AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಾಝ್​ ಬಾಲ್​ ಬೌಲ್ಡ್​… ಆ್ಯಶಸ್ ಗೆದ್ದ ಆಸ್ಟ್ರೇಲಿಯಾ

Australia vs England 5th Test: ಆ್ಯಶಸ್ ಸರಣಿಯ ಮೊದಲ ಮೂರು ಪಂದ್ಯಗಳಲ್ಲಿ ಆಸ್ಟ್ರೇಲಿಯಾ ತಂಡ ಭರ್ಜರಿ ಗೆಲುವು ದಾಖಲಿಸಿತ್ತು. ಆದರೆ ನಾಲ್ಕನೇ ಪಂದ್ಯದಲ್ಲಿ ಆತಿಥೇಯರಿಗೆ ಸೋಲುಣಿಸುವಲ್ಲಿ ಇಂಗ್ಲೆಂಡ್ ತಂಡ ಯಶಸ್ವಿಯಾಗಿದ್ದರು. ಇನ್ನು ಕೊನೆಯ ಪಂದ್ಯದಲ್ಲಿ ಆಂಗ್ಲ ಪಡೆಯನ್ನು ಆಸ್ಟ್ರೇಲಿಯಾ ತಂಡ ಬಗ್ಗು ಬಡಿದು 4-1 ಅಂತರದಿಂದ ಆ್ಯಶಸ್ ಸರಣಿಯನ್ನು ಗೆದ್ದುಕೊಂಡಿದೆ.

ಬಾಝ್​ ಬಾಲ್​ ಬೌಲ್ಡ್​... ಆ್ಯಶಸ್ ಗೆದ್ದ ಆಸ್ಟ್ರೇಲಿಯಾ
Australia
ಝಾಹಿರ್ ಯೂಸುಫ್
|

Updated on: Jan 08, 2026 | 9:01 AM

Share

ಬಾಝ್ ಬಾಲ್ ತಂತ್ರದೊಂದಿಗೆ 15 ವರ್ಷಗಳ ಬಳಿಕ ಆಸ್ಟ್ರೇಲಿಯಾದಲ್ಲಿ ಆ್ಯಶಸ್ ಸರಣಿ ಗೆಲ್ಲುವ ಧ್ಯೇಯದೊಂದಿಗೆ ಬಂದಿದ್ದ ಇಂಗ್ಲೆಂಡ್ ತಂಡವು 4 ಸೋಲುಗಳೊಂದಿಗೆ ಮತ್ತೊಮ್ಮೆ ಮಂಡಿಯೂರಿದೆ. ಈ ಸರಣಿಯ ಮೊದಲೆರಡು ಪಂದ್ಯಗಳಲ್ಲಿ 8 ವಿಕೆಟ್​ಗಳ ಭರ್ಜರಿ ಜಯ ಸಾಧಿಸಿದ್ದ ಆಸ್ಟ್ರೇಲಿಯಾ ತಂಡವು ಮೂರನೇ ಪಂದ್ಯದಲ್ಲಿ 82 ರನ್​ಗಳ ಜಯ ಸಾಧಿಸಿತ್ತು. ಈ ಮೂಲಕ ಆ್ಯಶಸ್ ಸರಣಿಯನ್ನು ವಶಪಡಿಸಿಕೊಂಡಿದ್ದರು.

ಇದಾಗ್ಯೂ ನಾಲ್ಕನೇ ಮ್ಯಾಚ್​ನಲ್ಲಿ ಕಂಬ್ಯಾಕ್ ಮಾಡಿದ್ದ ಇಂಗ್ಲೆಂಡ್ ತಂಡವು ಆತಿಥೇಯರಿಗೆ 4 ವಿಕೆಟ್​ಗಳ ಸೋಲುಣಿಸುವಲ್ಲಿ ಯಶಸ್ವಿಯಾಗಿದ್ದರು. ಆದರೆ ಐದನೇ ಟೆಸ್ಟ್ ಪಂದ್ಯದಲ್ಲಿ ಮತ್ತೊಮ್ಮೆ ಆಂಗ್ಲ ಪಡೆಗೆ ಸೋಲಿನ ರುಚಿ ತೋರಿಸುವಲ್ಲಿ ಆಸ್ಟ್ರೇಲಿಯನ್ನರು ಯಶಸ್ವಿಯಾಗಿದ್ದಾರೆ.

ಸಿಡ್ನಿ ಕ್ರಿಕೆಟ್ ಗ್ರೌಂಡ್​ನಲ್ಲಿ ನಡೆದ ಈ ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟ್ ಮಾಡಿದ ಇಂಗ್ಲೆಂಡ್ ಪ್ರಥಮ ಇನಿಂಗ್ಸ್​ನಲ್ಲಿ 384 ರನ್ ಕಲೆಹಾಕಿದ್ದರು. ಇದಕ್ಕುತ್ತರವಾಗಿ ಮೊದಲ ಇನಿಂಗ್ಸ್ ಆಡಿದ ಆಸ್ಟ್ರೇಲಿಯಾ ತಂಡ ಪೇರಿಸಿದ್ದು ಬರೋಬ್ಬರಿ 567 ರನ್​ಗಳು.

183 ರನ್​ಗಳ ಹಿನ್ನಡೆಯೊಂದಿಗೆ ದ್ವಿತೀಯ ಇನಿಂಗ್ಸ್ ಶುರು ಮಾಡಿದ ಇಂಗ್ಲೆಂಡ್ ಪರ ಜೇಕಬ್ ಬೆಥೆಲ್ 154 ರನ್​ಗಳ ಭರ್ಜರಿ ಇನಿಂಗ್ಸ್ ಆಡಿದ್ದರು. ಇದಾಗ್ಯೂ ಉಳಿದ ಬ್ಯಾಟರ್​ಗಳಿಂದ ನಿರೀಕ್ಷಿತ ಪ್ರದರ್ಶನ ಮೂಡಿಬಂದಿರಲಿಲ್ಲ. ಪರಿಣಾಮ ಇಂಗ್ಲೆಂಡ್ ತಂಡವು ದ್ವಿತೀಯ ಇನಿಂಗ್ಸ್​ನಲ್ಲಿ 342 ರನ್​ಗಳಿಸಿ ಆಲೌಟ್ ಆಗಿದೆ.

ಮೊದಲ ಇನಿಂಗ್ಸ್ ಮುನ್ನಡೆಯೊಂದಿಗೆ ದ್ವಿತೀಯ ಇನಿಂಗ್ಸ್​ನಲ್ಲಿ ಕೇವಲ 160 ರನ್​ಗಳ ಸುಲಭ ಗುರಿ ಪಡೆದ ಆಸ್ಟ್ರೇಲಿಯಾ ತಂಡಕ್ಕೆ ಆರಂಭಿಕ ಆಘಾತ ನೀಡುವಲ್ಲಿ ಆಂಗ್ಲ ಬೌಲರ್​ಗಳು ಯಶಸ್ವಿಯಾಗಿದ್ದರು. ಇದಾಗ್ಯೂ ಆಸ್ಟ್ರೇಲಿಯಾ ತಂಡ 31.2 ಓವರ್​ಗಳಲ್ಲಿ 161 ರನ್​ಗಳಿಸಿ 5 ವಿಕೆಟ್​ಗಳ ವಿಜಯ ಸಾಧಿಸಿದೆ.

ಈ ಗೆಲುವಿನೊಂದಿಗೆ ಐದು ಪಂದ್ಯಗಳ ಆ್ಯಶಸ್ ಸರಣಿಯನ್ನು ಆಸ್ಟ್ರೇಲಿಯಾ ತಂಡ 4-1 ಅಂತರದಿಂದ ಗೆದ್ದುಕೊಂಡಿದೆ. ಅತ್ತ ಆಕ್ರಮಣಕಾರಿ ಆಟದೊಂದಿಗೆ (ಬಾಝ್ ಬಾಲ್ ಕ್ರಿಕೆಟ್) ಆ್ಯಶಸ್ ಸರಣಿ ಗೆಲ್ಲುವ ತಂತ್ರದೊಂದಿಗೆ ಆಗಮಿಸಿದ್ದ ಇಂಗ್ಲೆಂಡ್ ತಂಡವು ಈ ಬಾರಿ ಒಂದು ಗೆಲುವಿನೊಂದಿಗೆ ಮರಳಿರುವುದು ಸಮಾಧಾನಕರ.

ಏಕೆಂದರೆ ಇದು ಆಸ್ಟ್ರೇಲಿಯಾದಲ್ಲಿ 14 ವರ್ಷಗಳ ಬಳಿಕ ಇಂಗ್ಲೆಂಡ್ ತಂಡ ಸಾಧಿಸಿದ ಮೊದಲ ಗೆಲುವಾಗಿದೆ. ಅಂದರೆ 2011 ರಲ್ಲಿ ನಡೆದ ಆ್ಯಶಸ್ ಸರಣಿಯ  ಐದನೇ ಹಾಗೂ ಕೊನೆಯ ಟೆಸ್ಟ್ ಪಂದ್ಯದಲ್ಲಿ ಆಸ್ಟ್ರೇಲಿಯಾವನ್ನು ಇನ್ನಿಂಗ್ಸ್ ಮತ್ತು 83 ರನ್‌ಗಳಿಂದ ಸೋಲಿಸಿದ ಬಳಿಕಆಂಗ್ಲ ಪಡೆ ಒಮ್ಮೆಯೂ ಕಾಂಗರೂನಾಡಿನಲ್ಲಿ ಟೆಸ್ಟ್ ಪಂದ್ಯ ಗೆದ್ದಿರಲಿಲ್ಲ. ಆದರೆ ಈ ಬಾರಿ ಒಂದು ಗೆಲುವಿನೋಂದಿಗೆ ಸೋಲಿನ ಸರಪಳಿಯನ್ನು ಕಳಚಿಕೊಂಡಿದೆ.

ಆಸ್ಟ್ರೇಲಿಯಾ ಪ್ಲೇಯಿಂಗ್ 11: ಸ್ಟೀವ್ ಸ್ಮಿತ್ (ನಾಯಕ), ಟ್ರಾವಿಸ್ ಹೆಡ್, ಜೇಕ್ ವೆದರಾಲ್ಡ್​, ಮಾರ್ನಸ್ ಲ್ಯಾಬುಶೇನ್, ಉಸ್ಮಾನ್ ಖ್ವಾಜಾ, ಅಲೆಕ್ಸ್ ಕ್ಯಾರಿ, ಕ್ಯಾಮರೋನ್ ಗ್ರೀನ್, ಬ್ಯೂ ವೆಬ್‌ಸ್ಟರ್, ಮೈಕೆಲ್ ನೇಸರ್, ಮಿಚೆಲ್ ಸ್ಟಾರ್ಕ್, ಸ್ಕಾಟ್ ಬೋಲ್ಯಾಂಡ್.

ಇದನ್ನೂ ಓದಿ: IPL 2026: ಬೆಂಕಿ ಬೌಲಿಂಗ್ …. ವಿಂಡೀಸ್ ದಿಗ್ಗಜರ ನಡುವೆ ಕನ್ನಡಿಗನ ವಿಶ್ವ ದಾಖಲೆ

ಇಂಗ್ಲೆಂಡ್ ಪ್ಲೇಯಿಂಗ್ 11: ಝಾಕ್ ಕ್ರಾಲಿ, ಬೆನ್ ಡಕೆಟ್, ಜೇಕಬ್ ಬೆಥೆಲ್, ಜೋ ರೂಟ್, ಹ್ಯಾರಿ ಬ್ರೂಕ್, ಬೆನ್ ಸ್ಟೋಕ್ಸ್ (ನಾಯಕ), ಜೇಮಿ ಸ್ಮಿತ್ (ವಿಕೆಟ್ ಕೀಪರ್), ವಿಲ್ ಜ್ಯಾಕ್ಸ್, ಬ್ರೈಡನ್ ಕಾರ್ಸ್, ಮ್ಯಾಥ್ಯೂ ಪಾಟ್ಸ್, ಜೋಶ್ ಟಂಗ್.

ಸೊಸೆಗೆ ನೌಕರಿ ಕೊಟ್ಟಿಲ್ಲವೆಂದು ಅಂಗನವಾಡಿಗೆ ಬೀಗ ಜಡಿದ ಮಾಲೀಕ!
ಸೊಸೆಗೆ ನೌಕರಿ ಕೊಟ್ಟಿಲ್ಲವೆಂದು ಅಂಗನವಾಡಿಗೆ ಬೀಗ ಜಡಿದ ಮಾಲೀಕ!
ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು