AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs AUS: ಭಾರತೀಯ ಬ್ಯಾಟರ್​ಗಳ ಅಬ್ಬರ: 3ನೇ ದಿನದಾಟದಲ್ಲಿ ಆಸ್ಟ್ರೇಲಿಯಾ ತತ್ತರ

Australia vs India: ಆಸ್ಟ್ರೇಲಿಯಾ ವಿರುದ್ಧದ ಮೊದಲ ಟೆಸ್ಟ್ ಪಂದ್ಯದಲ್ಲಿ ಟೀಮ್ ಇಂಡಿಯಾ ಪರ ಯಶಸ್ವಿ ಜೈಸ್ವಾಲ್ (161) ಹಾಗೂ ವಿರಾಟ್ ಕೊಹ್ಲಿ (100) ಭರ್ಜರಿ ಶತಕ ಸಿಡಿಸಿದ್ದಾರೆ. ಈ ಶತಕಗಳ ನೆರವಿನಿಂದ ಟೀಮ್ ಇಂಡಿಯಾ ದ್ವಿತೀಯ ಇನಿಂಗ್ಸ್​ನಲ್ಲಿ ಆಸ್ಟ್ರೇಲಿಯಾಗೆ 534 ರನ್​ಗಳ ಗುರಿ ನೀಡಿದೆ.

IND vs AUS: ಭಾರತೀಯ ಬ್ಯಾಟರ್​ಗಳ ಅಬ್ಬರ: 3ನೇ ದಿನದಾಟದಲ್ಲಿ ಆಸ್ಟ್ರೇಲಿಯಾ ತತ್ತರ
Yashasvi Jaiswal - Virat Kohli
ಝಾಹಿರ್ ಯೂಸುಫ್
|

Updated on: Nov 24, 2024 | 3:22 PM

Share

ಪರ್ತ್​ನಲ್ಲಿ ನಡೆಯುತ್ತಿರುವ ಆಸ್ಟ್ರೇಲಿಯಾ ವಿರುದ್ಧದ ಮೊದಲ ಟೆಸ್ಟ್ ಪಂದ್ಯದ ದ್ವಿತೀಯ ಇನಿಂಗ್ಸ್​ನಲ್ಲಿ ಟೀಮ್ ಇಂಡಿಯಾ ಭರ್ಜರಿ ಪ್ರದರ್ಶನ ನೀಡಿದೆ. ಈ ಪಂದ್ಯದ ಮೂರನೇ ದಿನದಾಟದಲ್ಲಿ ಅತ್ಯುತ್ತಮ ಬ್ಯಾಟಿಂಗ್ ಪ್ರದರ್ಶಿಸಿದ ಭಾರತೀಯ ಬ್ಯಾಟರ್​ಗಳು ದ್ವಿತೀಯ ಇನಿಂಗ್ಸ್​ನಲ್ಲಿ 487 ರನ್​ಗಳಿಸಿ ಡಿಕ್ಲೇರ್ ಘೋಷಿಸಿದೆ. ಈ ಮೂಲಕ ಆಸೀಸ್ ಪಡೆಗೆ ಕೊನೆಯ ಇನಿಂಗ್ಸ್​ನಲ್ಲಿ 534 ರನ್​ಗಳ ಬೃಹತ್ ಮೊತ್ತದ ಗುರಿ ನೀಡಿದೆ.

ಇದಕ್ಕೂ ಮುನ್ನ ಈ ಪಂದ್ಯದಲ್ಲಿ ಟಾಸ್ ಗೆದ್ದ ಟೀಮ್ ಇಂಡಿಯಾ ಮೊದಲ ಇನಿಂಗ್ಸ್​ನಲ್ಲಿ 150 ರನ್ ಕಲೆಹಾಕಿತು. ಈ ಗುರಿಯನ್ನು ಬೆನ್ನತ್ತಿದ ಆಸ್ಟ್ರೇಲಿಯಾ ಪ್ರಥಮ ಇನಿಂಗ್ಸ್​ನಲ್ಲಿ ಕೇವಲ 104 ರನ್​ಗಳಿಗೆ ಮುಗ್ಗರಿಸಿ 46 ರನ್​ಗಳ ಹಿನ್ನಡೆ ಅನುಭವಿಸಿತು.

ಇದರ ಬೆನ್ನಲ್ಲೇ ದ್ವಿತೀಯ ಇನಿಂಗ್ಸ್ ಆರಂಭಿಸಿದ ಟೀಮ್ ಇಂಡಿಯಾಗೆ ಕೆಎಲ್ ರಾಹುಲ್ ಹಾಗೂ ಯಶಸ್ವಿ ಜೈಸ್ವಾಲ್ ಭರ್ಜರಿ ಆರಂಭ ಒದಗಿಸಿದ್ದರು. ಮೊದಲ ವಿಕೆಟ್​ಗೆ 201 ರನ್​ಗಳ ಜೊತೆಯಾಟವಾಡಿದ ಬಳಿಕ ಕೆಎಲ್ ರಾಹುಲ್ (77) ಇನಿಂಗ್ಸ್ ಅಂತ್ಯಗೊಳಿಸಿದರು.

ಆ ಬಳಿಕ ಬಂದ ದೇವದತ್ ಪಡಿಕ್ಕಲ್ ಕೇವಲ 25 ರನ್​ಗಳಿಸಿ ವಿಕೆಟ್ ಒಪ್ಪಿಸಿದರು. ಇದಾಗ್ಯೂ ಮತ್ತೊಂದೆಡೆ ಕ್ರೀಸ್ ಕಚ್ಚಿ ನಿಂತಿದ್ದ ಯಶಸ್ವಿ ಜೈಸ್ವಾಲ್ 205 ಎಸೆತಗಳಲ್ಲಿ ಶತಕ ಪೂರೈಸಿದರು. ಶತಕದ ಬಳಿಕ ಭರ್ಜರಿ ಬ್ಯಾಟಿಂಗ್ ಮುಂದುವರೆಸಿದ ಜೈಸ್ವಾಲ್ 297 ಎಸೆತಗಳಲ್ಲಿ 3 ಸಿಕ್ಸ್ ಹಾಗೂ 15 ಫೋರ್​ಗಳೊಂದಿಗೆ 161 ರನ್ ಬಾರಿಸಿ ಔಟಾದರು. ಆ ಬಳಿಕ ಕಣಕ್ಕಿಳಿದ ಧ್ರುವ್ ಜುರೇಲ್ (1) ಹಾಗೂ ರಿಷಭ್ ಪಂತ್ (1) ಬೇಗನೆ ವಿಕೆಟ್ ಒಪ್ಪಿಸಿದರು.

ಆದರೆ ಮತ್ತೊಂದೆಡೆ ಜವಾಬ್ದಾರಿಯುತ ಬ್ಯಾಟಿಂಗ್ ಪ್ರದರ್ಶಿಸಿದ ವಿರಾಟ್ ಕೊಹ್ಲಿ ಆಕರ್ಷಕ ಹೊಡೆತಗಳ ಮೂಲಕ ಗಮನ ಸೆಳೆದರು. ಅಲ್ಲದೆ 143 ಎಸೆತಗಳಲ್ಲಿ ಶತಕ ಪೂರೈಸಿದರು. ಈ ಮೂಲಕ ಟೆಸ್ಟ್ ಕ್ರಿಕೆಟ್​ನಲ್ಲಿ 30 ಶತಕ ಬಾರಿಸಿದ ವಿಶ್ವದ 16ನೇ ಬ್ಯಾಟರ್ ಎನಿಸಿಕೊಂಡರು.

ವಿರಾಟ್ ಕೊಹ್ಲಿಯ ಈ ಭರ್ಜರಿ ಸೆಂಚುರಿ ನೆರವಿನಿಂದ ದ್ವಿತೀಯ ಇನಿಂಗ್ಸ್​ನಲ್ಲಿ 6 ವಿಕೆಟ್ ಕಳೆದುಕೊಂಡು 487 ರನ್​ ಕಲೆಹಾಕಿದ್ದ ಟೀಮ್ ಇಂಡಿಯಾ ಡಿಕ್ಲೇರ್​ ಘೋಷಿಸಿತು. ಅತ್ತ ಮೊದಲ ಇನಿಂಗ್ಸ್​ನಲ್ಲಿ 46 ರನ್​ಗಳ ಹಿನ್ನಡೆ ಹೊಂದಿರುವ ಆಸ್ಟ್ರೇಲಿಯಾ ತಂಡವು ಗೆಲ್ಲಲು ದ್ವಿತೀಯ ಇನಿಂಗ್ಸ್​ನಲ್ಲಿ 534 ರನ್​ ಕಲೆಹಾಕಬೇಕಿದೆ.

ಟೀಮ್ ಇಂಡಿಯಾ ಶುಭಾರಂಭ:

534 ರನ್​ಗಳ ಕಠಿಣ ಸವಾಲನ್ನು ಬೆನ್ನತ್ತಲು ಕಣಕ್ಕಿಳಿದ ಆಸ್ಟ್ರೇಲಿಯಾಗೆ ಜಸ್​ಪ್ರೀತ್ ಬುಮ್ರಾ ಮೊದಲ ಓವರ್​ನಲ್ಲೇ ಆಘಾತ ನೀಡಿದ್ದಾರೆ. ದ್ವಿತೀಯ ಇನಿಂಗ್ಸ್​ನ 4ನೇ ಎಸೆತದಲ್ಲಿ ನಾಥನ್ ಮೆಕ್​ಸ್ವೀನಿ (0) ಅನ್ನು ಎಲ್​ಬಿಡಬ್ಲ್ಯೂ ಮಾಡಿ ಬುಮ್ರಾ ಭಾರತ ತಂಡಕ್ಕೆ ಮೊದಲ ಯಶಸ್ಸು ತಂದುಕೊಟ್ಟಿದ್ದರು. ಇದರ ಬೆನ್ನಲ್ಲೇ ಮೊಹಮ್ಮದ್ ಸಿರಾಜ್ ಪ್ಯಾಟ್ ಕಮಿನ್ಸ್ (2) ವಿಕೆಟ್ ಪಡೆದರು.

ಇನ್ನು ಮೂರನೇ ದಿನದಾಟದ ಕೊನೆಯ ಓವರ್​ನಲ್ಲಿ ಮಾರ್ನಸ್ ಲಾಬುಶೇನ್ (3) ಕೂಡ ಬುಮ್ರಾಗೆ ವಿಕೆಟ್ ಒಪ್ಪಿಸಿದರು. ಅದರಂತೆ ಮೂರನೇ ದಿನದಾಟದ ಅಂತ್ಯಕ್ಕೆ ಆಸ್ಟ್ರೇಲಿಯಾ ತಂಡವು 3 ವಿಕೆಟ್ ಕಳೆದುಕೊಂಡು 12 ರನ್ ಕಲೆಹಾಕಿದೆ.

ಭಾರತ ಪ್ಲೇಯಿಂಗ್ 11: ಜಸ್​ಪ್ರೀತ್ ಬುಮ್ರಾ (ನಾಯಕ), ಯಶಸ್ವಿ ಜೈಸ್ವಾಲ್, ಕೆಎಲ್ ರಾಹುಲ್, ದೇವದತ್ ಪಡಿಕ್ಕಲ್, ವಿರಾಟ್ ಕೊಹ್ಲಿ, ರಿಷಬ್ ಪಂತ್ (ವಿಕೆಟ್ ಕೀಪರ್), ಧ್ರುವ್ ಜುರೇಲ್, ನಿತೀಶ್ ಕುಮಾರ್ ರೆಡ್ಡಿ, ವಾಷಿಂಗ್ಟನ್ ಸುಂದರ್, ಮೊಹಮ್ಮದ್ ಸಿರಾಜ್, ಹರ್ಷಿತ್ ರಾಣಾ.

ಇದನ್ನೂ ಓದಿ: ಆಸ್ಟ್ರೇಲಿಯಾದಲ್ಲಿ ಇತಿಹಾಸ ನಿರ್ಮಿಸಿದ ರಿಷಭ್ ಪಂತ್

ಆಸ್ಟ್ರೇಲಿಯಾ ಪ್ಲೇಯಿಂಗ್ 11: ಉಸ್ಮಾನ್ ಖ್ವಾಜಾ, ನಾಥನ್ ಮೆಕ್‌ಸ್ವೀನಿ, ಮಾರ್ನಸ್ ಲಾಬುಶೇನ್, ಸ್ಟೀವ್ ಸ್ಮಿತ್, ಟ್ರಾವಿಸ್ ಹೆಡ್, ಮಿಚೆಲ್ ಮಾರ್ಷ್, ಅಲೆಕ್ಸ್ ಕ್ಯಾರಿ (ವಿಕೆಟ್ ಕೀಪರ್), ಪ್ಯಾಟ್ ಕಮಿನ್ಸ್ (ನಾಯಕ), ಮಿಚೆಲ್ ಸ್ಟಾರ್ಕ್, ನಾಥನ್ ಲಿಯಾನ್, ಜೋಶ್ ಹ್ಯಾಝಲ್‌ವುಡ್.

ಬ್ಲಿಂಕಿಟ್ ಡೆಲಿವರಿ ಬಾಯ್ ಆದ ಪರಿಣಿತಿ ಚೋಪ್ರಾ ಗಂಡ ರಾಘವ್ ಚಡ್ಡಾ
ಬ್ಲಿಂಕಿಟ್ ಡೆಲಿವರಿ ಬಾಯ್ ಆದ ಪರಿಣಿತಿ ಚೋಪ್ರಾ ಗಂಡ ರಾಘವ್ ಚಡ್ಡಾ
ಟಾಕ್ಸಿಕ್ ಟೀಸರ್ ಟೀಕಿಸಿದವರ ಗೂಗಲ್ ಸರ್ಚ್ ಹಿಸ್ಟರಿ ನೋಡಿ: ವಿನಯ್ ಗೌಡ
ಟಾಕ್ಸಿಕ್ ಟೀಸರ್ ಟೀಕಿಸಿದವರ ಗೂಗಲ್ ಸರ್ಚ್ ಹಿಸ್ಟರಿ ನೋಡಿ: ವಿನಯ್ ಗೌಡ
ಪೊಲೀಸ್ ಠಾಣೆಗೆ ಬೆಂಕಿ ಹಚ್ಚುತ್ತೇನೆ; ಬಜರಂಗದಳದ ವ್ಯಕ್ತಿಯಿಂದ ಬೆದರಿಕೆ
ಪೊಲೀಸ್ ಠಾಣೆಗೆ ಬೆಂಕಿ ಹಚ್ಚುತ್ತೇನೆ; ಬಜರಂಗದಳದ ವ್ಯಕ್ತಿಯಿಂದ ಬೆದರಿಕೆ
ಬಸ್​​ನಲ್ಲಿ 240 ಗ್ರಾಂ ಚಿನ್ನ ಕದ್ದಾಕೆ ಸಿಕ್ಕಿಬಿದ್ದಿದ್ಹೇಗೆ ಗೊತ್ತಾ?
ಬಸ್​​ನಲ್ಲಿ 240 ಗ್ರಾಂ ಚಿನ್ನ ಕದ್ದಾಕೆ ಸಿಕ್ಕಿಬಿದ್ದಿದ್ಹೇಗೆ ಗೊತ್ತಾ?
ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ
ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ