AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs AUS 3rd Test: ಭಾರತವನ್ನು ಭಾರತದಲ್ಲೇ ಸೋಲಿಸಲು ಆಸ್ಟ್ರೇಲಿಯಾ ಆಟಗಾರರು ಏನೆಲ್ಲ ಹರಸಾಹಸ ಪಡುತ್ತಿದ್ದಾರೆ ನೋಡಿ

India vs Australia 3rd Test: ಭಾರತವನ್ನು ಭಾರತದಲ್ಲೇ ಸೋಲಿಸಲು ಆಸ್ಟ್ರೇಲಿಯಾ ಪ್ಲೇಯರ್ಸ್ ಹಿಂದೆಂದೂ ಮಾಡದ ರೀತಿಯಲ್ಲಿ ಅಭ್ಯಾಸ ನಡೆಸುತ್ತಿದ್ದಾರೆ. ಪ್ರ್ಯಾಕ್ಟೀಸ್​ಗಾಗಿ ದೇಸಿ ಶೈಲಿಯ ಮೊರೆ ಹೋಗಿದ್ದಾರೆ.

IND vs AUS 3rd Test: ಭಾರತವನ್ನು ಭಾರತದಲ್ಲೇ ಸೋಲಿಸಲು ಆಸ್ಟ್ರೇಲಿಯಾ ಆಟಗಾರರು ಏನೆಲ್ಲ ಹರಸಾಹಸ ಪಡುತ್ತಿದ್ದಾರೆ ನೋಡಿ
Australia Team Practice
Vinay Bhat
|

Updated on:Feb 27, 2023 | 7:39 AM

Share

ಬಾರ್ಡರ್- ಗವಾಸ್ಕರ್ ಟ್ರೋಫಿ (Border- Gavaskar Trophy) ಟೆಸ್ಟ್ ಸರಣಿಗಾಗಿ ಭಾರತಕ್ಕೆ ಬಂದ ಆಸ್ಟ್ರೇಲಿಯಾ (India vs Australia) ತಂಡಕ್ಕೆ ಇದುವರೆಗೆ ಒಂದೂ ಶುಭಸುದ್ದಿ ಸಿಕ್ಕಿಲ್ಲ. ಸೋಲು ಹಾಗೂ ಇಂಜುರಿಗಳಿಗೆ ಕಾಂಗರೂ ಪಡೆ ತತ್ತರಿಸಿ ಹೋಗಿದೆ. ನಾಗ್ಪುರ ಹಾಗೂ ದೆಹಲಿಯಲ್ಲಿ ನಡೆದ ಮೊದಲ ಎರಡೂ ಟೆಸ್ಟ್ ಪಂದ್ಯಗಳಲ್ಲಿ ಹೀನಾಯ ಸೋಲು ಕಂಡಿರುವ ಕಾಂಗರೂ ಪಡೆ ಟ್ರೋಫಿಯನ್ನೂ ವಶಪಡಿಸಿಕೊಳ್ಳುವಲ್ಲಿ ವಿಫಲವಾಗಿದೆ. ಇನ್ನೇನಿದ್ದರು ಕನಿಷ್ಠ ಸಮಬಲಕ್ಕೆ ಹೋರಾಟ ನಡೆಸಬೇಕಿದೆ. ಆಸ್ಟ್ರೇಲಿಯಾ ಟೆಸ್ಟ್ ಸರಣಿಯನ್ನು ಸಮಬಲ ಸಾಧಿಸಿ ಮಾನ ಉಳಿಸಿಕೊಳ್ಳ ಬೇಕು ಎಂದರೆ ಉಳಿದಿರುವ ಎರಡೂ ಪಂದ್ಯದಲ್ಲಿ ಗೆಲ್ಲಲೇ ಬೇಕು. ಇದಕ್ಕಾಗಿ ವಿಭಿನ್ನ ರೀತಿಯಲ್ಲಿ ಭರ್ಜರಿ ಅಭ್ಯಾಸ (Practice) ಕೂಡ ಶುರು ಮಾಡಿದೆ.

ಭಾರತವನ್ನು ಭಾರತದಲ್ಲೇ ಸೋಲಿಸಲು ಆಸ್ಟ್ರೇಲಿಯಾ ಪ್ಲೇಯರ್ಸ್ ಹಿಂದೆಂದೂ ಮಾಡದ ರೀತಿಯಲ್ಲಿ ಅಭ್ಯಾಸ ನಡೆಸುತ್ತಿದ್ದಾರೆ. ಪ್ರ್ಯಾಕ್ಟೀಸ್​ಗಾಗಿ ದೇಸಿ ಶೈಲಿಯ ಮೊರೆ ಹೋಗಿರು ಸ್ಮಿತ್ ಪಡೆ ಫೀಲ್ಡಿಂಗ್​ನಲ್ಲಿ ಯಶಸ್ಸು ಸಾಧಿಸಲು ರೋಲರ್​ಗಳು, ರಗ್ಬಿ, ಫುಟ್​ಬಾಲ್, ಸ್ಟೀಲ್ ಬೋರ್ಡ್ ಮೂಲಕ ಅಭ್ಯಾಸ ನಡೆಸುತ್ತಿದ್ದಾರೆ. ಮೊದಲ ಎರಡು ಟೆಸ್ಟ್​ನಲ್ಲಿ ಆಸೀಸ್ ಆಟಗಾರರರು ಅನೇಕ ಕ್ಯಾಚ್​ಗಳನ್ನು ಕೈಚೆಲ್ಲಿದ್ದರಿಂದ ಸಹಾಯಕ ಕೋಚ್ ಆಂಡ್ರ್ಯೋ ಬೊರೊವೆಕ್ ರೋಲರ್, ಸ್ಟೀಲ್ ಬೋರ್ಡ್​ಗಳನ್ನು ಬಳಸಿ ಫೀಲ್ಡಿಂಗ್ ಅಭ್ಯಾಸ ನಡೆಸಿದರು. ವಿಶೇಷ ಎಂದರೆ ಆಸೀಸ್ ಆಟಗಾರರೇ ಈ ಸಾಧನವನ್ನು ತಂದು ತಯಾರು ಮಾಡಿದರು. ಕ್ರಿಕೆಟ್ ಆಸ್ಟ್ರೇಲಿಯಾ ಈ ವಿಡಿಯೋವನ್ನು ತನ್ನ ಟ್ವಿಟ್ಟರ್ ಖಾತೆಯಲ್ಲಿ ಹಂಚಿಕೊಂಡಿದೆ.

ಇದನ್ನೂ ಓದಿ
Image
Ranbir Kapoor: ಸೌರವ್​ ಗಂಗೂಲಿ, ಕಿಶೋರ್​ ಕುಮಾರ್​ ಬಯೋಪಿಕ್​ ಬಗ್ಗೆ ಬಾಯ್ಬಿಟ್ಟ ನಟ ರಣಬೀರ್​ ಕಪೂರ್​
Image
IPL 2023: ರಿಷಭ್ ಪಂತ್ ಬಳಿಕ ಡೆಲ್ಲಿ ಕ್ಯಾಪಿಟಲ್ಸ್​ ತಂಡದ ಮತ್ತೋರ್ವ ಆಟಗಾರನಿಗೆ ಗಾಯ..!
Image
James Anderson: ಸಚಿನ್ ತೆಂಡೂಲ್ಕರ್ ವಿಶ್ವ ದಾಖಲೆಯತ್ತ ಜಿಮ್ಮಿಯ ದಾಪುಗಾಲು..!
Image
World Record: ಕ್ರಿಕೆಟ್​ ಇತಿಹಾಸದಲ್ಲಿ ಹೊಸ ವಿಶ್ವ ದಾಖಲೆ ನಿರ್ಮಿಸಿದ ಮೆಗ್ ಲ್ಯಾನಿಂಗ್

Team India Records: ಅತೀ ಹೆಚ್ಚು ಬಾರಿ ಪಂದ್ಯ ಶ್ರೇಷ್ಠ ಪ್ರಶಸ್ತಿ ಪಡೆದ ಟೀಮ್ ಇಂಡಿಯಾ ಆಟಗಾರ ಯಾರು ಗೊತ್ತಾ?

ಭಾರತ ಹಾಗೂ ಆಸ್ಟ್ರೇಲಿಯಾ ನಡುವಣ ಮೂರನೇ ಟೆಸ್ಟ್ ಪಂದ್ಯ ಮಾರ್ಚ್ 1 ರಿಂದ ಇಂದೋರ್​ನ ಹೋಲ್ಕರ್ ಕ್ರಿಕೆಟ್ ಸ್ಟೇಡಿಯಂನಲ್ಲಿ ಶುರುವಾಗಲಿದೆ. ಇಲ್ಲಿನ ಪಿಚ್ ಕೆಂಪು ಮಣ್ಣಿನಿಂದ ಆವೃತ್ತವಾಗಿರುವ ಕಾರಣ ಆರಂಭದಲ್ಲಿ ವೇಗಿಗಳಿಗೆ ಸಹಾಯ ಮಾಡುತ್ತದೆ. ಪಂದ್ಯವು ಮುಂದುವರೆದಂತೆ, ಸ್ಪಿನ್ನರ್‌ಗಳು ಪ್ರಾಬಲ್ಯ ಸಾಧಿಸುತ್ತಾರೆ. ಅಂದರೆ ಮಿಚೆಲ್ ಸ್ಟಾರ್ಕ್ ಮತ್ತು ಕ್ಯಾಮರೂನ್ ಗ್ರೀನ್ ಹೊಸ ಚೆಂಡಿನೊಂದಿಗೆ ಪಿಚ್‌ನಲ್ಲಿನ ಬೌನ್ಸ್ ಅನ್ನು ಪರಿಗಣಿಸಿ ಸ್ಲಿಪ್‌ಗಳಲ್ಲಿ ಸಾಕಷ್ಟು ಕ್ಯಾಚಿಂಗ್ ಅವಕಾಶಗಳನ್ನು ಸೃಷ್ಟಿಸಲು ಸಾಧ್ಯವಾಗುತ್ತದೆ. ಇದಕ್ಕಾಗಿಯೆ ಆಸೀಸ್​ ಆಟಗಾರರು ತಯಾರಾಗುತ್ತಿದ್ದಾರೆ.

ಇತ್ತ ಎರಡನೇ ಟೆಸ್ಟ್ ಮೂರೇ ದಿನಕ್ಕೆ ಮುಕ್ತಾಯವಾದ ಕಾರಣ ಟೀಮ್ ಇಂಡಿಯಾ ಪ್ಲೇಯರ್ಸ್ ಮನೆಗೆ ತೆರಳಿದ್ದರು. ಆದರೆ, ಶನಿವಾರ ಇಂದೋರ್​​ಗೆ ತಲುಪಿದ್ದು ಭಾನುವಾರ ಅಭ್ಯಾಸ ಶುರು ಮಾಡಿಕೊಂಡಿದ್ದಾರೆ. ಮೂರನೇ ಟೆಸ್ಟ್​ಗೆ ಭಾರತ ತಂಡದಲ್ಲಿ ಯಾವುದೇ ಬದಲಾವಣೆ ಮಾಡಲಾಗಿಲ್ಲ. ರಣಜಿ ಟ್ರೋಫಿ ಫೈನಲ್​ಗಾಗಿ ತಂಡ ತೊರೆದಿದ್ದ ಜಯದೇವ್ ಉನಾದ್ಕಟ್ ಮರಳಿದ್ದಾರೆ. ಸಂಭಾವ್ಯ ಪ್ಲೇಯಿಂಗ್ ಇಲೆವೆನ್ ನೋಡುವುದಾದರೆ ಕಳಪೆ ಫಾರ್ಮ್​ನಲ್ಲಿರುವ ಕೆಎಲ್ ರಾಹುಲ್ ಕೈಬಿಟ್ಟು ಶುಭ್​ಮನ್ ಗಿಲ್ ಅವಕಾಶ ಪಡೆಯಬಹುದು.

ಭಾರತ ತಂಡ: ರೋಹಿತ್ ಶರ್ಮಾ (ನಾಯಕ), ಕೆಎಲ್ ರಾಹುಲ್, ಶುಭಮನ್ ಗಿಲ್, ಚೇತೇಶ್ವರ್ ಪೂಜಾರ, ವಿರಾಟ್ ಕೊಹ್ಲಿ, ಕೆಎಸ್ ಭರತ್ (ವಿಕೆಟ್ ಕೀಪರ್), ಇಶಾನ್ ಕಿಶನ್ (ವಿಕೆಟ್ ಕೀಪರ್), ರವಿಚಂದ್ರನ್ ಅಶ್ವಿನ್, ಅಕ್ಷರ್ ಪಟೇಲ್, ಕುಲದೀಪ್ ಯಾದವ್, ರವೀಂದ್ರ ಜಡೇಜಾ, ಮೊಹಮ್ಮದ್ ಶಮಿ, ಮೊಹಮ್ಮದ್ ಸಿರಾಜ್, ಶ್ರೇಯಸ್ ಅಯ್ಯರ್, ಸೂರ್ಯಕುಮಾರ್ ಯಾದವ್, ಉಮೇಶ್ ಯಾದವ್, ಜಯದೇವ್ ಉನಾದ್ಕಟ್.

ಆಸ್ಟ್ರೇಲಿಯಾ ತಂಡ: ಸ್ಟೀವ್ ಸ್ಮಿತ್ (ನಾಯಕ), ಸ್ಕಾಟ್ ಬೋಲ್ಯಾಂಡ್, ಅಲೆಕ್ಸ್ ಕ್ಯಾರಿ, ಕ್ಯಾಮರೋನ್ ಗ್ರೀನ್, ಪೀಟರ್ ಹ್ಯಾಂಡ್ಸ್‌ಕಾಂಬ್, ಟ್ರಾವಿಸ್ ಹೆಡ್, ಉಸ್ಮಾನ್ ಖ್ವಾಜಾ, ಮಾರ್ನಸ್ ಲ್ಯಾಬುಶೇನ್, ಮಿಚೆಲ್ ಸ್ಟಾರ್ಕ್​, ನಾಥನ್ ಲಿಯಾನ್, ಮ್ಯಾಥ್ಯೂ ಕುಹ್ನೆಮನ್, ಲ್ಯಾನ್ಸ್ ಮೋರಿಸ್.

ಇನ್ನಷ್ಟು ಕ್ರೀಡಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 7:39 am, Mon, 27 February 23

ಹೈವೇಯಲ್ಲೇ ಅಡುಗೆ ಮಾಡಿ ಧಿಮಾಕು ತೋರಿದ ಮಹಿಳೆ!
ಹೈವೇಯಲ್ಲೇ ಅಡುಗೆ ಮಾಡಿ ಧಿಮಾಕು ತೋರಿದ ಮಹಿಳೆ!
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ