AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs AUS: ಪಿಂಕ್ ಬಾಲ್​​ ಟೆಸ್ಟ್​​ಗೆ ಬಲಿಷ್ಠ ಆಸ್ಟ್ರೇಲಿಯಾ ತಂಡ ಪ್ರಕಟ: ವೆಬ್​​ಸ್ಟರ್ ಎಂಟ್ರಿ

Australia vs India: ಭಾರತ ಮತ್ತು ಆಸ್ಟ್ರೇಲಿಯಾ ನಡುವಣ ಐದು ಪಂದ್ಯಗಳ ಟೆಸ್ಟ್ ಸರಣಿಯ ಮೊದಲ ಮ್ಯಾಚ್​​ನಲ್ಲಿ ಟೀಮ್ ಇಂಡಿಯಾ ಭರ್ಜರಿ ಜಯ ಸಾಧಿಸಿದೆ. ಇದೀಗ ಉಭಯ ತಂಡಗಳು ಅಡಿಲೇಡ್​ನಲ್ಲಿ ನಡೆಯಲಿರುವ ಎರಡನೇ ಪಂದ್ಯಕ್ಕಾಗಿ ಸಜ್ಜಾಗುತ್ತಿದೆ. ಈ ಪಂದ್ಯವು ಡಿಸೆಂಬರ್ 6 ರಿಂದ ಶುರುವಾಗಲಿದೆ.

IND vs AUS: ಪಿಂಕ್ ಬಾಲ್​​ ಟೆಸ್ಟ್​​ಗೆ ಬಲಿಷ್ಠ ಆಸ್ಟ್ರೇಲಿಯಾ ತಂಡ ಪ್ರಕಟ: ವೆಬ್​​ಸ್ಟರ್ ಎಂಟ್ರಿ
Australia
ಝಾಹಿರ್ ಯೂಸುಫ್
|

Updated on:Nov 30, 2024 | 10:04 AM

Share

ಬಾರ್ಡರ್​ – ಗವಾಸ್ಕರ್ ಟೆಸ್ಟ್ ಸರಣಿಯ ಎರಡನೇ ಪಂದ್ಯಕ್ಕೆ ಬಲಿಷ್ಠ ಆಸ್ಟ್ರೇಲಿಯಾ ತಂಡವನ್ನು ಪ್ರಕಟಿಸಲಾಗಿದೆ. ಈ ಪಂದ್ಯದಲ್ಲೂ ನಾಯಕರಾಗಿ ಪ್ಯಾಟ್ ಕಮಿನ್ಸ್ ಕಾಣಿಸಿಕೊಳ್ಳಲಿದ್ದಾರೆ. ಆದರೆ ಮೊದಲ ಪಂದ್ಯದಲ್ಲಿ ಕಣಕ್ಕಿಳಿದಿದ್ದ ಆಲ್​​ರೌಂಡರ್ ಮಿಚೆಲ್ ಮಾರ್ಷ್ ಪಿಂಕ್ ಬಾಲ್ ಟೆಸ್ಟ್​​ಗೆ ಅಲಭ್ಯರಾಗಿದ್ದಾರೆ.

ಫಿಟ್​​ನೆಸ್ ಸಮಸ್ಯೆಯಿಂದ ಬಳಲುತ್ತಿರುವ ಮಾರ್ಷ್ ಅವರಿಗೆ ವಿಶ್ರಾಂತಿ ನೀಡಲಾಗಿದ್ದು, ಅವರ ಬದಲಿಗೆ ಅನುಭವಿ ಆಲ್​ರೌಂಡರ್ ಬ್ಯೂ ವೆಬ್‌ಸ್ಟರ್ ಅವರನ್ನು ತಂಡಕ್ಕೆ ಸೇರಿಸಿಕೊಳ್ಳಲಾಗಿದೆ.

30 ವರ್ಷದ ಬ್ಯೂ ವೆಬ್‌ಸ್ಟರ್ ಇದೇ ಮೊದಲ ಬಾರಿಗೆ ಆಸ್ಟ್ರೇಲಿಯಾ ತಂಡದಲ್ಲಿ ಸ್ಥಾನ ಪಡೆದಿದ್ದಾರೆ. ಪ್ರಥಮ ದರ್ಜೆ ಕ್ರಿಕೆಟ್​​ನಲ್ಲಿ 159 ಇನಿಂಗ್ಸ್ ಆಡಿರುವ ವೆಬ್​​ಸ್ಟರ್ 12 ಶತಕ ಹಾಗೂ 24 ಅರ್ಧಶತಕಗಳೊಂದಿಗೆ 5297 ರನ್ ಕಲೆಹಾಕಿದ್ದಾರೆ. ಹಾಗೆಯೇ ಬೌಲಿಂಗ್​​ನಲ್ಲಿ 148 ವಿಕೆಟ್ ಕಬಳಿಸಿ ಮಿಂಚಿದ್ದಾರೆ. ಇದೀಗ ರಾಷ್ಟ್ರೀಯ ತಂಡಕ್ಕೆ ಎಂಟ್ರಿ ಕೊಟ್ಟಿರುವ ಹಿರಿಯ ಆಟಗಾರನಿಗೆ ಅಡಿಲೇಡ್​​ ಟೆಸ್ಟ್​​ನಲ್ಲಿ ಅವಕಾಶ ಸಿಗಲಿದೆಯಾ ಕಾದು ನೋಡಬೇಕಿದೆ.

ಪಿಂಕ್ ಬಾಲ್ ಟೆಸ್ಟ್ ಯಾವಾಗ?

ಭಾರತ ಮತ್ತು ಆಸ್ಟ್ರೇಲಿಯಾ ನಡುವಣ ಪಿಂಕ್ ಬಾಲ್ ಟೆಸ್ಟ್ ಡಿಸೆಂಬರ್ 6 ರಿಂದ ಶುರುವಾಗಲಿದೆ. ಅಡಿಲೇಡ್​ನ ಓವಲ್ ಮೈದಾನದಲ್ಲಿ ಜರುಗಲಿರುವ ಈ ಪಂದ್ಯವು ಡೇ-ನೈಟ್ ನಲ್ಲಿ ನಡೆಯಲಿದ್ದು, ಈ ಪಂದ್ಯವನ್ನು ಪಿಂಕ್ ಬಾಲ್​​ನಲ್ಲಿ ಆಡಲಾಗುತ್ತದೆ. ಇದೇ ಕಾರಣದಿಂದಾಗಿ ಇದನ್ನು ಪಿಂಕ್ ಬಾಲ್ ಟೆಸ್ಟ್ ಎಂದು ಕರೆಯಲಾಗುತ್ತದೆ. ಈ ಟೆಸ್ಟ್ ಪಂದ್ಯಕ್ಕಾಗಿ ಉಭಯ ತಂಡಗಳು ಈ ಕೆಳಗಿನಂತಿದೆ…

ಆಸ್ಟ್ರೇಲಿಯಾ ಟೆಸ್ಟ್​ ತಂಡ: ಪ್ಯಾಟ್ ಕಮಿನ್ಸ್ (ನಾಯಕ), ಸ್ಕಾಟ್ ಬೋಲ್ಯಾಂಡ್, ಅಲೆಕ್ಸ್ ಕ್ಯಾರಿ (ವಿಕೆಟ್ ಕೀಪರ್), ಟ್ರಾವಿಸ್ ಹೆಡ್, ಜೋಶ್ ಇಂಗ್ಲಿಸ್, ಉಸ್ಮಾನ್ ಖ್ವಾಜಾ, ಮಾರ್ನಸ್ ಲ್ಯಾಬುಶೇನ್, ನಾಥನ್ ಲಿಯಾನ್, ಮಿಚ್ ಮಾರ್ಷ್, ನಾಥನ್ ಮೆಕ್‌ಸ್ವೀನಿ, ಸ್ಟೀವ್ ಸ್ಮಿತ್, ಮಿಚೆಲ್ ಸ್ಟಾರ್ , ಬ್ಯೂ ವೆಬ್‌ಸ್ಟರ್, ಶಾನ್ ಅಬಾಟ್ ಮತ್ತು ಬ್ರೆಂಡನ್ ಡಾಗೆಟ್.

ಇದನ್ನೂ ಓದಿ: IPL 2025: ವಿರಾಟ್ ಕೊಹ್ಲಿ ಜೊತೆಗಿನ ಕಿರಿಕ್​​ಗೆ ಭಾರೀ ಬೆಲೆ ತೆತ್ತ ‘ಮ್ಯಾಂಗೊ’ ನವೀನ

ಭಾರತ ಟೆಸ್ಟ್ ತಂಡ: ರೋಹಿತ್ ಶರ್ಮಾ (ನಾಯಕ), ಜಸ್​ಪ್ರೀತ್ ಬುಮ್ರಾ (ಉಪನಾಯಕ), ಯಶಸ್ವಿ ಜೈಸ್ವಾಲ್, ಅಭಿಮನ್ಯು ಈಶ್ವರನ್, ಶುಭ್​ಮನ್ ಗಿಲ್ , ವಿರಾಟ್ ಕೊಹ್ಲಿ , ಕೆಎಲ್ ರಾಹುಲ್, ರಿಷಭ್ ಪಂತ್ (ವಿಕೆಟ್ ಕೀಪರ್), ಸರ್ಫರಾಝ್ ಖಾನ್, ಧ್ರುವ್ ಜುರೆಲ್ (ವಿಕೆಟ್ ಕೀಪರ್), ರವಿಚಂದ್ರನ್ ಅಶ್ವಿನ್, ರವೀಂದ್ರ ಜಡೇಜಾ , ಮೊಹಮ್ಮದ್ ಸಿರಾಜ್ , ಆಕಾಶ್ ದೀಪ್, ಪ್ರಸಿದ್ಧ್ ಕೃಷ್ಣ, ಹರ್ಷಿತ್ ರಾಣ, ನಿತೀಶ್ ಕುಮಾರ್ ರೆಡ್ಡಿ, ವಾಷಿಂಗ್ಟನ್ ಸುಂದರ್, ದೇವದತ್ ಪಡಿಕ್ಕಲ್.

ಟೀಮ್ ಇಂಡಿಯಾ ಮುನ್ನಡೆ:

ಐದು ಪಂದ್ಯದ ಬಾರ್ಡರ್-ಗವಾಸ್ಕರ್ ಟೆಸ್ಟ್ ಸರಣಿಯಲ್ಲಿ ಟೀಮ್ ಇಂಡಿಯಾ ಮುನ್ನಡೆ ಸಾಧಿಸಿದೆ. ಪರ್ತ್​​ನಲ್ಲಿ ನಡೆದ ಮೊದಲ ಟೆಸ್ಟ್ ಪಂದ್ಯದಲ್ಲಿ 295 ರನ್​​ಗಳಿಂದ ಆಸೀಸ್ ಪಡೆಯನ್ನು ಬಗ್ಗು ಬಡಿದು ಭಾರತ ತಂಡ ಶುಭಾರಂಭ ಮಾಡಿದೆ. ಈ ಗೆಲುವಿನೊಂದಿಗೆ ಟೀಮ್ ಇಂಡಿಯಾ 1-0 ಅಂತರದಿಂದ ಮುನ್ನಡೆ ಸಾಧಿಸಿದ್ದು, ಈ ಗೆಲುವಿನ ಲಯವನ್ನು ಅಡಿಲೇಡ್​ನಲ್ಲೂ ಮುಂದುವರೆಸುವ ವಿಶ್ವಾಸದಲ್ಲಿದೆ.

Published On - 11:36 am, Thu, 28 November 24

Follow Us
ಗ್ಯಾರಂಟಿ ಪ್ರಾಧಿಕಾರದ ಸಭೆಯಲ್ಲಿ ಮಹತ್ವದ ತೀರ್ಮಾನ: ಚುನಾವಣೆಗೆ ತಯಾರಿ?
ಗ್ಯಾರಂಟಿ ಪ್ರಾಧಿಕಾರದ ಸಭೆಯಲ್ಲಿ ಮಹತ್ವದ ತೀರ್ಮಾನ: ಚುನಾವಣೆಗೆ ತಯಾರಿ?
ಗೃಹಜ್ಯೋತಿ ಫಲಾನುಭವಿಗಳಿಗೆ ಬಿಗ್​ ಅಪ್ಡೇಟ್​:ಪರಿಷ್ಕರಣೆಗೆ ಗಡುವು ವಿಸ್ತರಣೆ
ಗೃಹಜ್ಯೋತಿ ಫಲಾನುಭವಿಗಳಿಗೆ ಬಿಗ್​ ಅಪ್ಡೇಟ್​:ಪರಿಷ್ಕರಣೆಗೆ ಗಡುವು ವಿಸ್ತರಣೆ
ಉಜ್ಬೆಕಿಸ್ತಾನ್‌ ಮಕ್ಕಳ ಬಾಯಲ್ಲಿ ತಾವೇ ಬರೆದ ಕವಿತೆ ಕೇಳಿ ಭಾವುಕರಾದ ಮೋದಿ
ಉಜ್ಬೆಕಿಸ್ತಾನ್‌ ಮಕ್ಕಳ ಬಾಯಲ್ಲಿ ತಾವೇ ಬರೆದ ಕವಿತೆ ಕೇಳಿ ಭಾವುಕರಾದ ಮೋದಿ
BMTC,KSRTC ನಿಲ್ದಾಣಗಳಿಗೆ ದಿಢೀರ್ ಭೇಟಿ, ಪ್ರಯಾಣಿಕರ ಸಮಸ್ಯೆ ಆಲಿಸಿದ ಸಚಿವ
BMTC,KSRTC ನಿಲ್ದಾಣಗಳಿಗೆ ದಿಢೀರ್ ಭೇಟಿ, ಪ್ರಯಾಣಿಕರ ಸಮಸ್ಯೆ ಆಲಿಸಿದ ಸಚಿವ
ಬೆಂಗಳೂರಿನಲ್ಲಿ ಕಳಪೆ ಸಿಹಿ ತಿನಿಸುಗಳ ಮಾರಾಟಕ್ಕೆ ಲಗಾಮು
ಬೆಂಗಳೂರಿನಲ್ಲಿ ಕಳಪೆ ಸಿಹಿ ತಿನಿಸುಗಳ ಮಾರಾಟಕ್ಕೆ ಲಗಾಮು
ಕೆಪಿಎಸ್‌ಸಿ ಅಕ್ರಮದ ಮತ್ತಷ್ಟು ಸ್ಫೋಟಕ ವಿಚಾರಗಳನ್ನ ಬಹಿರಂಗಪಡಿಸಿದ HDK
ಕೆಪಿಎಸ್‌ಸಿ ಅಕ್ರಮದ ಮತ್ತಷ್ಟು ಸ್ಫೋಟಕ ವಿಚಾರಗಳನ್ನ ಬಹಿರಂಗಪಡಿಸಿದ HDK
ಕಿರ್ಗಿಸ್ತಾನದಲ್ಲಿ ಅರ್ಮೇನಿಯಾ ಪ್ರಧಾನಿ ಜೊತೆ ಪಿಎಂ ಮೋದಿ ದ್ವಿಪಕ್ಷೀಯ ಸಭೆ
ಕಿರ್ಗಿಸ್ತಾನದಲ್ಲಿ ಅರ್ಮೇನಿಯಾ ಪ್ರಧಾನಿ ಜೊತೆ ಪಿಎಂ ಮೋದಿ ದ್ವಿಪಕ್ಷೀಯ ಸಭೆ
ನೇಪಾಳ ಪ್ರವಾಹ: ತುಮಕೂರಿನ ರಂಗು ಸುಧೀರ್, ಕೀರ್ತಿ ಆಚಾರ್ಯ ನಾಪತ್ತೆ
ನೇಪಾಳ ಪ್ರವಾಹ: ತುಮಕೂರಿನ ರಂಗು ಸುಧೀರ್, ಕೀರ್ತಿ ಆಚಾರ್ಯ ನಾಪತ್ತೆ
ನೇಪಾಳ ಪ್ರವಾಹ: ಸಂಪರ್ಕಕ್ಕೆ ಸಿಗದ 13 ಕನ್ನಡಿಗರು, ಸಿಎಂ ಹೇಳಿದ್ದೇನು ನೋಡಿ
ನೇಪಾಳ ಪ್ರವಾಹ: ಸಂಪರ್ಕಕ್ಕೆ ಸಿಗದ 13 ಕನ್ನಡಿಗರು, ಸಿಎಂ ಹೇಳಿದ್ದೇನು ನೋಡಿ
ಉಜ್ಬೇಕಿಸ್ತಾನದಲ್ಲಿ ಭಾರತೀಯ ಸಂಸ್ಕೃತಿಯ ಕಂಪು ಪಸರಿಸಿದ ಪಿಎಂ ಮೋದಿ
ಉಜ್ಬೇಕಿಸ್ತಾನದಲ್ಲಿ ಭಾರತೀಯ ಸಂಸ್ಕೃತಿಯ ಕಂಪು ಪಸರಿಸಿದ ಪಿಎಂ ಮೋದಿ