಿಂಗ್ಸ್‌ನಲ್ಲಿ ಕಡಿಮೆ ಸ್ಕೋರ್‌ಗೆ ದಕ್ಷಿಣ ಆಫ್ರಿಕಾವನ್ನು ಆಲೌಟ್ ಮಾಡಿದ ಆಸ್ಟ್ರೇಲಿಯಾಕ್ಕೂ ಸುಲಭವಾಗಿ ಈ ಗುರಿ ಸಾಧಿಸಲು ದಕ್ಷಿಣ ಆಫ್ರಿಕಾದ ಬೌಲರ್‌ಗಳು ಅವಕಾಶ ನೀಡಲಿಲ್ಲ.

ಬಾಂಗ್ಲಾ ತಂಡವನ್ನು ಮಣಿಸಿದ ಭಾರತಕ್ಕೆ ಎರಡೆರಡು ಲಾಭ; ಅಣತಿ ದೂರದಲ್ಲಿ ಡಬ್ಲ್ಯುಟಿಸಿ ಫೈನಲ್ ಟಿಕೆಟ್ ..!

2. ಎರಡನೇ ಇನ್ನಿಂಗ್ಸ್‌ನಲ್ಲೂ ಆಫ್ರಿಕಾದ ಕಳಪೆ ಬ್ಯಾಟಿಂಗ್

ಆಸೀಸ್​ ವೇಗಿಗಳಂತೆ ತಮ್ಮ ಕರಾಮತ್ತು ತೋರಿದ ದಕ್ಷಿಣ ಆಫ್ರಿಕಾದ ಬೌಲರ್‌ಗಳು ಆಸ್ಟ್ರೇಲಿಯವನ್ನು ಮೊದಲ ಇನ್ನಿಂಗ್ಸ್‌ನಲ್ಲಿ ಕೇವಲ 218 ರನ್‌ಗಳಿಗೆ ಸೀಮಿತಗೊಳಿಸಿದರು. ಆದರೂ ಆಸ್ಟ್ರೇಲಿಯಾ ಮೊದಲ ಇನ್ನಿಂಗ್ಸ್​ನಲ್ಲಿ 66 ರನ್​ಗಳ ಮುನ್ನಡೆ ಪಡೆಯುವಲ್ಲಿ ಯಶಸ್ವಿಯಾಯಿತು. ಎರಡನೇ ಇನ್ನಿಂಗ್ಸ್​ನಲ್ಲದಾರೂ ದಕ್ಷಿಣ ಆಫ್ರಿಕಾದ ಬ್ಯಾಟ್ಸ್‌ಮನ್‌ಗಳು ಉತ್ತಮ ಲಯಕ್ಕೆ ಮರಳುತ್ತಾರೆ ಎಂಬ ನಿರೀಕ್ಷೆ ಇತ್ತು. ಆದರೆ ಆಫ್ರಿಕಾ ಆಟಗಾರರು ಮೊದಲ ಇನ್ನಿಂಗ್ಸ್‌ಗಿಂತಲೂ ಕೆಟ್ಟದಾಗಿ ಆಡಿದರು. ದಕ್ಷಿಣ ಆಫ್ರಿಕಾ ತನ್ನ ಎರಡನೇ ಇನ್ನಿಂಗ್ಸ್ ಕೇವಲ 99 ರನ್‌ಗಳಿಗೆ ಕುಸಿಯಿತು. ಎರಡನೇ ಇನ್ನಿಂಗ್ಸ್‌ನಲ್ಲಿ 5 ವಿಕೆಟ್‌ಗಳನ್ನು ಕಬಳಿಸಿದ ಆಸ್ಟ್ರೇಲಿಯಾದ ನಾಯಕ ಪ್ಯಾಟ್ ಕಮ್ಮಿನ್ಸ್ ಹರಿಣಗಳನ್ನು 100 ರನ್‌ಗಳ ಒಳಗೆ ನಿಲ್ಲಿಸುವಲ್ಲಿ ದೊಡ್ಡ ಪಾತ್ರವಹಿಸಿದರು.

3.ಆಸ್ಟ್ರೇಲಿಯಾಕ್ಕೂ ಈ ಟಾರ್ಗೆಟ್ ಸವಾಲಾಯಿತು

ಆಫ್ರಿಕಾ ಕೇವಲ 99 ರನ್​ಗಳಿಗೆ ಎರಡನೇ ಇನ್ನಿಂಗ್ಸ್​ ಮುಗಿಸಿದ್ದರಿಂದಾಗಿ ಆಸ್ಟ್ರೇಲಿಯಾಕ್ಕೆ ಕೇವಲ 34 ರನ್‌ಗಳ ಗುರಿ ಸಿಕ್ಕಿತು. ಆದರೆ, ಈ ಸುಲಭ ಗುರಿಯನ್ನು ಸಾಧಿಸುವಲ್ಲಿಯೂ ಆಸೀಸ್​ ತಂಡದ 4 ಬ್ಯಾಟ್ಸ್‌ಮನ್‌ಗಳು ಔಟಾದರು. ಎರಡನೇ ಇನ್ನಿಂಗ್ಸ್‌ನಲ್ಲಿ ದಕ್ಷಿಣ ಆಫ್ರಿಕಾದ ಬೌಲರ್‌ಗಳು, ವಿಶೇಷವಾಗಿ ರಬಾಡ ಅವರ ವೇಗದ ಮುಂದೆ ಆಸ್ಟ್ರೇಲಿಯಾದ 4 ಬ್ಯಾಟ್ಸ್‌ಮನ್‌ಗಳಿಗೆ ಹೆಚ್ಚು ಹೊತ್ತು ವಿಕೆಟ್​ನಲ್ಲಿ ನಿಲ್ಲಲಾಗಲಿಲ್ಲ. ಎರಡನೇ ಇನಿಂಗ್ಸ್​ನಲ್ಲಿ ರಬಾಡ ಕೇವಲ 4 ಓವರ್ ಬೌಲ್ ಮಾಡಿ 13 ರನ್ ನೀಡಿ 4 ವಿಕೆಟ್ ಪಡೆದರು. ಆದರೆ ತಂಡವನ್ನು ಸೋಲಿನಿಂದ ಪಾರು ಮಾಡಲು ಸಾಧ್ಯವಾಗಲಿಲ್ಲ. ಅಂತಿಮವಾಗಿ ಆಸ್ಟ್ರೇಲಿಯಾ ವಿರುದ್ಧ ದಕ್ಷಿಣ ಆಫ್ರಿಕಾ ಮೊದಲ ಟೆಸ್ಟ್​ನಲ್ಲಿ 6 ವಿಕೆಟ್‌ಗಳ ಸೋಲನ್ನು ಎದುರಿಸಬೇಕಾಯಿತು.

4. ಭಾರತಕ್ಕೆ ಲಾಭ

ಈಗ ಮೂರು ಪಂದ್ಯಗಳ ಟೆಸ್ಟ್ ಸರಣಿಯಲ್ಲಿ ಆಸ್ಟ್ರೇಲಿಯಾ ಮೊದಲ ಟೆಸ್ಟ್ ಗೆದ್ದು ಸರಣಿಯಲ್ಲಿ ಮುನ್ನಡೆ ಸಾಧಿಸಿರುವುದು ಭಾರತಕ್ಕೆ ಲಾಭ ತಂದುಕೊಟ್ಟಿದೆ. ವಾಸ್ತವವಾಗಿ ಟೀಂ ಇಂಡಿಯಾ ಟೆಸ್ಟ್ ಚಾಂಪಿಯನ್​ಶಿಪ್ ಫೈನಲ್​ಗೇರಬೇಕೆಂದರೆ, ದಕ್ಷಿಣ ಆಫ್ರಿಕಾ ಉಳಿದಿರುವ ಟೆಸ್ಟ್ ಪಂದ್ಯಗಳಲ್ಲಿ ಸೋಲಬೇಕಿದೆ. ಏಕೆಂದರೆ ಟೆಸ್ಟ್ ಚಾಂಪಿಯನ್​ಶಿಪ್ ಪಾಯಿಂಟ್ ಪಟ್ಟಿಯಲ್ಲಿ ಆಫ್ರಿಕಾ ಈಗ ಎರಡನೇ ಸ್ಥಾನದಲ್ಲಿದೆ. ಹೀಗಾಗಿ ಭಾರತ ಫೈನಲ್​ಗೇರಬೇಕೆಂದರೆ ಆಫ್ರಿಕಾ ಟೆಸ್ಟ್ ಪಂದ್ಯಗಳನ್ನು ಸೋಲಲೇಬೇಕಿದೆ. ಇತ್ತ ಭಾರತವೂ ಕೂಡ ಬಾಂಗ್ಲಾ ಎದುರು ಉಳಿದಿರುವ ಇನ್ನೊಂದು ಪಂದ್ಯ ಹಾಗೂ ಮುಂಬರುವ ಆಸ್ಟ್ರೇಲಿಯಾ ವಿರುದ್ಧದ ತವರು ಸರಣಿಯಲ್ಲಿ ಗೆದ್ದರೆ ಮಾತ್ರ ಫೈನಲ್​ಗೆ ಎಂಟ್ರಿಕೊಡಲಿದೆ.

ಇನ್ನಷ್ಟು ಕ್ರೀಡಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 12:50 pm, Sun, 18 December 22

Follow Us
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ